Homeಅಂಕಣಗಳುಜನತೆ ಮೋದಿಯವರ ಸ್ವದೇಶಿ ಘೋಷಣೆಗೆ ಮರುಳಾಗಬಾರದು : ಎಚ್‌.ಎಸ್‌ ದೊರೆಸ್ವಾಮಿ

ಜನತೆ ಮೋದಿಯವರ ಸ್ವದೇಶಿ ಘೋಷಣೆಗೆ ಮರುಳಾಗಬಾರದು : ಎಚ್‌.ಎಸ್‌ ದೊರೆಸ್ವಾಮಿ

- Advertisement -
- Advertisement -

ಮೋದಿಯವರು ಆತ್ಮ ನಿರ್ಭರತೆ, ಸ್ವದೇಶಿ ಸ್ವಾವಲಂಬನೆ, ಸ್ವಾಭಿಮಾನದ ಮಾತನ್ನು ಆಡಿ ಭಾರತೀಯರನ್ನು ದಿಗ್ಬ್ರಮೆಗೊಳಿಸಿದ್ದಾರೆ. ಎಲ್ಲದಕ್ಕೂ ಪರ ರಾಷ್ಟ್ರಗಳನ್ನು ಅವಲಂಬನೆ ಮಾಡುವುದು ದೇಶದೃಷ್ಟಿಯಿಂದ ಸರಿಯಲ್ಲ, ಆತ್ಮ ನಿರ್ಭರತೆಗೆ ಒತ್ತು ಕೊಡಬೇಕು ಎಂಬುದು ಒಪ್ಪತಕ್ಕ ಮಾತು. ಆದರೆ ಈ ಮಾತನ್ನು ಮೋದಿಯವರು ಹರಿಬಿಟ್ಟಿರುವುದು ಅಭಾವ ವೈರಾಗ್ಯ ಕಾರಣದಿಂದ. ಬಹುರಾಷ್ಟ್ರೀಯ ಕಂಪನಿಗಳು ಆರ್ಥಿಕ ದುರ್ಭರತೆಯ ಕಾರಣದಿಂದ ಈ ಸಂದರ್ಭದಲ್ಲಿ ಬಂಡವಾಳ ತಂದು ಭಾರತದಲ್ಲಿ ಸುರಿಯುವುದಿಲ್ಲ ಎಂಬುದನ್ನು ಅರಿತು ಮೋದಿಯವರು ಆತ್ಮ ನಿರ್ಭರತೆಯ ಮಾತನ್ನು ಆಡಿದ್ದಾರೆ.

ಮೋದಿಯವರ ಆತ್ಮ ನಿರ್ಭರತೆಯ ಮಾತು ಗಾಂಧಿಜಿಯವರ ಸ್ವದೇಶಿ ಸಿದ್ಧಾಂತಕ್ಕೆ ಅಪಮಾನ ಮಾಡಿದಂತೆ ತೋರುತ್ತದೆ. ಅಂಕಣಕಾರ ಹರೀಶ್ ಬಿಜೂರ್ ಅವರು ಹೇಳುವಂತೆ ಆತ್ಮ ನಿರ್ಭರತೆ ಮಾತಿಗೆ ಎರಡು ಆಯಾಮಗಳಿವೆ. ಅವೆಂದರೆ ರಾಷ್ಟ್ರೀಯತೆ ಮತ್ತು ಆರ್ಥಿಕ ಸ್ವಾವಲಂಬನೆ. ಮೋದಿಯವರ ಪ್ರಕಾರ ಆತ್ಮ ನಿರ್ಭರತೆ ಬಹುರಾಷ್ಟ್ರೀಯ ಬ್ರಾಂಡಿನಿಂದ ಕೂಡಿದ ಸ್ವದೇಶಿ. ಇದು ಮೋದಿಯವರಿಗೆ ತಿಳಿಯದೆ ಇರುವ ಸಂಗತಿಯಲ್ಲ. ಈಗಾಗಲೇ ಭಾರತದಲ್ಲಿ ಸ್ಥಾಪನೆಯಾಗಿರುವ ಬಹುರಾಷ್ಟ್ರೀಯ ಉದ್ಯಮಗಳನ್ನು ಗಮನದಲ್ಲಿಟ್ಟುಕೊಂಡೇ ಮೋದಿ ಅವರು ಆತ್ಮನಿರ್ಭರತೆ ಮಾತನ್ನು ಹರಿಯಬಿಟ್ಟಿದ್ದಾರೆ. ಈ ಬ್ರಾಂಡಿನ ಉದ್ಯಮಗಳು ಹತ್ತಾರು ವರ್ಷಗಳಿಂದ ಭಾರತದಲ್ಲಿ ನಡೆಯುತ್ತಿವೆ. ಅವೆಲ್ಲ Made In India ಆದ್ದರಿಂದ ಅವು ಸ್ವದೇಶಿ ಎಂಬುದು ಮೋದಿ ಅವರ ವ್ಯಾಖ್ಯಾನ. ಈ ಯೋಜನೆಯನ್ನು ಪ್ರಕಟಿಸಿದ ಮೋದಿಯವರಿಗೆ ನಮ್ಮ ದೇಶದಲ್ಲಿ ಸ್ಥಾಪಿತವಾಗಿರುವ ಎಲ್ಲ ಬಹುರಾಷ್ಟ್ರೀಯ ಕಂಪನಿಗಳೂ ಸ್ಥಳೀಯವೇ.

