Homeಅಂಕಣಗಳುಜನತೆ ಮೋದಿಯವರ ಸ್ವದೇಶಿ ಘೋಷಣೆಗೆ ಮರುಳಾಗಬಾರದು : ಎಚ್‌.ಎಸ್‌ ದೊರೆಸ್ವಾಮಿ

ಜನತೆ ಮೋದಿಯವರ ಸ್ವದೇಶಿ ಘೋಷಣೆಗೆ ಮರುಳಾಗಬಾರದು : ಎಚ್‌.ಎಸ್‌ ದೊರೆಸ್ವಾಮಿ

- Advertisement -
- Advertisement -

ಮೋದಿಯವರು ಆತ್ಮ ನಿರ್ಭರತೆ, ಸ್ವದೇಶಿ ಸ್ವಾವಲಂಬನೆ, ಸ್ವಾಭಿಮಾನದ ಮಾತನ್ನು ಆಡಿ ಭಾರತೀಯರನ್ನು ದಿಗ್ಬ್ರಮೆಗೊಳಿಸಿದ್ದಾರೆ. ಎಲ್ಲದಕ್ಕೂ ಪರ ರಾಷ್ಟ್ರಗಳನ್ನು ಅವಲಂಬನೆ ಮಾಡುವುದು ದೇಶದೃಷ್ಟಿಯಿಂದ ಸರಿಯಲ್ಲ, ಆತ್ಮ ನಿರ್ಭರತೆಗೆ ಒತ್ತು ಕೊಡಬೇಕು ಎಂಬುದು ಒಪ್ಪತಕ್ಕ ಮಾತು. ಆದರೆ ಈ ಮಾತನ್ನು ಮೋದಿಯವರು ಹರಿಬಿಟ್ಟಿರುವುದು ಅಭಾವ ವೈರಾಗ್ಯ ಕಾರಣದಿಂದ. ಬಹುರಾಷ್ಟ್ರೀಯ ಕಂಪನಿಗಳು ಆರ್ಥಿಕ ದುರ್ಭರತೆಯ ಕಾರಣದಿಂದ ಈ ಸಂದರ್ಭದಲ್ಲಿ ಬಂಡವಾಳ ತಂದು ಭಾರತದಲ್ಲಿ ಸುರಿಯುವುದಿಲ್ಲ ಎಂಬುದನ್ನು ಅರಿತು ಮೋದಿಯವರು ಆತ್ಮ ನಿರ್ಭರತೆಯ ಮಾತನ್ನು ಆಡಿದ್ದಾರೆ.

