Homeಅಂಕಣಗಳುಜನತೆ ಮೋದಿಯವರ ಸ್ವದೇಶಿ ಘೋಷಣೆಗೆ ಮರುಳಾಗಬಾರದು : ಎಚ್‌.ಎಸ್‌ ದೊರೆಸ್ವಾಮಿ

ಜನತೆ ಮೋದಿಯವರ ಸ್ವದೇಶಿ ಘೋಷಣೆಗೆ ಮರುಳಾಗಬಾರದು : ಎಚ್‌.ಎಸ್‌ ದೊರೆಸ್ವಾಮಿ

- Advertisement -
- Advertisement -

ಮೋದಿಯವರು ಆತ್ಮ ನಿರ್ಭರತೆ, ಸ್ವದೇಶಿ ಸ್ವಾವಲಂಬನೆ, ಸ್ವಾಭಿಮಾನದ ಮಾತನ್ನು ಆಡಿ ಭಾರತೀಯರನ್ನು ದಿಗ್ಬ್ರಮೆಗೊಳಿಸಿದ್ದಾರೆ. ಎಲ್ಲದಕ್ಕೂ ಪರ ರಾಷ್ಟ್ರಗಳನ್ನು ಅವಲಂಬನೆ ಮಾಡುವುದು ದೇಶದೃಷ್ಟಿಯಿಂದ ಸರಿಯಲ್ಲ, ಆತ್ಮ ನಿರ್ಭರತೆಗೆ ಒತ್ತು ಕೊಡಬೇಕು ಎಂಬುದು ಒಪ್ಪತಕ್ಕ ಮಾತು. ಆದರೆ ಈ ಮಾತನ್ನು ಮೋದಿಯವರು ಹರಿಬಿಟ್ಟಿರುವುದು ಅಭಾವ ವೈರಾಗ್ಯ ಕಾರಣದಿಂದ. ಬಹುರಾಷ್ಟ್ರೀಯ ಕಂಪನಿಗಳು ಆರ್ಥಿಕ ದುರ್ಭರತೆಯ ಕಾರಣದಿಂದ ಈ ಸಂದರ್ಭದಲ್ಲಿ ಬಂಡವಾಳ ತಂದು ಭಾರತದಲ್ಲಿ ಸುರಿಯುವುದಿಲ್ಲ ಎಂಬುದನ್ನು ಅರಿತು ಮೋದಿಯವರು ಆತ್ಮ ನಿರ್ಭರತೆಯ ಮಾತನ್ನು ಆಡಿದ್ದಾರೆ.

ಮೋದಿಯವರ ಆತ್ಮ ನಿರ್ಭರತೆಯ ಮಾತು ಗಾಂಧಿಜಿಯವರ ಸ್ವದೇಶಿ ಸಿದ್ಧಾಂತಕ್ಕೆ ಅಪಮಾನ ಮಾಡಿದಂತೆ ತೋರುತ್ತದೆ. ಅಂಕಣಕಾರ ಹರೀಶ್ ಬಿಜೂರ್ ಅವರು ಹೇಳುವಂತೆ ಆತ್ಮ ನಿರ್ಭರತೆ ಮಾತಿಗೆ ಎರಡು ಆಯಾಮಗಳಿವೆ. ಅವೆಂದರೆ ರಾಷ್ಟ್ರೀಯತೆ ಮತ್ತು ಆರ್ಥಿಕ ಸ್ವಾವಲಂಬನೆ. ಮೋದಿಯವರ ಪ್ರಕಾರ ಆತ್ಮ ನಿರ್ಭರತೆ ಬಹುರಾಷ್ಟ್ರೀಯ ಬ್ರಾಂಡಿನಿಂದ ಕೂಡಿದ ಸ್ವದೇಶಿ. ಇದು ಮೋದಿಯವರಿಗೆ ತಿಳಿಯದೆ ಇರುವ ಸಂಗತಿಯಲ್ಲ. ಈಗಾಗಲೇ ಭಾರತದಲ್ಲಿ ಸ್ಥಾಪನೆಯಾಗಿರುವ ಬಹುರಾಷ್ಟ್ರೀಯ ಉದ್ಯಮಗಳನ್ನು ಗಮನದಲ್ಲಿಟ್ಟುಕೊಂಡೇ ಮೋದಿ ಅವರು ಆತ್ಮನಿರ್ಭರತೆ ಮಾತನ್ನು ಹರಿಯಬಿಟ್ಟಿದ್ದಾರೆ. ಈ ಬ್ರಾಂಡಿನ ಉದ್ಯಮಗಳು ಹತ್ತಾರು ವರ್ಷಗಳಿಂದ ಭಾರತದಲ್ಲಿ ನಡೆಯುತ್ತಿವೆ. ಅವೆಲ್ಲ Made In India ಆದ್ದರಿಂದ ಅವು ಸ್ವದೇಶಿ ಎಂಬುದು ಮೋದಿ ಅವರ ವ್ಯಾಖ್ಯಾನ. ಈ ಯೋಜನೆಯನ್ನು ಪ್ರಕಟಿಸಿದ ಮೋದಿಯವರಿಗೆ ನಮ್ಮ ದೇಶದಲ್ಲಿ ಸ್ಥಾಪಿತವಾಗಿರುವ ಎಲ್ಲ ಬಹುರಾಷ್ಟ್ರೀಯ ಕಂಪನಿಗಳೂ ಸ್ಥಳೀಯವೇ.

