Homeಮುಖಪುಟಅತಿ ದೊಡ್ಡ ಮಾನವೀಯ ಬಿಕ್ಕಟ್ಟಿನ ಕಾಲ ಮತ್ತು ಐಪಿಎಲ್ ಔಚಿತ್ಯ

ಅತಿ ದೊಡ್ಡ ಮಾನವೀಯ ಬಿಕ್ಕಟ್ಟಿನ ಕಾಲ ಮತ್ತು ಐಪಿಎಲ್ ಔಚಿತ್ಯ

- Advertisement -
- Advertisement -

ಸಾಂಕ್ರಾಮಿಕ ತಂದೊಡ್ಡಿದ ಅತಿ ದೊಡ್ಡ ಮಾನವೀಯ ಬಿಕ್ಕಟ್ಟಿನಲ್ಲಿ ಜನ ನರಳುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ, ಆಕ್ಸಿಜನ್, ಔಷಧಿ ಕೊರತೆಯಿಂದಾಗಿ ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚುತ್ತಿದೆ. ಸರ್ಕಾರಗಳು ಸೋಂಕಿನ, ಸಾವಿನ ಪ್ರಕರಣಗಳನ್ನು ಮುಚ್ಚಿಡುತ್ತಿವೆ ಎಂಬ ಆರೋಪಗಳ ನಡುವೆಯೂ ಎಲ್ಲೆಲ್ಲೂ ಸಾವಿನ ಸುದ್ದಿಗಳು ಕಂಗೆಡಿಸುತ್ತಿವೆ. ಆದರೆ ಅದೇ ಸಮಯದಲ್ಲಿ ಇದ್ಯಾವುದರ ಪರಿವೆ ಇಲ್ಲದೆ ಫೋರ್, ಸಿಕ್ಸ್, ವಿಕೆಟ್‌ಗಳ ಸಂಭ್ರಮದಲ್ಲಿ ಮತ್ತೊಂದು ಜಗತ್ತು ಅಸ್ತಿತ್ವದಲ್ಲಿದೆ! ‘ಬಯೋ ಬಬಲ್‘ ಎಂಬ ರಕ್ಷಣೆ ಅವರಿಗಿದ್ದು ಯಾವುದೇ ಭಯವಿಲ್ಲದೆ ಅವರು ಆಟದಲ್ಲಿ ನಿರತರಾಗಿದ್ದಾರೆ.

ಮನರಂಜನೆ ಬೇಕು, ಖಿನ್ನತೆಯಲ್ಲಿರುವವರಿಗೆ ಅದು ಅಗತ್ಯವಿದೆ, ಇದು ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುತ್ತದೆ ಎಂಬ ಮಾತುಗಳು ಸಹ ಐಪಿಎಲ್ ಪರ ಕೇಳಿಬರುತ್ತವೆ. ಐಪಿಎಲ್ ಅಥವಾ ಯಾವುದಾದರೊಂದು ಜನಕ್ಕೆ ಅಗತ್ಯವಿದೆ ಎಂಬುದನ್ನು ಒಪ್ಪಿಕೊಳ್ಳೋಣ. ಕಳೆದ ವರ್ಷದ ಅಮೆರಿಕ ಸೇರಿದಂತೆ ಇತರೆಡೆ ಸಾಂಕ್ರಾಮಿಕದ ನಡುವೆ ಹಲವು ಸ್ಪರ್ಧೆಗಳು ನಡೆದಾಗ ಬಹಳಷ್ಟು ಕ್ರೀಡಾಪಡುಗಳು ಮೊಣಕಾಲೂರಿ ಜಾರ್ಜ್ ಫ್ಲಾಯ್ಡ್ ಜನಾಂಗೀಯ ಹತ್ಯೆಯನ್ನು ಖಂಡಿಸಿ ವಿಷಾಧ ವ್ಯಕ್ತಪಡಿಸಿದ್ದರು. ಮಾಸ್ಕ್ ನಲ್ಲಿ ಬ್ಲಾಕ್ ಲೈವ್ಸ್ ಮ್ಯಾಟರ್ ಎಂಬ ಬರಹದ ಮೂಲಕ ತಮ್ಮ ಸಾಮಾಜಿಕ ಕಾಳಜಿ ಮೆರೆದಿದ್ದರು. ಈ ಐಪಿಎಲ್‌ನಲ್ಲಿ ಪ್ರಸ್ತುತ ಸಾಂಕ್ರಾಮಿಕದ ಬಗ್ಗೆ ಅಂತಹ ಕಾಳಜಿಗಳೇನಾದರೂ ಕಾಣುತ್ತಿವೆಯೇ?

