Homeಅಂಕಣಗಳುಜನತೆ ಮೋದಿಯವರ ಸ್ವದೇಶಿ ಘೋಷಣೆಗೆ ಮರುಳಾಗಬಾರದು : ಎಚ್‌.ಎಸ್‌ ದೊರೆಸ್ವಾಮಿ

ಜನತೆ ಮೋದಿಯವರ ಸ್ವದೇಶಿ ಘೋಷಣೆಗೆ ಮರುಳಾಗಬಾರದು : ಎಚ್‌.ಎಸ್‌ ದೊರೆಸ್ವಾಮಿ

- Advertisement -
- Advertisement -

ಮೋದಿಯವರು ಆತ್ಮ ನಿರ್ಭರತೆ, ಸ್ವದೇಶಿ ಸ್ವಾವಲಂಬನೆ, ಸ್ವಾಭಿಮಾನದ ಮಾತನ್ನು ಆಡಿ ಭಾರತೀಯರನ್ನು ದಿಗ್ಬ್ರಮೆಗೊಳಿಸಿದ್ದಾರೆ. ಎಲ್ಲದಕ್ಕೂ ಪರ ರಾಷ್ಟ್ರಗಳನ್ನು ಅವಲಂಬನೆ ಮಾಡುವುದು ದೇಶದೃಷ್ಟಿಯಿಂದ ಸರಿಯಲ್ಲ, ಆತ್ಮ ನಿರ್ಭರತೆಗೆ ಒತ್ತು ಕೊಡಬೇಕು ಎಂಬುದು ಒಪ್ಪತಕ್ಕ ಮಾತು. ಆದರೆ ಈ ಮಾತನ್ನು ಮೋದಿಯವರು ಹರಿಬಿಟ್ಟಿರುವುದು ಅಭಾವ ವೈರಾಗ್ಯ ಕಾರಣದಿಂದ. ಬಹುರಾಷ್ಟ್ರೀಯ ಕಂಪನಿಗಳು ಆರ್ಥಿಕ ದುರ್ಭರತೆಯ ಕಾರಣದಿಂದ ಈ ಸಂದರ್ಭದಲ್ಲಿ ಬಂಡವಾಳ ತಂದು ಭಾರತದಲ್ಲಿ ಸುರಿಯುವುದಿಲ್ಲ ಎಂಬುದನ್ನು ಅರಿತು ಮೋದಿಯವರು ಆತ್ಮ ನಿರ್ಭರತೆಯ ಮಾತನ್ನು ಆಡಿದ್ದಾರೆ.

ಮೋದಿಯವರ ಆತ್ಮ ನಿರ್ಭರತೆಯ ಮಾತು ಗಾಂಧಿಜಿಯವರ ಸ್ವದೇಶಿ ಸಿದ್ಧಾಂತಕ್ಕೆ ಅಪಮಾನ ಮಾಡಿದಂತೆ ತೋರುತ್ತದೆ. ಅಂಕಣಕಾರ ಹರೀಶ್ ಬಿಜೂರ್ ಅವರು ಹೇಳುವಂತೆ ಆತ್ಮ ನಿರ್ಭರತೆ ಮಾತಿಗೆ ಎರಡು ಆಯಾಮಗಳಿವೆ. ಅವೆಂದರೆ ರಾಷ್ಟ್ರೀಯತೆ ಮತ್ತು ಆರ್ಥಿಕ ಸ್ವಾವಲಂಬನೆ. ಮೋದಿಯವರ ಪ್ರಕಾರ ಆತ್ಮ ನಿರ್ಭರತೆ ಬಹುರಾಷ್ಟ್ರೀಯ ಬ್ರಾಂಡಿನಿಂದ ಕೂಡಿದ ಸ್ವದೇಶಿ. ಇದು ಮೋದಿಯವರಿಗೆ ತಿಳಿಯದೆ ಇರುವ ಸಂಗತಿಯಲ್ಲ. ಈಗಾಗಲೇ ಭಾರತದಲ್ಲಿ ಸ್ಥಾಪನೆಯಾಗಿರುವ ಬಹುರಾಷ್ಟ್ರೀಯ ಉದ್ಯಮಗಳನ್ನು ಗಮನದಲ್ಲಿಟ್ಟುಕೊಂಡೇ ಮೋದಿ ಅವರು ಆತ್ಮನಿರ್ಭರತೆ ಮಾತನ್ನು ಹರಿಯಬಿಟ್ಟಿದ್ದಾರೆ. ಈ ಬ್ರಾಂಡಿನ ಉದ್ಯಮಗಳು ಹತ್ತಾರು ವರ್ಷಗಳಿಂದ ಭಾರತದಲ್ಲಿ ನಡೆಯುತ್ತಿವೆ. ಅವೆಲ್ಲ Made In India ಆದ್ದರಿಂದ ಅವು ಸ್ವದೇಶಿ ಎಂಬುದು ಮೋದಿ ಅವರ ವ್ಯಾಖ್ಯಾನ. ಈ ಯೋಜನೆಯನ್ನು ಪ್ರಕಟಿಸಿದ ಮೋದಿಯವರಿಗೆ ನಮ್ಮ ದೇಶದಲ್ಲಿ ಸ್ಥಾಪಿತವಾಗಿರುವ ಎಲ್ಲ ಬಹುರಾಷ್ಟ್ರೀಯ ಕಂಪನಿಗಳೂ ಸ್ಥಳೀಯವೇ.

