Homeಕರ್ನಾಟಕಸಂಘಪರಿವಾರ ಅಡ್ಡಿಪಡಿಸಿದ ‘ಜೊತೆಗಿರುವನು ಚಂದಿರ’ ನಾಟಕ ಕೈದಿಗಳ ಬಾಳಿಗೆ ಬೆಳಕಾಗಿದ್ದು ಹೀಗೆ...

ಸಂಘಪರಿವಾರ ಅಡ್ಡಿಪಡಿಸಿದ ‘ಜೊತೆಗಿರುವನು ಚಂದಿರ’ ನಾಟಕ ಕೈದಿಗಳ ಬಾಳಿಗೆ ಬೆಳಕಾಗಿದ್ದು ಹೀಗೆ…

ಜಯಂತ್ ಕಾಯ್ಕಿಣಿಯವರ ‘ಜೊತೆಗಿರುವನು ಚಂದಿರ’ ನಾಟಕ ಪ್ರದರ್ಶನಕ್ಕೆ ಸಂಘಪರಿವಾರದವರು ಅಡ್ಡಿಪಡಿಸಿ ವಿವಾದ ಎಬ್ಬಿಸಿದ್ದಾರೆ. ಆದರೆ ಈ ನಾಟಕ ಅನೇಕ ಕೈದಿಗಳ ಮನ ಪರಿವರ್ತನೆಗೆ ಕಾರಣವಾಗಿತ್ತು... (ಮುಂದೆ ಓದಿರಿ)

- Advertisement -
- Advertisement -

ಚಾಮರಾಜನಗರ ಜಿಲ್ಲೆಯ ನಂಜುಂಡಸ್ವಾಮಿ ಕೆರೆಹಳ್ಳಿಯವರು ಒಂದು ಕಾಲಕ್ಕೆ ‘ಮೂರೂವರೆ’ ಮರ್ಡರ್‌ ಎಂದೇ ಕುಖ್ಯಾತಿ ಪಡೆದವರು. ಅತ್ತೆ, ಭಾವ, ಭಾಮೈದ, ಹೆಂಡತಿ ವಿಚಾರವಾಗಿ ಗಲಾಟೆ ನಡೆದು, ತನಗೆ ಹೊಡೆಯಲು ಬಂದವನಿಂದ ಮಚ್ಚು ಕಿತ್ತುಕೊಂಡು ನಂಜುಂಡಸ್ವಾಮಿ ಪ್ರತಿದಾಳಿ ನಡೆಸಿದಾಗ ಅತಾಚುರ್ಯ ನಡೆದೇ ಬಿಟ್ಟಿತ್ತು. ‘ಮೂರೂವರೆ ಮರ್ಡರ್‌’ ಎಂಬ ಅಪಖ್ಯಾತಿ ಅವರ ತಲೆಗೆ ಕಟ್ಟಿತು. ಹೀಗೆ ಜೈಲು ಸೇರಿದ ನಂಜುಂಡಸ್ವಾಮಿ ಸನ್ನಡತೆಯ ಆಧಾರದಲ್ಲಿ ಹೊರಗಡೆ ಬಂದಾಗ ಮಾತ್ರ ಸಂಪೂರ್ಣ ಬದಲಾಗಿದ್ದರು. ರಂಗಭೂಮಿ ಹಾಗೂ ಟೆರ್‍ರಾಕೋಟ ಕಲಾಕೃತಿಗಳ ಕಲಾವಿದರಾಗಿ ಹೊಮ್ಮಿದ್ದರು.

