Homeಮುಖಪುಟಅತಿ ದೊಡ್ಡ ಮಾನವೀಯ ಬಿಕ್ಕಟ್ಟಿನ ಕಾಲ ಮತ್ತು ಐಪಿಎಲ್ ಔಚಿತ್ಯ

ಅತಿ ದೊಡ್ಡ ಮಾನವೀಯ ಬಿಕ್ಕಟ್ಟಿನ ಕಾಲ ಮತ್ತು ಐಪಿಎಲ್ ಔಚಿತ್ಯ

- Advertisement -
- Advertisement -

ಸಾಂಕ್ರಾಮಿಕ ತಂದೊಡ್ಡಿದ ಅತಿ ದೊಡ್ಡ ಮಾನವೀಯ ಬಿಕ್ಕಟ್ಟಿನಲ್ಲಿ ಜನ ನರಳುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ, ಆಕ್ಸಿಜನ್, ಔಷಧಿ ಕೊರತೆಯಿಂದಾಗಿ ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚುತ್ತಿದೆ. ಸರ್ಕಾರಗಳು ಸೋಂಕಿನ, ಸಾವಿನ ಪ್ರಕರಣಗಳನ್ನು ಮುಚ್ಚಿಡುತ್ತಿವೆ ಎಂಬ ಆರೋಪಗಳ ನಡುವೆಯೂ ಎಲ್ಲೆಲ್ಲೂ ಸಾವಿನ ಸುದ್ದಿಗಳು ಕಂಗೆಡಿಸುತ್ತಿವೆ. ಆದರೆ ಅದೇ ಸಮಯದಲ್ಲಿ ಇದ್ಯಾವುದರ ಪರಿವೆ ಇಲ್ಲದೆ ಫೋರ್, ಸಿಕ್ಸ್, ವಿಕೆಟ್‌ಗಳ ಸಂಭ್ರಮದಲ್ಲಿ ಮತ್ತೊಂದು ಜಗತ್ತು ಅಸ್ತಿತ್ವದಲ್ಲಿದೆ! ‘ಬಯೋ ಬಬಲ್‘ ಎಂಬ ರಕ್ಷಣೆ ಅವರಿಗಿದ್ದು ಯಾವುದೇ ಭಯವಿಲ್ಲದೆ ಅವರು ಆಟದಲ್ಲಿ ನಿರತರಾಗಿದ್ದಾರೆ.

ಮನರಂಜನೆ ಬೇಕು, ಖಿನ್ನತೆಯಲ್ಲಿರುವವರಿಗೆ ಅದು ಅಗತ್ಯವಿದೆ, ಇದು ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುತ್ತದೆ ಎಂಬ ಮಾತುಗಳು ಸಹ ಐಪಿಎಲ್ ಪರ ಕೇಳಿಬರುತ್ತವೆ. ಐಪಿಎಲ್ ಅಥವಾ ಯಾವುದಾದರೊಂದು ಜನಕ್ಕೆ ಅಗತ್ಯವಿದೆ ಎಂಬುದನ್ನು ಒಪ್ಪಿಕೊಳ್ಳೋಣ. ಕಳೆದ ವರ್ಷದ ಅಮೆರಿಕ ಸೇರಿದಂತೆ ಇತರೆಡೆ ಸಾಂಕ್ರಾಮಿಕದ ನಡುವೆ ಹಲವು ಸ್ಪರ್ಧೆಗಳು ನಡೆದಾಗ ಬಹಳಷ್ಟು ಕ್ರೀಡಾಪಡುಗಳು ಮೊಣಕಾಲೂರಿ ಜಾರ್ಜ್ ಫ್ಲಾಯ್ಡ್ ಜನಾಂಗೀಯ ಹತ್ಯೆಯನ್ನು ಖಂಡಿಸಿ ವಿಷಾಧ ವ್ಯಕ್ತಪಡಿಸಿದ್ದರು. ಮಾಸ್ಕ್ ನಲ್ಲಿ ಬ್ಲಾಕ್ ಲೈವ್ಸ್ ಮ್ಯಾಟರ್ ಎಂಬ ಬರಹದ ಮೂಲಕ ತಮ್ಮ ಸಾಮಾಜಿಕ ಕಾಳಜಿ ಮೆರೆದಿದ್ದರು. ಈ ಐಪಿಎಲ್‌ನಲ್ಲಿ ಪ್ರಸ್ತುತ ಸಾಂಕ್ರಾಮಿಕದ ಬಗ್ಗೆ ಅಂತಹ ಕಾಳಜಿಗಳೇನಾದರೂ ಕಾಣುತ್ತಿವೆಯೇ?

