Homeಮುಖಪುಟಅತಿ ದೊಡ್ಡ ಮಾನವೀಯ ಬಿಕ್ಕಟ್ಟಿನ ಕಾಲ ಮತ್ತು ಐಪಿಎಲ್ ಔಚಿತ್ಯ

ಅತಿ ದೊಡ್ಡ ಮಾನವೀಯ ಬಿಕ್ಕಟ್ಟಿನ ಕಾಲ ಮತ್ತು ಐಪಿಎಲ್ ಔಚಿತ್ಯ

- Advertisement -
- Advertisement -

ಸಾಂಕ್ರಾಮಿಕ ತಂದೊಡ್ಡಿದ ಅತಿ ದೊಡ್ಡ ಮಾನವೀಯ ಬಿಕ್ಕಟ್ಟಿನಲ್ಲಿ ಜನ ನರಳುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ, ಆಕ್ಸಿಜನ್, ಔಷಧಿ ಕೊರತೆಯಿಂದಾಗಿ ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚುತ್ತಿದೆ. ಸರ್ಕಾರಗಳು ಸೋಂಕಿನ, ಸಾವಿನ ಪ್ರಕರಣಗಳನ್ನು ಮುಚ್ಚಿಡುತ್ತಿವೆ ಎಂಬ ಆರೋಪಗಳ ನಡುವೆಯೂ ಎಲ್ಲೆಲ್ಲೂ ಸಾವಿನ ಸುದ್ದಿಗಳು ಕಂಗೆಡಿಸುತ್ತಿವೆ. ಆದರೆ ಅದೇ ಸಮಯದಲ್ಲಿ ಇದ್ಯಾವುದರ ಪರಿವೆ ಇಲ್ಲದೆ ಫೋರ್, ಸಿಕ್ಸ್, ವಿಕೆಟ್‌ಗಳ ಸಂಭ್ರಮದಲ್ಲಿ ಮತ್ತೊಂದು ಜಗತ್ತು ಅಸ್ತಿತ್ವದಲ್ಲಿದೆ! ‘ಬಯೋ ಬಬಲ್‘ ಎಂಬ ರಕ್ಷಣೆ ಅವರಿಗಿದ್ದು ಯಾವುದೇ ಭಯವಿಲ್ಲದೆ ಅವರು ಆಟದಲ್ಲಿ ನಿರತರಾಗಿದ್ದಾರೆ.

ಮನರಂಜನೆ ಬೇಕು, ಖಿನ್ನತೆಯಲ್ಲಿರುವವರಿಗೆ ಅದು ಅಗತ್ಯವಿದೆ, ಇದು ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುತ್ತದೆ ಎಂಬ ಮಾತುಗಳು ಸಹ ಐಪಿಎಲ್ ಪರ ಕೇಳಿಬರುತ್ತವೆ. ಐಪಿಎಲ್ ಅಥವಾ ಯಾವುದಾದರೊಂದು ಜನಕ್ಕೆ ಅಗತ್ಯವಿದೆ ಎಂಬುದನ್ನು ಒಪ್ಪಿಕೊಳ್ಳೋಣ. ಕಳೆದ ವರ್ಷದ ಅಮೆರಿಕ ಸೇರಿದಂತೆ ಇತರೆಡೆ ಸಾಂಕ್ರಾಮಿಕದ ನಡುವೆ ಹಲವು ಸ್ಪರ್ಧೆಗಳು ನಡೆದಾಗ ಬಹಳಷ್ಟು ಕ್ರೀಡಾಪಡುಗಳು ಮೊಣಕಾಲೂರಿ ಜಾರ್ಜ್ ಫ್ಲಾಯ್ಡ್ ಜನಾಂಗೀಯ ಹತ್ಯೆಯನ್ನು ಖಂಡಿಸಿ ವಿಷಾಧ ವ್ಯಕ್ತಪಡಿಸಿದ್ದರು. ಮಾಸ್ಕ್ ನಲ್ಲಿ ಬ್ಲಾಕ್ ಲೈವ್ಸ್ ಮ್ಯಾಟರ್ ಎಂಬ ಬರಹದ ಮೂಲಕ ತಮ್ಮ ಸಾಮಾಜಿಕ ಕಾಳಜಿ ಮೆರೆದಿದ್ದರು. ಈ ಐಪಿಎಲ್‌ನಲ್ಲಿ ಪ್ರಸ್ತುತ ಸಾಂಕ್ರಾಮಿಕದ ಬಗ್ಗೆ ಅಂತಹ ಕಾಳಜಿಗಳೇನಾದರೂ ಕಾಣುತ್ತಿವೆಯೇ?

