Homeಅಂಕಣಗಳುಜನತೆ ಮೋದಿಯವರ ಸ್ವದೇಶಿ ಘೋಷಣೆಗೆ ಮರುಳಾಗಬಾರದು : ಎಚ್‌.ಎಸ್‌ ದೊರೆಸ್ವಾಮಿ

ಜನತೆ ಮೋದಿಯವರ ಸ್ವದೇಶಿ ಘೋಷಣೆಗೆ ಮರುಳಾಗಬಾರದು : ಎಚ್‌.ಎಸ್‌ ದೊರೆಸ್ವಾಮಿ

- Advertisement -
- Advertisement -

ಮೋದಿಯವರು ಆತ್ಮ ನಿರ್ಭರತೆ, ಸ್ವದೇಶಿ ಸ್ವಾವಲಂಬನೆ, ಸ್ವಾಭಿಮಾನದ ಮಾತನ್ನು ಆಡಿ ಭಾರತೀಯರನ್ನು ದಿಗ್ಬ್ರಮೆಗೊಳಿಸಿದ್ದಾರೆ. ಎಲ್ಲದಕ್ಕೂ ಪರ ರಾಷ್ಟ್ರಗಳನ್ನು ಅವಲಂಬನೆ ಮಾಡುವುದು ದೇಶದೃಷ್ಟಿಯಿಂದ ಸರಿಯಲ್ಲ, ಆತ್ಮ ನಿರ್ಭರತೆಗೆ ಒತ್ತು ಕೊಡಬೇಕು ಎಂಬುದು ಒಪ್ಪತಕ್ಕ ಮಾತು. ಆದರೆ ಈ ಮಾತನ್ನು ಮೋದಿಯವರು ಹರಿಬಿಟ್ಟಿರುವುದು ಅಭಾವ ವೈರಾಗ್ಯ ಕಾರಣದಿಂದ. ಬಹುರಾಷ್ಟ್ರೀಯ ಕಂಪನಿಗಳು ಆರ್ಥಿಕ ದುರ್ಭರತೆಯ ಕಾರಣದಿಂದ ಈ ಸಂದರ್ಭದಲ್ಲಿ ಬಂಡವಾಳ ತಂದು ಭಾರತದಲ್ಲಿ ಸುರಿಯುವುದಿಲ್ಲ ಎಂಬುದನ್ನು ಅರಿತು ಮೋದಿಯವರು ಆತ್ಮ ನಿರ್ಭರತೆಯ ಮಾತನ್ನು ಆಡಿದ್ದಾರೆ.

ಮೋದಿಯವರ ಆತ್ಮ ನಿರ್ಭರತೆಯ ಮಾತು ಗಾಂಧಿಜಿಯವರ ಸ್ವದೇಶಿ ಸಿದ್ಧಾಂತಕ್ಕೆ ಅಪಮಾನ ಮಾಡಿದಂತೆ ತೋರುತ್ತದೆ. ಅಂಕಣಕಾರ ಹರೀಶ್ ಬಿಜೂರ್ ಅವರು ಹೇಳುವಂತೆ ಆತ್ಮ ನಿರ್ಭರತೆ ಮಾತಿಗೆ ಎರಡು ಆಯಾಮಗಳಿವೆ. ಅವೆಂದರೆ ರಾಷ್ಟ್ರೀಯತೆ ಮತ್ತು ಆರ್ಥಿಕ ಸ್ವಾವಲಂಬನೆ. ಮೋದಿಯವರ ಪ್ರಕಾರ ಆತ್ಮ ನಿರ್ಭರತೆ ಬಹುರಾಷ್ಟ್ರೀಯ ಬ್ರಾಂಡಿನಿಂದ ಕೂಡಿದ ಸ್ವದೇಶಿ. ಇದು ಮೋದಿಯವರಿಗೆ ತಿಳಿಯದೆ ಇರುವ ಸಂಗತಿಯಲ್ಲ. ಈಗಾಗಲೇ ಭಾರತದಲ್ಲಿ ಸ್ಥಾಪನೆಯಾಗಿರುವ ಬಹುರಾಷ್ಟ್ರೀಯ ಉದ್ಯಮಗಳನ್ನು ಗಮನದಲ್ಲಿಟ್ಟುಕೊಂಡೇ ಮೋದಿ ಅವರು ಆತ್ಮನಿರ್ಭರತೆ ಮಾತನ್ನು ಹರಿಯಬಿಟ್ಟಿದ್ದಾರೆ. ಈ ಬ್ರಾಂಡಿನ ಉದ್ಯಮಗಳು ಹತ್ತಾರು ವರ್ಷಗಳಿಂದ ಭಾರತದಲ್ಲಿ ನಡೆಯುತ್ತಿವೆ. ಅವೆಲ್ಲ Made In India ಆದ್ದರಿಂದ ಅವು ಸ್ವದೇಶಿ ಎಂಬುದು ಮೋದಿ ಅವರ ವ್ಯಾಖ್ಯಾನ. ಈ ಯೋಜನೆಯನ್ನು ಪ್ರಕಟಿಸಿದ ಮೋದಿಯವರಿಗೆ ನಮ್ಮ ದೇಶದಲ್ಲಿ ಸ್ಥಾಪಿತವಾಗಿರುವ ಎಲ್ಲ ಬಹುರಾಷ್ಟ್ರೀಯ ಕಂಪನಿಗಳೂ ಸ್ಥಳೀಯವೇ.