ಭಾರತದ ಕ್ರೀಡಾಪಟುಗಳ ಸಾಮಾಜಿಕ ಜಾಲತಾಣಗಳ ಹ್ಯಾಂಡಲ್‌ಗಳಿಗೆ ಲಕ್ಷ-ಕೋಟಿ ಸಂಖ್ಯೆಯಲ್ಲಿ ಅನುಯಾಯಿಗಳಿದ್ದಾರೆ. ಅದನ್ನು ಬಳಸಿ ‘ಕೈತೊಳೆಯಿರಿ, ಮಾಸ್ಕ್ ಧರಿಸಿ, ಮನೆಯಲ್ಲಿಯೇ ಇರಿ’ ಎಂಬ ಉಪದೇಶಗಳನ್ನು ಹೊರತುಪಡಿಸಿ ಮತ್ತೇನಾದರೂ ಸಾಮಾಜಿಕ ಜಾಗೃತಿ ಮೂಡಿಸಿದ್ದಾರೆಯೇ? ಹೆದರಬೇಡಿ ನಿಮ್ಮೊಂದಿಗೆ ನಾವಿದ್ದೇವೆ, ಒಟ್ಟಾಗಿ ಇದನ್ನು ಎದುರಿಸೋಣ ಎಂದು ಧೈರ್ಯ ತುಂಬಿದ್ದಾರೆಯೇ? ಜನರ ಸಂಕಷ್ಟ ಅರಿತು ಆಕ್ಸಿಜನ್, ಔಷಧಿ, ಬಡಜನರಿಗೆ ಆಹಾರಕ್ಕಾಗಿ ನಿಧಿ ಸಂಗ್ರಹಿಸಿದ್ದಾರೆಯೇ? ಇಲ್ಲ, ಬದಲಿಗೆ ಅವರ ಸೆಲ್ಫಿಗಳು, ತಿನಿಸುಗಳ ಫೋಟೊಗಳು ಮಾತ್ರ ಅವರ ಟೈಮ್‌ಲೈನ್‌ನಲ್ಲಿ ಕಾಣುತ್ತಿವೆಯೆಂದರೆ ಏನರ್ಥ?