ಭಾರತದ ಕ್ರೀಡಾಪಟುಗಳ ಸಾಮಾಜಿಕ ಜಾಲತಾಣಗಳ ಹ್ಯಾಂಡಲ್‌ಗಳಿಗೆ ಲಕ್ಷ-ಕೋಟಿ ಸಂಖ್ಯೆಯಲ್ಲಿ ಅನುಯಾಯಿಗಳಿದ್ದಾರೆ. ಅದನ್ನು ಬಳಸಿ ‘ಕೈತೊಳೆಯಿರಿ, ಮಾಸ್ಕ್ ಧರಿಸಿ, ಮನೆಯಲ್ಲಿಯೇ ಇರಿ’ ಎಂಬ ಉಪದೇಶಗಳನ್ನು ಹೊರತುಪಡಿಸಿ ಮತ್ತೇನಾದರೂ ಸಾಮಾಜಿಕ ಜಾಗೃತಿ ಮೂಡಿಸಿದ್ದಾರೆಯೇ? ಹೆದರಬೇಡಿ ನಿಮ್ಮೊಂದಿಗೆ ನಾವಿದ್ದೇವೆ, ಒಟ್ಟಾಗಿ ಇದನ್ನು ಎದುರಿಸೋಣ ಎಂದು ಧೈರ್ಯ ತುಂಬಿದ್ದಾರೆಯೇ? ಜನರ ಸಂಕಷ್ಟ ಅರಿತು ಆಕ್ಸಿಜನ್, ಔಷಧಿ, ಬಡಜನರಿಗೆ ಆಹಾರಕ್ಕಾಗಿ ನಿಧಿ ಸಂಗ್ರಹಿಸಿದ್ದಾರೆಯೇ? ಇಲ್ಲ, ಬದಲಿಗೆ ಅವರ ಸೆಲ್ಫಿಗಳು, ತಿನಿಸುಗಳ ಫೋಟೊಗಳು ಮಾತ್ರ ಅವರ ಟೈಮ್‌ಲೈನ್‌ನಲ್ಲಿ ಕಾಣುತ್ತಿವೆಯೆಂದರೆ ಏನರ್ಥ?

