Homeಅಂಕಣಗಳುಜನತೆ ಮೋದಿಯವರ ಸ್ವದೇಶಿ ಘೋಷಣೆಗೆ ಮರುಳಾಗಬಾರದು : ಎಚ್‌.ಎಸ್‌ ದೊರೆಸ್ವಾಮಿ

ಜನತೆ ಮೋದಿಯವರ ಸ್ವದೇಶಿ ಘೋಷಣೆಗೆ ಮರುಳಾಗಬಾರದು : ಎಚ್‌.ಎಸ್‌ ದೊರೆಸ್ವಾಮಿ

- Advertisement -
- Advertisement -

ಮೋದಿಯವರು ಆತ್ಮ ನಿರ್ಭರತೆ, ಸ್ವದೇಶಿ ಸ್ವಾವಲಂಬನೆ, ಸ್ವಾಭಿಮಾನದ ಮಾತನ್ನು ಆಡಿ ಭಾರತೀಯರನ್ನು ದಿಗ್ಬ್ರಮೆಗೊಳಿಸಿದ್ದಾರೆ. ಎಲ್ಲದಕ್ಕೂ ಪರ ರಾಷ್ಟ್ರಗಳನ್ನು ಅವಲಂಬನೆ ಮಾಡುವುದು ದೇಶದೃಷ್ಟಿಯಿಂದ ಸರಿಯಲ್ಲ, ಆತ್ಮ ನಿರ್ಭರತೆಗೆ ಒತ್ತು ಕೊಡಬೇಕು ಎಂಬುದು ಒಪ್ಪತಕ್ಕ ಮಾತು. ಆದರೆ ಈ ಮಾತನ್ನು ಮೋದಿಯವರು ಹರಿಬಿಟ್ಟಿರುವುದು ಅಭಾವ ವೈರಾಗ್ಯ ಕಾರಣದಿಂದ. ಬಹುರಾಷ್ಟ್ರೀಯ ಕಂಪನಿಗಳು ಆರ್ಥಿಕ ದುರ್ಭರತೆಯ ಕಾರಣದಿಂದ ಈ ಸಂದರ್ಭದಲ್ಲಿ ಬಂಡವಾಳ ತಂದು ಭಾರತದಲ್ಲಿ ಸುರಿಯುವುದಿಲ್ಲ ಎಂಬುದನ್ನು ಅರಿತು ಮೋದಿಯವರು ಆತ್ಮ ನಿರ್ಭರತೆಯ ಮಾತನ್ನು ಆಡಿದ್ದಾರೆ.

ಮೋದಿಯವರ ಆತ್ಮ ನಿರ್ಭರತೆಯ ಮಾತು ಗಾಂಧಿಜಿಯವರ ಸ್ವದೇಶಿ ಸಿದ್ಧಾಂತಕ್ಕೆ ಅಪಮಾನ ಮಾಡಿದಂತೆ ತೋರುತ್ತದೆ. ಅಂಕಣಕಾರ ಹರೀಶ್ ಬಿಜೂರ್ ಅವರು ಹೇಳುವಂತೆ ಆತ್ಮ ನಿರ್ಭರತೆ ಮಾತಿಗೆ ಎರಡು ಆಯಾಮಗಳಿವೆ. ಅವೆಂದರೆ ರಾಷ್ಟ್ರೀಯತೆ ಮತ್ತು ಆರ್ಥಿಕ ಸ್ವಾವಲಂಬನೆ. ಮೋದಿಯವರ ಪ್ರಕಾರ ಆತ್ಮ ನಿರ್ಭರತೆ ಬಹುರಾಷ್ಟ್ರೀಯ ಬ್ರಾಂಡಿನಿಂದ ಕೂಡಿದ ಸ್ವದೇಶಿ. ಇದು ಮೋದಿಯವರಿಗೆ ತಿಳಿಯದೆ ಇರುವ ಸಂಗತಿಯಲ್ಲ. ಈಗಾಗಲೇ ಭಾರತದಲ್ಲಿ ಸ್ಥಾಪನೆಯಾಗಿರುವ ಬಹುರಾಷ್ಟ್ರೀಯ ಉದ್ಯಮಗಳನ್ನು ಗಮನದಲ್ಲಿಟ್ಟುಕೊಂಡೇ ಮೋದಿ ಅವರು ಆತ್ಮನಿರ್ಭರತೆ ಮಾತನ್ನು ಹರಿಯಬಿಟ್ಟಿದ್ದಾರೆ. ಈ ಬ್ರಾಂಡಿನ ಉದ್ಯಮಗಳು ಹತ್ತಾರು ವರ್ಷಗಳಿಂದ ಭಾರತದಲ್ಲಿ ನಡೆಯುತ್ತಿವೆ. ಅವೆಲ್ಲ Made In India ಆದ್ದರಿಂದ ಅವು ಸ್ವದೇಶಿ ಎಂಬುದು ಮೋದಿ ಅವರ ವ್ಯಾಖ್ಯಾನ. ಈ ಯೋಜನೆಯನ್ನು ಪ್ರಕಟಿಸಿದ ಮೋದಿಯವರಿಗೆ ನಮ್ಮ ದೇಶದಲ್ಲಿ ಸ್ಥಾಪಿತವಾಗಿರುವ ಎಲ್ಲ ಬಹುರಾಷ್ಟ್ರೀಯ ಕಂಪನಿಗಳೂ ಸ್ಥಳೀಯವೇ.

