Homeಅಂಕಣಗಳುಜನತೆ ಮೋದಿಯವರ ಸ್ವದೇಶಿ ಘೋಷಣೆಗೆ ಮರುಳಾಗಬಾರದು : ಎಚ್‌.ಎಸ್‌ ದೊರೆಸ್ವಾಮಿ

ಜನತೆ ಮೋದಿಯವರ ಸ್ವದೇಶಿ ಘೋಷಣೆಗೆ ಮರುಳಾಗಬಾರದು : ಎಚ್‌.ಎಸ್‌ ದೊರೆಸ್ವಾಮಿ

- Advertisement -
- Advertisement -

ಮೋದಿಯವರು ಆತ್ಮ ನಿರ್ಭರತೆ, ಸ್ವದೇಶಿ ಸ್ವಾವಲಂಬನೆ, ಸ್ವಾಭಿಮಾನದ ಮಾತನ್ನು ಆಡಿ ಭಾರತೀಯರನ್ನು ದಿಗ್ಬ್ರಮೆಗೊಳಿಸಿದ್ದಾರೆ. ಎಲ್ಲದಕ್ಕೂ ಪರ ರಾಷ್ಟ್ರಗಳನ್ನು ಅವಲಂಬನೆ ಮಾಡುವುದು ದೇಶದೃಷ್ಟಿಯಿಂದ ಸರಿಯಲ್ಲ, ಆತ್ಮ ನಿರ್ಭರತೆಗೆ ಒತ್ತು ಕೊಡಬೇಕು ಎಂಬುದು ಒಪ್ಪತಕ್ಕ ಮಾತು. ಆದರೆ ಈ ಮಾತನ್ನು ಮೋದಿಯವರು ಹರಿಬಿಟ್ಟಿರುವುದು ಅಭಾವ ವೈರಾಗ್ಯ ಕಾರಣದಿಂದ. ಬಹುರಾಷ್ಟ್ರೀಯ ಕಂಪನಿಗಳು ಆರ್ಥಿಕ ದುರ್ಭರತೆಯ ಕಾರಣದಿಂದ ಈ ಸಂದರ್ಭದಲ್ಲಿ ಬಂಡವಾಳ ತಂದು ಭಾರತದಲ್ಲಿ ಸುರಿಯುವುದಿಲ್ಲ ಎಂಬುದನ್ನು ಅರಿತು ಮೋದಿಯವರು ಆತ್ಮ ನಿರ್ಭರತೆಯ ಮಾತನ್ನು ಆಡಿದ್ದಾರೆ.

ಮೋದಿಯವರ ಆತ್ಮ ನಿರ್ಭರತೆಯ ಮಾತು ಗಾಂಧಿಜಿಯವರ ಸ್ವದೇಶಿ ಸಿದ್ಧಾಂತಕ್ಕೆ ಅಪಮಾನ ಮಾಡಿದಂತೆ ತೋರುತ್ತದೆ. ಅಂಕಣಕಾರ ಹರೀಶ್ ಬಿಜೂರ್ ಅವರು ಹೇಳುವಂತೆ ಆತ್ಮ ನಿರ್ಭರತೆ ಮಾತಿಗೆ ಎರಡು ಆಯಾಮಗಳಿವೆ. ಅವೆಂದರೆ ರಾಷ್ಟ್ರೀಯತೆ ಮತ್ತು ಆರ್ಥಿಕ ಸ್ವಾವಲಂಬನೆ. ಮೋದಿಯವರ ಪ್ರಕಾರ ಆತ್ಮ ನಿರ್ಭರತೆ ಬಹುರಾಷ್ಟ್ರೀಯ ಬ್ರಾಂಡಿನಿಂದ ಕೂಡಿದ ಸ್ವದೇಶಿ. ಇದು ಮೋದಿಯವರಿಗೆ ತಿಳಿಯದೆ ಇರುವ ಸಂಗತಿಯಲ್ಲ. ಈಗಾಗಲೇ ಭಾರತದಲ್ಲಿ ಸ್ಥಾಪನೆಯಾಗಿರುವ ಬಹುರಾಷ್ಟ್ರೀಯ ಉದ್ಯಮಗಳನ್ನು ಗಮನದಲ್ಲಿಟ್ಟುಕೊಂಡೇ ಮೋದಿ ಅವರು ಆತ್ಮನಿರ್ಭರತೆ ಮಾತನ್ನು ಹರಿಯಬಿಟ್ಟಿದ್ದಾರೆ. ಈ ಬ್ರಾಂಡಿನ ಉದ್ಯಮಗಳು ಹತ್ತಾರು ವರ್ಷಗಳಿಂದ ಭಾರತದಲ್ಲಿ ನಡೆಯುತ್ತಿವೆ. ಅವೆಲ್ಲ Made In India ಆದ್ದರಿಂದ ಅವು ಸ್ವದೇಶಿ ಎಂಬುದು ಮೋದಿ ಅವರ ವ್ಯಾಖ್ಯಾನ. ಈ ಯೋಜನೆಯನ್ನು ಪ್ರಕಟಿಸಿದ ಮೋದಿಯವರಿಗೆ ನಮ್ಮ ದೇಶದಲ್ಲಿ ಸ್ಥಾಪಿತವಾಗಿರುವ ಎಲ್ಲ ಬಹುರಾಷ್ಟ್ರೀಯ ಕಂಪನಿಗಳೂ ಸ್ಥಳೀಯವೇ.