ಭಾರತದ ಕ್ರೀಡಾಪಟುಗಳ ಸಾಮಾಜಿಕ ಜಾಲತಾಣಗಳ ಹ್ಯಾಂಡಲ್‌ಗಳಿಗೆ ಲಕ್ಷ-ಕೋಟಿ ಸಂಖ್ಯೆಯಲ್ಲಿ ಅನುಯಾಯಿಗಳಿದ್ದಾರೆ. ಅದನ್ನು ಬಳಸಿ ‘ಕೈತೊಳೆಯಿರಿ, ಮಾಸ್ಕ್ ಧರಿಸಿ, ಮನೆಯಲ್ಲಿಯೇ ಇರಿ’ ಎಂಬ ಉಪದೇಶಗಳನ್ನು ಹೊರತುಪಡಿಸಿ ಮತ್ತೇನಾದರೂ ಸಾಮಾಜಿಕ ಜಾಗೃತಿ ಮೂಡಿಸಿದ್ದಾರೆಯೇ? ಹೆದರಬೇಡಿ ನಿಮ್ಮೊಂದಿಗೆ ನಾವಿದ್ದೇವೆ, ಒಟ್ಟಾಗಿ ಇದನ್ನು ಎದುರಿಸೋಣ ಎಂದು ಧೈರ್ಯ ತುಂಬಿದ್ದಾರೆಯೇ? ಜನರ ಸಂಕಷ್ಟ ಅರಿತು ಆಕ್ಸಿಜನ್, ಔಷಧಿ, ಬಡಜನರಿಗೆ ಆಹಾರಕ್ಕಾಗಿ ನಿಧಿ ಸಂಗ್ರಹಿಸಿದ್ದಾರೆಯೇ? ಇಲ್ಲ, ಬದಲಿಗೆ ಅವರ ಸೆಲ್ಫಿಗಳು, ತಿನಿಸುಗಳ ಫೋಟೊಗಳು ಮಾತ್ರ ಅವರ ಟೈಮ್‌ಲೈನ್‌ನಲ್ಲಿ ಕಾಣುತ್ತಿವೆಯೆಂದರೆ ಏನರ್ಥ?

