Homeಮುಖಪುಟಅತಿ ದೊಡ್ಡ ಮಾನವೀಯ ಬಿಕ್ಕಟ್ಟಿನ ಕಾಲ ಮತ್ತು ಐಪಿಎಲ್ ಔಚಿತ್ಯ

ಅತಿ ದೊಡ್ಡ ಮಾನವೀಯ ಬಿಕ್ಕಟ್ಟಿನ ಕಾಲ ಮತ್ತು ಐಪಿಎಲ್ ಔಚಿತ್ಯ

- Advertisement -
- Advertisement -

ಸಾಂಕ್ರಾಮಿಕ ತಂದೊಡ್ಡಿದ ಅತಿ ದೊಡ್ಡ ಮಾನವೀಯ ಬಿಕ್ಕಟ್ಟಿನಲ್ಲಿ ಜನ ನರಳುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ, ಆಕ್ಸಿಜನ್, ಔಷಧಿ ಕೊರತೆಯಿಂದಾಗಿ ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚುತ್ತಿದೆ. ಸರ್ಕಾರಗಳು ಸೋಂಕಿನ, ಸಾವಿನ ಪ್ರಕರಣಗಳನ್ನು ಮುಚ್ಚಿಡುತ್ತಿವೆ ಎಂಬ ಆರೋಪಗಳ ನಡುವೆಯೂ ಎಲ್ಲೆಲ್ಲೂ ಸಾವಿನ ಸುದ್ದಿಗಳು ಕಂಗೆಡಿಸುತ್ತಿವೆ. ಆದರೆ ಅದೇ ಸಮಯದಲ್ಲಿ ಇದ್ಯಾವುದರ ಪರಿವೆ ಇಲ್ಲದೆ ಫೋರ್, ಸಿಕ್ಸ್, ವಿಕೆಟ್‌ಗಳ ಸಂಭ್ರಮದಲ್ಲಿ ಮತ್ತೊಂದು ಜಗತ್ತು ಅಸ್ತಿತ್ವದಲ್ಲಿದೆ! ‘ಬಯೋ ಬಬಲ್‘ ಎಂಬ ರಕ್ಷಣೆ ಅವರಿಗಿದ್ದು ಯಾವುದೇ ಭಯವಿಲ್ಲದೆ ಅವರು ಆಟದಲ್ಲಿ ನಿರತರಾಗಿದ್ದಾರೆ.

ಮನರಂಜನೆ ಬೇಕು, ಖಿನ್ನತೆಯಲ್ಲಿರುವವರಿಗೆ ಅದು ಅಗತ್ಯವಿದೆ, ಇದು ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುತ್ತದೆ ಎಂಬ ಮಾತುಗಳು ಸಹ ಐಪಿಎಲ್ ಪರ ಕೇಳಿಬರುತ್ತವೆ. ಐಪಿಎಲ್ ಅಥವಾ ಯಾವುದಾದರೊಂದು ಜನಕ್ಕೆ ಅಗತ್ಯವಿದೆ ಎಂಬುದನ್ನು ಒಪ್ಪಿಕೊಳ್ಳೋಣ. ಕಳೆದ ವರ್ಷದ ಅಮೆರಿಕ ಸೇರಿದಂತೆ ಇತರೆಡೆ ಸಾಂಕ್ರಾಮಿಕದ ನಡುವೆ ಹಲವು ಸ್ಪರ್ಧೆಗಳು ನಡೆದಾಗ ಬಹಳಷ್ಟು ಕ್ರೀಡಾಪಡುಗಳು ಮೊಣಕಾಲೂರಿ ಜಾರ್ಜ್ ಫ್ಲಾಯ್ಡ್ ಜನಾಂಗೀಯ ಹತ್ಯೆಯನ್ನು ಖಂಡಿಸಿ ವಿಷಾಧ ವ್ಯಕ್ತಪಡಿಸಿದ್ದರು. ಮಾಸ್ಕ್ ನಲ್ಲಿ ಬ್ಲಾಕ್ ಲೈವ್ಸ್ ಮ್ಯಾಟರ್ ಎಂಬ ಬರಹದ ಮೂಲಕ ತಮ್ಮ ಸಾಮಾಜಿಕ ಕಾಳಜಿ ಮೆರೆದಿದ್ದರು. ಈ ಐಪಿಎಲ್‌ನಲ್ಲಿ ಪ್ರಸ್ತುತ ಸಾಂಕ್ರಾಮಿಕದ ಬಗ್ಗೆ ಅಂತಹ ಕಾಳಜಿಗಳೇನಾದರೂ ಕಾಣುತ್ತಿವೆಯೇ?