ಜನರಿಗಂತೂ ಸ್ವದೇಶಿ-ವಿದೇಶಿ ಪದಾರ್ಥಗಳ ಕಲ್ಪನೆಯೇ ಇಲ್ಲ. ಸ್ವದೇಶಿ ಬಳಸಬೇಕೆಂಬ ಆತ್ಮಾಭಿಮಾನವೂ ಇಲ್ಲ. ಉದಾಹರಣೆಗೆ ನೆಸ್‍ಕೆಫೆ, ಕೋಕಾಕೋಲಾ, ಮ್ಯಾಗಿಶಾವಿಗೆಗಳಾಗಲಿ, ಅಡಿದಾಸ್ ಸಿದ್ದಪಡಿಸಿದ ಬಟ್ಟೆಗಳು, ಲಕ್ಸ್, 501 ಸೋಪುಗಳು ಬಾಟಾ ಷೂ ಮತ್ತು ಚಪ್ಪಲಿ ಮುಂತಾದ ದಿನಬಳಕೆಯ ವಸ್ತುಗಳಾಗಲಿ ವಿದೇಶಿಯೇ ಹೊರತು ಸ್ವದೇಶಿ ಅಲ್ಲ ಎಂಬ ಸಾಮಾನ್ಯ ತಿಳುವಳಿಕೆಯೂ ಜನಸಾಮಾನ್ಯರಲ್ಲಿ ಮಾತ್ರವಲ್ಲ ವಿದ್ಯಾವಂತರಲ್ಲಿ ಕೂಡ ಇದ್ದಂತೆ ತೋರುವುದಿಲ್ಲ.

ಜನರ ಈ ಅಜ್ಞಾನವನ್ನು ಮೋದಿಯವರು ಚೆನ್ನಾಗಿ ಬಳಸಿಕೊಳ್ಳಲು ನಿರ್ಧರಿಸಿದ್ದಾರೆ. ಇವಲ್ಲದೆ ನಾವು ಬೆಳಗಿನಿಂದ ರಾತ್ರಿಯವರೆಗೆ ಬಳಸುವ ಟೂತ್‍ಪೇಸ್ಟ್, ಟೂತ್‍ಬ್ರಷ್, ಬಟ್ಟೆಸೋಪು, ಸ್ನಾನದ ಸೋಪು, ಕುಂಕುಮ, ಕಾಡಿಗೆ, ಸ್ನೋ ಪೌಡರ್, ಲಿಪ್‍ಸ್ಟಿಕ್ ಎಲ್ಲ ಪರದೇಶದ ಕಂಪೆನಿಗಳು ತಯಾರಿಸುವವೇ. ನಮ್ಮ ದೇಶದಲ್ಲಿ ತಯಾರಾಗುವ ಬಹುರಾಷ್ಟ್ರೀಯ ಬ್ರಾಂಡ್‍ಗಳ ಪದಾರ್ಥಗಳು ಪರದೇಶದಿಂದ ಆಮದಾಗುವ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುವ ವಸ್ತುಗಳು ಈಗ ಎಲ್ಲೆಲ್ಲೂ ದೊರೆಯುತ್ತವೆ. ಇವೆಲ್ಲ ಸ್ವದೇಶಿ ಅಲ್ಲ ಪರದೇಶಿ ಎಂಬುದನ್ನು ಜನ ತಿಳಿದುಕೊಂಡಿಲ್ಲ.