ಜನರಿಗಂತೂ ಸ್ವದೇಶಿ-ವಿದೇಶಿ ಪದಾರ್ಥಗಳ ಕಲ್ಪನೆಯೇ ಇಲ್ಲ. ಸ್ವದೇಶಿ ಬಳಸಬೇಕೆಂಬ ಆತ್ಮಾಭಿಮಾನವೂ ಇಲ್ಲ. ಉದಾಹರಣೆಗೆ ನೆಸ್‍ಕೆಫೆ, ಕೋಕಾಕೋಲಾ, ಮ್ಯಾಗಿಶಾವಿಗೆಗಳಾಗಲಿ, ಅಡಿದಾಸ್ ಸಿದ್ದಪಡಿಸಿದ ಬಟ್ಟೆಗಳು, ಲಕ್ಸ್, 501 ಸೋಪುಗಳು ಬಾಟಾ ಷೂ ಮತ್ತು ಚಪ್ಪಲಿ ಮುಂತಾದ ದಿನಬಳಕೆಯ ವಸ್ತುಗಳಾಗಲಿ ವಿದೇಶಿಯೇ ಹೊರತು ಸ್ವದೇಶಿ ಅಲ್ಲ ಎಂಬ ಸಾಮಾನ್ಯ ತಿಳುವಳಿಕೆಯೂ ಜನಸಾಮಾನ್ಯರಲ್ಲಿ ಮಾತ್ರವಲ್ಲ ವಿದ್ಯಾವಂತರಲ್ಲಿ ಕೂಡ ಇದ್ದಂತೆ ತೋರುವುದಿಲ್ಲ.

ಜನರ ಈ ಅಜ್ಞಾನವನ್ನು ಮೋದಿಯವರು ಚೆನ್ನಾಗಿ ಬಳಸಿಕೊಳ್ಳಲು ನಿರ್ಧರಿಸಿದ್ದಾರೆ. ಇವಲ್ಲದೆ ನಾವು ಬೆಳಗಿನಿಂದ ರಾತ್ರಿಯವರೆಗೆ ಬಳಸುವ ಟೂತ್‍ಪೇಸ್ಟ್, ಟೂತ್‍ಬ್ರಷ್, ಬಟ್ಟೆಸೋಪು, ಸ್ನಾನದ ಸೋಪು, ಕುಂಕುಮ, ಕಾಡಿಗೆ, ಸ್ನೋ ಪೌಡರ್, ಲಿಪ್‍ಸ್ಟಿಕ್ ಎಲ್ಲ ಪರದೇಶದ ಕಂಪೆನಿಗಳು ತಯಾರಿಸುವವೇ. ನಮ್ಮ ದೇಶದಲ್ಲಿ ತಯಾರಾಗುವ ಬಹುರಾಷ್ಟ್ರೀಯ ಬ್ರಾಂಡ್‍ಗಳ ಪದಾರ್ಥಗಳು ಪರದೇಶದಿಂದ ಆಮದಾಗುವ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುವ ವಸ್ತುಗಳು ಈಗ ಎಲ್ಲೆಲ್ಲೂ ದೊರೆಯುತ್ತವೆ. ಇವೆಲ್ಲ ಸ್ವದೇಶಿ ಅಲ್ಲ ಪರದೇಶಿ ಎಂಬುದನ್ನು ಜನ ತಿಳಿದುಕೊಂಡಿಲ್ಲ.

