Homeಅಂಕಣಗಳುಜನತೆ ಮೋದಿಯವರ ಸ್ವದೇಶಿ ಘೋಷಣೆಗೆ ಮರುಳಾಗಬಾರದು : ಎಚ್‌.ಎಸ್‌ ದೊರೆಸ್ವಾಮಿ

ಜನತೆ ಮೋದಿಯವರ ಸ್ವದೇಶಿ ಘೋಷಣೆಗೆ ಮರುಳಾಗಬಾರದು : ಎಚ್‌.ಎಸ್‌ ದೊರೆಸ್ವಾಮಿ

- Advertisement -
- Advertisement -

ಮೋದಿಯವರು ಆತ್ಮ ನಿರ್ಭರತೆ, ಸ್ವದೇಶಿ ಸ್ವಾವಲಂಬನೆ, ಸ್ವಾಭಿಮಾನದ ಮಾತನ್ನು ಆಡಿ ಭಾರತೀಯರನ್ನು ದಿಗ್ಬ್ರಮೆಗೊಳಿಸಿದ್ದಾರೆ. ಎಲ್ಲದಕ್ಕೂ ಪರ ರಾಷ್ಟ್ರಗಳನ್ನು ಅವಲಂಬನೆ ಮಾಡುವುದು ದೇಶದೃಷ್ಟಿಯಿಂದ ಸರಿಯಲ್ಲ, ಆತ್ಮ ನಿರ್ಭರತೆಗೆ ಒತ್ತು ಕೊಡಬೇಕು ಎಂಬುದು ಒಪ್ಪತಕ್ಕ ಮಾತು. ಆದರೆ ಈ ಮಾತನ್ನು ಮೋದಿಯವರು ಹರಿಬಿಟ್ಟಿರುವುದು ಅಭಾವ ವೈರಾಗ್ಯ ಕಾರಣದಿಂದ. ಬಹುರಾಷ್ಟ್ರೀಯ ಕಂಪನಿಗಳು ಆರ್ಥಿಕ ದುರ್ಭರತೆಯ ಕಾರಣದಿಂದ ಈ ಸಂದರ್ಭದಲ್ಲಿ ಬಂಡವಾಳ ತಂದು ಭಾರತದಲ್ಲಿ ಸುರಿಯುವುದಿಲ್ಲ ಎಂಬುದನ್ನು ಅರಿತು ಮೋದಿಯವರು ಆತ್ಮ ನಿರ್ಭರತೆಯ ಮಾತನ್ನು ಆಡಿದ್ದಾರೆ.

ಮೋದಿಯವರ ಆತ್ಮ ನಿರ್ಭರತೆಯ ಮಾತು ಗಾಂಧಿಜಿಯವರ ಸ್ವದೇಶಿ ಸಿದ್ಧಾಂತಕ್ಕೆ ಅಪಮಾನ ಮಾಡಿದಂತೆ ತೋರುತ್ತದೆ. ಅಂಕಣಕಾರ ಹರೀಶ್ ಬಿಜೂರ್ ಅವರು ಹೇಳುವಂತೆ ಆತ್ಮ ನಿರ್ಭರತೆ ಮಾತಿಗೆ ಎರಡು ಆಯಾಮಗಳಿವೆ. ಅವೆಂದರೆ ರಾಷ್ಟ್ರೀಯತೆ ಮತ್ತು ಆರ್ಥಿಕ ಸ್ವಾವಲಂಬನೆ. ಮೋದಿಯವರ ಪ್ರಕಾರ ಆತ್ಮ ನಿರ್ಭರತೆ ಬಹುರಾಷ್ಟ್ರೀಯ ಬ್ರಾಂಡಿನಿಂದ ಕೂಡಿದ ಸ್ವದೇಶಿ. ಇದು ಮೋದಿಯವರಿಗೆ ತಿಳಿಯದೆ ಇರುವ ಸಂಗತಿಯಲ್ಲ. ಈಗಾಗಲೇ ಭಾರತದಲ್ಲಿ ಸ್ಥಾಪನೆಯಾಗಿರುವ ಬಹುರಾಷ್ಟ್ರೀಯ ಉದ್ಯಮಗಳನ್ನು ಗಮನದಲ್ಲಿಟ್ಟುಕೊಂಡೇ ಮೋದಿ ಅವರು ಆತ್ಮನಿರ್ಭರತೆ ಮಾತನ್ನು ಹರಿಯಬಿಟ್ಟಿದ್ದಾರೆ. ಈ ಬ್ರಾಂಡಿನ ಉದ್ಯಮಗಳು ಹತ್ತಾರು ವರ್ಷಗಳಿಂದ ಭಾರತದಲ್ಲಿ ನಡೆಯುತ್ತಿವೆ. ಅವೆಲ್ಲ Made In India ಆದ್ದರಿಂದ ಅವು ಸ್ವದೇಶಿ ಎಂಬುದು ಮೋದಿ ಅವರ ವ್ಯಾಖ್ಯಾನ. ಈ ಯೋಜನೆಯನ್ನು ಪ್ರಕಟಿಸಿದ ಮೋದಿಯವರಿಗೆ ನಮ್ಮ ದೇಶದಲ್ಲಿ ಸ್ಥಾಪಿತವಾಗಿರುವ ಎಲ್ಲ ಬಹುರಾಷ್ಟ್ರೀಯ ಕಂಪನಿಗಳೂ ಸ್ಥಳೀಯವೇ.