ಜನರಿಗಂತೂ ಸ್ವದೇಶಿ-ವಿದೇಶಿ ಪದಾರ್ಥಗಳ ಕಲ್ಪನೆಯೇ ಇಲ್ಲ. ಸ್ವದೇಶಿ ಬಳಸಬೇಕೆಂಬ ಆತ್ಮಾಭಿಮಾನವೂ ಇಲ್ಲ. ಉದಾಹರಣೆಗೆ ನೆಸ್‍ಕೆಫೆ, ಕೋಕಾಕೋಲಾ, ಮ್ಯಾಗಿಶಾವಿಗೆಗಳಾಗಲಿ, ಅಡಿದಾಸ್ ಸಿದ್ದಪಡಿಸಿದ ಬಟ್ಟೆಗಳು, ಲಕ್ಸ್, 501 ಸೋಪುಗಳು ಬಾಟಾ ಷೂ ಮತ್ತು ಚಪ್ಪಲಿ ಮುಂತಾದ ದಿನಬಳಕೆಯ ವಸ್ತುಗಳಾಗಲಿ ವಿದೇಶಿಯೇ ಹೊರತು ಸ್ವದೇಶಿ ಅಲ್ಲ ಎಂಬ ಸಾಮಾನ್ಯ ತಿಳುವಳಿಕೆಯೂ ಜನಸಾಮಾನ್ಯರಲ್ಲಿ ಮಾತ್ರವಲ್ಲ ವಿದ್ಯಾವಂತರಲ್ಲಿ ಕೂಡ ಇದ್ದಂತೆ ತೋರುವುದಿಲ್ಲ.

ಜನರ ಈ ಅಜ್ಞಾನವನ್ನು ಮೋದಿಯವರು ಚೆನ್ನಾಗಿ ಬಳಸಿಕೊಳ್ಳಲು ನಿರ್ಧರಿಸಿದ್ದಾರೆ. ಇವಲ್ಲದೆ ನಾವು ಬೆಳಗಿನಿಂದ ರಾತ್ರಿಯವರೆಗೆ ಬಳಸುವ ಟೂತ್‍ಪೇಸ್ಟ್, ಟೂತ್‍ಬ್ರಷ್, ಬಟ್ಟೆಸೋಪು, ಸ್ನಾನದ ಸೋಪು, ಕುಂಕುಮ, ಕಾಡಿಗೆ, ಸ್ನೋ ಪೌಡರ್, ಲಿಪ್‍ಸ್ಟಿಕ್ ಎಲ್ಲ ಪರದೇಶದ ಕಂಪೆನಿಗಳು ತಯಾರಿಸುವವೇ. ನಮ್ಮ ದೇಶದಲ್ಲಿ ತಯಾರಾಗುವ ಬಹುರಾಷ್ಟ್ರೀಯ ಬ್ರಾಂಡ್‍ಗಳ ಪದಾರ್ಥಗಳು ಪರದೇಶದಿಂದ ಆಮದಾಗುವ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುವ ವಸ್ತುಗಳು ಈಗ ಎಲ್ಲೆಲ್ಲೂ ದೊರೆಯುತ್ತವೆ. ಇವೆಲ್ಲ ಸ್ವದೇಶಿ ಅಲ್ಲ ಪರದೇಶಿ ಎಂಬುದನ್ನು ಜನ ತಿಳಿದುಕೊಂಡಿಲ್ಲ.