ಈಗ ಪರದೇಶದ ಕಂಪನಿಗಳು ಭಾರತಕ್ಕೆ ಬಂದು ತಮ್ಮ ಉದ್ಯಮಗಳನ್ನು ಆರಂಭ ಮಾಡಿರುವುದರಿಂದ ಮೋದಿಯವರಿಗೂ ಅವೆಲ್ಲ ಸ್ವದೇಶಿಯಂದೇ ಗೋಚರವಾಗುತ್ತಿದೆ. ಈಗ ಈ ಪರದೇಶಿ ಕಂಪನಿಗಳೂ ಲೋಕಲ್ಲು ದುಡಿಯುವ ಜನವೂ ಲೋಕಲ್. ಈ ಪದಾರ್ಥ ಬಳಸುವವರೂ ಲೋಕಲ್. ಈ ಬಹುರಾಷ್ಟ್ರೀಯ ಕಂಪನಿಗಳು ಬರುವ ಅಪಾರ ಲಾಭವನ್ನು ಡಿವಿಡೆಂಡ್ ರೂಪದಲ್ಲಿ ತಮ್ಮ ಷೇರುದಾರರಿಗೆ ಉದಾರವಾಗಿ ನೀಡಿ ಉಳಿದ ಪುಡಿಗಾಸು ಲಾಭವನ್ನು ಭಾರತದಲ್ಲೇ ಉಳಿಸಿಕೊಳ್ಳುತ್ತವೆ. ನಗನಾಣ್ಯದ ಇತರ ಉದ್ಯಮಗಳು ಅಂದರೆ ಅವು ದೇಶಿಯರು ಸ್ಥಾಪಿಸಿರುವ ಉದ್ಯಮಗಳು. ಇವು ಇಲ್ಲಿ ಉತ್ಪನ್ನವಾಗುವ ಎಲ್ಲ ಪದಾರ್ಥಗಳು ಭಾರತದಲ್ಲೇ ಮಾರಾಟವಾಗುವುದು.

ದಿನಕಳೆದಂತೆ ಈ ಮೂರು ಬಗೆಯ ಸಂಸ್ಥೆಗಳು ತಮ್ಮ ಕಾರ್ಯ ಚಟುವಟಿಕೆಯನ್ನೂ ವಿಸ್ತರಿಸುತ್ತ ಹೋಗುತ್ತವೆ. ವಿದೇಶಗಳಲ್ಲಿಯೇ ಇದ್ದುಕೊಂಡು ಭಾರತಕ್ಕೆ ಕಳಿಸುವ ವಸ್ತುಗಳನ್ನ ತಯಾರಿಸುವ ಕಂಪನಿಗಳು ಸ್ವದೇಶಿ ಬಗೆಗೆ ಒತ್ತುಕೊಟ್ಟು ಕಣ್ಕುಕ್ಕುವ ಜಾಹಿರಾತುಗಳನ್ನೂ ನೀಡಿ ತಮ್ಮ ಸರಕಿಗೆ ಮಾರುಕಟ್ಟೆ ವಿಸ್ತರಿಸುತ್ತದೆ. ದೇಶಿ ಕಂಪನಿಗಳು ದೇಶಿ ಪದಾರ್ಥಗಳನ್ನೇ ಬಳಸಿ ಎಂದು vocal to local ಘೋಷಣೆಯನ್ನು ಮೊಳಗಿಸುತ್ತದೆ. ಮೋದಿಯವರು ಎಂದಿನಂತೆ ಹೊಸ ಘೋಷಣೆಯೊಂದನ್ನು ಹರಿಯ ಬಿಟ್ಟಿದ್ದಾರೆ. ಇದು ಬರಿಯ ಘೋಷಣೆಯೇ ಹೊರತು ನಿಜವಾದ ಸ್ವದೇಶಿ ಚಳುವಳಿ ಕಟ್ಟುವ ಘೋಷಣೆಯಲ್ಲ.