ಮೋದಿಯವರ ಆತ್ಮ ನಿರ್ಭರತೆಯ ಮಾತು ಗಾಂಧಿಜಿಯವರ ಸ್ವದೇಶಿ ಸಿದ್ಧಾಂತಕ್ಕೆ ಅಪಮಾನ ಮಾಡಿದಂತೆ ತೋರುತ್ತದೆ. ಅಂಕಣಕಾರ ಹರೀಶ್ ಬಿಜೂರ್ ಅವರು ಹೇಳುವಂತೆ ಆತ್ಮ ನಿರ್ಭರತೆ ಮಾತಿಗೆ ಎರಡು ಆಯಾಮಗಳಿವೆ. ಅವೆಂದರೆ ರಾಷ್ಟ್ರೀಯತೆ ಮತ್ತು ಆರ್ಥಿಕ ಸ್ವಾವಲಂಬನೆ. ಮೋದಿಯವರ ಪ್ರಕಾರ ಆತ್ಮ ನಿರ್ಭರತೆ ಬಹುರಾಷ್ಟ್ರೀಯ ಬ್ರಾಂಡಿನಿಂದ ಕೂಡಿದ ಸ್ವದೇಶಿ. ಇದು ಮೋದಿಯವರಿಗೆ ತಿಳಿಯದೆ ಇರುವ ಸಂಗತಿಯಲ್ಲ. ಈಗಾಗಲೇ ಭಾರತದಲ್ಲಿ ಸ್ಥಾಪನೆಯಾಗಿರುವ ಬಹುರಾಷ್ಟ್ರೀಯ ಉದ್ಯಮಗಳನ್ನು ಗಮನದಲ್ಲಿಟ್ಟುಕೊಂಡೇ ಮೋದಿ ಅವರು ಆತ್ಮನಿರ್ಭರತೆ ಮಾತನ್ನು ಹರಿಯಬಿಟ್ಟಿದ್ದಾರೆ. ಈ ಬ್ರಾಂಡಿನ ಉದ್ಯಮಗಳು ಹತ್ತಾರು ವರ್ಷಗಳಿಂದ ಭಾರತದಲ್ಲಿ ನಡೆಯುತ್ತಿವೆ. ಅವೆಲ್ಲ Made In India ಆದ್ದರಿಂದ ಅವು ಸ್ವದೇಶಿ ಎಂಬುದು ಮೋದಿ ಅವರ ವ್ಯಾಖ್ಯಾನ. ಈ ಯೋಜನೆಯನ್ನು ಪ್ರಕಟಿಸಿದ ಮೋದಿಯವರಿಗೆ ನಮ್ಮ ದೇಶದಲ್ಲಿ ಸ್ಥಾಪಿತವಾಗಿರುವ ಎಲ್ಲ ಬಹುರಾಷ್ಟ್ರೀಯ ಕಂಪನಿಗಳೂ ಸ್ಥಳೀಯವೇ.

ಜನರಿಗಂತೂ ಸ್ವದೇಶಿ-ವಿದೇಶಿ ಪದಾರ್ಥಗಳ ಕಲ್ಪನೆಯೇ ಇಲ್ಲ. ಸ್ವದೇಶಿ ಬಳಸಬೇಕೆಂಬ ಆತ್ಮಾಭಿಮಾನವೂ ಇಲ್ಲ. ಉದಾಹರಣೆಗೆ ನೆಸ್‍ಕೆಫೆ, ಕೋಕಾಕೋಲಾ, ಮ್ಯಾಗಿಶಾವಿಗೆಗಳಾಗಲಿ, ಅಡಿದಾಸ್ ಸಿದ್ದಪಡಿಸಿದ ಬಟ್ಟೆಗಳು, ಲಕ್ಸ್, 501 ಸೋಪುಗಳು ಬಾಟಾ ಷೂ ಮತ್ತು ಚಪ್ಪಲಿ ಮುಂತಾದ ದಿನಬಳಕೆಯ ವಸ್ತುಗಳಾಗಲಿ ವಿದೇಶಿಯೇ ಹೊರತು ಸ್ವದೇಶಿ ಅಲ್ಲ ಎಂಬ ಸಾಮಾನ್ಯ ತಿಳುವಳಿಕೆಯೂ ಜನಸಾಮಾನ್ಯರಲ್ಲಿ ಮಾತ್ರವಲ್ಲ ವಿದ್ಯಾವಂತರಲ್ಲಿ ಕೂಡ ಇದ್ದಂತೆ ತೋರುವುದಿಲ್ಲ.

