Homeಕರ್ನಾಟಕಬಡವರ ಅನ್ನದಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಗೆ ರಾಜ್ಯದ ಜನರು ಮತ್ತೊಮ್ಮೆ ಪಾಠ ಕಲಿಸುತ್ತಾರೆ: ಡಿಕೆಶಿ

ಬಡವರ ಅನ್ನದಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಗೆ ರಾಜ್ಯದ ಜನರು ಮತ್ತೊಮ್ಮೆ ಪಾಠ ಕಲಿಸುತ್ತಾರೆ: ಡಿಕೆಶಿ

- Advertisement -
- Advertisement -

ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ಪೂರೈಕೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಕರ್ನಾಟಕ ಕಾಂಗ್ರೆಸ್ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮಾಡುತ್ತಿದೆ. ಮಂಗಳವಾರ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ಅನ್ನಭಾಗ್ಯ ಯೋಜನೆಗೆ ಅಡ್ಡಗಾಲು ಹಾಕುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.

ಈ ವೇಳೆ ಮಾತನಾಡಿದ ಅವರು, ”ಅನ್ನದಾನಕ್ಕಿಂತ ಶ್ರೇಷ್ಠ ದಾನ ಮತ್ತೊಂದಿಲ್ಲ. ಹಸಿವು ಮುಕ್ತ ರಾಜ್ಯ ಮಾಡಲು ನಾವು ತೀರ್ಮಾನಿಸಿದ್ದೇವೆ. ಅದಕ್ಕಾಗಿ ಅನ್ನಭಾಗ್ಯ ಯೋಜನೆ ಮೂಲಕ ಬಡ ಕುಟುಂಬದ ಪ್ರತಿ ವ್ಯಕ್ತಿಗೆ 10 ಕೆ.ಜಿ ಅಕ್ಕಿ ನೀಡಲು ಮುಂದಾಗಿದ್ದೇವೆ. ಆದರೆ ಕೇಂದ್ರ ಸರ್ಕಾರ ಇದಕ್ಕೆ ಅಡ್ಡಿಪಡಿಸಿದೆ. ಕೇಂದ್ರ ಸರ್ಕಾರ ಅಕ್ಕಿ ಕೊಡದಿದ್ದರೂ ನಾವು ಬೇರೆ ರಾಜ್ಯಗಳಿಂದ ಖರೀದಿ ಮಾಡಿ ನೀಡುತ್ತೇವೆ. ಅದಕ್ಕೆ ಸರ್ಕಾರ ಹಾಗೂ ಮಂತ್ರಿಗಳು ಬೇರೆ ರಾಜ್ಯಗಳ ಜೊತೆ ಸಂಪರ್ಕ ಮಾಡುತ್ತಿದ್ದಾರೆ. 5 ಕೆ.ಜಿ ಯಷ್ಟು ನೀಡಲು ನಮ್ಮ ಬಳಿ ಅಕ್ಕಿ ಇದೆ. ಉಳಿದ 5 ಕೆ ಜಿಗೆ ಹೊಂದಿಸುತ್ತಿದ್ದೇವೆ. ಕೆಲವರು ನಮಗೆ ಅಕ್ಕಿ ಬದಲು ರಾಗಿ, ಜೋಳ ಕೇಳುತ್ತಿದ್ದಾರೆ. ಪರಿಸ್ಥಿತಿ ನೋಡಿ ತೀರ್ಮಾನ ಮಾಡುತ್ತೇವೆ” ಎಂದು ಹೇಳಿದರು.

”ಬಡವರ ಅನ್ನದಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಗೆ ರಾಜ್ಯದ ಜನ ಮುಂಬರುವ ಸಂಸತ್, ಪಂಚಾಯ್ತಿ ಹಾಗೂ ಪಾಲಿಕೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು. ನಾವು ಪುಕ್ಸಟ್ಟೆ ಅಕ್ಕಿ ನೀಡಿ ಎಂದು ಕೇಳುತ್ತಿಲ್ಲ. ಆದರೂ ಅವರು ತಮ್ಮ ನೀತಿ ಬದಲಾಗಿದೆ ಎಂದು ಸಬೂಬು ಹೇಳುತ್ತಿದ್ದಾರೆ. ನಮ್ಮ ಮೇಲೆ ಜನರನ್ನು ಎತ್ತಿಕಟ್ಟಲು ಕೇಂದ್ರ ಈ ರೀತಿ ಮಾಡಿದ್ದಾರೆ. ಜನ ಕೇಂದ್ರ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಲಿದ್ದಾರೆ” ಎಂದರು.

