Homeಕರ್ನಾಟಕಬಡವರ ಅನ್ನದಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಗೆ ರಾಜ್ಯದ ಜನರು ಮತ್ತೊಮ್ಮೆ ಪಾಠ ಕಲಿಸುತ್ತಾರೆ: ಡಿಕೆಶಿ

ಬಡವರ ಅನ್ನದಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಗೆ ರಾಜ್ಯದ ಜನರು ಮತ್ತೊಮ್ಮೆ ಪಾಠ ಕಲಿಸುತ್ತಾರೆ: ಡಿಕೆಶಿ

- Advertisement -
- Advertisement -

ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ಪೂರೈಕೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಕರ್ನಾಟಕ ಕಾಂಗ್ರೆಸ್ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮಾಡುತ್ತಿದೆ. ಮಂಗಳವಾರ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ಅನ್ನಭಾಗ್ಯ ಯೋಜನೆಗೆ ಅಡ್ಡಗಾಲು ಹಾಕುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.

ಈ ವೇಳೆ ಮಾತನಾಡಿದ ಅವರು, ”ಅನ್ನದಾನಕ್ಕಿಂತ ಶ್ರೇಷ್ಠ ದಾನ ಮತ್ತೊಂದಿಲ್ಲ. ಹಸಿವು ಮುಕ್ತ ರಾಜ್ಯ ಮಾಡಲು ನಾವು ತೀರ್ಮಾನಿಸಿದ್ದೇವೆ. ಅದಕ್ಕಾಗಿ ಅನ್ನಭಾಗ್ಯ ಯೋಜನೆ ಮೂಲಕ ಬಡ ಕುಟುಂಬದ ಪ್ರತಿ ವ್ಯಕ್ತಿಗೆ 10 ಕೆ.ಜಿ ಅಕ್ಕಿ ನೀಡಲು ಮುಂದಾಗಿದ್ದೇವೆ. ಆದರೆ ಕೇಂದ್ರ ಸರ್ಕಾರ ಇದಕ್ಕೆ ಅಡ್ಡಿಪಡಿಸಿದೆ. ಕೇಂದ್ರ ಸರ್ಕಾರ ಅಕ್ಕಿ ಕೊಡದಿದ್ದರೂ ನಾವು ಬೇರೆ ರಾಜ್ಯಗಳಿಂದ ಖರೀದಿ ಮಾಡಿ ನೀಡುತ್ತೇವೆ. ಅದಕ್ಕೆ ಸರ್ಕಾರ ಹಾಗೂ ಮಂತ್ರಿಗಳು ಬೇರೆ ರಾಜ್ಯಗಳ ಜೊತೆ ಸಂಪರ್ಕ ಮಾಡುತ್ತಿದ್ದಾರೆ. 5 ಕೆ.ಜಿ ಯಷ್ಟು ನೀಡಲು ನಮ್ಮ ಬಳಿ ಅಕ್ಕಿ ಇದೆ. ಉಳಿದ 5 ಕೆ ಜಿಗೆ ಹೊಂದಿಸುತ್ತಿದ್ದೇವೆ. ಕೆಲವರು ನಮಗೆ ಅಕ್ಕಿ ಬದಲು ರಾಗಿ, ಜೋಳ ಕೇಳುತ್ತಿದ್ದಾರೆ. ಪರಿಸ್ಥಿತಿ ನೋಡಿ ತೀರ್ಮಾನ ಮಾಡುತ್ತೇವೆ” ಎಂದು ಹೇಳಿದರು.

”ಬಡವರ ಅನ್ನದಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಗೆ ರಾಜ್ಯದ ಜನ ಮುಂಬರುವ ಸಂಸತ್, ಪಂಚಾಯ್ತಿ ಹಾಗೂ ಪಾಲಿಕೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು. ನಾವು ಪುಕ್ಸಟ್ಟೆ ಅಕ್ಕಿ ನೀಡಿ ಎಂದು ಕೇಳುತ್ತಿಲ್ಲ. ಆದರೂ ಅವರು ತಮ್ಮ ನೀತಿ ಬದಲಾಗಿದೆ ಎಂದು ಸಬೂಬು ಹೇಳುತ್ತಿದ್ದಾರೆ. ನಮ್ಮ ಮೇಲೆ ಜನರನ್ನು ಎತ್ತಿಕಟ್ಟಲು ಕೇಂದ್ರ ಈ ರೀತಿ ಮಾಡಿದ್ದಾರೆ. ಜನ ಕೇಂದ್ರ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಲಿದ್ದಾರೆ” ಎಂದರು.