ಚಳುವಳಿಯನ್ನು ಜನತೆ ಮಾತ್ರ ನಡೆಸಬಲ್ಲರು ಎಂಬುದು ಮೋದಿಯವರಿಗೆ ಗೊತ್ತು. ಜನತೆಯನ್ನು ಬೆಸ್ತು ಬೀಳಿಸಲು ಹೂಡಿರುವ ತಂತ್ರ ಇದು. ಖಂಡಿತವಾಗಿ ಇದು ಮೋದಿಯವರ ಫೋಕಸ್ ಚಳುವಳಿಯಲ್ಲ.

ಜನತೆ ಮೋದಿಯವರ ಘೋಷಣೆಗೆ ಮರುಳಾಗಬಾರದು. ಸ್ವದೇಶಿ ಬಗೆಗೆ ಗಾಂಧಿಜಿಗಿದ್ದ ಆಸೆ ಮೋದಿಯವರಿಗೆ ಖಂಡಿತ ಇಲ್ಲ. ಭಾರತದ ಆರ್ಥಿಕತೆ ಕುಸಿಯುತ್ತಿರುವಾಗ ಜನರ ಮನಸ್ಸನ್ನು ಬೇರೆ ಕಡೆಗೆ ಸೆಳೆಯುವ ಮತ್ತೊಂದು ತಂತ್ರ ಇದು.


ಇದನ್ನು ಓದಿ: ಮೋದಿ 2.1: ಹಿಂದೂ ರಾಷ್ಟ್ರೀಯವಾದದ ವಿಜೃಂಭಣೆಯೇ ಮೋದಿ ಸರ್ಕಾರದ ಸಾಧನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೈತಿಕ ಹೊಣೆ ಹೊತ್ತು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ; ಇದು ಬಿಜೆಪಿಯ ಗೆಲುವಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

ಸಚಿವರಾಗಿದ್ದ ಬಿ. ನಾಗೇಂದ್ರ ಅವರು ಸಾರ್ವಜನಿಕ ಜೀವನದಲ್ಲಿ ನೈತಿಕ ಹೊಣೆಗಾರಿಕೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಇದು ಬಿಜೆಪಿಯ ಗೆಲುವೂ ಅಲ್ಲ, ವಿಪಕ್ಷ ನಾಯಕರ ಹೋರಾಟದ ಗೆಲುವೂ ಅಲ್ಲ. ಇದೊಂದು ದಲಿತ ಸಮುದಾಯ ನಾಯಕರ...

ಬಿಜೆಪಿ ಕಾರ್ಯಕರ್ತನ ಬಳಿ 3,400ಕ್ಕೂ ಹೆಚ್ಚು SIR ಎನ್ಯುಮರೇಷನ್‌ ಫಾರಂಗಳು ಪತ್ತೆ!-ವರದಿ

ಮತದಾರರ ವಿವರಗಳಿರುವ 3,400ಕ್ಕೂ ಹೆಚ್ಚು ಎಸ್‌ಐಆರ್ ಎನ್ಯುಮರೇಷನ್ ಫಾರಂಗಳು ಸ್ಥಳೀಯ ಬಿಜೆಪಿ ಕಾರ್ಯಕರ್ತನ ಬಳಿ ಪತ್ತೆಯಾದ ಬಳಿಕ, ನವಿ ಮುಂಬೈನಲ್ಲಿ ಐವರು ಬೂತ್ ಮಟ್ಟದ ಅಧಿಕಾರಿಗಳನ್ನು (ಬಿಎಲ್‌ಒ) ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ. ಗುರುವಾರ (ಆ.27)...

