Homeಮುಖಪುಟಬಿಜೆಪಿ ಸರ್ಕಾರ ಪ್ರಾಯೋಜಿತ ದ್ವೇಷ ರಾಜಕಾರಣದ ಮಧ್ಯೆ ‘ಸೌಹಾರ್ದ ಯುಗಾದಿ’ ಆಚರಿಸಿದ ರಾಜ್ಯದ ಜನತೆ

ಬಿಜೆಪಿ ಸರ್ಕಾರ ಪ್ರಾಯೋಜಿತ ದ್ವೇಷ ರಾಜಕಾರಣದ ಮಧ್ಯೆ ‘ಸೌಹಾರ್ದ ಯುಗಾದಿ’ ಆಚರಿಸಿದ ರಾಜ್ಯದ ಜನತೆ

- Advertisement -
- Advertisement -

ರಾಜ್ಯದಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಗಳು, ರಾಜ್ಯ ಸರ್ಕಾರದ ಕುಮ್ಮಕ್ಕಿನಿಂದ ನಾಡಿನಾದ್ಯಂತ ಕೋಮು ಸಾಮರಸ್ಯ ಹಾಳುಗೆಡವುತ್ತಿರುವ ಮಧ್ಯೆ, ‘ಸೌಹಾರ್ದ ಕರ್ನಾಟಕ’ ಹಾಗೂ ಇನ್ನಿತರ ಜನಪರ ಸಂಘಟನೆಗಳ ನೇತೃತ್ವದಲ್ಲಿ ಎಲ್ಲಾ ಸಮುದಾಯಗಳ ಜನರು ಒಟ್ಟು ಸೇರಿ ರಾಜ್ಯದಾದ್ಯಂತ ಉಗಾದಿ ಹಬ್ಬವನ್ನು ಸೌಹಾರ್ದಯುತವಾಗಿ ಆಚರಿಸಿದ್ದಾರೆ.

‘ಸೌಹಾರ್ದ ಕರ್ನಾಟಕ’ ಹಾಗೂ ಜನಪರ ಸಂಘಟನೆಗಳು ಮತ್ತು ಸಿಪಿಐಎಂ ‘ಸೌಹಾರ್ದ ಯುಗಾದಿ’ಯನ್ನು ರಾಜ್ಯದಾದ್ಯಂತ ಆಚರಿಸಲು ಕರೆ ನೀಡಿತ್ತು. ಈ ಕರೆಗೆ ರಾಜ್ಯವ್ಯಾಪಿ ಉತ್ತಮ ಸ್ಪಂದನೆ ದೊರೆತಿದ್ದು, ಎಲ್ಲಾ ಸಮುದಾಯದ ಜನರು ಒಟ್ಟು ಸೇರಿ ಉಗಾದಿ ಹಬ್ಬವನ್ನು ಆಚರಿಸಿ ಸೌಹಾರ್ದ ಮೆರೆದಿದ್ದಾರೆ. ರಾಜ್ಯದ ಕಲಬುರಗಿ, ಮಂಡ್ಯ, ಮೈಸೂರು, ಬೆಂಗಳೂರು, ಚಿಕ್ಕಬಳ್ಳಾಪುರ, ಬಳ್ಳಾರಿ, ಕೊಪ್ಪಳ, ಬೆಂಗಳೂರು, ಹಾಸನ, ಬೀದರ್‌, ವಿಜಯಪುರ, ಕೋಲಾರ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಎಲ್ಲಾ ಸಮುದಾಯದ ಜನರು ಸೇರಿ ಬೇವು-ಬೆಲ್ಲ ಹಂಚಿ ತಿನ್ನುವ ಮೂಲಕ ಬಿಜೆಪಿಯ ದ್ವೇಷ ರಾಜಕೀಯಕ್ಕೆ ಸೆಡ್ಡುಹೊಡೆದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ‌ ಸಿಪಿಎಂ ಪಕ್ಷದ ವತಿಯಿಂದ ಮುಸಲ್ಮಾನರೊಂದಿಗೆ ಯುಗಾದಿ ಹಬ್ಬ ಆಚರಿಸಲಾಯಿದೆ.‌ ವಿವಿಧ ಸಮುದಾಯಗಳ, ಸಂಘಟನೆಗಳ ಪ್ರತಿನಿಧಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು ಎಂದು ಪಕ್ಷವು ಹೇಳಿದೆ.