ಜನರ ಈ ಅಜ್ಞಾನವನ್ನು ಮೋದಿಯವರು ಚೆನ್ನಾಗಿ ಬಳಸಿಕೊಳ್ಳಲು ನಿರ್ಧರಿಸಿದ್ದಾರೆ. ಇವಲ್ಲದೆ ನಾವು ಬೆಳಗಿನಿಂದ ರಾತ್ರಿಯವರೆಗೆ ಬಳಸುವ ಟೂತ್‍ಪೇಸ್ಟ್, ಟೂತ್‍ಬ್ರಷ್, ಬಟ್ಟೆಸೋಪು, ಸ್ನಾನದ ಸೋಪು, ಕುಂಕುಮ, ಕಾಡಿಗೆ, ಸ್ನೋ ಪೌಡರ್, ಲಿಪ್‍ಸ್ಟಿಕ್ ಎಲ್ಲ ಪರದೇಶದ ಕಂಪೆನಿಗಳು ತಯಾರಿಸುವವೇ. ನಮ್ಮ ದೇಶದಲ್ಲಿ ತಯಾರಾಗುವ ಬಹುರಾಷ್ಟ್ರೀಯ ಬ್ರಾಂಡ್‍ಗಳ ಪದಾರ್ಥಗಳು ಪರದೇಶದಿಂದ ಆಮದಾಗುವ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುವ ವಸ್ತುಗಳು ಈಗ ಎಲ್ಲೆಲ್ಲೂ ದೊರೆಯುತ್ತವೆ. ಇವೆಲ್ಲ ಸ್ವದೇಶಿ ಅಲ್ಲ ಪರದೇಶಿ ಎಂಬುದನ್ನು ಜನ ತಿಳಿದುಕೊಂಡಿಲ್ಲ.

ಈಗ ಪರದೇಶದ ಕಂಪನಿಗಳು ಭಾರತಕ್ಕೆ ಬಂದು ತಮ್ಮ ಉದ್ಯಮಗಳನ್ನು ಆರಂಭ ಮಾಡಿರುವುದರಿಂದ ಮೋದಿಯವರಿಗೂ ಅವೆಲ್ಲ ಸ್ವದೇಶಿಯಂದೇ ಗೋಚರವಾಗುತ್ತಿದೆ. ಈಗ ಈ ಪರದೇಶಿ ಕಂಪನಿಗಳೂ ಲೋಕಲ್ಲು ದುಡಿಯುವ ಜನವೂ ಲೋಕಲ್. ಈ ಪದಾರ್ಥ ಬಳಸುವವರೂ ಲೋಕಲ್. ಈ ಬಹುರಾಷ್ಟ್ರೀಯ ಕಂಪನಿಗಳು ಬರುವ ಅಪಾರ ಲಾಭವನ್ನು ಡಿವಿಡೆಂಡ್ ರೂಪದಲ್ಲಿ ತಮ್ಮ ಷೇರುದಾರರಿಗೆ ಉದಾರವಾಗಿ ನೀಡಿ ಉಳಿದ ಪುಡಿಗಾಸು ಲಾಭವನ್ನು ಭಾರತದಲ್ಲೇ ಉಳಿಸಿಕೊಳ್ಳುತ್ತವೆ. ನಗನಾಣ್ಯದ ಇತರ ಉದ್ಯಮಗಳು ಅಂದರೆ ಅವು ದೇಶಿಯರು ಸ್ಥಾಪಿಸಿರುವ ಉದ್ಯಮಗಳು. ಇವು ಇಲ್ಲಿ ಉತ್ಪನ್ನವಾಗುವ ಎಲ್ಲ ಪದಾರ್ಥಗಳು ಭಾರತದಲ್ಲೇ ಮಾರಾಟವಾಗುವುದು.