ಕಳೆದ ಮೂರು ತಿಂಗಳ ಹಿಂದೆ ಗಣರಾಜ್ಯೋತ್ಸವದಂದು ರೈತರು ವಿವಾದಿತ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮತ್ತು ಎಂಎಸ್‌ಪಿ ಖಾತ್ರಿಗಾಗಿ ಕಿಸಾನ್ ಟ್ರ್ಯಾಕ್ಟರ್ ರ್ಯಾಲಿ ನಡೆಸಿದ್ದರು. ಆಗ ಅಹಿತಕರ ವಾತವಾರಣ ನಿರ್ಮಾಣವಾಗಿತ್ತು. ರೈತರನ್ನು ಬೆಂಬಲಿಸಿ ಅಂತರಾಷ್ಟ್ರೀಯ ತಾರೆಯರು ಟ್ವೀಟ್ ಮಾಡಿ ಆ ವಿಷಯ ವಿಶ್ವದ ಗಮನ ಸೆಳೆಯುವಂತೆ ಮಾಡಿದ್ದರು. ಅದರ ಮಾರನೇ ದಿನ ‘ಇದು ಭಾರತದ ಆಂತರೀಕ ವಿಷಯ, ಇದರಲ್ಲಿ ಹೊರಗಿನವರು ಮೂಗು ತೂರಿಸುವ ಅಗತ್ಯವಿಲ್ಲ. ನಾವು ಭಾರತದೊಂದಿಗೆ ನಿಲ್ಲುತ್ತೇವೆ’ ಎಂಬ ಒಂದೇ ಸಂದೇಶವನ್ನು ಈ ಬಹುಪಾಲು ಕ್ರಿಕೆಟಿಗರು ಮತ್ತು ಬಾಲಿವುಡ್ ತಾರೆಯರು ಟ್ವೀಟ್ ಮಾಡುವ ಮೂಲಕ ತಮ್ಮ ಹಿಪಾಕ್ರಸಿ ಮೆರೆದಿದ್ದರು! ಭಾರತದ ಕೃಷಿ ಬಿಕ್ಕಟ್ಟು, ರೈತರ ಸಮಸ್ಯೆಗಳ ಬಗ್ಗೆ ಕಿಂಚಿತ್ತೂ ಅರಿವಿಲ್ಲದ ಈ ಆಟಗಾರರು ತಮಗೆ ಬಂದ ಸಂದೇಶವನ್ನು ಟ್ವೀಟ್ ಮಾಡಿ ಆಳುವವರ ಹಿತ ಕಾಪಾಡಿದ್ದರು… ಆದರೆ ಇಂದು ಜನ ಬೀದಿಯಲ್ಲಿ ಹುಳಗಳ ರೀತಿ ಸಾಯುತ್ತಿರುವಾಗ ಅದಕ್ಕೂ ತಮಗೂ ಸಂಬಂಧವೇ ಇಲ್ಲದ ರೀತಿ ಮತ್ತೊಂದು ಗ್ರಹವಾಸಿಗಳಾಗಿಬಿಟ್ಟಿದ್ದಾರೆ!

ಈ ಕ್ರಿಕೆಟ್ ತಾರೆಯರನ್ನು ಭಾರತದ ಕೋಟ್ಯಂತರ ಜನ ಆರಾಧಿಸುತ್ತಾರೆ.. ಅಂತಹ ಕೋಟ್ಯಾಂತರದ ಜನರ ಜೀವವೇ ಅಪಾಯದಲ್ಲಿದೆ. ಆದರೆ ಅದರ ಬಗ್ಗೆ ಈ ಕ್ರಿಕೆಟಿಗರು ಕಿಂಚಿತ್ ಕಾಳಜಿ ವಹಿಸುತ್ತಿದ್ದಾರೆಯೇ? ಐಪಿಎಲ್ ಪಂದ್ಯ ನಡೆಯುವಾಗ ವೀಕ್ಷಕ ವಿವರಣೆ ನೀಡುವವರು 10 ಓವರ್‌ಗಳಿಗೆ ಒಮ್ಮೆ ಮಾಸ್ಕ್ ಹಾಕಿ, ಸುರಕ್ಷಿತ ಅಂತರ ಕಾಪಾಡಿ ಎಂದು ಹೇಳುತ್ತಾರೆ ಹೊರತು ಇಂದಿನ ಬಿಕ್ಕಟ್ಟಿಗೂ, ಐಪಿಎಲ್‌ಗೂ ಯಾವುದೇ ಸಂಬಂಧವಿಲ್ಲದಂತೆ ನಡೆಯುತ್ತಿದೆ. ಈ ಕಾರಣದಿಂದಲೇ “ದೇಶವು ಕೋವಿಡ್ ಎರಡನೆ ಅಲೆ ಉಲ್ಬಣದಿಂದ ತತ್ತರಿಸಿರುವ ಈ ಸಮಯದಲ್ಲಿ ಐಪಿಎಲ್ ಎಂಬ ಕ್ರಿಕೆಟ್ ಹಬ್ಬ ನಡೆಯುತ್ತಿರುವುದು ವಿಷಾದಕರ. ದೇಶದ ಸಂಕಷ್ಟದ ಜೊತೆ ನಿಂತು ಜನರಲ್ಲಿ ನೈತಿಕ ಶಕ್ತಿ ತುಂಬುವುದರ ಸಂಕೇತವಾಗಿ ನಾವು ಈಗಿನಿಂದಲೇ ಕ್ರಿಕೆಟ್ ಹಬ್ಬದ ಕವರೇಜ್ ನಿಲ್ಲಿಸಿದ್ದೇವೆ ಮತ್ತು ಅದಕ್ಕೆ ಸಂಬಂಧಿಸಿದ ಯಾವ ಸುದ್ದಿಯನ್ನೂ ಪ್ರಕಟಿಸದಿರಲು ನಿರ್ಧರಿಸಿದ್ದೇವೆ” ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಸಂಪಾದಕೀಯ ಮಂಡಳಿ ತೆಗೆದುಕೊಂಡ ನಿಲುವು ಪ್ರಶಂಸೆಗೆ ಒಳಗಾಗಿದೆ.