ಇದನ್ನೂ ಓದಿ: ಭಾರತದ ಭಾವೈಕ್ಯತೆಯ ’ತಕ್ಕಡಿ’ಯಲ್ಲಿ ಭಿನ್ನ-ಭೇದವ ಮಾಡಬೇಡಿರೋ…!

“ತೀರಾ ಭಾವನಾತ್ಮಕವಾಗಿ ಕಾರ್ಯಕ್ರಮ ನಡೆಯಿತು. ಬೇವು ಬೆಲ್ಲವನ್ನು ಮುಸ್ಲಿಮರೊಂದಿಗೆ ಹಿಂದುಗಳು ಹಂಚಿಕೊಂಡರು. ಸರಕಾರವೇ ನಿಂತು ಮುಸಲ್ಮಾನರನ್ನು ಪ್ರತ್ಯೇಕಿಸುವ, ಬಹಿಷ್ಕಾರ ಹಾಕುವ ಕಾರ್ಯಕ್ರಮಗಳಿಗೆ ಪ್ರೋತ್ಸಾಹಿಸುವಾಗ ಇದೊಂದು ಪ್ರಾಯೋಗಿಕವಾದ ಮಾದರಿ ಉತ್ತರ. ದುಡಿದುಣ್ಣುವ ಜನರ ಮಧ್ಯೆ ಗೋಡೆ ಕಟ್ಟುವ ಪ್ರಯತ್ನ ನಡೆದಷ್ಟು ನಾವು ಬೆಸೆಯುವ ಕಾರ್ಯವನ್ನು ಮತ್ತಷ್ಟು ಹುರುಪಿ‌ನಿಂದ ನಡೆಸುವೆವು. ಇಂದು ಬಹಳಷ್ಟು ಕಡೆ ಸೌಹಾರ್ದ ಯುಗಾದಿ ಕಾರ್ಯಕ್ರಮ ನಡೆದಿದೆ. ಮುಸ್ಲಿಮರು ಏಕಾಂಗಿಗಳಲ್ಲ. ಅವರೊಂದಿಗೆ ಸೌಹಾರ್ದ ಪ್ರಿಯ ಹಿಂದುಗಳು ಸದಾ ಇರುತ್ತಾರೆ” ಎಂದು ಮಳವಳ್ಳಿ ಸಿಪಿಐಎಂ ಪಕ್ಷದ ಪದಾದಿಕಾರಿಗಳು ಹೇಳಿದ್ದಾರೆ.

ಕಲಬುರಗಿಯ ಜಗತ್ ವೃತ್ತದಲ್ಲಿರುವ ಬಸವೇಶ್ವರ ಪುತ್ಥಳಿಯ ಆವರಣದಲ್ಲಿ ಹಿಂದೂ,ಮುಸ್ಲಿಂ, ಕ್ರಿಶ್ಚಿಯನ್ ಬೌದ್ಧ ಧರ್ಮಿಯರು ಸೇರಿದಂತೆ ಹಲವಾರು ಜನರು ಸೇರಿ ಯುಗಾದಿ ಹಬ್ಬವನ್ನು ಆಚರಿಸಿದ್ದಾರೆ.

ಮೈಸೂರಿನಲ್ಲಿ ‘ಸೌಹಾರ್ದ ಕರ್ನಾಟಕ’ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನವನದಲ್ಲಿ ಸೌಹಾರ್ದ ಯುಗಾದಿ ಆಚರಿಸಲಾಗಿದೆ. ಕಾರ್ಯಕ್ರಮದಲ್ಲಿ ಹಿಂದೂ ಧರ್ಮಿಯರು ಮುಸ್ಲಿಂ, ಕ್ರಿಶ್ಚಿಯನ್ ಧರ್ಮಿಯರೊಂದಿಗೆ ಹಬ್ಬ ಆಚರಿಸಿ ಬೇವು-ಬೆಲ್ಲ, ಹೋಳಿಗೆಯನ್ನು ಪರಸ್ಪರ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: ಬಜರಂಗದಳ, VHPಯವರು ಸಮಾಜಘಾತುಕರು: ಎಚ್.ಡಿ ಕುಮಾರಸ್ವಾಮಿ 

