Homeಮುಖಪುಟಲಸಿಕೆ ಪ್ರಮಾಣ ಪತ್ರದಲ್ಲಿ ಮೋದಿ ಫೋಟೊ ಪ್ರಶ್ನಿಸಿದ್ದ ಅರ್ಜಿ ವಜಾ; 1 ಲಕ್ಷ ರೂ. ದಂಡ!

ಲಸಿಕೆ ಪ್ರಮಾಣ ಪತ್ರದಲ್ಲಿ ಮೋದಿ ಫೋಟೊ ಪ್ರಶ್ನಿಸಿದ್ದ ಅರ್ಜಿ ವಜಾ; 1 ಲಕ್ಷ ರೂ. ದಂಡ!

- Advertisement -
- Advertisement -

ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿ ಮೋದಿ ಅವರ ಫೋಟೋ ಇರುವುದನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್‌ ವಜಾಗೊಳಿಸಿದೆ. ಮಾತ್ರವಲ್ಲದೆ, ಅರ್ಜಿ ಸಲ್ಲಿಸಿದ್ದವರಿಗೆ ಒಂದು ಲಕ್ಷ ರೂ. ದಂಡವನ್ನೂ ವಿಧಿಸಿದೆ.

ನ್ಯಾಯಮೂರ್ತಿ ಪಿ.ವಿ. ಕುಂಞಿಕೃಷ್ಣನ್ ಅವರಿದ್ದ ಪೀಠವು, ಲಸಿಕಾ ಪ್ರಮಾಣಪತ್ರದಲ್ಲಿ ಮೋದಿ ಚಿತ್ರ ಇರುವುದನ್ನು ಪ್ರಶ್ನಿಸಿರುವುದು ದುರುದ್ದೇಶದಿಂದ ಕೂಡಿರುವ ಅರ್ಜಿಯಾಗಿದೆ. ಇದು ರಾಜಕೀಯ ಅಜೆಂಡಾವನ್ನು ಒಳಗೊಂಡಿದೆ ಎಂಬ ಅನುಮಾನವು ಇದೆ. ಹೀಗಾಗಿ ಅರ್ಜಿಯನ್ನು ವಜಾಗೊಳಿಸಲಾಗುತ್ತದೆ. ಅಲ್ಲದೆ, ಇದು ರಾಜಕೀಯ ಪ್ರೇರಿತವಾಗಿರುವುದರಿಂದ ಭಾರೀ ಮೊತ್ತದ ದಂಡ ವಿಧಿಸಲಾಗುವುದು ಎಂದು ಹೇಳಿದೆ.

ಇದನ್ನೂ ಓದಿ:ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೊ: ಪ್ರಧಾನಿ ಬಗ್ಗೆ ನಾಚಿಕೆ ಏಕೆ? ಕೇರಳ ಹೈಕೋರ್ಟ್ ಪ್ರಶ್ನೆ

ಪ್ರಮಾಣ ಪತ್ರಕ್ಕೆ ಪ್ರಧಾನಮಂತ್ರಿಯವರ ಭಾವಚಿತ್ರವನ್ನು ಸೇರಿಸಿರುವುದು ವ್ಯಕ್ತಿಯ ಖಾಸಗಿತನವನ್ನು ಉಲ್ಲಂಘಿಸಿದಂತಾಗುತ್ತದೆ. “ಪ್ರಮಾಣಪತ್ರವು ಖಾಸಗಿ ದಾಖಲೆ ಆಗಿದ್ದು, ದಾಖಲೆಯಲ್ಲಿ ವೈಯಕ್ತಿಕ ವಿವರಗಳನ್ನು ಹೊಂದಿರುತ್ತದೆ. ಆದ್ದರಿಂದ ವ್ಯಕ್ತಿಯ ಗೌಪ್ಯತೆಗೆ ಒಳನುಗ್ಗುವುದು ಸೂಕ್ತವಲ್ಲ” ಎಂದು ಅರ್ಜಿದಾರರ ಪರ ವಕೀಲರ ಪೀಟರ್ ಮೈಲಿಪರಂಪಿಲ್ ಅವರು ಈ ಹಿಂದೆ ವಾದಿಸಿದ್ದರು.