ಅಪವಾದಗಳು

ಆಸ್ಟ್ರೇಲಿಯಾದ ಕ್ರಿಕೆಟಿಗ ಪ್ಯಾಟ್ ಕಮ್ಮಿನ್ಸ್ 50 ಸಾವಿರ ಡಾಲರ್ ಹಣವನ್ನು ಪಿಎಂ ಕೇರ್ಸ್‌ಗೆ ದೇಣಿಗೆ ನೀಡಿದ್ದಾರೆ. ಹರ್ಭಜನ್ ಸಿಂಗ್ ಪುಣೆಯಲ್ಲಿ ದಿನಕ್ಕೆ 1500 ಜನರನ್ನು ಟೆಸ್ಟ್ ಮಾಡುವ ಸಾಮರ್ಥ್ಯದ ಕೊರೊನಾ ಪರೀಕ್ಷೆ ಕೇಂದ್ರವನ್ನು ತೆರೆದಿದ್ದಾರೆ. ವಾಸಿಂ ಜಾಫರ್, ಇರ್ಫಾನ್ ಪಠಾಣ್ ಮತ್ತು ರವಿಚಂದ್ರನ್ ಅಶ್ವಿನ್ ಜನರಿಗೆ ಈ ಸಂದರ್ಭದಲ್ಲಿ ಇತರರಿಗೆ ನೆರವಾಗುವಂತೆ ಮನವಿ ಮಾಡಿದ್ದಾರೆ. ಇವರನ್ನು ಇವರ ಈ ಕಾರ್ಯಕ್ಕಾಗಿ ಶ್ಲಾಘಿಸಬೇಕಿದೆ. ಅಶ್ವಿನ್ ನಮ್ಮ ಕುಟುಂಬ ಕೋವಿಡ್‌ನಿಂದ ಬಳಲುತ್ತಿದ್ದು ಈ ಸಂದರ್ಭದಲ್ಲಿ ನಾನು ಅವರೊಂದಿಗೆ ನಿಲ್ಲಬೇಕು ಎಂದು ಹೇಳಿ ಐಪಿಎಲ್ ತೊರೆದು ಹೊರಟಿದ್ದಾರೆ.


ಇದನ್ನೂ ಓದಿ; ಸಾಂಕ್ರಾಮಿಕ ದುರಂತದ ಸಮಯದಲ್ಲಿ ಐಪಿಎಲ್ ಕವರೇಜ್ ಮಾಡುವುದಿಲ್ಲವೆಂದ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...