Homeಕರ್ನಾಟಕಬಡವರ ಅನ್ನದಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಗೆ ರಾಜ್ಯದ ಜನರು ಮತ್ತೊಮ್ಮೆ ಪಾಠ ಕಲಿಸುತ್ತಾರೆ: ಡಿಕೆಶಿ

ಬಡವರ ಅನ್ನದಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಗೆ ರಾಜ್ಯದ ಜನರು ಮತ್ತೊಮ್ಮೆ ಪಾಠ ಕಲಿಸುತ್ತಾರೆ: ಡಿಕೆಶಿ

- Advertisement -
- Advertisement -

ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ಪೂರೈಕೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಕರ್ನಾಟಕ ಕಾಂಗ್ರೆಸ್ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮಾಡುತ್ತಿದೆ. ಮಂಗಳವಾರ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ಅನ್ನಭಾಗ್ಯ ಯೋಜನೆಗೆ ಅಡ್ಡಗಾಲು ಹಾಕುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.

ಈ ವೇಳೆ ಮಾತನಾಡಿದ ಅವರು, ”ಅನ್ನದಾನಕ್ಕಿಂತ ಶ್ರೇಷ್ಠ ದಾನ ಮತ್ತೊಂದಿಲ್ಲ. ಹಸಿವು ಮುಕ್ತ ರಾಜ್ಯ ಮಾಡಲು ನಾವು ತೀರ್ಮಾನಿಸಿದ್ದೇವೆ. ಅದಕ್ಕಾಗಿ ಅನ್ನಭಾಗ್ಯ ಯೋಜನೆ ಮೂಲಕ ಬಡ ಕುಟುಂಬದ ಪ್ರತಿ ವ್ಯಕ್ತಿಗೆ 10 ಕೆ.ಜಿ ಅಕ್ಕಿ ನೀಡಲು ಮುಂದಾಗಿದ್ದೇವೆ. ಆದರೆ ಕೇಂದ್ರ ಸರ್ಕಾರ ಇದಕ್ಕೆ ಅಡ್ಡಿಪಡಿಸಿದೆ. ಕೇಂದ್ರ ಸರ್ಕಾರ ಅಕ್ಕಿ ಕೊಡದಿದ್ದರೂ ನಾವು ಬೇರೆ ರಾಜ್ಯಗಳಿಂದ ಖರೀದಿ ಮಾಡಿ ನೀಡುತ್ತೇವೆ. ಅದಕ್ಕೆ ಸರ್ಕಾರ ಹಾಗೂ ಮಂತ್ರಿಗಳು ಬೇರೆ ರಾಜ್ಯಗಳ ಜೊತೆ ಸಂಪರ್ಕ ಮಾಡುತ್ತಿದ್ದಾರೆ. 5 ಕೆ.ಜಿ ಯಷ್ಟು ನೀಡಲು ನಮ್ಮ ಬಳಿ ಅಕ್ಕಿ ಇದೆ. ಉಳಿದ 5 ಕೆ ಜಿಗೆ ಹೊಂದಿಸುತ್ತಿದ್ದೇವೆ. ಕೆಲವರು ನಮಗೆ ಅಕ್ಕಿ ಬದಲು ರಾಗಿ, ಜೋಳ ಕೇಳುತ್ತಿದ್ದಾರೆ. ಪರಿಸ್ಥಿತಿ ನೋಡಿ ತೀರ್ಮಾನ ಮಾಡುತ್ತೇವೆ” ಎಂದು ಹೇಳಿದರು.

”ಬಡವರ ಅನ್ನದಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಗೆ ರಾಜ್ಯದ ಜನ ಮುಂಬರುವ ಸಂಸತ್, ಪಂಚಾಯ್ತಿ ಹಾಗೂ ಪಾಲಿಕೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು. ನಾವು ಪುಕ್ಸಟ್ಟೆ ಅಕ್ಕಿ ನೀಡಿ ಎಂದು ಕೇಳುತ್ತಿಲ್ಲ. ಆದರೂ ಅವರು ತಮ್ಮ ನೀತಿ ಬದಲಾಗಿದೆ ಎಂದು ಸಬೂಬು ಹೇಳುತ್ತಿದ್ದಾರೆ. ನಮ್ಮ ಮೇಲೆ ಜನರನ್ನು ಎತ್ತಿಕಟ್ಟಲು ಕೇಂದ್ರ ಈ ರೀತಿ ಮಾಡಿದ್ದಾರೆ. ಜನ ಕೇಂದ್ರ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಲಿದ್ದಾರೆ” ಎಂದರು.