ಕಳೆದ ಮೂರು ತಿಂಗಳ ಹಿಂದೆ ಗಣರಾಜ್ಯೋತ್ಸವದಂದು ರೈತರು ವಿವಾದಿತ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮತ್ತು ಎಂಎಸ್‌ಪಿ ಖಾತ್ರಿಗಾಗಿ ಕಿಸಾನ್ ಟ್ರ್ಯಾಕ್ಟರ್ ರ್ಯಾಲಿ ನಡೆಸಿದ್ದರು. ಆಗ ಅಹಿತಕರ ವಾತವಾರಣ ನಿರ್ಮಾಣವಾಗಿತ್ತು. ರೈತರನ್ನು ಬೆಂಬಲಿಸಿ ಅಂತರಾಷ್ಟ್ರೀಯ ತಾರೆಯರು ಟ್ವೀಟ್ ಮಾಡಿ ಆ ವಿಷಯ ವಿಶ್ವದ ಗಮನ ಸೆಳೆಯುವಂತೆ ಮಾಡಿದ್ದರು. ಅದರ ಮಾರನೇ ದಿನ ‘ಇದು ಭಾರತದ ಆಂತರೀಕ ವಿಷಯ, ಇದರಲ್ಲಿ ಹೊರಗಿನವರು ಮೂಗು ತೂರಿಸುವ ಅಗತ್ಯವಿಲ್ಲ. ನಾವು ಭಾರತದೊಂದಿಗೆ ನಿಲ್ಲುತ್ತೇವೆ’ ಎಂಬ ಒಂದೇ ಸಂದೇಶವನ್ನು ಈ ಬಹುಪಾಲು ಕ್ರಿಕೆಟಿಗರು ಮತ್ತು ಬಾಲಿವುಡ್ ತಾರೆಯರು ಟ್ವೀಟ್ ಮಾಡುವ ಮೂಲಕ ತಮ್ಮ ಹಿಪಾಕ್ರಸಿ ಮೆರೆದಿದ್ದರು! ಭಾರತದ ಕೃಷಿ ಬಿಕ್ಕಟ್ಟು, ರೈತರ ಸಮಸ್ಯೆಗಳ ಬಗ್ಗೆ ಕಿಂಚಿತ್ತೂ ಅರಿವಿಲ್ಲದ ಈ ಆಟಗಾರರು ತಮಗೆ ಬಂದ ಸಂದೇಶವನ್ನು ಟ್ವೀಟ್ ಮಾಡಿ ಆಳುವವರ ಹಿತ ಕಾಪಾಡಿದ್ದರು… ಆದರೆ ಇಂದು ಜನ ಬೀದಿಯಲ್ಲಿ ಹುಳಗಳ ರೀತಿ ಸಾಯುತ್ತಿರುವಾಗ ಅದಕ್ಕೂ ತಮಗೂ ಸಂಬಂಧವೇ ಇಲ್ಲದ ರೀತಿ ಮತ್ತೊಂದು ಗ್ರಹವಾಸಿಗಳಾಗಿಬಿಟ್ಟಿದ್ದಾರೆ!

ಈ ಕ್ರಿಕೆಟ್ ತಾರೆಯರನ್ನು ಭಾರತದ ಕೋಟ್ಯಂತರ ಜನ ಆರಾಧಿಸುತ್ತಾರೆ.. ಅಂತಹ ಕೋಟ್ಯಾಂತರದ ಜನರ ಜೀವವೇ ಅಪಾಯದಲ್ಲಿದೆ. ಆದರೆ ಅದರ ಬಗ್ಗೆ ಈ ಕ್ರಿಕೆಟಿಗರು ಕಿಂಚಿತ್ ಕಾಳಜಿ ವಹಿಸುತ್ತಿದ್ದಾರೆಯೇ? ಐಪಿಎಲ್ ಪಂದ್ಯ ನಡೆಯುವಾಗ ವೀಕ್ಷಕ ವಿವರಣೆ ನೀಡುವವರು 10 ಓವರ್‌ಗಳಿಗೆ ಒಮ್ಮೆ ಮಾಸ್ಕ್ ಹಾಕಿ, ಸುರಕ್ಷಿತ ಅಂತರ ಕಾಪಾಡಿ ಎಂದು ಹೇಳುತ್ತಾರೆ ಹೊರತು ಇಂದಿನ ಬಿಕ್ಕಟ್ಟಿಗೂ, ಐಪಿಎಲ್‌ಗೂ ಯಾವುದೇ ಸಂಬಂಧವಿಲ್ಲದಂತೆ ನಡೆಯುತ್ತಿದೆ. ಈ ಕಾರಣದಿಂದಲೇ “ದೇಶವು ಕೋವಿಡ್ ಎರಡನೆ ಅಲೆ ಉಲ್ಬಣದಿಂದ ತತ್ತರಿಸಿರುವ ಈ ಸಮಯದಲ್ಲಿ ಐಪಿಎಲ್ ಎಂಬ ಕ್ರಿಕೆಟ್ ಹಬ್ಬ ನಡೆಯುತ್ತಿರುವುದು ವಿಷಾದಕರ. ದೇಶದ ಸಂಕಷ್ಟದ ಜೊತೆ ನಿಂತು ಜನರಲ್ಲಿ ನೈತಿಕ ಶಕ್ತಿ ತುಂಬುವುದರ ಸಂಕೇತವಾಗಿ ನಾವು ಈಗಿನಿಂದಲೇ ಕ್ರಿಕೆಟ್ ಹಬ್ಬದ ಕವರೇಜ್ ನಿಲ್ಲಿಸಿದ್ದೇವೆ ಮತ್ತು ಅದಕ್ಕೆ ಸಂಬಂಧಿಸಿದ ಯಾವ ಸುದ್ದಿಯನ್ನೂ ಪ್ರಕಟಿಸದಿರಲು ನಿರ್ಧರಿಸಿದ್ದೇವೆ” ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಸಂಪಾದಕೀಯ ಮಂಡಳಿ ತೆಗೆದುಕೊಂಡ ನಿಲುವು ಪ್ರಶಂಸೆಗೆ ಒಳಗಾಗಿದೆ.

