Homeಕರ್ನಾಟಕಬಡವರ ಅನ್ನದಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಗೆ ರಾಜ್ಯದ ಜನರು ಮತ್ತೊಮ್ಮೆ ಪಾಠ ಕಲಿಸುತ್ತಾರೆ: ಡಿಕೆಶಿ

ಬಡವರ ಅನ್ನದಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಗೆ ರಾಜ್ಯದ ಜನರು ಮತ್ತೊಮ್ಮೆ ಪಾಠ ಕಲಿಸುತ್ತಾರೆ: ಡಿಕೆಶಿ

- Advertisement -
- Advertisement -

ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ಪೂರೈಕೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಕರ್ನಾಟಕ ಕಾಂಗ್ರೆಸ್ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮಾಡುತ್ತಿದೆ. ಮಂಗಳವಾರ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ಅನ್ನಭಾಗ್ಯ ಯೋಜನೆಗೆ ಅಡ್ಡಗಾಲು ಹಾಕುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.

ಈ ವೇಳೆ ಮಾತನಾಡಿದ ಅವರು, ”ಅನ್ನದಾನಕ್ಕಿಂತ ಶ್ರೇಷ್ಠ ದಾನ ಮತ್ತೊಂದಿಲ್ಲ. ಹಸಿವು ಮುಕ್ತ ರಾಜ್ಯ ಮಾಡಲು ನಾವು ತೀರ್ಮಾನಿಸಿದ್ದೇವೆ. ಅದಕ್ಕಾಗಿ ಅನ್ನಭಾಗ್ಯ ಯೋಜನೆ ಮೂಲಕ ಬಡ ಕುಟುಂಬದ ಪ್ರತಿ ವ್ಯಕ್ತಿಗೆ 10 ಕೆ.ಜಿ ಅಕ್ಕಿ ನೀಡಲು ಮುಂದಾಗಿದ್ದೇವೆ. ಆದರೆ ಕೇಂದ್ರ ಸರ್ಕಾರ ಇದಕ್ಕೆ ಅಡ್ಡಿಪಡಿಸಿದೆ. ಕೇಂದ್ರ ಸರ್ಕಾರ ಅಕ್ಕಿ ಕೊಡದಿದ್ದರೂ ನಾವು ಬೇರೆ ರಾಜ್ಯಗಳಿಂದ ಖರೀದಿ ಮಾಡಿ ನೀಡುತ್ತೇವೆ. ಅದಕ್ಕೆ ಸರ್ಕಾರ ಹಾಗೂ ಮಂತ್ರಿಗಳು ಬೇರೆ ರಾಜ್ಯಗಳ ಜೊತೆ ಸಂಪರ್ಕ ಮಾಡುತ್ತಿದ್ದಾರೆ. 5 ಕೆ.ಜಿ ಯಷ್ಟು ನೀಡಲು ನಮ್ಮ ಬಳಿ ಅಕ್ಕಿ ಇದೆ. ಉಳಿದ 5 ಕೆ ಜಿಗೆ ಹೊಂದಿಸುತ್ತಿದ್ದೇವೆ. ಕೆಲವರು ನಮಗೆ ಅಕ್ಕಿ ಬದಲು ರಾಗಿ, ಜೋಳ ಕೇಳುತ್ತಿದ್ದಾರೆ. ಪರಿಸ್ಥಿತಿ ನೋಡಿ ತೀರ್ಮಾನ ಮಾಡುತ್ತೇವೆ” ಎಂದು ಹೇಳಿದರು.

”ಬಡವರ ಅನ್ನದಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಗೆ ರಾಜ್ಯದ ಜನ ಮುಂಬರುವ ಸಂಸತ್, ಪಂಚಾಯ್ತಿ ಹಾಗೂ ಪಾಲಿಕೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು. ನಾವು ಪುಕ್ಸಟ್ಟೆ ಅಕ್ಕಿ ನೀಡಿ ಎಂದು ಕೇಳುತ್ತಿಲ್ಲ. ಆದರೂ ಅವರು ತಮ್ಮ ನೀತಿ ಬದಲಾಗಿದೆ ಎಂದು ಸಬೂಬು ಹೇಳುತ್ತಿದ್ದಾರೆ. ನಮ್ಮ ಮೇಲೆ ಜನರನ್ನು ಎತ್ತಿಕಟ್ಟಲು ಕೇಂದ್ರ ಈ ರೀತಿ ಮಾಡಿದ್ದಾರೆ. ಜನ ಕೇಂದ್ರ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಲಿದ್ದಾರೆ” ಎಂದರು.