ಜನರಿಗಂತೂ ಸ್ವದೇಶಿ-ವಿದೇಶಿ ಪದಾರ್ಥಗಳ ಕಲ್ಪನೆಯೇ ಇಲ್ಲ. ಸ್ವದೇಶಿ ಬಳಸಬೇಕೆಂಬ ಆತ್ಮಾಭಿಮಾನವೂ ಇಲ್ಲ. ಉದಾಹರಣೆಗೆ ನೆಸ್‍ಕೆಫೆ, ಕೋಕಾಕೋಲಾ, ಮ್ಯಾಗಿಶಾವಿಗೆಗಳಾಗಲಿ, ಅಡಿದಾಸ್ ಸಿದ್ದಪಡಿಸಿದ ಬಟ್ಟೆಗಳು, ಲಕ್ಸ್, 501 ಸೋಪುಗಳು ಬಾಟಾ ಷೂ ಮತ್ತು ಚಪ್ಪಲಿ ಮುಂತಾದ ದಿನಬಳಕೆಯ ವಸ್ತುಗಳಾಗಲಿ ವಿದೇಶಿಯೇ ಹೊರತು ಸ್ವದೇಶಿ ಅಲ್ಲ ಎಂಬ ಸಾಮಾನ್ಯ ತಿಳುವಳಿಕೆಯೂ ಜನಸಾಮಾನ್ಯರಲ್ಲಿ ಮಾತ್ರವಲ್ಲ ವಿದ್ಯಾವಂತರಲ್ಲಿ ಕೂಡ ಇದ್ದಂತೆ ತೋರುವುದಿಲ್ಲ.

ಜನರ ಈ ಅಜ್ಞಾನವನ್ನು ಮೋದಿಯವರು ಚೆನ್ನಾಗಿ ಬಳಸಿಕೊಳ್ಳಲು ನಿರ್ಧರಿಸಿದ್ದಾರೆ. ಇವಲ್ಲದೆ ನಾವು ಬೆಳಗಿನಿಂದ ರಾತ್ರಿಯವರೆಗೆ ಬಳಸುವ ಟೂತ್‍ಪೇಸ್ಟ್, ಟೂತ್‍ಬ್ರಷ್, ಬಟ್ಟೆಸೋಪು, ಸ್ನಾನದ ಸೋಪು, ಕುಂಕುಮ, ಕಾಡಿಗೆ, ಸ್ನೋ ಪೌಡರ್, ಲಿಪ್‍ಸ್ಟಿಕ್ ಎಲ್ಲ ಪರದೇಶದ ಕಂಪೆನಿಗಳು ತಯಾರಿಸುವವೇ. ನಮ್ಮ ದೇಶದಲ್ಲಿ ತಯಾರಾಗುವ ಬಹುರಾಷ್ಟ್ರೀಯ ಬ್ರಾಂಡ್‍ಗಳ ಪದಾರ್ಥಗಳು ಪರದೇಶದಿಂದ ಆಮದಾಗುವ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುವ ವಸ್ತುಗಳು ಈಗ ಎಲ್ಲೆಲ್ಲೂ ದೊರೆಯುತ್ತವೆ. ಇವೆಲ್ಲ ಸ್ವದೇಶಿ ಅಲ್ಲ ಪರದೇಶಿ ಎಂಬುದನ್ನು ಜನ ತಿಳಿದುಕೊಂಡಿಲ್ಲ.

