Homeಮುಖಪುಟಅತಿ ದೊಡ್ಡ ಮಾನವೀಯ ಬಿಕ್ಕಟ್ಟಿನ ಕಾಲ ಮತ್ತು ಐಪಿಎಲ್ ಔಚಿತ್ಯ

ಅತಿ ದೊಡ್ಡ ಮಾನವೀಯ ಬಿಕ್ಕಟ್ಟಿನ ಕಾಲ ಮತ್ತು ಐಪಿಎಲ್ ಔಚಿತ್ಯ

- Advertisement -
- Advertisement -

ಸಾಂಕ್ರಾಮಿಕ ತಂದೊಡ್ಡಿದ ಅತಿ ದೊಡ್ಡ ಮಾನವೀಯ ಬಿಕ್ಕಟ್ಟಿನಲ್ಲಿ ಜನ ನರಳುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ, ಆಕ್ಸಿಜನ್, ಔಷಧಿ ಕೊರತೆಯಿಂದಾಗಿ ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚುತ್ತಿದೆ. ಸರ್ಕಾರಗಳು ಸೋಂಕಿನ, ಸಾವಿನ ಪ್ರಕರಣಗಳನ್ನು ಮುಚ್ಚಿಡುತ್ತಿವೆ ಎಂಬ ಆರೋಪಗಳ ನಡುವೆಯೂ ಎಲ್ಲೆಲ್ಲೂ ಸಾವಿನ ಸುದ್ದಿಗಳು ಕಂಗೆಡಿಸುತ್ತಿವೆ. ಆದರೆ ಅದೇ ಸಮಯದಲ್ಲಿ ಇದ್ಯಾವುದರ ಪರಿವೆ ಇಲ್ಲದೆ ಫೋರ್, ಸಿಕ್ಸ್, ವಿಕೆಟ್‌ಗಳ ಸಂಭ್ರಮದಲ್ಲಿ ಮತ್ತೊಂದು ಜಗತ್ತು ಅಸ್ತಿತ್ವದಲ್ಲಿದೆ! ‘ಬಯೋ ಬಬಲ್‘ ಎಂಬ ರಕ್ಷಣೆ ಅವರಿಗಿದ್ದು ಯಾವುದೇ ಭಯವಿಲ್ಲದೆ ಅವರು ಆಟದಲ್ಲಿ ನಿರತರಾಗಿದ್ದಾರೆ.

ಮನರಂಜನೆ ಬೇಕು, ಖಿನ್ನತೆಯಲ್ಲಿರುವವರಿಗೆ ಅದು ಅಗತ್ಯವಿದೆ, ಇದು ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುತ್ತದೆ ಎಂಬ ಮಾತುಗಳು ಸಹ ಐಪಿಎಲ್ ಪರ ಕೇಳಿಬರುತ್ತವೆ. ಐಪಿಎಲ್ ಅಥವಾ ಯಾವುದಾದರೊಂದು ಜನಕ್ಕೆ ಅಗತ್ಯವಿದೆ ಎಂಬುದನ್ನು ಒಪ್ಪಿಕೊಳ್ಳೋಣ. ಕಳೆದ ವರ್ಷದ ಅಮೆರಿಕ ಸೇರಿದಂತೆ ಇತರೆಡೆ ಸಾಂಕ್ರಾಮಿಕದ ನಡುವೆ ಹಲವು ಸ್ಪರ್ಧೆಗಳು ನಡೆದಾಗ ಬಹಳಷ್ಟು ಕ್ರೀಡಾಪಡುಗಳು ಮೊಣಕಾಲೂರಿ ಜಾರ್ಜ್ ಫ್ಲಾಯ್ಡ್ ಜನಾಂಗೀಯ ಹತ್ಯೆಯನ್ನು ಖಂಡಿಸಿ ವಿಷಾಧ ವ್ಯಕ್ತಪಡಿಸಿದ್ದರು. ಮಾಸ್ಕ್ ನಲ್ಲಿ ಬ್ಲಾಕ್ ಲೈವ್ಸ್ ಮ್ಯಾಟರ್ ಎಂಬ ಬರಹದ ಮೂಲಕ ತಮ್ಮ ಸಾಮಾಜಿಕ ಕಾಳಜಿ ಮೆರೆದಿದ್ದರು. ಈ ಐಪಿಎಲ್‌ನಲ್ಲಿ ಪ್ರಸ್ತುತ ಸಾಂಕ್ರಾಮಿಕದ ಬಗ್ಗೆ ಅಂತಹ ಕಾಳಜಿಗಳೇನಾದರೂ ಕಾಣುತ್ತಿವೆಯೇ?