ರಂಗಭೂಮಿ ಮೂಲಕ ಅನೇಕ ಕೈದಿಗಳ ಮನಪರಿವರ್ತನೆ ಮಾಡಿದ ಹೆಗ್ಗಳಿಕೆ ಮೈಸೂರು ರಂಗಾಯಣದ ಹಿರಿಯ ಕಲಾವಿದ ಹುಲುಗಪ್ಪ ಕಟ್ಟೀಮನಿಯವರಿಗೆ ಸಲ್ಲುತ್ತದೆ. 1999ರಿಂದ 2017ರವರೆಗೆ ಸುಮಾರು ಹದಿನೇಳು ವರ್ಷಗಳ ಕಾಲ ಮೈಸೂರು ಕೇಂದ್ರ ಕಾರಾಗೃಹದಲ್ಲಿ ಜೈಲು ಶಿಕ್ಷೆ ಅನುಭವಿಸಿದ್ದ ನಂಜುಂಡಸ್ವಾಮಿ, ಸನ್ನಡತೆಯ ಆಧಾರದಲ್ಲಿ ಹೊರಬಂದಿದ್ದರ ಹಿಂದೆ ರಂಗಭೂಮಿ ಎಂಬ ದಾರಿದೀಪ, ಹುಲುಗಪ್ಪ ಕಟ್ಟೀಮನಿ ಎಂಬ ಮಹಾನ್‌ ಗುರು ಇದ್ದರು. ಹಲವಾರು ನಾಟಕಗಳನ್ನು ಕೈದಿಗಳಿಗೆ ಕಲಿಸಿದ್ದ ಹುಲುಗಪ್ಪ ಅವರು, ಈಗ ವಿವಾದದ ಕೇಂದ್ರ ಬಿಂದುವಾಗಿರುವ ‘ಜೊತೆಗಿರುವನು ಚಂದಿರ’ ನಾಟಕವನ್ನೂ ಕೈದಿಗಳಿಂದ ಪ್ರದರ್ಶನ ಮಾಡಿಸಿ ಯಶಸ್ಸಿಯಾಗಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೂರೂವರೆ ಮರ್ಡರ್‌ ಎಂದೇ ಕುಖ್ಯಾತಿ ಪಡೆದಿದ್ದ ನಂಜುಂಡಸ್ವಾಮಿ ಕೆರೆಹಳ್ಳಿ ಅವರು ರಂಗಭೂಮಿ ಹಾಗೂ ಟೆರ್‍ರಾಕೋಟ ಕಲಾಕೃತಿಯ ಕಲಾವಿದರಾಗಿ ಹೊರಹೊಮ್ಮಿ ಜೈಲಿನಿಂದ ಹೊರಬಂದಿದ್ದಾರೆ.

ಜೋಸೆಫ್‌ ಸ್ಟೀನ್‌ ಅವರ ‘ಪಿಡ್ಲರ್‌ ಆನ್‌ ದಿ ರೂಫ್‌’ ನಾಟಕವನ್ನು ಸಾಹಿತಿ, ಕಥೆಗಾರ ಜಯಂತ ಕಾಯ್ಕಿಣಿ ಅವರು ಕನ್ನಡಕ್ಕೆ ‘ಜೊತೆಗಿರುವನು ಚಂದಿರ’ ಎಂಬ ಹೆಸರಲ್ಲಿ ರೂಪಾಂತರ ಮಾಡಿದ್ದಾರೆ. ಆ ನಾಟಕ ಹಲವು ವರ್ಷಗಳಿಂದ ರಂಗಪ್ರದರ್ಶನಗೊಳ್ಳುತ್ತಲೇ ಇದೆ. ಕಳೆದ ಭಾನುವಾರ ಶಿವಮೊಗ್ಗದ ರಂಗಬೆಳಕು ತಂಡವು ಆನವಟ್ಟಿಯಲ್ಲಿ ಈ ನಾಟಕದ ಪ್ರದರ್ಶನ ಹಮ್ಮಿಕೊಂಡಿತ್ತು. ಈ ವೇಳೆ ಆರ್‌ಎಸ್‌ಎಸ್‌ ಮತ್ತು ಬಜರಂಗದಳದ ಮುಖಂಡರು (ಸಂಘ ಪರಿವಾರದ ಫ್ರಿಂಜ್‌ ಎಲಿಮೆಂಟ್‌ಗಳು) ಬಂದು ಗಲಾಟೆ ಮಾಡಿ ನಾಟಕವನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ. “ದೇಶದಲ್ಲಿ ಹಿಂದೂ- ಮುಸ್ಲಿಂ ಗಲಾಟೆ ನಡೆಯುತ್ತಿರುವಾಗ ಮುಸ್ಲಿಮರೇ ಪ್ರಧಾನವಾಗಿರುವ ಕಥಾವಸ್ತು ಇಟ್ಟುಕೊಂಡು ನಾಟಕ ಮಾಡಿರುವುದು ಬೇಸರದ ಸಂಗತಿ” ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯಾವುದನ್ನೂ ಇವರು ಆಕ್ಷೇಪಾರ್ಹ ನಾಟಕ ಎನ್ನುತ್ತಿದ್ದಾರೋ ಅದೇ ನಾಟಕ ಅನೇಕ ಕೈದಿಗಳ ಬದುಕಿನಲ್ಲಿ ಬೆಳಕಾಗಿದೆ. ಹೊಸ ದಿಕ್ಕನ್ನು ತೋರಿದೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಕಲಾವಿದ ನಂಜುಂಡಸ್ವಾಮಿ ಕೆರೆಹಳ್ಳಿ,  “ರಂಗಭೂಮಿ ನನ್ನ ಬದುಕಿನಲ್ಲಿ ತಂದ ಬದಲಾವಣೆಯನ್ನು ನಾನೆಂದೂ ಮರೆಯುವುದಿಲ್ಲ. ಜೊತೆಗಿರುವನು ಚಂದಿರ ನಾಟಕದ- ಕಾಣದಿರದ ಹಾದಿಗಳಲಿ, ದೀಪವಿರದ ರಾತ್ರಿಗಳಲಿ, ಚಂದಿರ ನಮ್ಮ ಕೈಬಿಡದಿರಲಿ- ಹಾಡನ್ನು ಕೇಳುತ್ತಿದ್ದರೆ ನಾವು ಅತ್ತುಬಿಡುತ್ತಿದ್ದೆವು. ಕಿಡಿಗೇಡಿಗಳು ಈ ನಾಟಕದ ಬಗ್ಗೆ ಏನೋ ಹೇಳಿಬಿಡಬಹುದು. ಈ ನಾಟಕದ ಸಾಲುಗಳೇನು? ಆ ಮಾತಿನ ಅರ್ಥಗಳೇನು? ಎಂಬುದನ್ನು ತಿಳಿಯಬೇಕು. ಜಯಂತ ಕಾಯ್ಕಿಣಿಯವರು ಬರೆದಿರುವ ಮಾತುಗಳಂತೂ ಅದ್ಭುತವಾಗಿವೆ. ಹೊರ ಜಿಲ್ಲೆ, ಹೊರ ರಾಜ್ಯಗಳಿಗೆ ಹೋಗಿ ನಾಟಕ ಮಾಡಿದ್ದೆವು. ಕಾಯ್ಕಿಣಿಯವರೂ ಈ ನಾಟಕವನ್ನು ನೋಡಲು ಬಂದು ನಮ್ಮನ್ನು ಪ್ರೋತ್ಸಾಹಿಸಿದ್ದರು” ಎಂದು ನೆನೆದರು.