ಈಗ ಪರದೇಶದ ಕಂಪನಿಗಳು ಭಾರತಕ್ಕೆ ಬಂದು ತಮ್ಮ ಉದ್ಯಮಗಳನ್ನು ಆರಂಭ ಮಾಡಿರುವುದರಿಂದ ಮೋದಿಯವರಿಗೂ ಅವೆಲ್ಲ ಸ್ವದೇಶಿಯಂದೇ ಗೋಚರವಾಗುತ್ತಿದೆ. ಈಗ ಈ ಪರದೇಶಿ ಕಂಪನಿಗಳೂ ಲೋಕಲ್ಲು ದುಡಿಯುವ ಜನವೂ ಲೋಕಲ್. ಈ ಪದಾರ್ಥ ಬಳಸುವವರೂ ಲೋಕಲ್. ಈ ಬಹುರಾಷ್ಟ್ರೀಯ ಕಂಪನಿಗಳು ಬರುವ ಅಪಾರ ಲಾಭವನ್ನು ಡಿವಿಡೆಂಡ್ ರೂಪದಲ್ಲಿ ತಮ್ಮ ಷೇರುದಾರರಿಗೆ ಉದಾರವಾಗಿ ನೀಡಿ ಉಳಿದ ಪುಡಿಗಾಸು ಲಾಭವನ್ನು ಭಾರತದಲ್ಲೇ ಉಳಿಸಿಕೊಳ್ಳುತ್ತವೆ. ನಗನಾಣ್ಯದ ಇತರ ಉದ್ಯಮಗಳು ಅಂದರೆ ಅವು ದೇಶಿಯರು ಸ್ಥಾಪಿಸಿರುವ ಉದ್ಯಮಗಳು. ಇವು ಇಲ್ಲಿ ಉತ್ಪನ್ನವಾಗುವ ಎಲ್ಲ ಪದಾರ್ಥಗಳು ಭಾರತದಲ್ಲೇ ಮಾರಾಟವಾಗುವುದು.

ದಿನಕಳೆದಂತೆ ಈ ಮೂರು ಬಗೆಯ ಸಂಸ್ಥೆಗಳು ತಮ್ಮ ಕಾರ್ಯ ಚಟುವಟಿಕೆಯನ್ನೂ ವಿಸ್ತರಿಸುತ್ತ ಹೋಗುತ್ತವೆ. ವಿದೇಶಗಳಲ್ಲಿಯೇ ಇದ್ದುಕೊಂಡು ಭಾರತಕ್ಕೆ ಕಳಿಸುವ ವಸ್ತುಗಳನ್ನ ತಯಾರಿಸುವ ಕಂಪನಿಗಳು ಸ್ವದೇಶಿ ಬಗೆಗೆ ಒತ್ತುಕೊಟ್ಟು ಕಣ್ಕುಕ್ಕುವ ಜಾಹಿರಾತುಗಳನ್ನೂ ನೀಡಿ ತಮ್ಮ ಸರಕಿಗೆ ಮಾರುಕಟ್ಟೆ ವಿಸ್ತರಿಸುತ್ತದೆ. ದೇಶಿ ಕಂಪನಿಗಳು ದೇಶಿ ಪದಾರ್ಥಗಳನ್ನೇ ಬಳಸಿ ಎಂದು vocal to local ಘೋಷಣೆಯನ್ನು ಮೊಳಗಿಸುತ್ತದೆ. ಮೋದಿಯವರು ಎಂದಿನಂತೆ ಹೊಸ ಘೋಷಣೆಯೊಂದನ್ನು ಹರಿಯ ಬಿಟ್ಟಿದ್ದಾರೆ. ಇದು ಬರಿಯ ಘೋಷಣೆಯೇ ಹೊರತು ನಿಜವಾದ ಸ್ವದೇಶಿ ಚಳುವಳಿ ಕಟ್ಟುವ ಘೋಷಣೆಯಲ್ಲ.