”ಯಡಿಯೂರಪ್ಪನವರು, ಸರ್ಕಾರ ಒಂದು ಕಾಳು ಅಕ್ಕಿ ಕಡಿಮೆ ಕೊಟ್ಟರು ಸುಮ್ಮನಿರುವುದಿಲ್ಲ ಎಂದಿದ್ದಾರೆ. ಹೋರಾಟ ಮಾಡುವುದಾಗಿ ಹೇಳಿದ್ದಾರೆ. ಯಡಿಯೂರಪ್ಪ, ಬೊಮ್ಮಾಯಿ ಅವರೇ, ನಿಮ್ಮ ಪಕ್ಷ ಹೇಳಿದಂತೆ, ನೀವು ಇನ್ನೂ ಯಾಕೆ ಎಲ್ಲರ ಖಾತೆಗೆ 15 ಲಕ್ಷ ಹಾಕಿಸಿಲ್ಲ, ರೈತರ ಆದಾಯ ಡಬಲ್ ಯಾಕೆ ಮಾಡಿಲ್ಲ? ಯುವಕರಿಗೆ ಯಾಕೆ ಉದ್ಯೋಗ ನೀಡಿಲ್ಲ? ಈ ಬಗ್ಗೆ ನೀವು ಮೊದಲು ಉತ್ತರ ನೀಡಿ, ಹೋರಾಟ ಮಾಡಿ” ಎಂದು ತಿರುಗೇಟು ನೀಡಿದರು.

”ದಿನಬೆಳಗಾದರೆ ಯಡಿಯೂರಪ್ಪ, ಕಟೀಲ್, ಅಶೋಕ್ ಎಲ್ಲರೂ ಒಂದೊಂದು ವ್ಯಂಗದ ಮಾತು ಆಡುತ್ತಿದ್ದಾರೆ. ವಿರೋಧ ಪಕ್ಷವಾಗಿ ರಾಜಕೀಯವಾಗಿ ಟೀಕೆ ಮಾಡಿ ನಮ್ಮನ್ನು ತಿದ್ದಿ. ಅದಕ್ಕೆ ನಮ್ಮ ಅಭ್ಯಂತರವಿಲ್ಲ. ನೀವು ಕೊಟ್ಟ ಮಾತಿನಂತೆ ಅಚ್ಚೆದಿನ ಬಂದಿಲ್ಲ, ಹೀಗಾಗಿ ನಾವು ವಿರೋಧ ಪಕ್ಷದಲ್ಲಿ ಕೂರುವಂತಾಗಿದೆ ಎಂದು ನಿಮ್ಮ ಅಧ್ಯಕ್ಷರಾದ ನಡ್ಡಾ ಹಾಗೂ ಪ್ರಧಾನಿ ವಿರುದ್ಧ ಮೊದಲು ಪ್ರತಿಭಟನೆ ಮಾಡಿ. ನಾವು ಕೇಂದ್ರದ ಬಡ ವಿರೋಧಿ ನೀತಿ ವಿರುದ್ಧ ನಾವು ಹೋರಾಟ ಮಾಡುತ್ತಿದ್ದೇವೆ” ಎಂದರು.

ಇದನ್ನೂ ಓದಿ: ರಾಜ್ಯಕ್ಕೆ ಅಕ್ಕಿ ನೀಡದಿರುವುದರ ಹಿಂದೆ ದೊಡ್ಡ ಷಡ್ಯಂತ್ರವಿದೆ, ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ: ಡಿಕೆ ಶಿವಕುಮಾರ್