ಮಾಜಿ ಕೈದಿ ನಂಜುಂಡಸ್ವಾಮಿ

ವೀರಪ್ಪನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು ಇಪ್ಪತ್ತು ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದವರು ಅಂಬುರಾಜ್‌. ‘ಮಾಜಿ ಜೀವಾವಧಿ ಕೈದಿ’ಯಾಗಿರುವ ಅವರು, ‘ರಂಗಭೂಮಿಯ ಸ್ಪರ್ಶ ಸಿಗದಿದ್ದರೆ ನಾನು ಟೆರರಿಸ್ಟ್‌ ಆಗುತ್ತಿದ್ದೆ’ ಎಂದು ಭಾವುಕವಾಗಿ ನುಡಿಯುತ್ತಾರೆ.

“ಯಾವುದೇ ಧರ್ಮದವರಾದರೂ ಈ ದೇಶದ ಮಣ್ಣಿನ ಬಗ್ಗೆ ಇರುವ ವಿಶ್ವಾಸವನ್ನು ತೋರಿಸುವ ನಾಟಕ- ಜೊತೆಗಿರುವನು ಚಂದಿರ. ಕೋಮು ಆಧಾರದಲ್ಲಿ ದೇಶ ವಿಭಜನೆಯಾದಾಗ ಸಾಮಾನ್ಯರ ಭಾವನೆಗಳು ಹೇಗಿದ್ದವು, ಈ ಮಣ್ಣಿನ ಬಗ್ಗೆ ಇರುವ ಪ್ರೀತಿ ಎಂಥದ್ದು ಎಂಬುದನ್ನು ಬಹಳ ಭಾವನಾತ್ಮಕವಾಗಿ ಕಟ್ಟಿಕೊಟ್ಟ ನಾಟಕವಿದು. ಇದು ಧರ್ಮಕ್ಕಿಂತ ಮನಸ್ಸುಗಳ ವಿಚಾರವನ್ನು ತೆರೆದಿಡುವ ನಾಟಕ” ಎನ್ನುತ್ತಾರೆ ಅಂಬುರಾಜ್.