”ಯಡಿಯೂರಪ್ಪನವರು, ಸರ್ಕಾರ ಒಂದು ಕಾಳು ಅಕ್ಕಿ ಕಡಿಮೆ ಕೊಟ್ಟರು ಸುಮ್ಮನಿರುವುದಿಲ್ಲ ಎಂದಿದ್ದಾರೆ. ಹೋರಾಟ ಮಾಡುವುದಾಗಿ ಹೇಳಿದ್ದಾರೆ. ಯಡಿಯೂರಪ್ಪ, ಬೊಮ್ಮಾಯಿ ಅವರೇ, ನಿಮ್ಮ ಪಕ್ಷ ಹೇಳಿದಂತೆ, ನೀವು ಇನ್ನೂ ಯಾಕೆ ಎಲ್ಲರ ಖಾತೆಗೆ 15 ಲಕ್ಷ ಹಾಕಿಸಿಲ್ಲ, ರೈತರ ಆದಾಯ ಡಬಲ್ ಯಾಕೆ ಮಾಡಿಲ್ಲ? ಯುವಕರಿಗೆ ಯಾಕೆ ಉದ್ಯೋಗ ನೀಡಿಲ್ಲ? ಈ ಬಗ್ಗೆ ನೀವು ಮೊದಲು ಉತ್ತರ ನೀಡಿ, ಹೋರಾಟ ಮಾಡಿ” ಎಂದು ತಿರುಗೇಟು ನೀಡಿದರು.

”ದಿನಬೆಳಗಾದರೆ ಯಡಿಯೂರಪ್ಪ, ಕಟೀಲ್, ಅಶೋಕ್ ಎಲ್ಲರೂ ಒಂದೊಂದು ವ್ಯಂಗದ ಮಾತು ಆಡುತ್ತಿದ್ದಾರೆ. ವಿರೋಧ ಪಕ್ಷವಾಗಿ ರಾಜಕೀಯವಾಗಿ ಟೀಕೆ ಮಾಡಿ ನಮ್ಮನ್ನು ತಿದ್ದಿ. ಅದಕ್ಕೆ ನಮ್ಮ ಅಭ್ಯಂತರವಿಲ್ಲ. ನೀವು ಕೊಟ್ಟ ಮಾತಿನಂತೆ ಅಚ್ಚೆದಿನ ಬಂದಿಲ್ಲ, ಹೀಗಾಗಿ ನಾವು ವಿರೋಧ ಪಕ್ಷದಲ್ಲಿ ಕೂರುವಂತಾಗಿದೆ ಎಂದು ನಿಮ್ಮ ಅಧ್ಯಕ್ಷರಾದ ನಡ್ಡಾ ಹಾಗೂ ಪ್ರಧಾನಿ ವಿರುದ್ಧ ಮೊದಲು ಪ್ರತಿಭಟನೆ ಮಾಡಿ. ನಾವು ಕೇಂದ್ರದ ಬಡ ವಿರೋಧಿ ನೀತಿ ವಿರುದ್ಧ ನಾವು ಹೋರಾಟ ಮಾಡುತ್ತಿದ್ದೇವೆ” ಎಂದರು.

ಇದನ್ನೂ ಓದಿ: ರಾಜ್ಯಕ್ಕೆ ಅಕ್ಕಿ ನೀಡದಿರುವುದರ ಹಿಂದೆ ದೊಡ್ಡ ಷಡ್ಯಂತ್ರವಿದೆ, ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ: ಡಿಕೆ ಶಿವಕುಮಾರ್

