Homeಮುಖಪುಟಲಸಿಕೆ ಪ್ರಮಾಣ ಪತ್ರದಲ್ಲಿ ಮೋದಿ ಫೋಟೊ ಪ್ರಶ್ನಿಸಿದ್ದ ಅರ್ಜಿ ವಜಾ; 1 ಲಕ್ಷ ರೂ. ದಂಡ!

ಲಸಿಕೆ ಪ್ರಮಾಣ ಪತ್ರದಲ್ಲಿ ಮೋದಿ ಫೋಟೊ ಪ್ರಶ್ನಿಸಿದ್ದ ಅರ್ಜಿ ವಜಾ; 1 ಲಕ್ಷ ರೂ. ದಂಡ!

- Advertisement -
- Advertisement -

ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿ ಮೋದಿ ಅವರ ಫೋಟೋ ಇರುವುದನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್‌ ವಜಾಗೊಳಿಸಿದೆ. ಮಾತ್ರವಲ್ಲದೆ, ಅರ್ಜಿ ಸಲ್ಲಿಸಿದ್ದವರಿಗೆ ಒಂದು ಲಕ್ಷ ರೂ. ದಂಡವನ್ನೂ ವಿಧಿಸಿದೆ.

ನ್ಯಾಯಮೂರ್ತಿ ಪಿ.ವಿ. ಕುಂಞಿಕೃಷ್ಣನ್ ಅವರಿದ್ದ ಪೀಠವು, ಲಸಿಕಾ ಪ್ರಮಾಣಪತ್ರದಲ್ಲಿ ಮೋದಿ ಚಿತ್ರ ಇರುವುದನ್ನು ಪ್ರಶ್ನಿಸಿರುವುದು ದುರುದ್ದೇಶದಿಂದ ಕೂಡಿರುವ ಅರ್ಜಿಯಾಗಿದೆ. ಇದು ರಾಜಕೀಯ ಅಜೆಂಡಾವನ್ನು ಒಳಗೊಂಡಿದೆ ಎಂಬ ಅನುಮಾನವು ಇದೆ. ಹೀಗಾಗಿ ಅರ್ಜಿಯನ್ನು ವಜಾಗೊಳಿಸಲಾಗುತ್ತದೆ. ಅಲ್ಲದೆ, ಇದು ರಾಜಕೀಯ ಪ್ರೇರಿತವಾಗಿರುವುದರಿಂದ ಭಾರೀ ಮೊತ್ತದ ದಂಡ ವಿಧಿಸಲಾಗುವುದು ಎಂದು ಹೇಳಿದೆ.

ಇದನ್ನೂ ಓದಿ:ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೊ: ಪ್ರಧಾನಿ ಬಗ್ಗೆ ನಾಚಿಕೆ ಏಕೆ? ಕೇರಳ ಹೈಕೋರ್ಟ್ ಪ್ರಶ್ನೆ

ಪ್ರಮಾಣ ಪತ್ರಕ್ಕೆ ಪ್ರಧಾನಮಂತ್ರಿಯವರ ಭಾವಚಿತ್ರವನ್ನು ಸೇರಿಸಿರುವುದು ವ್ಯಕ್ತಿಯ ಖಾಸಗಿತನವನ್ನು ಉಲ್ಲಂಘಿಸಿದಂತಾಗುತ್ತದೆ. “ಪ್ರಮಾಣಪತ್ರವು ಖಾಸಗಿ ದಾಖಲೆ ಆಗಿದ್ದು, ದಾಖಲೆಯಲ್ಲಿ ವೈಯಕ್ತಿಕ ವಿವರಗಳನ್ನು ಹೊಂದಿರುತ್ತದೆ. ಆದ್ದರಿಂದ ವ್ಯಕ್ತಿಯ ಗೌಪ್ಯತೆಗೆ ಒಳನುಗ್ಗುವುದು ಸೂಕ್ತವಲ್ಲ” ಎಂದು ಅರ್ಜಿದಾರರ ಪರ ವಕೀಲರ ಪೀಟರ್ ಮೈಲಿಪರಂಪಿಲ್ ಅವರು ಈ ಹಿಂದೆ ವಾದಿಸಿದ್ದರು.