ಮಾಜಿ ಜೀವಾವಧಿ ಕೈದಿ ಅಂಬುರಾಜ್‌

“ನಾಟಕದ ಮುಖ್ಯ ಪಾತ್ರವಾದ ಬಡೇಮಿಯನ ಮಗಳು ಹಿಂದೂ ಹುಡುಗನನ್ನು ಕರೆದುಕೊಂಡು ಹೋಗಿಬಿಡುತ್ತಾಳೆ. ಹಿಂದೂ ಮುಸ್ಲಿಂ ಮದುವೆಯಾಗುತ್ತಾರೆ. ಇದೇ ಭಾರತದ ಸಂಸ್ಕೃತಿ ಎಂದು ಹೇಳುವ ನಾಟಕವಿದು. ಕೋಮು ದೃಷ್ಟಿಕೋನ ಇಟ್ಟುಕೊಂಡು ಸಮಾಜವನ್ನು ನೋಡಿದರೆ, ಎಲ್ಲವೂ ಕೇಸರಿಯಾಗಿಯೇ ಕಾಣುತ್ತದೆ” ಎಂದು ವಿಷಾದಿಸಿದರು.

“ನನಗೆ ರಂಗಭೂಮಿಯ ನಂಟು ಸಿಗದೇ ಹೋಗಿದ್ದರೆ, ಕಟ್ಟೀಮನಿ ಥರದ ವ್ಯಕ್ತಿಗಳು ಪರಿಚಯವಾಗದೇ ಹೋಗಿದ್ದರೆ ನಾನು ಜೈಲಲ್ಲಿ ದೊಡ್ಡ ಟೆರರಿಸ್ಟ್‌ ಆಗ್ತಾ ಇದ್ದೆ. ನನ್ನ ಬದುಕನ್ನು ಸುಧಾರಿಸಿದ್ದು ರಂಗಭೂಮಿ. ವೀರಪ್ಪನ್‌ ಕೇಸ್‌ ಕಾರಣಕ್ಕೆ ನನಗೆ ಚಿತ್ರಹಿಂಸೆಯನ್ನೂ ನೀಡಿದರು. ಹೀಗಾಗಿ ಅಧಿಕಾರಿಗಳ ಮೇಲೆ, ಸಮಾಜದ ಮೇಲೆ ನನಗೆ ಸಿಟ್ಟಿತ್ತು. ಅದೆಲ್ಲವೂ ಕರಗಿಹೋಗಿ, ನನ್ನನ್ನು ಮನುಷ್ಯನನ್ನಾಗಿ ಮಾಡಿದ್ದು ರಂಗಭೂಮಿ” ಎಂದರು.

ರಂಗಕರ್ಮಿ, ಕೈದಿಗಳಿಗೆ ನಾಟಕಗಳನ್ನು ಕಲಿಸಿದ ಗುರು ಹುಲುಗಪ್ಪ ಕಟ್ಟೀಮನಿ

“ಜೊತೆಗಿರುವನು ಚಂದಿರ – ಮಾನವ ಮೌಲ್ಯಗಳನ್ನು ಬೆಳೆಸುವಂತಹ ನಾಟಕ. ಜೈಲಿನಲ್ಲಿ ಹಿಂದೂ ಮುಸ್ಲಿಂ ಹಬ್ಬಗಳನ್ನು ಒಟ್ಟಾಗಿ ಕೈದಿಗಳು ಆಚರಿಸುತ್ತಾರೆ. ಈ ನಾಟಕ ಹಿಂದೂ- ಮುಸ್ಲಿಂ ನಡುವೆ ಭೇದ ತರುವಂತಿದ್ದರೆ ಕೈದಿಗಳು ಈ ನಾಟಕವನ್ನು ಮಾಡಲು ಸಾಧ್ಯವಾಗುತ್ತಿತ್ತೇ?” ಎಂದು ಪ್ರಶ್ನಿಸಿದರು.