ಕಳೆದ ಮೂರು ತಿಂಗಳ ಹಿಂದೆ ಗಣರಾಜ್ಯೋತ್ಸವದಂದು ರೈತರು ವಿವಾದಿತ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮತ್ತು ಎಂಎಸ್‌ಪಿ ಖಾತ್ರಿಗಾಗಿ ಕಿಸಾನ್ ಟ್ರ್ಯಾಕ್ಟರ್ ರ್ಯಾಲಿ ನಡೆಸಿದ್ದರು. ಆಗ ಅಹಿತಕರ ವಾತವಾರಣ ನಿರ್ಮಾಣವಾಗಿತ್ತು. ರೈತರನ್ನು ಬೆಂಬಲಿಸಿ ಅಂತರಾಷ್ಟ್ರೀಯ ತಾರೆಯರು ಟ್ವೀಟ್ ಮಾಡಿ ಆ ವಿಷಯ ವಿಶ್ವದ ಗಮನ ಸೆಳೆಯುವಂತೆ ಮಾಡಿದ್ದರು. ಅದರ ಮಾರನೇ ದಿನ ‘ಇದು ಭಾರತದ ಆಂತರೀಕ ವಿಷಯ, ಇದರಲ್ಲಿ ಹೊರಗಿನವರು ಮೂಗು ತೂರಿಸುವ ಅಗತ್ಯವಿಲ್ಲ. ನಾವು ಭಾರತದೊಂದಿಗೆ ನಿಲ್ಲುತ್ತೇವೆ’ ಎಂಬ ಒಂದೇ ಸಂದೇಶವನ್ನು ಈ ಬಹುಪಾಲು ಕ್ರಿಕೆಟಿಗರು ಮತ್ತು ಬಾಲಿವುಡ್ ತಾರೆಯರು ಟ್ವೀಟ್ ಮಾಡುವ ಮೂಲಕ ತಮ್ಮ ಹಿಪಾಕ್ರಸಿ ಮೆರೆದಿದ್ದರು! ಭಾರತದ ಕೃಷಿ ಬಿಕ್ಕಟ್ಟು, ರೈತರ ಸಮಸ್ಯೆಗಳ ಬಗ್ಗೆ ಕಿಂಚಿತ್ತೂ ಅರಿವಿಲ್ಲದ ಈ ಆಟಗಾರರು ತಮಗೆ ಬಂದ ಸಂದೇಶವನ್ನು ಟ್ವೀಟ್ ಮಾಡಿ ಆಳುವವರ ಹಿತ ಕಾಪಾಡಿದ್ದರು… ಆದರೆ ಇಂದು ಜನ ಬೀದಿಯಲ್ಲಿ ಹುಳಗಳ ರೀತಿ ಸಾಯುತ್ತಿರುವಾಗ ಅದಕ್ಕೂ ತಮಗೂ ಸಂಬಂಧವೇ ಇಲ್ಲದ ರೀತಿ ಮತ್ತೊಂದು ಗ್ರಹವಾಸಿಗಳಾಗಿಬಿಟ್ಟಿದ್ದಾರೆ!

ಈ ಕ್ರಿಕೆಟ್ ತಾರೆಯರನ್ನು ಭಾರತದ ಕೋಟ್ಯಂತರ ಜನ ಆರಾಧಿಸುತ್ತಾರೆ.. ಅಂತಹ ಕೋಟ್ಯಾಂತರದ ಜನರ ಜೀವವೇ ಅಪಾಯದಲ್ಲಿದೆ. ಆದರೆ ಅದರ ಬಗ್ಗೆ ಈ ಕ್ರಿಕೆಟಿಗರು ಕಿಂಚಿತ್ ಕಾಳಜಿ ವಹಿಸುತ್ತಿದ್ದಾರೆಯೇ? ಐಪಿಎಲ್ ಪಂದ್ಯ ನಡೆಯುವಾಗ ವೀಕ್ಷಕ ವಿವರಣೆ ನೀಡುವವರು 10 ಓವರ್‌ಗಳಿಗೆ ಒಮ್ಮೆ ಮಾಸ್ಕ್ ಹಾಕಿ, ಸುರಕ್ಷಿತ ಅಂತರ ಕಾಪಾಡಿ ಎಂದು ಹೇಳುತ್ತಾರೆ ಹೊರತು ಇಂದಿನ ಬಿಕ್ಕಟ್ಟಿಗೂ, ಐಪಿಎಲ್‌ಗೂ ಯಾವುದೇ ಸಂಬಂಧವಿಲ್ಲದಂತೆ ನಡೆಯುತ್ತಿದೆ. ಈ ಕಾರಣದಿಂದಲೇ “ದೇಶವು ಕೋವಿಡ್ ಎರಡನೆ ಅಲೆ ಉಲ್ಬಣದಿಂದ ತತ್ತರಿಸಿರುವ ಈ ಸಮಯದಲ್ಲಿ ಐಪಿಎಲ್ ಎಂಬ ಕ್ರಿಕೆಟ್ ಹಬ್ಬ ನಡೆಯುತ್ತಿರುವುದು ವಿಷಾದಕರ. ದೇಶದ ಸಂಕಷ್ಟದ ಜೊತೆ ನಿಂತು ಜನರಲ್ಲಿ ನೈತಿಕ ಶಕ್ತಿ ತುಂಬುವುದರ ಸಂಕೇತವಾಗಿ ನಾವು ಈಗಿನಿಂದಲೇ ಕ್ರಿಕೆಟ್ ಹಬ್ಬದ ಕವರೇಜ್ ನಿಲ್ಲಿಸಿದ್ದೇವೆ ಮತ್ತು ಅದಕ್ಕೆ ಸಂಬಂಧಿಸಿದ ಯಾವ ಸುದ್ದಿಯನ್ನೂ ಪ್ರಕಟಿಸದಿರಲು ನಿರ್ಧರಿಸಿದ್ದೇವೆ” ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಸಂಪಾದಕೀಯ ಮಂಡಳಿ ತೆಗೆದುಕೊಂಡ ನಿಲುವು ಪ್ರಶಂಸೆಗೆ ಒಳಗಾಗಿದೆ.