ಭಾರತದ ಕ್ರೀಡಾಪಟುಗಳ ಸಾಮಾಜಿಕ ಜಾಲತಾಣಗಳ ಹ್ಯಾಂಡಲ್‌ಗಳಿಗೆ ಲಕ್ಷ-ಕೋಟಿ ಸಂಖ್ಯೆಯಲ್ಲಿ ಅನುಯಾಯಿಗಳಿದ್ದಾರೆ. ಅದನ್ನು ಬಳಸಿ ‘ಕೈತೊಳೆಯಿರಿ, ಮಾಸ್ಕ್ ಧರಿಸಿ, ಮನೆಯಲ್ಲಿಯೇ ಇರಿ’ ಎಂಬ ಉಪದೇಶಗಳನ್ನು ಹೊರತುಪಡಿಸಿ ಮತ್ತೇನಾದರೂ ಸಾಮಾಜಿಕ ಜಾಗೃತಿ ಮೂಡಿಸಿದ್ದಾರೆಯೇ? ಹೆದರಬೇಡಿ ನಿಮ್ಮೊಂದಿಗೆ ನಾವಿದ್ದೇವೆ, ಒಟ್ಟಾಗಿ ಇದನ್ನು ಎದುರಿಸೋಣ ಎಂದು ಧೈರ್ಯ ತುಂಬಿದ್ದಾರೆಯೇ? ಜನರ ಸಂಕಷ್ಟ ಅರಿತು ಆಕ್ಸಿಜನ್, ಔಷಧಿ, ಬಡಜನರಿಗೆ ಆಹಾರಕ್ಕಾಗಿ ನಿಧಿ ಸಂಗ್ರಹಿಸಿದ್ದಾರೆಯೇ? ಇಲ್ಲ, ಬದಲಿಗೆ ಅವರ ಸೆಲ್ಫಿಗಳು, ತಿನಿಸುಗಳ ಫೋಟೊಗಳು ಮಾತ್ರ ಅವರ ಟೈಮ್‌ಲೈನ್‌ನಲ್ಲಿ ಕಾಣುತ್ತಿವೆಯೆಂದರೆ ಏನರ್ಥ?