ಈಗ ಪರದೇಶದ ಕಂಪನಿಗಳು ಭಾರತಕ್ಕೆ ಬಂದು ತಮ್ಮ ಉದ್ಯಮಗಳನ್ನು ಆರಂಭ ಮಾಡಿರುವುದರಿಂದ ಮೋದಿಯವರಿಗೂ ಅವೆಲ್ಲ ಸ್ವದೇಶಿಯಂದೇ ಗೋಚರವಾಗುತ್ತಿದೆ. ಈಗ ಈ ಪರದೇಶಿ ಕಂಪನಿಗಳೂ ಲೋಕಲ್ಲು ದುಡಿಯುವ ಜನವೂ ಲೋಕಲ್. ಈ ಪದಾರ್ಥ ಬಳಸುವವರೂ ಲೋಕಲ್. ಈ ಬಹುರಾಷ್ಟ್ರೀಯ ಕಂಪನಿಗಳು ಬರುವ ಅಪಾರ ಲಾಭವನ್ನು ಡಿವಿಡೆಂಡ್ ರೂಪದಲ್ಲಿ ತಮ್ಮ ಷೇರುದಾರರಿಗೆ ಉದಾರವಾಗಿ ನೀಡಿ ಉಳಿದ ಪುಡಿಗಾಸು ಲಾಭವನ್ನು ಭಾರತದಲ್ಲೇ ಉಳಿಸಿಕೊಳ್ಳುತ್ತವೆ. ನಗನಾಣ್ಯದ ಇತರ ಉದ್ಯಮಗಳು ಅಂದರೆ ಅವು ದೇಶಿಯರು ಸ್ಥಾಪಿಸಿರುವ ಉದ್ಯಮಗಳು. ಇವು ಇಲ್ಲಿ ಉತ್ಪನ್ನವಾಗುವ ಎಲ್ಲ ಪದಾರ್ಥಗಳು ಭಾರತದಲ್ಲೇ ಮಾರಾಟವಾಗುವುದು.

ದಿನಕಳೆದಂತೆ ಈ ಮೂರು ಬಗೆಯ ಸಂಸ್ಥೆಗಳು ತಮ್ಮ ಕಾರ್ಯ ಚಟುವಟಿಕೆಯನ್ನೂ ವಿಸ್ತರಿಸುತ್ತ ಹೋಗುತ್ತವೆ. ವಿದೇಶಗಳಲ್ಲಿಯೇ ಇದ್ದುಕೊಂಡು ಭಾರತಕ್ಕೆ ಕಳಿಸುವ ವಸ್ತುಗಳನ್ನ ತಯಾರಿಸುವ ಕಂಪನಿಗಳು ಸ್ವದೇಶಿ ಬಗೆಗೆ ಒತ್ತುಕೊಟ್ಟು ಕಣ್ಕುಕ್ಕುವ ಜಾಹಿರಾತುಗಳನ್ನೂ ನೀಡಿ ತಮ್ಮ ಸರಕಿಗೆ ಮಾರುಕಟ್ಟೆ ವಿಸ್ತರಿಸುತ್ತದೆ. ದೇಶಿ ಕಂಪನಿಗಳು ದೇಶಿ ಪದಾರ್ಥಗಳನ್ನೇ ಬಳಸಿ ಎಂದು vocal to local ಘೋಷಣೆಯನ್ನು ಮೊಳಗಿಸುತ್ತದೆ. ಮೋದಿಯವರು ಎಂದಿನಂತೆ ಹೊಸ ಘೋಷಣೆಯೊಂದನ್ನು ಹರಿಯ ಬಿಟ್ಟಿದ್ದಾರೆ. ಇದು ಬರಿಯ ಘೋಷಣೆಯೇ ಹೊರತು ನಿಜವಾದ ಸ್ವದೇಶಿ ಚಳುವಳಿ ಕಟ್ಟುವ ಘೋಷಣೆಯಲ್ಲ.

ಚಳುವಳಿಯನ್ನು ಜನತೆ ಮಾತ್ರ ನಡೆಸಬಲ್ಲರು ಎಂಬುದು ಮೋದಿಯವರಿಗೆ ಗೊತ್ತು. ಜನತೆಯನ್ನು ಬೆಸ್ತು ಬೀಳಿಸಲು ಹೂಡಿರುವ ತಂತ್ರ ಇದು. ಖಂಡಿತವಾಗಿ ಇದು ಮೋದಿಯವರ ಫೋಕಸ್ ಚಳುವಳಿಯಲ್ಲ.

ಜನತೆ ಮೋದಿಯವರ ಘೋಷಣೆಗೆ ಮರುಳಾಗಬಾರದು. ಸ್ವದೇಶಿ ಬಗೆಗೆ ಗಾಂಧಿಜಿಗಿದ್ದ ಆಸೆ ಮೋದಿಯವರಿಗೆ ಖಂಡಿತ ಇಲ್ಲ. ಭಾರತದ ಆರ್ಥಿಕತೆ ಕುಸಿಯುತ್ತಿರುವಾಗ ಜನರ ಮನಸ್ಸನ್ನು ಬೇರೆ ಕಡೆಗೆ ಸೆಳೆಯುವ ಮತ್ತೊಂದು ತಂತ್ರ ಇದು.


ಇದನ್ನು ಓದಿ: ಮೋದಿ 2.1: ಹಿಂದೂ ರಾಷ್ಟ್ರೀಯವಾದದ ವಿಜೃಂಭಣೆಯೇ ಮೋದಿ ಸರ್ಕಾರದ ಸಾಧನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...