ಹಾವೇರಿ| ಆಹಾರ ಸಂಸ್ಕರಣಾ ಘಟಕಗಳ ಮೇಲೆ ಅಧಿಕಾರಿಗಳ ದಾಳಿ; 1,033 ಕೆಜಿ ಕಲುಷಿತ ಆಹಾರ ಪದಾರ್ಥ ವಶಕ್ಕೆ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಹಶೀಲ್ದಾರ್ ನೇತೃತ್ವದ ತಂಡ ಮತ್ತು ಆಹಾರ ಸುರಕ್ಷತಾ ಅಧಿಕಾರಿಗಳು ರಾಣೆಬೆನ್ನೂರು ತಾಲೂಕಿನ ವಿವಿಧ ಆಹಾರ ಸಂಸ್ಕರಣಾ ಘಟಕಗಳ ಮೇಲೆ ದಿಢೀರ್ ದಾಳಿ ನಡೆಸಿ, 1,033 ಕೆಜಿ ಕಲುಷಿತ ಆಹಾರ...

ಹಾಸನ: ಎಡಪಂಥೀಯರು ಮೋಸ್ಟ್ ಡೇಂಜರಸ್, ಕಳ್ಳರು! ನಿಶ್ಚಲಾನಂದನಾಥ ಸ್ವಾಮೀಜಿ ವಿವಾದಾತ್ಮಕ ಹೇಳಿಕೆಗೆ CPI(M) ಖಂಡನೆ

ಹಾಸನ ನಗರದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಹಾಸನ ಜಿಲ್ಲಾ ಶಾಖೆ, ಯುವ ರೆಡ್ ಕ್ರಾಸ್ ಘಟಕ ಹಾಗೂ ಅರ್ಥಶಾಸ್ತ್ರ ವಿಭಾಗದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ 'ವಿಶ್ವ...

ನೇಪಾಳ ಪ್ರವಾಹ : 620 ದಾಟಿದ ಮೃತರ ಸಂಖ್ಯೆ; 3 ಸಾವಿರದಷ್ಟು ಜನರು ಇನ್ನೂ ನಾಪತ್ತೆ-ವರದಿ

ನೇಪಾಳ-ಟಿಬೆಟ್ ಗಡಿ ಪ್ರದೇಶದಲ್ಲಿ ಉಂಟಾಗಿರುವ ಭೀಕರ ಪ್ರವಾಹದಿಂದಾಗಿ ಕನಿಷ್ಠ 616 ಜನರು ಸಾವನ್ನಪ್ಪಿದ್ದಾರೆ ಎಂದು ನೇಪಾಳ ಪೊಲೀಸರು ಶನಿವಾರ (ಆ.29) ತಿಳಿಸಿರುವುದಾಗಿ ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ. ಶುಕ್ರವಾರ (ಆ.28) ಪೊಲೀಸರು...

ನಾಗೇಂದ್ರ ರಾಜೀನಾಮೆ: ಬಡಿಗೆ ಕೊಟ್ಟು ಹೊಡೆಸಿಕೊಂಡಂತಾಯ್ತು ಕಾಂಗ್ರೆಸ್ ಪರಿಸ್ಥಿತಿ

2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ದಕ್ಕಿದ 136 ಸ್ಥಾನಗಳ ಅಭೂತಪೂರ್ವ ಬಹುಮತಕ್ಕೆ ಪ್ರಮುಖ ಕಾರಣ '40% ಸರ್ಕಾರ' ಮತ್ತು 'ಪೇ ಸಿಎಂ' ಅಭಿಯಾನಗಳು. ಬಿಜೆಪಿಯ ಭ್ರಷ್ಟಾಚಾರವನ್ನು ಅಸ್ತ್ರವಾಗಿಸಿಕೊಂಡು ಆಡಳಿತ ಹಿಡಿದ ಕಾಂಗ್ರೆಸ್‌ಗೆ,...