ಜನರಿಗಂತೂ ಸ್ವದೇಶಿ-ವಿದೇಶಿ ಪದಾರ್ಥಗಳ ಕಲ್ಪನೆಯೇ ಇಲ್ಲ. ಸ್ವದೇಶಿ ಬಳಸಬೇಕೆಂಬ ಆತ್ಮಾಭಿಮಾನವೂ ಇಲ್ಲ. ಉದಾಹರಣೆಗೆ ನೆಸ್‍ಕೆಫೆ, ಕೋಕಾಕೋಲಾ, ಮ್ಯಾಗಿಶಾವಿಗೆಗಳಾಗಲಿ, ಅಡಿದಾಸ್ ಸಿದ್ದಪಡಿಸಿದ ಬಟ್ಟೆಗಳು, ಲಕ್ಸ್, 501 ಸೋಪುಗಳು ಬಾಟಾ ಷೂ ಮತ್ತು ಚಪ್ಪಲಿ ಮುಂತಾದ ದಿನಬಳಕೆಯ ವಸ್ತುಗಳಾಗಲಿ ವಿದೇಶಿಯೇ ಹೊರತು ಸ್ವದೇಶಿ ಅಲ್ಲ ಎಂಬ ಸಾಮಾನ್ಯ ತಿಳುವಳಿಕೆಯೂ ಜನಸಾಮಾನ್ಯರಲ್ಲಿ ಮಾತ್ರವಲ್ಲ ವಿದ್ಯಾವಂತರಲ್ಲಿ ಕೂಡ ಇದ್ದಂತೆ ತೋರುವುದಿಲ್ಲ.

ಜನರ ಈ ಅಜ್ಞಾನವನ್ನು ಮೋದಿಯವರು ಚೆನ್ನಾಗಿ ಬಳಸಿಕೊಳ್ಳಲು ನಿರ್ಧರಿಸಿದ್ದಾರೆ. ಇವಲ್ಲದೆ ನಾವು ಬೆಳಗಿನಿಂದ ರಾತ್ರಿಯವರೆಗೆ ಬಳಸುವ ಟೂತ್‍ಪೇಸ್ಟ್, ಟೂತ್‍ಬ್ರಷ್, ಬಟ್ಟೆಸೋಪು, ಸ್ನಾನದ ಸೋಪು, ಕುಂಕುಮ, ಕಾಡಿಗೆ, ಸ್ನೋ ಪೌಡರ್, ಲಿಪ್‍ಸ್ಟಿಕ್ ಎಲ್ಲ ಪರದೇಶದ ಕಂಪೆನಿಗಳು ತಯಾರಿಸುವವೇ. ನಮ್ಮ ದೇಶದಲ್ಲಿ ತಯಾರಾಗುವ ಬಹುರಾಷ್ಟ್ರೀಯ ಬ್ರಾಂಡ್‍ಗಳ ಪದಾರ್ಥಗಳು ಪರದೇಶದಿಂದ ಆಮದಾಗುವ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುವ ವಸ್ತುಗಳು ಈಗ ಎಲ್ಲೆಲ್ಲೂ ದೊರೆಯುತ್ತವೆ. ಇವೆಲ್ಲ ಸ್ವದೇಶಿ ಅಲ್ಲ ಪರದೇಶಿ ಎಂಬುದನ್ನು ಜನ ತಿಳಿದುಕೊಂಡಿಲ್ಲ.