”ಆಹಾರ ಬದ್ಧತೆ ವಿಚಾರದಲ್ಲಿ ಯಾರೂ ಹಸಿವಿನಿಂದ ಇರಬಾರದು ಎಂಬುದು ಕಾಂಗ್ರೆಸ್ ಸಂಕಲ್ಪ. ಇಂದು ಕೇಂದ್ರ ಸರ್ಕಾರದ ಬಡವರ ವಿರೋಧಿ ನೀತಿ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಬಡವರ ಹೊಟ್ಟೆ ತುಂಬುವ ವಿಚಾರದಲ್ಲಿ ಕೇಂದ್ರ ಸರ್ಕಾರದ ರಾಜಕಾರಣದ ವಿರುದ್ಧ ಇಂದು ಬೀದಿಗಿಳಿದು ಹೋರಾಟ ಮಾಡಲಾಗುತ್ತಿದೆ” ಎಂದು ಹೇಳಿದರು.

”ಸೋನಿಯಾ ಗಾಂಧಿ ಅವರು ಯುಪಿಎ ಸರ್ಕಾರದ ಅಧ್ಯಕ್ಷರಾಗಿ, ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಆಹಾರ ಭದ್ರತಾ ಕಾಯ್ದೆ ಜಾರಿ ಮಾಡಿ ನಮಗೆ ಆಹಾರವನ್ನು ಸಂವಿಧಾನಬದ್ಧ ಹಕ್ಕಾಗಿ ನೀಡಿದರು. ಆ ಸಂವಿಧಾನದ ಹಕ್ಕಿನ ಮೂಲಕ ನಾವು ದೇಶದ ಜನರಿಗೆ ಅಕ್ಕಿ ಹಂಚಲಾಗುತ್ತಿದೆ. ಕೇಂದ್ರ ಸರ್ಕಾರ ಅಂದು ಪ್ರತಿ ಕೆ.ಜಿ ಅಕ್ಕಿಗೆ ಸುಮಾರು 28 ರೂ. ಉಳಿದ 3-4 ರೂ. ರಾಜ್ಯ ಸರ್ಕಾರ ಭರ್ತಿ ಮಾಡಿ ಬಡವರಿಗೆ ಅಕ್ಕಿ ಹಂಚಲಾಗುತ್ತಿದೆ” ಎಂದು ತಿಳಿಸಿದರು.

ನಮ್ಮ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೊದಲ ದಿನದಿಂದ ಅನ್ನಭಾಗ್ಯ ಯೋಜನೆ ಜಾರಿ ಮಾಡಿ ಬಡ ಕುಟುಂಬದ ಪ್ರತಿ ವ್ಯಕ್ತಿಗೆ 5 ಕೆ ಜಿ ಅಕ್ಕಿ ನೀಡಿತ್ತು. ನಂತರ ಸಿದ್ದರಾಮಯ್ಯ ಅವರು ಅದನ್ನು 7ಕೆ.ಜಿಗೆ ಏರಿಸಿದ್ದರು. ನಾವು ನಮ್ಮ ಚುನಾವಣೆ ಪ್ರಣಾಳಿಕೆಯಲ್ಲಿ 10 ಕೆ ಜಿ ಅಕ್ಕಿ ನೀಡುವುದಾಗಿ ಹೇಳಿತ್ತು. ಕೊಟ್ಟ ಮಾತು ಉಳಿಸಿಕೊಳ್ಳುವುದು ಕಾಂಗ್ರೆಸ್ ಸಂಕಲ್ಪ.

”ಮಳೆ ಇದ್ದರೂ ಈ ಹೋರಾಟದಲ್ಲಿ ಭಾಗವಹಿಸಿ ಬಡವರ ಅನ್ನಕ್ಕೆ ಹೋರಾಟ ಮಾಡಿ ಇತಿಹಾಸ ನಿರ್ಮಿಸಿದ್ದೀರಿ ನಿಮಗೆ ಧನ್ಯವಾದಗಳು.. ಈ ಹೋರಾಟವನ್ನು ತಾಲೂಕು ಮಟ್ಟದಲ್ಲಿ ನಡೆಸಿ ಹಳ್ಳಿ ಹಳ್ಳಿ ಜನರಿಗೆ ಕೇಂದ್ರದ ಬಡವರ ವಿರೋಧಿ ನೀತಿ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿ, ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿರುವ ಸರ್ಕಾರಕ್ಕೆ ಧಿಕ್ಕಾರ” ಎಂದು ಘೋಷಣೆ ಕೂಗಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...