ಜನರಿಗಂತೂ ಸ್ವದೇಶಿ-ವಿದೇಶಿ ಪದಾರ್ಥಗಳ ಕಲ್ಪನೆಯೇ ಇಲ್ಲ. ಸ್ವದೇಶಿ ಬಳಸಬೇಕೆಂಬ ಆತ್ಮಾಭಿಮಾನವೂ ಇಲ್ಲ. ಉದಾಹರಣೆಗೆ ನೆಸ್‍ಕೆಫೆ, ಕೋಕಾಕೋಲಾ, ಮ್ಯಾಗಿಶಾವಿಗೆಗಳಾಗಲಿ, ಅಡಿದಾಸ್ ಸಿದ್ದಪಡಿಸಿದ ಬಟ್ಟೆಗಳು, ಲಕ್ಸ್, 501 ಸೋಪುಗಳು ಬಾಟಾ ಷೂ ಮತ್ತು ಚಪ್ಪಲಿ ಮುಂತಾದ ದಿನಬಳಕೆಯ ವಸ್ತುಗಳಾಗಲಿ ವಿದೇಶಿಯೇ ಹೊರತು ಸ್ವದೇಶಿ ಅಲ್ಲ ಎಂಬ ಸಾಮಾನ್ಯ ತಿಳುವಳಿಕೆಯೂ ಜನಸಾಮಾನ್ಯರಲ್ಲಿ ಮಾತ್ರವಲ್ಲ ವಿದ್ಯಾವಂತರಲ್ಲಿ ಕೂಡ ಇದ್ದಂತೆ ತೋರುವುದಿಲ್ಲ.

ಜನರ ಈ ಅಜ್ಞಾನವನ್ನು ಮೋದಿಯವರು ಚೆನ್ನಾಗಿ ಬಳಸಿಕೊಳ್ಳಲು ನಿರ್ಧರಿಸಿದ್ದಾರೆ. ಇವಲ್ಲದೆ ನಾವು ಬೆಳಗಿನಿಂದ ರಾತ್ರಿಯವರೆಗೆ ಬಳಸುವ ಟೂತ್‍ಪೇಸ್ಟ್, ಟೂತ್‍ಬ್ರಷ್, ಬಟ್ಟೆಸೋಪು, ಸ್ನಾನದ ಸೋಪು, ಕುಂಕುಮ, ಕಾಡಿಗೆ, ಸ್ನೋ ಪೌಡರ್, ಲಿಪ್‍ಸ್ಟಿಕ್ ಎಲ್ಲ ಪರದೇಶದ ಕಂಪೆನಿಗಳು ತಯಾರಿಸುವವೇ. ನಮ್ಮ ದೇಶದಲ್ಲಿ ತಯಾರಾಗುವ ಬಹುರಾಷ್ಟ್ರೀಯ ಬ್ರಾಂಡ್‍ಗಳ ಪದಾರ್ಥಗಳು ಪರದೇಶದಿಂದ ಆಮದಾಗುವ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುವ ವಸ್ತುಗಳು ಈಗ ಎಲ್ಲೆಲ್ಲೂ ದೊರೆಯುತ್ತವೆ. ಇವೆಲ್ಲ ಸ್ವದೇಶಿ ಅಲ್ಲ ಪರದೇಶಿ ಎಂಬುದನ್ನು ಜನ ತಿಳಿದುಕೊಂಡಿಲ್ಲ.