ಜನರಿಗಂತೂ ಸ್ವದೇಶಿ-ವಿದೇಶಿ ಪದಾರ್ಥಗಳ ಕಲ್ಪನೆಯೇ ಇಲ್ಲ. ಸ್ವದೇಶಿ ಬಳಸಬೇಕೆಂಬ ಆತ್ಮಾಭಿಮಾನವೂ ಇಲ್ಲ. ಉದಾಹರಣೆಗೆ ನೆಸ್‍ಕೆಫೆ, ಕೋಕಾಕೋಲಾ, ಮ್ಯಾಗಿಶಾವಿಗೆಗಳಾಗಲಿ, ಅಡಿದಾಸ್ ಸಿದ್ದಪಡಿಸಿದ ಬಟ್ಟೆಗಳು, ಲಕ್ಸ್, 501 ಸೋಪುಗಳು ಬಾಟಾ ಷೂ ಮತ್ತು ಚಪ್ಪಲಿ ಮುಂತಾದ ದಿನಬಳಕೆಯ ವಸ್ತುಗಳಾಗಲಿ ವಿದೇಶಿಯೇ ಹೊರತು ಸ್ವದೇಶಿ ಅಲ್ಲ ಎಂಬ ಸಾಮಾನ್ಯ ತಿಳುವಳಿಕೆಯೂ ಜನಸಾಮಾನ್ಯರಲ್ಲಿ ಮಾತ್ರವಲ್ಲ ವಿದ್ಯಾವಂತರಲ್ಲಿ ಕೂಡ ಇದ್ದಂತೆ ತೋರುವುದಿಲ್ಲ.

ಜನರ ಈ ಅಜ್ಞಾನವನ್ನು ಮೋದಿಯವರು ಚೆನ್ನಾಗಿ ಬಳಸಿಕೊಳ್ಳಲು ನಿರ್ಧರಿಸಿದ್ದಾರೆ. ಇವಲ್ಲದೆ ನಾವು ಬೆಳಗಿನಿಂದ ರಾತ್ರಿಯವರೆಗೆ ಬಳಸುವ ಟೂತ್‍ಪೇಸ್ಟ್, ಟೂತ್‍ಬ್ರಷ್, ಬಟ್ಟೆಸೋಪು, ಸ್ನಾನದ ಸೋಪು, ಕುಂಕುಮ, ಕಾಡಿಗೆ, ಸ್ನೋ ಪೌಡರ್, ಲಿಪ್‍ಸ್ಟಿಕ್ ಎಲ್ಲ ಪರದೇಶದ ಕಂಪೆನಿಗಳು ತಯಾರಿಸುವವೇ. ನಮ್ಮ ದೇಶದಲ್ಲಿ ತಯಾರಾಗುವ ಬಹುರಾಷ್ಟ್ರೀಯ ಬ್ರಾಂಡ್‍ಗಳ ಪದಾರ್ಥಗಳು ಪರದೇಶದಿಂದ ಆಮದಾಗುವ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುವ ವಸ್ತುಗಳು ಈಗ ಎಲ್ಲೆಲ್ಲೂ ದೊರೆಯುತ್ತವೆ. ಇವೆಲ್ಲ ಸ್ವದೇಶಿ ಅಲ್ಲ ಪರದೇಶಿ ಎಂಬುದನ್ನು ಜನ ತಿಳಿದುಕೊಂಡಿಲ್ಲ.