ಭಾರತದ ಕ್ರೀಡಾಪಟುಗಳ ಸಾಮಾಜಿಕ ಜಾಲತಾಣಗಳ ಹ್ಯಾಂಡಲ್‌ಗಳಿಗೆ ಲಕ್ಷ-ಕೋಟಿ ಸಂಖ್ಯೆಯಲ್ಲಿ ಅನುಯಾಯಿಗಳಿದ್ದಾರೆ. ಅದನ್ನು ಬಳಸಿ ‘ಕೈತೊಳೆಯಿರಿ, ಮಾಸ್ಕ್ ಧರಿಸಿ, ಮನೆಯಲ್ಲಿಯೇ ಇರಿ’ ಎಂಬ ಉಪದೇಶಗಳನ್ನು ಹೊರತುಪಡಿಸಿ ಮತ್ತೇನಾದರೂ ಸಾಮಾಜಿಕ ಜಾಗೃತಿ ಮೂಡಿಸಿದ್ದಾರೆಯೇ? ಹೆದರಬೇಡಿ ನಿಮ್ಮೊಂದಿಗೆ ನಾವಿದ್ದೇವೆ, ಒಟ್ಟಾಗಿ ಇದನ್ನು ಎದುರಿಸೋಣ ಎಂದು ಧೈರ್ಯ ತುಂಬಿದ್ದಾರೆಯೇ? ಜನರ ಸಂಕಷ್ಟ ಅರಿತು ಆಕ್ಸಿಜನ್, ಔಷಧಿ, ಬಡಜನರಿಗೆ ಆಹಾರಕ್ಕಾಗಿ ನಿಧಿ ಸಂಗ್ರಹಿಸಿದ್ದಾರೆಯೇ? ಇಲ್ಲ, ಬದಲಿಗೆ ಅವರ ಸೆಲ್ಫಿಗಳು, ತಿನಿಸುಗಳ ಫೋಟೊಗಳು ಮಾತ್ರ ಅವರ ಟೈಮ್‌ಲೈನ್‌ನಲ್ಲಿ ಕಾಣುತ್ತಿವೆಯೆಂದರೆ ಏನರ್ಥ?