ಈಗ ಪರದೇಶದ ಕಂಪನಿಗಳು ಭಾರತಕ್ಕೆ ಬಂದು ತಮ್ಮ ಉದ್ಯಮಗಳನ್ನು ಆರಂಭ ಮಾಡಿರುವುದರಿಂದ ಮೋದಿಯವರಿಗೂ ಅವೆಲ್ಲ ಸ್ವದೇಶಿಯಂದೇ ಗೋಚರವಾಗುತ್ತಿದೆ. ಈಗ ಈ ಪರದೇಶಿ ಕಂಪನಿಗಳೂ ಲೋಕಲ್ಲು ದುಡಿಯುವ ಜನವೂ ಲೋಕಲ್. ಈ ಪದಾರ್ಥ ಬಳಸುವವರೂ ಲೋಕಲ್. ಈ ಬಹುರಾಷ್ಟ್ರೀಯ ಕಂಪನಿಗಳು ಬರುವ ಅಪಾರ ಲಾಭವನ್ನು ಡಿವಿಡೆಂಡ್ ರೂಪದಲ್ಲಿ ತಮ್ಮ ಷೇರುದಾರರಿಗೆ ಉದಾರವಾಗಿ ನೀಡಿ ಉಳಿದ ಪುಡಿಗಾಸು ಲಾಭವನ್ನು ಭಾರತದಲ್ಲೇ ಉಳಿಸಿಕೊಳ್ಳುತ್ತವೆ. ನಗನಾಣ್ಯದ ಇತರ ಉದ್ಯಮಗಳು ಅಂದರೆ ಅವು ದೇಶಿಯರು ಸ್ಥಾಪಿಸಿರುವ ಉದ್ಯಮಗಳು. ಇವು ಇಲ್ಲಿ ಉತ್ಪನ್ನವಾಗುವ ಎಲ್ಲ ಪದಾರ್ಥಗಳು ಭಾರತದಲ್ಲೇ ಮಾರಾಟವಾಗುವುದು.

ದಿನಕಳೆದಂತೆ ಈ ಮೂರು ಬಗೆಯ ಸಂಸ್ಥೆಗಳು ತಮ್ಮ ಕಾರ್ಯ ಚಟುವಟಿಕೆಯನ್ನೂ ವಿಸ್ತರಿಸುತ್ತ ಹೋಗುತ್ತವೆ. ವಿದೇಶಗಳಲ್ಲಿಯೇ ಇದ್ದುಕೊಂಡು ಭಾರತಕ್ಕೆ ಕಳಿಸುವ ವಸ್ತುಗಳನ್ನ ತಯಾರಿಸುವ ಕಂಪನಿಗಳು ಸ್ವದೇಶಿ ಬಗೆಗೆ ಒತ್ತುಕೊಟ್ಟು ಕಣ್ಕುಕ್ಕುವ ಜಾಹಿರಾತುಗಳನ್ನೂ ನೀಡಿ ತಮ್ಮ ಸರಕಿಗೆ ಮಾರುಕಟ್ಟೆ ವಿಸ್ತರಿಸುತ್ತದೆ. ದೇಶಿ ಕಂಪನಿಗಳು ದೇಶಿ ಪದಾರ್ಥಗಳನ್ನೇ ಬಳಸಿ ಎಂದು vocal to local ಘೋಷಣೆಯನ್ನು ಮೊಳಗಿಸುತ್ತದೆ. ಮೋದಿಯವರು ಎಂದಿನಂತೆ ಹೊಸ ಘೋಷಣೆಯೊಂದನ್ನು ಹರಿಯ ಬಿಟ್ಟಿದ್ದಾರೆ. ಇದು ಬರಿಯ ಘೋಷಣೆಯೇ ಹೊರತು ನಿಜವಾದ ಸ್ವದೇಶಿ ಚಳುವಳಿ ಕಟ್ಟುವ ಘೋಷಣೆಯಲ್ಲ.