‘ಜೊತೆಗಿರುವನು ಚಂದಿರ’ ನಾಟಕದಲ್ಲಿ ಬಡೇಮಿಯ ಪಾತ್ರದಲ್ಲಿ ಅಭಿನಯಿಸಿದ್ದ ರಮೇಶ್‌ ಆಡುವಳ್ಳಿ ಅವರು ಸುಮಾರು ಹದಿನೈದು ವರ್ಷಗಳ ಕಾಲ ಜೈಲಿನಲ್ಲಿದ್ದವರು. ರಾಜಕೀಯ ಪ್ರಕರಣವೊಂದರಲ್ಲಿ ನನ್ನ ಹೆಸರು ಸಿಕ್ಕಿಕೊಂಡಿತು. ತಪ್ಪು ಮಾಡದೆಯೇ ಶಿಕ್ಷೆ ಅನುಭವಿಸಿದೆ ಎನ್ನುವ ರಮೇಶ್ ಅವರು, ಕಟ್ಟೀಮನಿಯವರ ತಂಡದೊಂದಿಗೆ ಕೆಲಸ ಮಾಡಿದವರು. “‘ತಲೆದಂಡ’ ನಾಟಕದಲ್ಲಿ ಬಸವಣ್ಣ ಪಾತ್ರದಲ್ಲಿ, ‘ಕಸ್ತೂರಬಾ ಗಾಂಧಿ’ ನಾಟಕದಲ್ಲಿ ಗಾಂಧಿಯಾಗಿ ಅಭಿನಯಿಸಿದ್ದಾರೆ. ‘ಮಾಧವಿ’ ನಾಟಕದಲ್ಲಿ ‘ಗಾಲವ’ನಾಗಿ ಅಭಿನಯಿಸಿದ್ದೇನೆ. ನನಗೆ ತುಂಬಾ ಇಷ್ಟವಾದ ನಾಟಕವೆಂದರೆ ಜಯಂತ್‌ ಕಾಯ್ಕಿಣಿಯವರು ಬರೆದ- ಜೊತೆಗಿರುವನು ಚಂದಿರ ನಾಟಕ. ಅದ್ಭುತವಾದ ಕಥೆ ಇದು. ಇದನ್ನು ನೋಡಿದವರು ಹಿಂದೂ- ಮುಸ್ಲಿಂ ವಿವಾದವನ್ನು ಮಾಡಲೇಬಾರದು” ಎಂದು ಅಭಿಪ್ರಾಯಪಟ್ಟರು.

‘ಕಸ್ತೂರ ಬಾ ಗಾಂಧಿ ನಾಟಕ’ದಲ್ಲಿ ಗಾಂಧಿ ಪಾತ್ರದಲ್ಲಿ ರಮೇಶ್‌ ಆಡುವಳ್ಳಿ ಅಭಿನಯಿಸಿದ್ದರು.

“ಕೈದಿಗಳ ಮೇಲೆ ತಪ್ಪು ಅಭಿಪ್ರಾಯ ಹೊಂದಿದ್ದ ಕಾರಾಗೃಹ ಇಲಾಖೆಯ ಮೇಲಧಿಕಾರಿಗಳೇ ನಮ್ಮ ನಾಟಕ ನೋಡಿ ಅಚ್ಚರಿ ಪಟ್ಟರು. ನಮ್ಮ ನಾಟಕ ನೋಡಿ ಅಧಿಕಾರಿಗಳ ಮನಸ್ಸೇ ಪರಿವರ್ತನೆಯಾಗಿತ್ತು” ಎಂದು ತಿಳಿಸಿದರು.

ಇದನ್ನೂ ಓದಿರಿ: ಮುಸ್ಲಿಂ ಪ್ರಧಾನ ಕಥೆ ಹೊಂದಿದೆ ಎಂದು ನಾಟಕಕ್ಕೆ ಅಡ್ಡಿಪಡಿಸಿದ RSS-ಬಜರಂಗದಳದ ದುಷ್ಕರ್ಮಿಗಳು

ರಂಗಕರ್ಮಿ ಹುಲುಗಪ್ಪ ಕಟ್ಟೀಮನಿಯವರನ್ನು ಈ ಕುರಿತು ಮಾತನಾಡಿಸಲು ‘ನಾನುಗೌರಿ.ಕಾಂ’ ತಂಡ ಪ್ರಯತ್ನಿಸಿತು. ನಾಟಕದ ಹೆಸರು ಹಾಗೂ ವಿವಾದದ ಕುರಿತು ಕೇಳಿದ ತಕ್ಷಣ ಕಟ್ಟೀಮನಿಯವರು ಭಾವುಕರಾದರು. “ನನ್ನದೇ ಭಾವನೆಗಳನ್ನು ಹಂಚಿಕೊಳ್ಳುತ್ತೇನೆ, ಈ ಕುರಿತು ಬರೆಯುತ್ತೇನೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...