”ಯಡಿಯೂರಪ್ಪನವರು, ಸರ್ಕಾರ ಒಂದು ಕಾಳು ಅಕ್ಕಿ ಕಡಿಮೆ ಕೊಟ್ಟರು ಸುಮ್ಮನಿರುವುದಿಲ್ಲ ಎಂದಿದ್ದಾರೆ. ಹೋರಾಟ ಮಾಡುವುದಾಗಿ ಹೇಳಿದ್ದಾರೆ. ಯಡಿಯೂರಪ್ಪ, ಬೊಮ್ಮಾಯಿ ಅವರೇ, ನಿಮ್ಮ ಪಕ್ಷ ಹೇಳಿದಂತೆ, ನೀವು ಇನ್ನೂ ಯಾಕೆ ಎಲ್ಲರ ಖಾತೆಗೆ 15 ಲಕ್ಷ ಹಾಕಿಸಿಲ್ಲ, ರೈತರ ಆದಾಯ ಡಬಲ್ ಯಾಕೆ ಮಾಡಿಲ್ಲ? ಯುವಕರಿಗೆ ಯಾಕೆ ಉದ್ಯೋಗ ನೀಡಿಲ್ಲ? ಈ ಬಗ್ಗೆ ನೀವು ಮೊದಲು ಉತ್ತರ ನೀಡಿ, ಹೋರಾಟ ಮಾಡಿ” ಎಂದು ತಿರುಗೇಟು ನೀಡಿದರು.

”ದಿನಬೆಳಗಾದರೆ ಯಡಿಯೂರಪ್ಪ, ಕಟೀಲ್, ಅಶೋಕ್ ಎಲ್ಲರೂ ಒಂದೊಂದು ವ್ಯಂಗದ ಮಾತು ಆಡುತ್ತಿದ್ದಾರೆ. ವಿರೋಧ ಪಕ್ಷವಾಗಿ ರಾಜಕೀಯವಾಗಿ ಟೀಕೆ ಮಾಡಿ ನಮ್ಮನ್ನು ತಿದ್ದಿ. ಅದಕ್ಕೆ ನಮ್ಮ ಅಭ್ಯಂತರವಿಲ್ಲ. ನೀವು ಕೊಟ್ಟ ಮಾತಿನಂತೆ ಅಚ್ಚೆದಿನ ಬಂದಿಲ್ಲ, ಹೀಗಾಗಿ ನಾವು ವಿರೋಧ ಪಕ್ಷದಲ್ಲಿ ಕೂರುವಂತಾಗಿದೆ ಎಂದು ನಿಮ್ಮ ಅಧ್ಯಕ್ಷರಾದ ನಡ್ಡಾ ಹಾಗೂ ಪ್ರಧಾನಿ ವಿರುದ್ಧ ಮೊದಲು ಪ್ರತಿಭಟನೆ ಮಾಡಿ. ನಾವು ಕೇಂದ್ರದ ಬಡ ವಿರೋಧಿ ನೀತಿ ವಿರುದ್ಧ ನಾವು ಹೋರಾಟ ಮಾಡುತ್ತಿದ್ದೇವೆ” ಎಂದರು.

ಇದನ್ನೂ ಓದಿ: ರಾಜ್ಯಕ್ಕೆ ಅಕ್ಕಿ ನೀಡದಿರುವುದರ ಹಿಂದೆ ದೊಡ್ಡ ಷಡ್ಯಂತ್ರವಿದೆ, ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ: ಡಿಕೆ ಶಿವಕುಮಾರ್