”ಯಡಿಯೂರಪ್ಪನವರು, ಸರ್ಕಾರ ಒಂದು ಕಾಳು ಅಕ್ಕಿ ಕಡಿಮೆ ಕೊಟ್ಟರು ಸುಮ್ಮನಿರುವುದಿಲ್ಲ ಎಂದಿದ್ದಾರೆ. ಹೋರಾಟ ಮಾಡುವುದಾಗಿ ಹೇಳಿದ್ದಾರೆ. ಯಡಿಯೂರಪ್ಪ, ಬೊಮ್ಮಾಯಿ ಅವರೇ, ನಿಮ್ಮ ಪಕ್ಷ ಹೇಳಿದಂತೆ, ನೀವು ಇನ್ನೂ ಯಾಕೆ ಎಲ್ಲರ ಖಾತೆಗೆ 15 ಲಕ್ಷ ಹಾಕಿಸಿಲ್ಲ, ರೈತರ ಆದಾಯ ಡಬಲ್ ಯಾಕೆ ಮಾಡಿಲ್ಲ? ಯುವಕರಿಗೆ ಯಾಕೆ ಉದ್ಯೋಗ ನೀಡಿಲ್ಲ? ಈ ಬಗ್ಗೆ ನೀವು ಮೊದಲು ಉತ್ತರ ನೀಡಿ, ಹೋರಾಟ ಮಾಡಿ” ಎಂದು ತಿರುಗೇಟು ನೀಡಿದರು.

”ದಿನಬೆಳಗಾದರೆ ಯಡಿಯೂರಪ್ಪ, ಕಟೀಲ್, ಅಶೋಕ್ ಎಲ್ಲರೂ ಒಂದೊಂದು ವ್ಯಂಗದ ಮಾತು ಆಡುತ್ತಿದ್ದಾರೆ. ವಿರೋಧ ಪಕ್ಷವಾಗಿ ರಾಜಕೀಯವಾಗಿ ಟೀಕೆ ಮಾಡಿ ನಮ್ಮನ್ನು ತಿದ್ದಿ. ಅದಕ್ಕೆ ನಮ್ಮ ಅಭ್ಯಂತರವಿಲ್ಲ. ನೀವು ಕೊಟ್ಟ ಮಾತಿನಂತೆ ಅಚ್ಚೆದಿನ ಬಂದಿಲ್ಲ, ಹೀಗಾಗಿ ನಾವು ವಿರೋಧ ಪಕ್ಷದಲ್ಲಿ ಕೂರುವಂತಾಗಿದೆ ಎಂದು ನಿಮ್ಮ ಅಧ್ಯಕ್ಷರಾದ ನಡ್ಡಾ ಹಾಗೂ ಪ್ರಧಾನಿ ವಿರುದ್ಧ ಮೊದಲು ಪ್ರತಿಭಟನೆ ಮಾಡಿ. ನಾವು ಕೇಂದ್ರದ ಬಡ ವಿರೋಧಿ ನೀತಿ ವಿರುದ್ಧ ನಾವು ಹೋರಾಟ ಮಾಡುತ್ತಿದ್ದೇವೆ” ಎಂದರು.

ಇದನ್ನೂ ಓದಿ: ರಾಜ್ಯಕ್ಕೆ ಅಕ್ಕಿ ನೀಡದಿರುವುದರ ಹಿಂದೆ ದೊಡ್ಡ ಷಡ್ಯಂತ್ರವಿದೆ, ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ: ಡಿಕೆ ಶಿವಕುಮಾರ್