ಚಳುವಳಿಯನ್ನು ಜನತೆ ಮಾತ್ರ ನಡೆಸಬಲ್ಲರು ಎಂಬುದು ಮೋದಿಯವರಿಗೆ ಗೊತ್ತು. ಜನತೆಯನ್ನು ಬೆಸ್ತು ಬೀಳಿಸಲು ಹೂಡಿರುವ ತಂತ್ರ ಇದು. ಖಂಡಿತವಾಗಿ ಇದು ಮೋದಿಯವರ ಫೋಕಸ್ ಚಳುವಳಿಯಲ್ಲ.

ಜನತೆ ಮೋದಿಯವರ ಘೋಷಣೆಗೆ ಮರುಳಾಗಬಾರದು. ಸ್ವದೇಶಿ ಬಗೆಗೆ ಗಾಂಧಿಜಿಗಿದ್ದ ಆಸೆ ಮೋದಿಯವರಿಗೆ ಖಂಡಿತ ಇಲ್ಲ. ಭಾರತದ ಆರ್ಥಿಕತೆ ಕುಸಿಯುತ್ತಿರುವಾಗ ಜನರ ಮನಸ್ಸನ್ನು ಬೇರೆ ಕಡೆಗೆ ಸೆಳೆಯುವ ಮತ್ತೊಂದು ತಂತ್ರ ಇದು.


ಇದನ್ನು ಓದಿ: ಮೋದಿ 2.1: ಹಿಂದೂ ರಾಷ್ಟ್ರೀಯವಾದದ ವಿಜೃಂಭಣೆಯೇ ಮೋದಿ ಸರ್ಕಾರದ ಸಾಧನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಾಖಲೆಗಳಿದ್ದರೂ ಬಂಗಾಳಿ ಮಾತನಾಡುವ ಕಾರಣಕ್ಕೆ ಮಹಿಳೆಯನ್ನು ಬಾಂಗ್ಲಾದೇಶಕ್ಕೆ ಕಳುಹಿಸಿದ ಅಧಿಕಾರಿಗಳು?

ನವಿ ಮುಂಬೈನ 40 ವರ್ಷದ ಬಂಗಾಳಿ ಮಾತನಾಡುವ ಮಹಿಳೆಯೊಬ್ಬರನ್ನು ಅಕ್ರಮ ಬಾಂಗ್ಲಾದೇಶಿ ವಲಸಿಗರು ಎಂಬ ಶಂಕೆಯ ಮೇಲೆ ಬಂಧಿಸಿ, ಆಕೆ ಭಾರತದಲ್ಲೇ ಜನಿಸಿ ವಾಸಿಸುತ್ತಿದ್ದ ದಾಖಲೆಗಳನ್ನು ಕುಟುಂಬದವರು ಒದಗಿಸಿದರೂ, ಗಡಿಯಾಚೆಗೆ ಕಳುಹಿಸಲಾಗಿದೆ ಎಂದು...

ಬಾರ್ ಕೌನ್ಸಿಲ್ ಅಧ್ಯಕ್ಷರ ವಿರುದ್ಧ ₹150 ಕೋಟಿ ಅಕ್ರಮ ಆರೋಪ: ತಕ್ಷಣವೇ ರಾಜೀನಾಮೆ ನೀಡಲು ಒತ್ತಾಯ

ಭಾರತೀಯ ಬಾರ್ ಕೌನ್ಸಿಲ್ (BCI) ಉಪಾಧ್ಯಕ್ಷ ಮತ್ತು ಹಿರಿಯ ವಕೀಲ ವೈ.ಆರ್. ಸದಾಶಿವ ರೆಡ್ಡಿ ಅವರು ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಅವರ ರಾಜೀನಾಮೆಗೆ ಆಗ್ರಹಿಸಿ ಪತ್ರ ಬರೆದಿದ್ದಾರೆ. ತಮ್ಮ ಪತ್ರದಲ್ಲಿ...