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ, ಗುಡಿಬಂಡೆ ಪಟ್ಟಣದಲ್ಲಿ, ಹಗರಿಬೊಮ್ಮನಹಳ್ಳಿಯಲ್ಲಿ, ಕೊಪ್ಪಳ ನಗರದ ತಾಲೂಕು ಕ್ರೀಡಾಂಗಣದಲ್ಲಿ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಕೋಲಾರ, ಶ್ರೀನಿವಾಸಪುರ, ಹಾಸನ, ಬೀದರ, ಬಳ್ಳಾರಿ, ವಿಜಯಪುರ ಸೇರಿದಂತೆ ಬಹುತೇಕ ಕಡೆಗಳಲ್ಲಿ ಹಬ್ಬವನ್ನು ಎಲ್ಲಾ ಸಮುದಾಯಗಳ ಜನರೊಂದಿಗೆ ಸೇರಿ ಆಚರಿಸಲಾಗಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ರಾಜ್ಯ ರೈತ ಪ್ರಾಂತ ಸಂಘದ ಕಾರ್ಯದರ್ಶಿ ಬಸವರಾಜ್ ಅವರು, “ಭಾವನಾತ್ಮಕ ವಿಷಯಗಳನ್ನು ಇಟ್ಟುಕೊಂಡು ಹಿಂದೂ ಮುಸ್ಲಿಮರ ನಡುವೆ ತಾರತಮ್ಯ ಮಾಡುವುದು, ದ್ವೇಷ ಹರಡುವುದನ್ನು ಸರ್ಕಾರವೇ ಮಾಡುತ್ತಿವೆ. ಅದನ್ನು ಮೀರಿ ಈ ಸಂದರ್ಭದಲ್ಲಿ ಭಾವೈಕ್ಯತೆಯನ್ನು ಮರೆಯುವ ಕಾರ್ಯಕ್ರಮಗಳನ್ನು ಮಾಡಬೇಕು ಎಂದು ನಾವು ತೀರ್ಮಾನ ಮಾಡಿ, ರಾಜ್ಯದಾದ್ಯಂತ ಸೌಹಾರ್ದ ಯುಗಾದಿ ಎಂದು ಆಚರಿಸಲು ಕರೆ ನೀಡಿದ್ದೆವು” ಎಂದು ಹೇಳಿದ್ದಾರೆ.

“ಕಾರ್ಯಕ್ರಮದಲ್ಲಿ, ಸೌಹಾರ್ದತೆಯ ಪರವಾಗಿ ಇರುವ ಎಲ್ಲಾ ಸಂಘಟನೆಗಳು ಇದರಲ್ಲಿ ಪಾಲ್ಗೊಳ್ಳಬೇಕು ಎಂದು ಕೋರಿದ್ದೆವು. ರಾಜ್ಯದಾದ್ಯಂತ ಈ ಕಾರ್ಯಕ್ರಮ ಯಶಸ್ವಿಯಾಗಿದ್ದು, ಎಲ್ಲಾ ಸಮುದಾಯದ ಜನರು ಕೈ ಕೈ ಹಿಡಿದು ನಾವೆಲ್ಲರೂ ಒಂದೇ ಎಂದು ಸಾರಿ ಸಾಮರಸ್ಯ, ಸೌಹಾರ್ದತೆ ಮತ್ತು ಸಂವಿಧಾನವನ್ನು ಉಳಿಸುವ ಪ್ರತಿಜ್ಞೆ ಮಾಡಿದ್ದಾರೆ” ಎಂದು ಬಸವರಾಜ್ ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಕೋಮುದ್ವೇಷಕ್ಕೆ ಪೊಳ್ಳು ’ಸಮರ್ಥನೆ’ಯೂ ಬೇಡವಾಗಿರುವ ವಿಷಮ ಹಂತದಲ್ಲಿ…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...