ಕಳೆದ ಮೂರು ತಿಂಗಳ ಹಿಂದೆ ಗಣರಾಜ್ಯೋತ್ಸವದಂದು ರೈತರು ವಿವಾದಿತ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮತ್ತು ಎಂಎಸ್‌ಪಿ ಖಾತ್ರಿಗಾಗಿ ಕಿಸಾನ್ ಟ್ರ್ಯಾಕ್ಟರ್ ರ್ಯಾಲಿ ನಡೆಸಿದ್ದರು. ಆಗ ಅಹಿತಕರ ವಾತವಾರಣ ನಿರ್ಮಾಣವಾಗಿತ್ತು. ರೈತರನ್ನು ಬೆಂಬಲಿಸಿ ಅಂತರಾಷ್ಟ್ರೀಯ ತಾರೆಯರು ಟ್ವೀಟ್ ಮಾಡಿ ಆ ವಿಷಯ ವಿಶ್ವದ ಗಮನ ಸೆಳೆಯುವಂತೆ ಮಾಡಿದ್ದರು. ಅದರ ಮಾರನೇ ದಿನ ‘ಇದು ಭಾರತದ ಆಂತರೀಕ ವಿಷಯ, ಇದರಲ್ಲಿ ಹೊರಗಿನವರು ಮೂಗು ತೂರಿಸುವ ಅಗತ್ಯವಿಲ್ಲ. ನಾವು ಭಾರತದೊಂದಿಗೆ ನಿಲ್ಲುತ್ತೇವೆ’ ಎಂಬ ಒಂದೇ ಸಂದೇಶವನ್ನು ಈ ಬಹುಪಾಲು ಕ್ರಿಕೆಟಿಗರು ಮತ್ತು ಬಾಲಿವುಡ್ ತಾರೆಯರು ಟ್ವೀಟ್ ಮಾಡುವ ಮೂಲಕ ತಮ್ಮ ಹಿಪಾಕ್ರಸಿ ಮೆರೆದಿದ್ದರು! ಭಾರತದ ಕೃಷಿ ಬಿಕ್ಕಟ್ಟು, ರೈತರ ಸಮಸ್ಯೆಗಳ ಬಗ್ಗೆ ಕಿಂಚಿತ್ತೂ ಅರಿವಿಲ್ಲದ ಈ ಆಟಗಾರರು ತಮಗೆ ಬಂದ ಸಂದೇಶವನ್ನು ಟ್ವೀಟ್ ಮಾಡಿ ಆಳುವವರ ಹಿತ ಕಾಪಾಡಿದ್ದರು… ಆದರೆ ಇಂದು ಜನ ಬೀದಿಯಲ್ಲಿ ಹುಳಗಳ ರೀತಿ ಸಾಯುತ್ತಿರುವಾಗ ಅದಕ್ಕೂ ತಮಗೂ ಸಂಬಂಧವೇ ಇಲ್ಲದ ರೀತಿ ಮತ್ತೊಂದು ಗ್ರಹವಾಸಿಗಳಾಗಿಬಿಟ್ಟಿದ್ದಾರೆ!

ಈ ಕ್ರಿಕೆಟ್ ತಾರೆಯರನ್ನು ಭಾರತದ ಕೋಟ್ಯಂತರ ಜನ ಆರಾಧಿಸುತ್ತಾರೆ.. ಅಂತಹ ಕೋಟ್ಯಾಂತರದ ಜನರ ಜೀವವೇ ಅಪಾಯದಲ್ಲಿದೆ. ಆದರೆ ಅದರ ಬಗ್ಗೆ ಈ ಕ್ರಿಕೆಟಿಗರು ಕಿಂಚಿತ್ ಕಾಳಜಿ ವಹಿಸುತ್ತಿದ್ದಾರೆಯೇ? ಐಪಿಎಲ್ ಪಂದ್ಯ ನಡೆಯುವಾಗ ವೀಕ್ಷಕ ವಿವರಣೆ ನೀಡುವವರು 10 ಓವರ್‌ಗಳಿಗೆ ಒಮ್ಮೆ ಮಾಸ್ಕ್ ಹಾಕಿ, ಸುರಕ್ಷಿತ ಅಂತರ ಕಾಪಾಡಿ ಎಂದು ಹೇಳುತ್ತಾರೆ ಹೊರತು ಇಂದಿನ ಬಿಕ್ಕಟ್ಟಿಗೂ, ಐಪಿಎಲ್‌ಗೂ ಯಾವುದೇ ಸಂಬಂಧವಿಲ್ಲದಂತೆ ನಡೆಯುತ್ತಿದೆ. ಈ ಕಾರಣದಿಂದಲೇ “ದೇಶವು ಕೋವಿಡ್ ಎರಡನೆ ಅಲೆ ಉಲ್ಬಣದಿಂದ ತತ್ತರಿಸಿರುವ ಈ ಸಮಯದಲ್ಲಿ ಐಪಿಎಲ್ ಎಂಬ ಕ್ರಿಕೆಟ್ ಹಬ್ಬ ನಡೆಯುತ್ತಿರುವುದು ವಿಷಾದಕರ. ದೇಶದ ಸಂಕಷ್ಟದ ಜೊತೆ ನಿಂತು ಜನರಲ್ಲಿ ನೈತಿಕ ಶಕ್ತಿ ತುಂಬುವುದರ ಸಂಕೇತವಾಗಿ ನಾವು ಈಗಿನಿಂದಲೇ ಕ್ರಿಕೆಟ್ ಹಬ್ಬದ ಕವರೇಜ್ ನಿಲ್ಲಿಸಿದ್ದೇವೆ ಮತ್ತು ಅದಕ್ಕೆ ಸಂಬಂಧಿಸಿದ ಯಾವ ಸುದ್ದಿಯನ್ನೂ ಪ್ರಕಟಿಸದಿರಲು ನಿರ್ಧರಿಸಿದ್ದೇವೆ” ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಸಂಪಾದಕೀಯ ಮಂಡಳಿ ತೆಗೆದುಕೊಂಡ ನಿಲುವು ಪ್ರಶಂಸೆಗೆ ಒಳಗಾಗಿದೆ.