ಶಿಕ್ಷಕರ ನೇಮಕಾತಿಯಲ್ಲಿ ಉರ್ದು ಮಾಧ್ಯಮಕ್ಕೆ ಅನ್ಯಾಯ : ಹೈಕೋರ್ಟ್‌ಗೆ ಅರ್ಜಿ

ಕರ್ನಾಟಕ ಸರ್ಕಾರದ 15 ಸಾವಿರ ಶಿಕ್ಷಕರ ನೇಮಕಾತಿ ಅಧಿಸೂಚನೆಯಲ್ಲಿ ಉರ್ದು ಮಾಧ್ಯಮ ಹಾಗೂ ಇತರ ಭಾಷಾ ಅಲ್ಪಸಂಖ್ಯಾತ ಶಿಕ್ಷಕರ ಹುದ್ದೆಗಳನ್ನು ಕೈಬಿಡಲಾಗಿದೆ ಎಂದು ಆರೋಪಿಸಿ ಹೈಕೋರ್ಟ್‌ನ ಧಾರವಾಡ ಪೀಠದ ಮುಂದೆ ಅರ್ಜಿ ಸಲ್ಲಿಕೆಯಾಗಿದೆ. ಉರ್ದು...

ಚುನಾವಣಾ ಆಯೋಗಕ್ಕೆ ನಕಲಿ ಆಕ್ಷೇಪಣೆ ಪತ್ರ ಸಲ್ಲಿಕೆ; ಉತ್ತರಾಖಂಡ್ ಹಾಲಿ ಕಾಂಗ್ರೆಸ್ ಶಾಸಕರ ಹೆಸರು ಡಿಲೀಟ್

ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದುಹಾಕಲು ಕೋರಿ ಸಲ್ಲಿಸಲಾದ ಆಕ್ಷೇಪಣೆಯನ್ನು (ಅರ್ಜಿ) ನಾನು ಸಲ್ಲಿಸಿಲ್ಲ ಎಂದು ವ್ಯಕ್ತಿಯೊಬ್ಬರು ನಿರಾಕರಿಸಿದ ನಂತರ, ಉತ್ತರಾಖಂಡ್ ಕಾಂಗ್ರೆಸ್ ಶಾಸಕ ಫುರ್ಕಾನ್ ಅಹಮದ್ ಅವರು ಮತದಾರರ ಪಟ್ಟಿಯ ವಿಶೇಷ ತೀವ್ರ...

RTI ಕಾರ್ಯಕರ್ತ ವಿನಾಯಕ ಬಾಳಿಗಾ ಹತ್ಯೆ ಪ್ರಕರಣ: ₹24 ಲಕ್ಷ ದೇವಸ್ಥಾನದ ಕಾಣಿಕೆ ಹಣ ಮನೆಗೆ ಕೊಂಡೊಯ್ದಿದ್ದ ನರೇಶ್ ಶೆಣೈ

RTI ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಚಲನ ಮೂಡಿಸುವಂತಹ ಮಹತ್ವದ ದಾಖಲೆಯೊಂದು ಬಹಿರಂಗವಾಗಿದೆ. ಬಾಳಿಗಾ ಹತ್ಯೆ ನಡೆಯುವುದಕ್ಕೂ ಕೆಲವೇ ದಿನಗಳ ಮುನ್ನ, ಪ್ರಕರಣದ ಪ್ರಮುಖ ಆರೋಪಿ ನರೇಶ್...

ಸಿಜೆಪಿ ಪ್ರತಿಭಟನೆ: ಪೊಲೀಸ್ ದೌರ್ಜನ್ಯಗಳ ಆರೋಪದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಸುಪ್ರೀಂ ಆದೇಶ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ದೆಹಲಿ ಪೊಲೀಸರು ನಡೆಸಿದ ಅತಿಯಾದ ಬಲಪ್ರಯೋಗ, ಹಿಂಸಾಚಾರ ಮತ್ತು ಇತರ ಗಂಭೀರ ದುರ್ನಡತೆಯ ಆರೋಪಗಳ ತನಿಖೆಗೆ ಉನ್ನತ...