ಈಗ ಪರದೇಶದ ಕಂಪನಿಗಳು ಭಾರತಕ್ಕೆ ಬಂದು ತಮ್ಮ ಉದ್ಯಮಗಳನ್ನು ಆರಂಭ ಮಾಡಿರುವುದರಿಂದ ಮೋದಿಯವರಿಗೂ ಅವೆಲ್ಲ ಸ್ವದೇಶಿಯಂದೇ ಗೋಚರವಾಗುತ್ತಿದೆ. ಈಗ ಈ ಪರದೇಶಿ ಕಂಪನಿಗಳೂ ಲೋಕಲ್ಲು ದುಡಿಯುವ ಜನವೂ ಲೋಕಲ್. ಈ ಪದಾರ್ಥ ಬಳಸುವವರೂ ಲೋಕಲ್. ಈ ಬಹುರಾಷ್ಟ್ರೀಯ ಕಂಪನಿಗಳು ಬರುವ ಅಪಾರ ಲಾಭವನ್ನು ಡಿವಿಡೆಂಡ್ ರೂಪದಲ್ಲಿ ತಮ್ಮ ಷೇರುದಾರರಿಗೆ ಉದಾರವಾಗಿ ನೀಡಿ ಉಳಿದ ಪುಡಿಗಾಸು ಲಾಭವನ್ನು ಭಾರತದಲ್ಲೇ ಉಳಿಸಿಕೊಳ್ಳುತ್ತವೆ. ನಗನಾಣ್ಯದ ಇತರ ಉದ್ಯಮಗಳು ಅಂದರೆ ಅವು ದೇಶಿಯರು ಸ್ಥಾಪಿಸಿರುವ ಉದ್ಯಮಗಳು. ಇವು ಇಲ್ಲಿ ಉತ್ಪನ್ನವಾಗುವ ಎಲ್ಲ ಪದಾರ್ಥಗಳು ಭಾರತದಲ್ಲೇ ಮಾರಾಟವಾಗುವುದು.

ದಿನಕಳೆದಂತೆ ಈ ಮೂರು ಬಗೆಯ ಸಂಸ್ಥೆಗಳು ತಮ್ಮ ಕಾರ್ಯ ಚಟುವಟಿಕೆಯನ್ನೂ ವಿಸ್ತರಿಸುತ್ತ ಹೋಗುತ್ತವೆ. ವಿದೇಶಗಳಲ್ಲಿಯೇ ಇದ್ದುಕೊಂಡು ಭಾರತಕ್ಕೆ ಕಳಿಸುವ ವಸ್ತುಗಳನ್ನ ತಯಾರಿಸುವ ಕಂಪನಿಗಳು ಸ್ವದೇಶಿ ಬಗೆಗೆ ಒತ್ತುಕೊಟ್ಟು ಕಣ್ಕುಕ್ಕುವ ಜಾಹಿರಾತುಗಳನ್ನೂ ನೀಡಿ ತಮ್ಮ ಸರಕಿಗೆ ಮಾರುಕಟ್ಟೆ ವಿಸ್ತರಿಸುತ್ತದೆ. ದೇಶಿ ಕಂಪನಿಗಳು ದೇಶಿ ಪದಾರ್ಥಗಳನ್ನೇ ಬಳಸಿ ಎಂದು vocal to local ಘೋಷಣೆಯನ್ನು ಮೊಳಗಿಸುತ್ತದೆ. ಮೋದಿಯವರು ಎಂದಿನಂತೆ ಹೊಸ ಘೋಷಣೆಯೊಂದನ್ನು ಹರಿಯ ಬಿಟ್ಟಿದ್ದಾರೆ. ಇದು ಬರಿಯ ಘೋಷಣೆಯೇ ಹೊರತು ನಿಜವಾದ ಸ್ವದೇಶಿ ಚಳುವಳಿ ಕಟ್ಟುವ ಘೋಷಣೆಯಲ್ಲ.

ಚಳುವಳಿಯನ್ನು ಜನತೆ ಮಾತ್ರ ನಡೆಸಬಲ್ಲರು ಎಂಬುದು ಮೋದಿಯವರಿಗೆ ಗೊತ್ತು. ಜನತೆಯನ್ನು ಬೆಸ್ತು ಬೀಳಿಸಲು ಹೂಡಿರುವ ತಂತ್ರ ಇದು. ಖಂಡಿತವಾಗಿ ಇದು ಮೋದಿಯವರ ಫೋಕಸ್ ಚಳುವಳಿಯಲ್ಲ.

ಜನತೆ ಮೋದಿಯವರ ಘೋಷಣೆಗೆ ಮರುಳಾಗಬಾರದು. ಸ್ವದೇಶಿ ಬಗೆಗೆ ಗಾಂಧಿಜಿಗಿದ್ದ ಆಸೆ ಮೋದಿಯವರಿಗೆ ಖಂಡಿತ ಇಲ್ಲ. ಭಾರತದ ಆರ್ಥಿಕತೆ ಕುಸಿಯುತ್ತಿರುವಾಗ ಜನರ ಮನಸ್ಸನ್ನು ಬೇರೆ ಕಡೆಗೆ ಸೆಳೆಯುವ ಮತ್ತೊಂದು ತಂತ್ರ ಇದು.


ಇದನ್ನು ಓದಿ: ಮೋದಿ 2.1: ಹಿಂದೂ ರಾಷ್ಟ್ರೀಯವಾದದ ವಿಜೃಂಭಣೆಯೇ ಮೋದಿ ಸರ್ಕಾರದ ಸಾಧನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...