ಈಗ ಪರದೇಶದ ಕಂಪನಿಗಳು ಭಾರತಕ್ಕೆ ಬಂದು ತಮ್ಮ ಉದ್ಯಮಗಳನ್ನು ಆರಂಭ ಮಾಡಿರುವುದರಿಂದ ಮೋದಿಯವರಿಗೂ ಅವೆಲ್ಲ ಸ್ವದೇಶಿಯಂದೇ ಗೋಚರವಾಗುತ್ತಿದೆ. ಈಗ ಈ ಪರದೇಶಿ ಕಂಪನಿಗಳೂ ಲೋಕಲ್ಲು ದುಡಿಯುವ ಜನವೂ ಲೋಕಲ್. ಈ ಪದಾರ್ಥ ಬಳಸುವವರೂ ಲೋಕಲ್. ಈ ಬಹುರಾಷ್ಟ್ರೀಯ ಕಂಪನಿಗಳು ಬರುವ ಅಪಾರ ಲಾಭವನ್ನು ಡಿವಿಡೆಂಡ್ ರೂಪದಲ್ಲಿ ತಮ್ಮ ಷೇರುದಾರರಿಗೆ ಉದಾರವಾಗಿ ನೀಡಿ ಉಳಿದ ಪುಡಿಗಾಸು ಲಾಭವನ್ನು ಭಾರತದಲ್ಲೇ ಉಳಿಸಿಕೊಳ್ಳುತ್ತವೆ. ನಗನಾಣ್ಯದ ಇತರ ಉದ್ಯಮಗಳು ಅಂದರೆ ಅವು ದೇಶಿಯರು ಸ್ಥಾಪಿಸಿರುವ ಉದ್ಯಮಗಳು. ಇವು ಇಲ್ಲಿ ಉತ್ಪನ್ನವಾಗುವ ಎಲ್ಲ ಪದಾರ್ಥಗಳು ಭಾರತದಲ್ಲೇ ಮಾರಾಟವಾಗುವುದು.

ದಿನಕಳೆದಂತೆ ಈ ಮೂರು ಬಗೆಯ ಸಂಸ್ಥೆಗಳು ತಮ್ಮ ಕಾರ್ಯ ಚಟುವಟಿಕೆಯನ್ನೂ ವಿಸ್ತರಿಸುತ್ತ ಹೋಗುತ್ತವೆ. ವಿದೇಶಗಳಲ್ಲಿಯೇ ಇದ್ದುಕೊಂಡು ಭಾರತಕ್ಕೆ ಕಳಿಸುವ ವಸ್ತುಗಳನ್ನ ತಯಾರಿಸುವ ಕಂಪನಿಗಳು ಸ್ವದೇಶಿ ಬಗೆಗೆ ಒತ್ತುಕೊಟ್ಟು ಕಣ್ಕುಕ್ಕುವ ಜಾಹಿರಾತುಗಳನ್ನೂ ನೀಡಿ ತಮ್ಮ ಸರಕಿಗೆ ಮಾರುಕಟ್ಟೆ ವಿಸ್ತರಿಸುತ್ತದೆ. ದೇಶಿ ಕಂಪನಿಗಳು ದೇಶಿ ಪದಾರ್ಥಗಳನ್ನೇ ಬಳಸಿ ಎಂದು vocal to local ಘೋಷಣೆಯನ್ನು ಮೊಳಗಿಸುತ್ತದೆ. ಮೋದಿಯವರು ಎಂದಿನಂತೆ ಹೊಸ ಘೋಷಣೆಯೊಂದನ್ನು ಹರಿಯ ಬಿಟ್ಟಿದ್ದಾರೆ. ಇದು ಬರಿಯ ಘೋಷಣೆಯೇ ಹೊರತು ನಿಜವಾದ ಸ್ವದೇಶಿ ಚಳುವಳಿ ಕಟ್ಟುವ ಘೋಷಣೆಯಲ್ಲ.

ಚಳುವಳಿಯನ್ನು ಜನತೆ ಮಾತ್ರ ನಡೆಸಬಲ್ಲರು ಎಂಬುದು ಮೋದಿಯವರಿಗೆ ಗೊತ್ತು. ಜನತೆಯನ್ನು ಬೆಸ್ತು ಬೀಳಿಸಲು ಹೂಡಿರುವ ತಂತ್ರ ಇದು. ಖಂಡಿತವಾಗಿ ಇದು ಮೋದಿಯವರ ಫೋಕಸ್ ಚಳುವಳಿಯಲ್ಲ.

ಜನತೆ ಮೋದಿಯವರ ಘೋಷಣೆಗೆ ಮರುಳಾಗಬಾರದು. ಸ್ವದೇಶಿ ಬಗೆಗೆ ಗಾಂಧಿಜಿಗಿದ್ದ ಆಸೆ ಮೋದಿಯವರಿಗೆ ಖಂಡಿತ ಇಲ್ಲ. ಭಾರತದ ಆರ್ಥಿಕತೆ ಕುಸಿಯುತ್ತಿರುವಾಗ ಜನರ ಮನಸ್ಸನ್ನು ಬೇರೆ ಕಡೆಗೆ ಸೆಳೆಯುವ ಮತ್ತೊಂದು ತಂತ್ರ ಇದು.


ಇದನ್ನು ಓದಿ: ಮೋದಿ 2.1: ಹಿಂದೂ ರಾಷ್ಟ್ರೀಯವಾದದ ವಿಜೃಂಭಣೆಯೇ ಮೋದಿ ಸರ್ಕಾರದ ಸಾಧನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...