ಚಳುವಳಿಯನ್ನು ಜನತೆ ಮಾತ್ರ ನಡೆಸಬಲ್ಲರು ಎಂಬುದು ಮೋದಿಯವರಿಗೆ ಗೊತ್ತು. ಜನತೆಯನ್ನು ಬೆಸ್ತು ಬೀಳಿಸಲು ಹೂಡಿರುವ ತಂತ್ರ ಇದು. ಖಂಡಿತವಾಗಿ ಇದು ಮೋದಿಯವರ ಫೋಕಸ್ ಚಳುವಳಿಯಲ್ಲ.

ಜನತೆ ಮೋದಿಯವರ ಘೋಷಣೆಗೆ ಮರುಳಾಗಬಾರದು. ಸ್ವದೇಶಿ ಬಗೆಗೆ ಗಾಂಧಿಜಿಗಿದ್ದ ಆಸೆ ಮೋದಿಯವರಿಗೆ ಖಂಡಿತ ಇಲ್ಲ. ಭಾರತದ ಆರ್ಥಿಕತೆ ಕುಸಿಯುತ್ತಿರುವಾಗ ಜನರ ಮನಸ್ಸನ್ನು ಬೇರೆ ಕಡೆಗೆ ಸೆಳೆಯುವ ಮತ್ತೊಂದು ತಂತ್ರ ಇದು.


ಇದನ್ನು ಓದಿ: ಮೋದಿ 2.1: ಹಿಂದೂ ರಾಷ್ಟ್ರೀಯವಾದದ ವಿಜೃಂಭಣೆಯೇ ಮೋದಿ ಸರ್ಕಾರದ ಸಾಧನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...

ಪಶ್ಚಿಮ ಬಂಗಾಳ| ದುರ್ಗಾಪೂಜೆ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧ ಆದೇಶ ಹೊರಡಿಸಿದ ವಿಎಚ್‌ಪಿ; ಬಲಪಂಥೀಯ ಸಂಘನೆಯ ಅಧಿಕಾರ ಪ್ರಶ್ನಿಸಿದ ವಿಪಕ್ಷಗಳು

ಪಶ್ಚಿಮ ಬಂಗಾಳದಲ್ಲಿ ದುರ್ಗಾಪೂಜೆ ಆಚರಣೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹೊರಡಿಸಿರುವ ಮಾರ್ಗಸೂಚಿಯು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪೂಜಾ ಮಂಟಪಗಳ ಸುತ್ತಮುತ್ತ ಸಸ್ಯಾಹಾರಿ ಅಲ್ಲದ ಮಾಂಸ ಮತ್ತು ಮೀನು...

ನ್ಯೂಯಾರ್ಕ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ: RSS ಮತ್ತು ಸಂಸ್ಥೆಯ ನಂಟಿನ ರಹಸ್ಯ ಬಯಲು

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಶನಿವಾರ ನ್ಯೂಯಾರ್ಕ್‌ನ ಪ್ರಸಿದ್ಧ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ ‘ಯೂನಿವರ್ಸಲ್ ಒನ್‌ನೆಸ್ ಸೆಲೆಬ್ರೇಷನ್ಸ್’ ಎಂಬ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವರದಿಗಳ ಪ್ರಕಾರ,...

ಮೋಹನ್ ಭಾಗವತ್ ನ್ಯೂಯಾರ್ಕ್ ಕಾರ್ಯಕ್ರಮಕ್ಕೆ ವಿರೋಧ : ಅಮೆರಿಕದ 61 ಸಂಘಟನೆಗಳಿಂದ ಪ್ರತಿಭಟನೆ

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ ಮಾಡಲಿರುವ, ಶನಿವಾರ (ಆ.29) ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ 'ಯೂನಿವರ್ಸಲ್ ಒನ್ನೆಸ್ ಸೆಲೆಬ್ರೇಷನ್ಸ್' ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಅವರು...