”ಆಹಾರ ಬದ್ಧತೆ ವಿಚಾರದಲ್ಲಿ ಯಾರೂ ಹಸಿವಿನಿಂದ ಇರಬಾರದು ಎಂಬುದು ಕಾಂಗ್ರೆಸ್ ಸಂಕಲ್ಪ. ಇಂದು ಕೇಂದ್ರ ಸರ್ಕಾರದ ಬಡವರ ವಿರೋಧಿ ನೀತಿ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಬಡವರ ಹೊಟ್ಟೆ ತುಂಬುವ ವಿಚಾರದಲ್ಲಿ ಕೇಂದ್ರ ಸರ್ಕಾರದ ರಾಜಕಾರಣದ ವಿರುದ್ಧ ಇಂದು ಬೀದಿಗಿಳಿದು ಹೋರಾಟ ಮಾಡಲಾಗುತ್ತಿದೆ” ಎಂದು ಹೇಳಿದರು.

”ಸೋನಿಯಾ ಗಾಂಧಿ ಅವರು ಯುಪಿಎ ಸರ್ಕಾರದ ಅಧ್ಯಕ್ಷರಾಗಿ, ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಆಹಾರ ಭದ್ರತಾ ಕಾಯ್ದೆ ಜಾರಿ ಮಾಡಿ ನಮಗೆ ಆಹಾರವನ್ನು ಸಂವಿಧಾನಬದ್ಧ ಹಕ್ಕಾಗಿ ನೀಡಿದರು. ಆ ಸಂವಿಧಾನದ ಹಕ್ಕಿನ ಮೂಲಕ ನಾವು ದೇಶದ ಜನರಿಗೆ ಅಕ್ಕಿ ಹಂಚಲಾಗುತ್ತಿದೆ. ಕೇಂದ್ರ ಸರ್ಕಾರ ಅಂದು ಪ್ರತಿ ಕೆ.ಜಿ ಅಕ್ಕಿಗೆ ಸುಮಾರು 28 ರೂ. ಉಳಿದ 3-4 ರೂ. ರಾಜ್ಯ ಸರ್ಕಾರ ಭರ್ತಿ ಮಾಡಿ ಬಡವರಿಗೆ ಅಕ್ಕಿ ಹಂಚಲಾಗುತ್ತಿದೆ” ಎಂದು ತಿಳಿಸಿದರು.

ನಮ್ಮ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೊದಲ ದಿನದಿಂದ ಅನ್ನಭಾಗ್ಯ ಯೋಜನೆ ಜಾರಿ ಮಾಡಿ ಬಡ ಕುಟುಂಬದ ಪ್ರತಿ ವ್ಯಕ್ತಿಗೆ 5 ಕೆ ಜಿ ಅಕ್ಕಿ ನೀಡಿತ್ತು. ನಂತರ ಸಿದ್ದರಾಮಯ್ಯ ಅವರು ಅದನ್ನು 7ಕೆ.ಜಿಗೆ ಏರಿಸಿದ್ದರು. ನಾವು ನಮ್ಮ ಚುನಾವಣೆ ಪ್ರಣಾಳಿಕೆಯಲ್ಲಿ 10 ಕೆ ಜಿ ಅಕ್ಕಿ ನೀಡುವುದಾಗಿ ಹೇಳಿತ್ತು. ಕೊಟ್ಟ ಮಾತು ಉಳಿಸಿಕೊಳ್ಳುವುದು ಕಾಂಗ್ರೆಸ್ ಸಂಕಲ್ಪ.

”ಮಳೆ ಇದ್ದರೂ ಈ ಹೋರಾಟದಲ್ಲಿ ಭಾಗವಹಿಸಿ ಬಡವರ ಅನ್ನಕ್ಕೆ ಹೋರಾಟ ಮಾಡಿ ಇತಿಹಾಸ ನಿರ್ಮಿಸಿದ್ದೀರಿ ನಿಮಗೆ ಧನ್ಯವಾದಗಳು.. ಈ ಹೋರಾಟವನ್ನು ತಾಲೂಕು ಮಟ್ಟದಲ್ಲಿ ನಡೆಸಿ ಹಳ್ಳಿ ಹಳ್ಳಿ ಜನರಿಗೆ ಕೇಂದ್ರದ ಬಡವರ ವಿರೋಧಿ ನೀತಿ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿ, ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿರುವ ಸರ್ಕಾರಕ್ಕೆ ಧಿಕ್ಕಾರ” ಎಂದು ಘೋಷಣೆ ಕೂಗಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...