ಕಳೆದ ಮೂರು ತಿಂಗಳ ಹಿಂದೆ ಗಣರಾಜ್ಯೋತ್ಸವದಂದು ರೈತರು ವಿವಾದಿತ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮತ್ತು ಎಂಎಸ್‌ಪಿ ಖಾತ್ರಿಗಾಗಿ ಕಿಸಾನ್ ಟ್ರ್ಯಾಕ್ಟರ್ ರ್ಯಾಲಿ ನಡೆಸಿದ್ದರು. ಆಗ ಅಹಿತಕರ ವಾತವಾರಣ ನಿರ್ಮಾಣವಾಗಿತ್ತು. ರೈತರನ್ನು ಬೆಂಬಲಿಸಿ ಅಂತರಾಷ್ಟ್ರೀಯ ತಾರೆಯರು ಟ್ವೀಟ್ ಮಾಡಿ ಆ ವಿಷಯ ವಿಶ್ವದ ಗಮನ ಸೆಳೆಯುವಂತೆ ಮಾಡಿದ್ದರು. ಅದರ ಮಾರನೇ ದಿನ ‘ಇದು ಭಾರತದ ಆಂತರೀಕ ವಿಷಯ, ಇದರಲ್ಲಿ ಹೊರಗಿನವರು ಮೂಗು ತೂರಿಸುವ ಅಗತ್ಯವಿಲ್ಲ. ನಾವು ಭಾರತದೊಂದಿಗೆ ನಿಲ್ಲುತ್ತೇವೆ’ ಎಂಬ ಒಂದೇ ಸಂದೇಶವನ್ನು ಈ ಬಹುಪಾಲು ಕ್ರಿಕೆಟಿಗರು ಮತ್ತು ಬಾಲಿವುಡ್ ತಾರೆಯರು ಟ್ವೀಟ್ ಮಾಡುವ ಮೂಲಕ ತಮ್ಮ ಹಿಪಾಕ್ರಸಿ ಮೆರೆದಿದ್ದರು! ಭಾರತದ ಕೃಷಿ ಬಿಕ್ಕಟ್ಟು, ರೈತರ ಸಮಸ್ಯೆಗಳ ಬಗ್ಗೆ ಕಿಂಚಿತ್ತೂ ಅರಿವಿಲ್ಲದ ಈ ಆಟಗಾರರು ತಮಗೆ ಬಂದ ಸಂದೇಶವನ್ನು ಟ್ವೀಟ್ ಮಾಡಿ ಆಳುವವರ ಹಿತ ಕಾಪಾಡಿದ್ದರು… ಆದರೆ ಇಂದು ಜನ ಬೀದಿಯಲ್ಲಿ ಹುಳಗಳ ರೀತಿ ಸಾಯುತ್ತಿರುವಾಗ ಅದಕ್ಕೂ ತಮಗೂ ಸಂಬಂಧವೇ ಇಲ್ಲದ ರೀತಿ ಮತ್ತೊಂದು ಗ್ರಹವಾಸಿಗಳಾಗಿಬಿಟ್ಟಿದ್ದಾರೆ!

ಈ ಕ್ರಿಕೆಟ್ ತಾರೆಯರನ್ನು ಭಾರತದ ಕೋಟ್ಯಂತರ ಜನ ಆರಾಧಿಸುತ್ತಾರೆ.. ಅಂತಹ ಕೋಟ್ಯಾಂತರದ ಜನರ ಜೀವವೇ ಅಪಾಯದಲ್ಲಿದೆ. ಆದರೆ ಅದರ ಬಗ್ಗೆ ಈ ಕ್ರಿಕೆಟಿಗರು ಕಿಂಚಿತ್ ಕಾಳಜಿ ವಹಿಸುತ್ತಿದ್ದಾರೆಯೇ? ಐಪಿಎಲ್ ಪಂದ್ಯ ನಡೆಯುವಾಗ ವೀಕ್ಷಕ ವಿವರಣೆ ನೀಡುವವರು 10 ಓವರ್‌ಗಳಿಗೆ ಒಮ್ಮೆ ಮಾಸ್ಕ್ ಹಾಕಿ, ಸುರಕ್ಷಿತ ಅಂತರ ಕಾಪಾಡಿ ಎಂದು ಹೇಳುತ್ತಾರೆ ಹೊರತು ಇಂದಿನ ಬಿಕ್ಕಟ್ಟಿಗೂ, ಐಪಿಎಲ್‌ಗೂ ಯಾವುದೇ ಸಂಬಂಧವಿಲ್ಲದಂತೆ ನಡೆಯುತ್ತಿದೆ. ಈ ಕಾರಣದಿಂದಲೇ “ದೇಶವು ಕೋವಿಡ್ ಎರಡನೆ ಅಲೆ ಉಲ್ಬಣದಿಂದ ತತ್ತರಿಸಿರುವ ಈ ಸಮಯದಲ್ಲಿ ಐಪಿಎಲ್ ಎಂಬ ಕ್ರಿಕೆಟ್ ಹಬ್ಬ ನಡೆಯುತ್ತಿರುವುದು ವಿಷಾದಕರ. ದೇಶದ ಸಂಕಷ್ಟದ ಜೊತೆ ನಿಂತು ಜನರಲ್ಲಿ ನೈತಿಕ ಶಕ್ತಿ ತುಂಬುವುದರ ಸಂಕೇತವಾಗಿ ನಾವು ಈಗಿನಿಂದಲೇ ಕ್ರಿಕೆಟ್ ಹಬ್ಬದ ಕವರೇಜ್ ನಿಲ್ಲಿಸಿದ್ದೇವೆ ಮತ್ತು ಅದಕ್ಕೆ ಸಂಬಂಧಿಸಿದ ಯಾವ ಸುದ್ದಿಯನ್ನೂ ಪ್ರಕಟಿಸದಿರಲು ನಿರ್ಧರಿಸಿದ್ದೇವೆ” ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಸಂಪಾದಕೀಯ ಮಂಡಳಿ ತೆಗೆದುಕೊಂಡ ನಿಲುವು ಪ್ರಶಂಸೆಗೆ ಒಳಗಾಗಿದೆ.