”ಆಹಾರ ಬದ್ಧತೆ ವಿಚಾರದಲ್ಲಿ ಯಾರೂ ಹಸಿವಿನಿಂದ ಇರಬಾರದು ಎಂಬುದು ಕಾಂಗ್ರೆಸ್ ಸಂಕಲ್ಪ. ಇಂದು ಕೇಂದ್ರ ಸರ್ಕಾರದ ಬಡವರ ವಿರೋಧಿ ನೀತಿ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಬಡವರ ಹೊಟ್ಟೆ ತುಂಬುವ ವಿಚಾರದಲ್ಲಿ ಕೇಂದ್ರ ಸರ್ಕಾರದ ರಾಜಕಾರಣದ ವಿರುದ್ಧ ಇಂದು ಬೀದಿಗಿಳಿದು ಹೋರಾಟ ಮಾಡಲಾಗುತ್ತಿದೆ” ಎಂದು ಹೇಳಿದರು.

”ಸೋನಿಯಾ ಗಾಂಧಿ ಅವರು ಯುಪಿಎ ಸರ್ಕಾರದ ಅಧ್ಯಕ್ಷರಾಗಿ, ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಆಹಾರ ಭದ್ರತಾ ಕಾಯ್ದೆ ಜಾರಿ ಮಾಡಿ ನಮಗೆ ಆಹಾರವನ್ನು ಸಂವಿಧಾನಬದ್ಧ ಹಕ್ಕಾಗಿ ನೀಡಿದರು. ಆ ಸಂವಿಧಾನದ ಹಕ್ಕಿನ ಮೂಲಕ ನಾವು ದೇಶದ ಜನರಿಗೆ ಅಕ್ಕಿ ಹಂಚಲಾಗುತ್ತಿದೆ. ಕೇಂದ್ರ ಸರ್ಕಾರ ಅಂದು ಪ್ರತಿ ಕೆ.ಜಿ ಅಕ್ಕಿಗೆ ಸುಮಾರು 28 ರೂ. ಉಳಿದ 3-4 ರೂ. ರಾಜ್ಯ ಸರ್ಕಾರ ಭರ್ತಿ ಮಾಡಿ ಬಡವರಿಗೆ ಅಕ್ಕಿ ಹಂಚಲಾಗುತ್ತಿದೆ” ಎಂದು ತಿಳಿಸಿದರು.

ನಮ್ಮ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೊದಲ ದಿನದಿಂದ ಅನ್ನಭಾಗ್ಯ ಯೋಜನೆ ಜಾರಿ ಮಾಡಿ ಬಡ ಕುಟುಂಬದ ಪ್ರತಿ ವ್ಯಕ್ತಿಗೆ 5 ಕೆ ಜಿ ಅಕ್ಕಿ ನೀಡಿತ್ತು. ನಂತರ ಸಿದ್ದರಾಮಯ್ಯ ಅವರು ಅದನ್ನು 7ಕೆ.ಜಿಗೆ ಏರಿಸಿದ್ದರು. ನಾವು ನಮ್ಮ ಚುನಾವಣೆ ಪ್ರಣಾಳಿಕೆಯಲ್ಲಿ 10 ಕೆ ಜಿ ಅಕ್ಕಿ ನೀಡುವುದಾಗಿ ಹೇಳಿತ್ತು. ಕೊಟ್ಟ ಮಾತು ಉಳಿಸಿಕೊಳ್ಳುವುದು ಕಾಂಗ್ರೆಸ್ ಸಂಕಲ್ಪ.

”ಮಳೆ ಇದ್ದರೂ ಈ ಹೋರಾಟದಲ್ಲಿ ಭಾಗವಹಿಸಿ ಬಡವರ ಅನ್ನಕ್ಕೆ ಹೋರಾಟ ಮಾಡಿ ಇತಿಹಾಸ ನಿರ್ಮಿಸಿದ್ದೀರಿ ನಿಮಗೆ ಧನ್ಯವಾದಗಳು.. ಈ ಹೋರಾಟವನ್ನು ತಾಲೂಕು ಮಟ್ಟದಲ್ಲಿ ನಡೆಸಿ ಹಳ್ಳಿ ಹಳ್ಳಿ ಜನರಿಗೆ ಕೇಂದ್ರದ ಬಡವರ ವಿರೋಧಿ ನೀತಿ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿ, ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿರುವ ಸರ್ಕಾರಕ್ಕೆ ಧಿಕ್ಕಾರ” ಎಂದು ಘೋಷಣೆ ಕೂಗಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...