”ಆಹಾರ ಬದ್ಧತೆ ವಿಚಾರದಲ್ಲಿ ಯಾರೂ ಹಸಿವಿನಿಂದ ಇರಬಾರದು ಎಂಬುದು ಕಾಂಗ್ರೆಸ್ ಸಂಕಲ್ಪ. ಇಂದು ಕೇಂದ್ರ ಸರ್ಕಾರದ ಬಡವರ ವಿರೋಧಿ ನೀತಿ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಬಡವರ ಹೊಟ್ಟೆ ತುಂಬುವ ವಿಚಾರದಲ್ಲಿ ಕೇಂದ್ರ ಸರ್ಕಾರದ ರಾಜಕಾರಣದ ವಿರುದ್ಧ ಇಂದು ಬೀದಿಗಿಳಿದು ಹೋರಾಟ ಮಾಡಲಾಗುತ್ತಿದೆ” ಎಂದು ಹೇಳಿದರು.

”ಸೋನಿಯಾ ಗಾಂಧಿ ಅವರು ಯುಪಿಎ ಸರ್ಕಾರದ ಅಧ್ಯಕ್ಷರಾಗಿ, ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಆಹಾರ ಭದ್ರತಾ ಕಾಯ್ದೆ ಜಾರಿ ಮಾಡಿ ನಮಗೆ ಆಹಾರವನ್ನು ಸಂವಿಧಾನಬದ್ಧ ಹಕ್ಕಾಗಿ ನೀಡಿದರು. ಆ ಸಂವಿಧಾನದ ಹಕ್ಕಿನ ಮೂಲಕ ನಾವು ದೇಶದ ಜನರಿಗೆ ಅಕ್ಕಿ ಹಂಚಲಾಗುತ್ತಿದೆ. ಕೇಂದ್ರ ಸರ್ಕಾರ ಅಂದು ಪ್ರತಿ ಕೆ.ಜಿ ಅಕ್ಕಿಗೆ ಸುಮಾರು 28 ರೂ. ಉಳಿದ 3-4 ರೂ. ರಾಜ್ಯ ಸರ್ಕಾರ ಭರ್ತಿ ಮಾಡಿ ಬಡವರಿಗೆ ಅಕ್ಕಿ ಹಂಚಲಾಗುತ್ತಿದೆ” ಎಂದು ತಿಳಿಸಿದರು.

ನಮ್ಮ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೊದಲ ದಿನದಿಂದ ಅನ್ನಭಾಗ್ಯ ಯೋಜನೆ ಜಾರಿ ಮಾಡಿ ಬಡ ಕುಟುಂಬದ ಪ್ರತಿ ವ್ಯಕ್ತಿಗೆ 5 ಕೆ ಜಿ ಅಕ್ಕಿ ನೀಡಿತ್ತು. ನಂತರ ಸಿದ್ದರಾಮಯ್ಯ ಅವರು ಅದನ್ನು 7ಕೆ.ಜಿಗೆ ಏರಿಸಿದ್ದರು. ನಾವು ನಮ್ಮ ಚುನಾವಣೆ ಪ್ರಣಾಳಿಕೆಯಲ್ಲಿ 10 ಕೆ ಜಿ ಅಕ್ಕಿ ನೀಡುವುದಾಗಿ ಹೇಳಿತ್ತು. ಕೊಟ್ಟ ಮಾತು ಉಳಿಸಿಕೊಳ್ಳುವುದು ಕಾಂಗ್ರೆಸ್ ಸಂಕಲ್ಪ.

”ಮಳೆ ಇದ್ದರೂ ಈ ಹೋರಾಟದಲ್ಲಿ ಭಾಗವಹಿಸಿ ಬಡವರ ಅನ್ನಕ್ಕೆ ಹೋರಾಟ ಮಾಡಿ ಇತಿಹಾಸ ನಿರ್ಮಿಸಿದ್ದೀರಿ ನಿಮಗೆ ಧನ್ಯವಾದಗಳು.. ಈ ಹೋರಾಟವನ್ನು ತಾಲೂಕು ಮಟ್ಟದಲ್ಲಿ ನಡೆಸಿ ಹಳ್ಳಿ ಹಳ್ಳಿ ಜನರಿಗೆ ಕೇಂದ್ರದ ಬಡವರ ವಿರೋಧಿ ನೀತಿ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿ, ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿರುವ ಸರ್ಕಾರಕ್ಕೆ ಧಿಕ್ಕಾರ” ಎಂದು ಘೋಷಣೆ ಕೂಗಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...