ಅಪವಾದಗಳು

ಆಸ್ಟ್ರೇಲಿಯಾದ ಕ್ರಿಕೆಟಿಗ ಪ್ಯಾಟ್ ಕಮ್ಮಿನ್ಸ್ 50 ಸಾವಿರ ಡಾಲರ್ ಹಣವನ್ನು ಪಿಎಂ ಕೇರ್ಸ್‌ಗೆ ದೇಣಿಗೆ ನೀಡಿದ್ದಾರೆ. ಹರ್ಭಜನ್ ಸಿಂಗ್ ಪುಣೆಯಲ್ಲಿ ದಿನಕ್ಕೆ 1500 ಜನರನ್ನು ಟೆಸ್ಟ್ ಮಾಡುವ ಸಾಮರ್ಥ್ಯದ ಕೊರೊನಾ ಪರೀಕ್ಷೆ ಕೇಂದ್ರವನ್ನು ತೆರೆದಿದ್ದಾರೆ. ವಾಸಿಂ ಜಾಫರ್, ಇರ್ಫಾನ್ ಪಠಾಣ್ ಮತ್ತು ರವಿಚಂದ್ರನ್ ಅಶ್ವಿನ್ ಜನರಿಗೆ ಈ ಸಂದರ್ಭದಲ್ಲಿ ಇತರರಿಗೆ ನೆರವಾಗುವಂತೆ ಮನವಿ ಮಾಡಿದ್ದಾರೆ. ಇವರನ್ನು ಇವರ ಈ ಕಾರ್ಯಕ್ಕಾಗಿ ಶ್ಲಾಘಿಸಬೇಕಿದೆ. ಅಶ್ವಿನ್ ನಮ್ಮ ಕುಟುಂಬ ಕೋವಿಡ್‌ನಿಂದ ಬಳಲುತ್ತಿದ್ದು ಈ ಸಂದರ್ಭದಲ್ಲಿ ನಾನು ಅವರೊಂದಿಗೆ ನಿಲ್ಲಬೇಕು ಎಂದು ಹೇಳಿ ಐಪಿಎಲ್ ತೊರೆದು ಹೊರಟಿದ್ದಾರೆ.


ಇದನ್ನೂ ಓದಿ; ಸಾಂಕ್ರಾಮಿಕ ದುರಂತದ ಸಮಯದಲ್ಲಿ ಐಪಿಎಲ್ ಕವರೇಜ್ ಮಾಡುವುದಿಲ್ಲವೆಂದ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...