ಶಿವಮೊಗ್ಗ| ಈದ್-ಎ-ಮಿಲಾದ್ ರ್‍ಯಾಲಿಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ: ಮೂವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗದ ಆರ್‌ಎಂಎಲ್ ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಗಾಗಿ ನಿರ್ಮಿಸಲಾಗಿದ್ದ ಕಟೌಟ್ ಒಂದರ ಮೇಲೆ ಫೆಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಪೊಲೀಸರು ಮೂವರು ಮುಸ್ಲಿಂ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ನಿಹಾಲ್ ಉರುಫ್ ಬೆಕ್ಕು,...

ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ FIR: ಹೈಕೋರ್ಟ್ ಆದೇಶ ಉಲ್ಲಂಘನೆ ಆರೋಪ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಕೋಲ್ಕತ್ತಾ ಪೊಲೀಸರು ಸ್ವಯಂಪ್ರೇರಿತ (Suo Motu) ದೂರು ದಾಖಲಿಸಿಕೊಂಡಿದ್ದಾರೆ. ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಟಿಎಂಸಿ ವಿದ್ಯಾರ್ಥಿ...

ಈದ್ ಮಿಲಾದ್ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನ; ಭಜರಂಗದಳ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

ಈದ್-ಎ-ಮಿಲಾದ್ ಪೋಸ್ಟರ್‌ಗಳ ವಿಚಾರವಾಗಿ ಗುಂಪುಗಳ ನಡುವೆ ಶತ್ರುತ್ವ ಸೃಷ್ಟಿಸಲು ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನಿಸಿದ ಆರೋಪದ ಮೇಲೆ ಕಲಬುರಗಿಯಲ್ಲಿ ಭಜರಂಗದಳದ ಕಾರ್ಯಕರ್ತನೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಯ ಭಾಗವಾಗಿ...

ವೆನೆಜುವೆಲಾ ತೈಲ ನಿಕ್ಷೇಪಗಳ ಮೇಲೆ ಅಮೆರಿಕ ನಿಯಂತ್ರಣ: ಜಾಗತಿಕ ರಾಜಕಾರಣದಲ್ಲಿ ತಲ್ಲಣ!

ವಾಷಿಂಗ್ಟನ್/ಕಾರಕಾಸ್: ವಿಶ್ವದಲ್ಲೇ ಅತಿ ಹೆಚ್ಚು ಕಚ್ಚಾ ತೈಲ ನಿಕ್ಷೇಪ ಹೊಂದಿರುವ ವೆನೆಜುವೆಲಾ ದೇಶದ 65 ಬಿಲಿಯನ್ ಬ್ಯಾರೆಲ್‌ಗಿಂತ ಹೆಚ್ಚು ಸಾಬೀತಾದ ತೈಲ ನಿಕ್ಷೇಪಗಳ ಮೇಲೆ ಬಹುಮತ ನಿಯಂತ್ರಣ ಸಾಧಿಸುವ ಒಪ್ಪಂದವನ್ನು ಅಮೆರಿಕ ಮಾಡಿಕೊಂಡಿದೆ....

ನೈತಿಕ ಹೊಣೆ ಹೊತ್ತು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ; ಇದು ಬಿಜೆಪಿಯ ಗೆಲುವಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

ಸಚಿವರಾಗಿದ್ದ ಬಿ. ನಾಗೇಂದ್ರ ಅವರು ಸಾರ್ವಜನಿಕ ಜೀವನದಲ್ಲಿ ನೈತಿಕ ಹೊಣೆಗಾರಿಕೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಇದು ಬಿಜೆಪಿಯ ಗೆಲುವೂ ಅಲ್ಲ, ವಿಪಕ್ಷ ನಾಯಕರ ಹೋರಾಟದ ಗೆಲುವೂ ಅಲ್ಲ. ಇದೊಂದು ದಲಿತ ಸಮುದಾಯ ನಾಯಕರ...