ಅಪವಾದಗಳು

ಆಸ್ಟ್ರೇಲಿಯಾದ ಕ್ರಿಕೆಟಿಗ ಪ್ಯಾಟ್ ಕಮ್ಮಿನ್ಸ್ 50 ಸಾವಿರ ಡಾಲರ್ ಹಣವನ್ನು ಪಿಎಂ ಕೇರ್ಸ್‌ಗೆ ದೇಣಿಗೆ ನೀಡಿದ್ದಾರೆ. ಹರ್ಭಜನ್ ಸಿಂಗ್ ಪುಣೆಯಲ್ಲಿ ದಿನಕ್ಕೆ 1500 ಜನರನ್ನು ಟೆಸ್ಟ್ ಮಾಡುವ ಸಾಮರ್ಥ್ಯದ ಕೊರೊನಾ ಪರೀಕ್ಷೆ ಕೇಂದ್ರವನ್ನು ತೆರೆದಿದ್ದಾರೆ. ವಾಸಿಂ ಜಾಫರ್, ಇರ್ಫಾನ್ ಪಠಾಣ್ ಮತ್ತು ರವಿಚಂದ್ರನ್ ಅಶ್ವಿನ್ ಜನರಿಗೆ ಈ ಸಂದರ್ಭದಲ್ಲಿ ಇತರರಿಗೆ ನೆರವಾಗುವಂತೆ ಮನವಿ ಮಾಡಿದ್ದಾರೆ. ಇವರನ್ನು ಇವರ ಈ ಕಾರ್ಯಕ್ಕಾಗಿ ಶ್ಲಾಘಿಸಬೇಕಿದೆ. ಅಶ್ವಿನ್ ನಮ್ಮ ಕುಟುಂಬ ಕೋವಿಡ್‌ನಿಂದ ಬಳಲುತ್ತಿದ್ದು ಈ ಸಂದರ್ಭದಲ್ಲಿ ನಾನು ಅವರೊಂದಿಗೆ ನಿಲ್ಲಬೇಕು ಎಂದು ಹೇಳಿ ಐಪಿಎಲ್ ತೊರೆದು ಹೊರಟಿದ್ದಾರೆ.


ಇದನ್ನೂ ಓದಿ; ಸಾಂಕ್ರಾಮಿಕ ದುರಂತದ ಸಮಯದಲ್ಲಿ ಐಪಿಎಲ್ ಕವರೇಜ್ ಮಾಡುವುದಿಲ್ಲವೆಂದ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...