ಅಪವಾದಗಳು

ಆಸ್ಟ್ರೇಲಿಯಾದ ಕ್ರಿಕೆಟಿಗ ಪ್ಯಾಟ್ ಕಮ್ಮಿನ್ಸ್ 50 ಸಾವಿರ ಡಾಲರ್ ಹಣವನ್ನು ಪಿಎಂ ಕೇರ್ಸ್‌ಗೆ ದೇಣಿಗೆ ನೀಡಿದ್ದಾರೆ. ಹರ್ಭಜನ್ ಸಿಂಗ್ ಪುಣೆಯಲ್ಲಿ ದಿನಕ್ಕೆ 1500 ಜನರನ್ನು ಟೆಸ್ಟ್ ಮಾಡುವ ಸಾಮರ್ಥ್ಯದ ಕೊರೊನಾ ಪರೀಕ್ಷೆ ಕೇಂದ್ರವನ್ನು ತೆರೆದಿದ್ದಾರೆ. ವಾಸಿಂ ಜಾಫರ್, ಇರ್ಫಾನ್ ಪಠಾಣ್ ಮತ್ತು ರವಿಚಂದ್ರನ್ ಅಶ್ವಿನ್ ಜನರಿಗೆ ಈ ಸಂದರ್ಭದಲ್ಲಿ ಇತರರಿಗೆ ನೆರವಾಗುವಂತೆ ಮನವಿ ಮಾಡಿದ್ದಾರೆ. ಇವರನ್ನು ಇವರ ಈ ಕಾರ್ಯಕ್ಕಾಗಿ ಶ್ಲಾಘಿಸಬೇಕಿದೆ. ಅಶ್ವಿನ್ ನಮ್ಮ ಕುಟುಂಬ ಕೋವಿಡ್‌ನಿಂದ ಬಳಲುತ್ತಿದ್ದು ಈ ಸಂದರ್ಭದಲ್ಲಿ ನಾನು ಅವರೊಂದಿಗೆ ನಿಲ್ಲಬೇಕು ಎಂದು ಹೇಳಿ ಐಪಿಎಲ್ ತೊರೆದು ಹೊರಟಿದ್ದಾರೆ.


ಇದನ್ನೂ ಓದಿ; ಸಾಂಕ್ರಾಮಿಕ ದುರಂತದ ಸಮಯದಲ್ಲಿ ಐಪಿಎಲ್ ಕವರೇಜ್ ಮಾಡುವುದಿಲ್ಲವೆಂದ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...