ಈಗ ಪರದೇಶದ ಕಂಪನಿಗಳು ಭಾರತಕ್ಕೆ ಬಂದು ತಮ್ಮ ಉದ್ಯಮಗಳನ್ನು ಆರಂಭ ಮಾಡಿರುವುದರಿಂದ ಮೋದಿಯವರಿಗೂ ಅವೆಲ್ಲ ಸ್ವದೇಶಿಯಂದೇ ಗೋಚರವಾಗುತ್ತಿದೆ. ಈಗ ಈ ಪರದೇಶಿ ಕಂಪನಿಗಳೂ ಲೋಕಲ್ಲು ದುಡಿಯುವ ಜನವೂ ಲೋಕಲ್. ಈ ಪದಾರ್ಥ ಬಳಸುವವರೂ ಲೋಕಲ್. ಈ ಬಹುರಾಷ್ಟ್ರೀಯ ಕಂಪನಿಗಳು ಬರುವ ಅಪಾರ ಲಾಭವನ್ನು ಡಿವಿಡೆಂಡ್ ರೂಪದಲ್ಲಿ ತಮ್ಮ ಷೇರುದಾರರಿಗೆ ಉದಾರವಾಗಿ ನೀಡಿ ಉಳಿದ ಪುಡಿಗಾಸು ಲಾಭವನ್ನು ಭಾರತದಲ್ಲೇ ಉಳಿಸಿಕೊಳ್ಳುತ್ತವೆ. ನಗನಾಣ್ಯದ ಇತರ ಉದ್ಯಮಗಳು ಅಂದರೆ ಅವು ದೇಶಿಯರು ಸ್ಥಾಪಿಸಿರುವ ಉದ್ಯಮಗಳು. ಇವು ಇಲ್ಲಿ ಉತ್ಪನ್ನವಾಗುವ ಎಲ್ಲ ಪದಾರ್ಥಗಳು ಭಾರತದಲ್ಲೇ ಮಾರಾಟವಾಗುವುದು.

ದಿನಕಳೆದಂತೆ ಈ ಮೂರು ಬಗೆಯ ಸಂಸ್ಥೆಗಳು ತಮ್ಮ ಕಾರ್ಯ ಚಟುವಟಿಕೆಯನ್ನೂ ವಿಸ್ತರಿಸುತ್ತ ಹೋಗುತ್ತವೆ. ವಿದೇಶಗಳಲ್ಲಿಯೇ ಇದ್ದುಕೊಂಡು ಭಾರತಕ್ಕೆ ಕಳಿಸುವ ವಸ್ತುಗಳನ್ನ ತಯಾರಿಸುವ ಕಂಪನಿಗಳು ಸ್ವದೇಶಿ ಬಗೆಗೆ ಒತ್ತುಕೊಟ್ಟು ಕಣ್ಕುಕ್ಕುವ ಜಾಹಿರಾತುಗಳನ್ನೂ ನೀಡಿ ತಮ್ಮ ಸರಕಿಗೆ ಮಾರುಕಟ್ಟೆ ವಿಸ್ತರಿಸುತ್ತದೆ. ದೇಶಿ ಕಂಪನಿಗಳು ದೇಶಿ ಪದಾರ್ಥಗಳನ್ನೇ ಬಳಸಿ ಎಂದು vocal to local ಘೋಷಣೆಯನ್ನು ಮೊಳಗಿಸುತ್ತದೆ. ಮೋದಿಯವರು ಎಂದಿನಂತೆ ಹೊಸ ಘೋಷಣೆಯೊಂದನ್ನು ಹರಿಯ ಬಿಟ್ಟಿದ್ದಾರೆ. ಇದು ಬರಿಯ ಘೋಷಣೆಯೇ ಹೊರತು ನಿಜವಾದ ಸ್ವದೇಶಿ ಚಳುವಳಿ ಕಟ್ಟುವ ಘೋಷಣೆಯಲ್ಲ.

ಚಳುವಳಿಯನ್ನು ಜನತೆ ಮಾತ್ರ ನಡೆಸಬಲ್ಲರು ಎಂಬುದು ಮೋದಿಯವರಿಗೆ ಗೊತ್ತು. ಜನತೆಯನ್ನು ಬೆಸ್ತು ಬೀಳಿಸಲು ಹೂಡಿರುವ ತಂತ್ರ ಇದು. ಖಂಡಿತವಾಗಿ ಇದು ಮೋದಿಯವರ ಫೋಕಸ್ ಚಳುವಳಿಯಲ್ಲ.

ಜನತೆ ಮೋದಿಯವರ ಘೋಷಣೆಗೆ ಮರುಳಾಗಬಾರದು. ಸ್ವದೇಶಿ ಬಗೆಗೆ ಗಾಂಧಿಜಿಗಿದ್ದ ಆಸೆ ಮೋದಿಯವರಿಗೆ ಖಂಡಿತ ಇಲ್ಲ. ಭಾರತದ ಆರ್ಥಿಕತೆ ಕುಸಿಯುತ್ತಿರುವಾಗ ಜನರ ಮನಸ್ಸನ್ನು ಬೇರೆ ಕಡೆಗೆ ಸೆಳೆಯುವ ಮತ್ತೊಂದು ತಂತ್ರ ಇದು.


ಇದನ್ನು ಓದಿ: ಮೋದಿ 2.1: ಹಿಂದೂ ರಾಷ್ಟ್ರೀಯವಾದದ ವಿಜೃಂಭಣೆಯೇ ಮೋದಿ ಸರ್ಕಾರದ ಸಾಧನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...