ಅಪವಾದಗಳು

ಆಸ್ಟ್ರೇಲಿಯಾದ ಕ್ರಿಕೆಟಿಗ ಪ್ಯಾಟ್ ಕಮ್ಮಿನ್ಸ್ 50 ಸಾವಿರ ಡಾಲರ್ ಹಣವನ್ನು ಪಿಎಂ ಕೇರ್ಸ್‌ಗೆ ದೇಣಿಗೆ ನೀಡಿದ್ದಾರೆ. ಹರ್ಭಜನ್ ಸಿಂಗ್ ಪುಣೆಯಲ್ಲಿ ದಿನಕ್ಕೆ 1500 ಜನರನ್ನು ಟೆಸ್ಟ್ ಮಾಡುವ ಸಾಮರ್ಥ್ಯದ ಕೊರೊನಾ ಪರೀಕ್ಷೆ ಕೇಂದ್ರವನ್ನು ತೆರೆದಿದ್ದಾರೆ. ವಾಸಿಂ ಜಾಫರ್, ಇರ್ಫಾನ್ ಪಠಾಣ್ ಮತ್ತು ರವಿಚಂದ್ರನ್ ಅಶ್ವಿನ್ ಜನರಿಗೆ ಈ ಸಂದರ್ಭದಲ್ಲಿ ಇತರರಿಗೆ ನೆರವಾಗುವಂತೆ ಮನವಿ ಮಾಡಿದ್ದಾರೆ. ಇವರನ್ನು ಇವರ ಈ ಕಾರ್ಯಕ್ಕಾಗಿ ಶ್ಲಾಘಿಸಬೇಕಿದೆ. ಅಶ್ವಿನ್ ನಮ್ಮ ಕುಟುಂಬ ಕೋವಿಡ್‌ನಿಂದ ಬಳಲುತ್ತಿದ್ದು ಈ ಸಂದರ್ಭದಲ್ಲಿ ನಾನು ಅವರೊಂದಿಗೆ ನಿಲ್ಲಬೇಕು ಎಂದು ಹೇಳಿ ಐಪಿಎಲ್ ತೊರೆದು ಹೊರಟಿದ್ದಾರೆ.


ಇದನ್ನೂ ಓದಿ; ಸಾಂಕ್ರಾಮಿಕ ದುರಂತದ ಸಮಯದಲ್ಲಿ ಐಪಿಎಲ್ ಕವರೇಜ್ ಮಾಡುವುದಿಲ್ಲವೆಂದ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...