ಪ್ರಮಾಣಪತ್ರದಲ್ಲಿ ಫೋಟೋ ಇದ್ದರೆ ಮತದಾರರ ಮನಸ್ಸಿನ ಮೇಲೂ ಪ್ರಭಾವ ಬೀರುತ್ತದೆ. ಇತ್ತೀಚಿನ ರಾಜ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಲಾಗಿದೆ ಎಂದೂ ಅವರು ಹೇಳಿದ್ದರು.

ಇದಕ್ಕೆ ಈ ಹಿಂದೆ ಪ್ರತಿಕ್ರಿಯಿಸಿದ್ದ ಕೋರ್ಟ್‌, “ನೀವು (ಅರ್ಜಿದಾರರು) ಪ್ರಧಾನ ಮಂತ್ರಿಯ ಬಗ್ಗೆ ಯಾಕೆ ನಾಚಿಕೆಪಡುತ್ತೀರಿ? ಅವರು ಜನರ ಆದೇಶದ ಮೂಲಕ ಅಧಿಕಾರಕ್ಕೆ ಬಂದಿದ್ದಾರೆ…ನಾವು ವಿಭಿನ್ನ ರಾಜಕೀಯ ದೃಷ್ಟಿಕೋನಗಳನ್ನು ಹೊಂದಿರಬಹುದು, ಆದರೆ ಅವರು ನಮ್ಮ ಪ್ರಧಾನಿ” ಎಂದು ಹೇಳಿತ್ತು.

ಇದನ್ನೂ ಓದಿ:ಲಸಿಕೆ ಸರ್ಟಿಫಿಕೇಟ್‌ನಲ್ಲಿ ಮೋದಿ ಫೋಟೋ ತೆಗೆಯಿರಿ ಎಂದು ಕೇಳುವುದು ಅಪಾಯಕಾರಿ: ಕೇರಳ ಹೈಕೋರ್ಟ್

ಮಾತ್ರವಲ್ಲದೆ, ದೇಶದ 100 ಕೋಟಿಗೂ ಹೆಚ್ಚು ಜನರಿಗೆ ಲಸಿಕೆ ಪ್ರಮಾಣ ಪತ್ರದಲ್ಲಿ ಪ್ರಧಾನಿಯವರ ಫೋಟೊ ಇರುವುದರಿಂದ ತೊಂದರೆಯಾಗಿಲ್ಲ. ‘ನಿಮಗೇಕೆ ತೊಂದರೆ?’ ಎಂದು ಕೇಳಿತ್ತು. ಅರ್ಜಿಗೆ ಯಾವುದೇ ಅರ್ಹತೆ ಇದೆಯೇ ಎಂಬುದನ್ನು ಪರಿಶೀಲಿಸಲಾಗುವುದು. ಇಲ್ಲವೆಂದಾದರೆ, ಅರ್ಜಿಯನ್ನು ವಿಲೇವಾರಿ ಮಾಡಲಾಗುವುದು ಎಂದೂ ಹೇಳಿತ್ತು.

ಇದೀಗ, ಅರ್ಜಿಯ ಪರಿಶೀಲನೆ ನಡೆಸಿರುವ ಕೋರ್ಟ್‌, ನೀವು ನ್ಯಾಯಾಂಗದ ಸಮಯ ಹಾಳು ಮಾಡುತ್ತಿದ್ದೀರಿ ಎಂದು ಅರ್ಜಿಯನ್ನು ವಜಾಗೊಳಿಸಿದ್ದು, ಒಂದು ಲಕ್ಷ ರೂ. ದಂಡ ವಿಧಿಸಿದೆ.

ಇದನ್ನೂ ಓದಿ:ಲಕ್ಷದ್ವೀಪ: ಆಡಳಿತಾಧಿಕಾರಿಯ 2 ವಿವಾದಾತ್ಮಕ ಆದೇಶಗಳಿಗೆ ಕೇರಳ ಹೈಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಲಸಿಕೆ ಪಡೆದವರ ಫೋಟೋ ಏಕೆ ಹಾಕಬಾರದು ಲಸಿಕೆಯನ್ನು ಪಾರ್ಟಿಫಂಡಿನಿಂದ ಕೊಟ್ಟಿಲ್ಲದಿರುವಾಗ ಪ್ರಚಾರವೇಕೆ ಜನರ ಐಡೆಂಡಿ ಮಾಡಿದರೆ ತಪ್ಪೇನಿದೆ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...