ಪ್ರಮಾಣಪತ್ರದಲ್ಲಿ ಫೋಟೋ ಇದ್ದರೆ ಮತದಾರರ ಮನಸ್ಸಿನ ಮೇಲೂ ಪ್ರಭಾವ ಬೀರುತ್ತದೆ. ಇತ್ತೀಚಿನ ರಾಜ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಲಾಗಿದೆ ಎಂದೂ ಅವರು ಹೇಳಿದ್ದರು.

ಇದಕ್ಕೆ ಈ ಹಿಂದೆ ಪ್ರತಿಕ್ರಿಯಿಸಿದ್ದ ಕೋರ್ಟ್‌, “ನೀವು (ಅರ್ಜಿದಾರರು) ಪ್ರಧಾನ ಮಂತ್ರಿಯ ಬಗ್ಗೆ ಯಾಕೆ ನಾಚಿಕೆಪಡುತ್ತೀರಿ? ಅವರು ಜನರ ಆದೇಶದ ಮೂಲಕ ಅಧಿಕಾರಕ್ಕೆ ಬಂದಿದ್ದಾರೆ…ನಾವು ವಿಭಿನ್ನ ರಾಜಕೀಯ ದೃಷ್ಟಿಕೋನಗಳನ್ನು ಹೊಂದಿರಬಹುದು, ಆದರೆ ಅವರು ನಮ್ಮ ಪ್ರಧಾನಿ” ಎಂದು ಹೇಳಿತ್ತು.

ಇದನ್ನೂ ಓದಿ:ಲಸಿಕೆ ಸರ್ಟಿಫಿಕೇಟ್‌ನಲ್ಲಿ ಮೋದಿ ಫೋಟೋ ತೆಗೆಯಿರಿ ಎಂದು ಕೇಳುವುದು ಅಪಾಯಕಾರಿ: ಕೇರಳ ಹೈಕೋರ್ಟ್

ಮಾತ್ರವಲ್ಲದೆ, ದೇಶದ 100 ಕೋಟಿಗೂ ಹೆಚ್ಚು ಜನರಿಗೆ ಲಸಿಕೆ ಪ್ರಮಾಣ ಪತ್ರದಲ್ಲಿ ಪ್ರಧಾನಿಯವರ ಫೋಟೊ ಇರುವುದರಿಂದ ತೊಂದರೆಯಾಗಿಲ್ಲ. ‘ನಿಮಗೇಕೆ ತೊಂದರೆ?’ ಎಂದು ಕೇಳಿತ್ತು. ಅರ್ಜಿಗೆ ಯಾವುದೇ ಅರ್ಹತೆ ಇದೆಯೇ ಎಂಬುದನ್ನು ಪರಿಶೀಲಿಸಲಾಗುವುದು. ಇಲ್ಲವೆಂದಾದರೆ, ಅರ್ಜಿಯನ್ನು ವಿಲೇವಾರಿ ಮಾಡಲಾಗುವುದು ಎಂದೂ ಹೇಳಿತ್ತು.

ಇದೀಗ, ಅರ್ಜಿಯ ಪರಿಶೀಲನೆ ನಡೆಸಿರುವ ಕೋರ್ಟ್‌, ನೀವು ನ್ಯಾಯಾಂಗದ ಸಮಯ ಹಾಳು ಮಾಡುತ್ತಿದ್ದೀರಿ ಎಂದು ಅರ್ಜಿಯನ್ನು ವಜಾಗೊಳಿಸಿದ್ದು, ಒಂದು ಲಕ್ಷ ರೂ. ದಂಡ ವಿಧಿಸಿದೆ.

ಇದನ್ನೂ ಓದಿ:ಲಕ್ಷದ್ವೀಪ: ಆಡಳಿತಾಧಿಕಾರಿಯ 2 ವಿವಾದಾತ್ಮಕ ಆದೇಶಗಳಿಗೆ ಕೇರಳ ಹೈಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಲಸಿಕೆ ಪಡೆದವರ ಫೋಟೋ ಏಕೆ ಹಾಕಬಾರದು ಲಸಿಕೆಯನ್ನು ಪಾರ್ಟಿಫಂಡಿನಿಂದ ಕೊಟ್ಟಿಲ್ಲದಿರುವಾಗ ಪ್ರಚಾರವೇಕೆ ಜನರ ಐಡೆಂಡಿ ಮಾಡಿದರೆ ತಪ್ಪೇನಿದೆ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...