ನಕಲಿ ಔಷಧ ದಂಧೆ: ತನಿಖೆಗೆ ಕಾನೂನು ತೊಡಕು, ಎಸ್‌ಐಟಿಗೆ ವಿಶೇಷಾಧಿಕಾರಕ್ಕೆ ಬೇಡಿಕೆ

ರಾಮನಗರ ಜಿಲ್ಲೆಯ ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡೇರಿ ಗ್ರಾಮದ ಫಾರ್ಮ್‌ಹೌಸ್‌ನಲ್ಲಿ ಬೆಳಕಿಗೆ ಬಂದಿರುವ ಸುಮಾರು 5 ಕೋಟಿ ರೂಪಾಯಿ ಮೌಲ್ಯದ ಬೃಹತ್ ನಕಲಿ ಔಷಧ ದಂಧೆಯ ತನಿಖೆಗೆ ಗಂಭೀರವಾದ ಕಾನೂನು ತೊಡಕು...

ಸಿಜೆಪಿ ಸ್ವಯಂ ಸೇವಕರ ಮೇಲೆ ದಾಳಿ | ರಾಜಸ್ಥಾನದ ಬಿಜೆಪಿ ಸರ್ಕಾರಕ್ಕೆ 3 ಬೇಡಿಕೆಗಳನ್ನು ಮುಂದಿಟ್ಟ ಅಭಿಜೀತ್ ದೀಪ್ಕೆ : ಈಡೇರಿಸಲು 48 ಗಂಟೆಗಳ ಗಡುವು

ಸರ್ಕಾರಿ ಶಾಲೆಯ ದುಃಸ್ಥಿತಿಯನ್ನು ಪರಿಶೀಲಿಸಲು ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಸಹ-ಸಂಘಟಕ ಆಶುತೋಷ್ ರಾಂಕಾ ಮತ್ತು ಇತರ ಸ್ವಯಂಸೇವಕರ ಮೇಲೆ ದಾಳಿ ನಡೆಸಿರುವುದನ್ನು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ತೀವ್ರವಾಗಿ ಖಂಡಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು...

ಸಾರ್ವಜನಿಕರ ಉಪಸ್ಥಿತಿಯಿಲ್ಲದ ಮುಚ್ಚಿದ ಸ್ಥಳದಲ್ಲಿ ಜಾತಿ ನಿಂದನೆ: ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಅಪರಾಧವಲ್ಲ: ಸುಪ್ರೀಂ ಕೋರ್ಟ್ 

ಸಾರ್ವಜನಿಕ ಪ್ರವೇಶವಿಲ್ಲದ ಮತ್ತು ಸಾರ್ವಜನಿಕರ ಉಪಸ್ಥಿತಿಯಿಲ್ಲದ ನಾಲ್ಕು ಗೋಡೆಗಳ ನಡುವೆ ಅಥವಾ ಸುತ್ತುವರಿದ ಮುಚ್ಚಿದ ಜಾಗದಲ್ಲಿ ನಡೆದಿದೆ ಎನ್ನಲಾದ ಜಾತಿ ಆಧಾರಿತ ನಿಂದನೆ ಅಥವಾ ವಾಗ್ವಾದಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ...

ಕರ್ನಾಟಕದ ಒಂದೂವರೆ ಕೋಟಿ ಮತದಾರರನ್ನು ಬಾಧಿಸಿದ SIR

ಎನ್ಯುಮರೇಷನ್ ಫಾರಂ (ಗಣತಿ ನಮೂನೆ) ಸಲ್ಲಿಕೆ ಹಂತ ಮುಗಿದ ಬಳಿಕ (ಆ.18-19ರ ಪ್ರಕಾರ) ದೊರೆತ ಮಾಹಿತಿ ಪ್ರಕಾರ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕರ್ನಾಟಕದ ಸುಮಾರು ಒಂದೂವರೆ ಕೋಟಿ (...