SIR ಕುತಂತ್ರ: 43.81 ಲಕ್ಷ ಜನರ ಮನೆ ಬಾಗಿಲಿಗೆ ನೋಟಿಸ್‌ ಬಿಸಿ, ಪೌರತ್ವ ಸಾಬೀತುಪಡಿಸಲು ನಾಗರಿಕರು ಅಲೆಯಬೇಕೇ ?

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಇದೀಗ ಲಕ್ಷಾಂತರ ನಾಗರಿಕರನ್ನು ಅತಂತ್ರ ಸ್ಥಿತಿಗೆ ತಳ್ಳಿದೆ.ಚುನಾವಣಾ ಆಯೋಗವು ರಾಜ್ಯದಲ್ಲಿದ್ದ ಒಟ್ಟು 5.54 ಕೋಟಿ ಮತದಾರರ ಪೈಕಿ ಸುಮಾರು 1.08...

ದಿಮಾಗಿ ನಕ್ಸಲ್: ರೈತ, ವಿದ್ಯಾರ್ಥಿ ಹೋರಾಟಗಳೂ ದೇಶದ್ರೋಹವೇ? RSS ಪತ್ರಿಕೆಯ ವಿವಾದಾತ್ಮಕ ಪ್ರತಿಪಾದನೆ

ಶಿಕ್ಷಣ, ಆರೋಗ್ಯ ಮತ್ತು ಒಟ್ಟಾರೆ ಅಭಿವೃದ್ಧಿ ಮಾದರಿಗೆ ತೀವ್ರ ಸ್ವರೂಪದ ಸುಧಾರಣೆಗಳ ಅಗತ್ಯವಿದೆ. ಆದರೆ ಈ ಸಮಸ್ಯೆಗಳು ಕಳೆದ ಹನ್ನೆರಡು ವರ್ಷಗಳಲ್ಲಿ ಹುಟ್ಟಿಕೊಂಡಿದ್ದಲ್ಲ ಅಥವಾ ಬಿಜೆಪಿ ಆಡಳಿತವಿರುವ ರಾಜ್ಯಗಳಿಗಷ್ಟೇ ಸೀಮಿತವಾಗಿಲ್ಲ. ಹಿಂದುತ್ವವನ್ನು ದಮನಕಾರಿ...

ಅಹಮದಾಬಾದ್‌ನಲ್ಲಿ ಪುಸ್ತಕ ಓದುಗರ ಮೇಲೆ ಭಜರಂಗದಳ ದೌರ್ಜನ್ಯ: ಮಲಾಲಾ, ಆನ್ ಫ್ರಾಂಕ್ ಕೃತಿಗಳಿಗೆ ವಿರೋಧಿಸಿ ಬೆದರಿಕೆ!

ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಾಹಿತ್ಯಾಭಿಮಾನಿಗಳ ಮೇಲೆ ಭಜರಂಗದಳ ಕಾರ್ಯಕರ್ತರು ಭೀಕರ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ನಗರದ ಸಾರ್ವಜನಿಕ ಉದ್ಯಾನವನವೊಂದರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಲಾಲಾ ಯೂಸಫ್‌ಜೈ ಹಾಗೂ ವಿಶ್ವಪ್ರಸಿದ್ಧ ಲೇಖಕಿ ಆನ್...

ಉಮರ್ ಖಾಲಿದ್ – ಶಾರ್ಜೀಲ್ ಇಮಾಮ್ ಜಾಮೀನಿಗೆ ದೆಹಲಿ ಪೊಲೀಸರ ವಿರೋಧ

2020ರ ಈಶಾನ್ಯ ದೆಹಲಿ ಕೋಮು ಗಲಭೆಯ ಹಿಂದಿನ ಪ್ರಮುಖ ಸಂಚುಕೋರರು ಎಂದು ಆರೋಪಿಸಿರುವ ದೆಹಲಿ ಪೊಲೀಸರು, ಕಾರಾಗೃಹದಲ್ಲಿರುವ ವಿದ್ಯಾರ್ಥಿ ಕಾರ್ಯಕರ್ತರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಗಳನ್ನು ದೆಹಲಿ...