ದಿನಕಳೆದಂತೆ ಈ ಮೂರು ಬಗೆಯ ಸಂಸ್ಥೆಗಳು ತಮ್ಮ ಕಾರ್ಯ ಚಟುವಟಿಕೆಯನ್ನೂ ವಿಸ್ತರಿಸುತ್ತ ಹೋಗುತ್ತವೆ. ವಿದೇಶಗಳಲ್ಲಿಯೇ ಇದ್ದುಕೊಂಡು ಭಾರತಕ್ಕೆ ಕಳಿಸುವ ವಸ್ತುಗಳನ್ನ ತಯಾರಿಸುವ ಕಂಪನಿಗಳು ಸ್ವದೇಶಿ ಬಗೆಗೆ ಒತ್ತುಕೊಟ್ಟು ಕಣ್ಕುಕ್ಕುವ ಜಾಹಿರಾತುಗಳನ್ನೂ ನೀಡಿ ತಮ್ಮ ಸರಕಿಗೆ ಮಾರುಕಟ್ಟೆ ವಿಸ್ತರಿಸುತ್ತದೆ. ದೇಶಿ ಕಂಪನಿಗಳು ದೇಶಿ ಪದಾರ್ಥಗಳನ್ನೇ ಬಳಸಿ ಎಂದು vocal to local ಘೋಷಣೆಯನ್ನು ಮೊಳಗಿಸುತ್ತದೆ. ಮೋದಿಯವರು ಎಂದಿನಂತೆ ಹೊಸ ಘೋಷಣೆಯೊಂದನ್ನು ಹರಿಯ ಬಿಟ್ಟಿದ್ದಾರೆ. ಇದು ಬರಿಯ ಘೋಷಣೆಯೇ ಹೊರತು ನಿಜವಾದ ಸ್ವದೇಶಿ ಚಳುವಳಿ ಕಟ್ಟುವ ಘೋಷಣೆಯಲ್ಲ.

ಚಳುವಳಿಯನ್ನು ಜನತೆ ಮಾತ್ರ ನಡೆಸಬಲ್ಲರು ಎಂಬುದು ಮೋದಿಯವರಿಗೆ ಗೊತ್ತು. ಜನತೆಯನ್ನು ಬೆಸ್ತು ಬೀಳಿಸಲು ಹೂಡಿರುವ ತಂತ್ರ ಇದು. ಖಂಡಿತವಾಗಿ ಇದು ಮೋದಿಯವರ ಫೋಕಸ್ ಚಳುವಳಿಯಲ್ಲ.

ಜನತೆ ಮೋದಿಯವರ ಘೋಷಣೆಗೆ ಮರುಳಾಗಬಾರದು. ಸ್ವದೇಶಿ ಬಗೆಗೆ ಗಾಂಧಿಜಿಗಿದ್ದ ಆಸೆ ಮೋದಿಯವರಿಗೆ ಖಂಡಿತ ಇಲ್ಲ. ಭಾರತದ ಆರ್ಥಿಕತೆ ಕುಸಿಯುತ್ತಿರುವಾಗ ಜನರ ಮನಸ್ಸನ್ನು ಬೇರೆ ಕಡೆಗೆ ಸೆಳೆಯುವ ಮತ್ತೊಂದು ತಂತ್ರ ಇದು.


ಇದನ್ನು ಓದಿ: ಮೋದಿ 2.1: ಹಿಂದೂ ರಾಷ್ಟ್ರೀಯವಾದದ ವಿಜೃಂಭಣೆಯೇ ಮೋದಿ ಸರ್ಕಾರದ ಸಾಧನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ತೈಲ ಸಂಸ್ಕರಣಾ ಘಟಕಕ್ಕೆ ರಿಲಯನ್ಸ್ ಹೂಡಿಕೆ : ಟ್ರಂಪ್ ಘೋಷಣೆ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಹೂಡಿಕೆಯ ಸಹಾಯದಿಂದ 50 ವರ್ಷಗಳಲ್ಲಿ ಅಮೆರಿಕ ತನ್ನ ಮೊದಲ ಹೊಸ ತೈಲ ಸಂಸ್ಕರಣಾಗಾರವನ್ನು ಪಡೆಯಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. 'ಅಮೆರಿಕ ಫಸ್ಟ್ ರಿಫೈನಿಂಗ್ ಸಂಸ್ಥೆ'ಯು ಟೆಕ್ಸಾಸ್‌ನ...

ಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದಿಂದ ಭಾರತದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶ ಪ್ರಧಾನಿ ಮೋದಿಯವರ ಕೈಯಲ್ಲಿ ಭದ್ರವಾಗಿದೆ ಎಂದು ಒಂದಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿರುವಾಗಲೇ,...

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...