Homeಕರ್ನಾಟಕಸಂಘಪರಿವಾರ ಅಡ್ಡಿಪಡಿಸಿದ ‘ಜೊತೆಗಿರುವನು ಚಂದಿರ’ ನಾಟಕ ಕೈದಿಗಳ ಬಾಳಿಗೆ ಬೆಳಕಾಗಿದ್ದು ಹೀಗೆ...

ಸಂಘಪರಿವಾರ ಅಡ್ಡಿಪಡಿಸಿದ ‘ಜೊತೆಗಿರುವನು ಚಂದಿರ’ ನಾಟಕ ಕೈದಿಗಳ ಬಾಳಿಗೆ ಬೆಳಕಾಗಿದ್ದು ಹೀಗೆ…

ಜಯಂತ್ ಕಾಯ್ಕಿಣಿಯವರ ‘ಜೊತೆಗಿರುವನು ಚಂದಿರ’ ನಾಟಕ ಪ್ರದರ್ಶನಕ್ಕೆ ಸಂಘಪರಿವಾರದವರು ಅಡ್ಡಿಪಡಿಸಿ ವಿವಾದ ಎಬ್ಬಿಸಿದ್ದಾರೆ. ಆದರೆ ಈ ನಾಟಕ ಅನೇಕ ಕೈದಿಗಳ ಮನ ಪರಿವರ್ತನೆಗೆ ಕಾರಣವಾಗಿತ್ತು... (ಮುಂದೆ ಓದಿರಿ)

- Advertisement -
- Advertisement -

ಚಾಮರಾಜನಗರ ಜಿಲ್ಲೆಯ ನಂಜುಂಡಸ್ವಾಮಿ ಕೆರೆಹಳ್ಳಿಯವರು ಒಂದು ಕಾಲಕ್ಕೆ ‘ಮೂರೂವರೆ’ ಮರ್ಡರ್‌ ಎಂದೇ ಕುಖ್ಯಾತಿ ಪಡೆದವರು. ಅತ್ತೆ, ಭಾವ, ಭಾಮೈದ, ಹೆಂಡತಿ ವಿಚಾರವಾಗಿ ಗಲಾಟೆ ನಡೆದು, ತನಗೆ ಹೊಡೆಯಲು ಬಂದವನಿಂದ ಮಚ್ಚು ಕಿತ್ತುಕೊಂಡು ನಂಜುಂಡಸ್ವಾಮಿ ಪ್ರತಿದಾಳಿ ನಡೆಸಿದಾಗ ಅತಾಚುರ್ಯ ನಡೆದೇ ಬಿಟ್ಟಿತ್ತು. ‘ಮೂರೂವರೆ ಮರ್ಡರ್‌’ ಎಂಬ ಅಪಖ್ಯಾತಿ ಅವರ ತಲೆಗೆ ಕಟ್ಟಿತು. ಹೀಗೆ ಜೈಲು ಸೇರಿದ ನಂಜುಂಡಸ್ವಾಮಿ ಸನ್ನಡತೆಯ ಆಧಾರದಲ್ಲಿ ಹೊರಗಡೆ ಬಂದಾಗ ಮಾತ್ರ ಸಂಪೂರ್ಣ ಬದಲಾಗಿದ್ದರು. ರಂಗಭೂಮಿ ಹಾಗೂ ಟೆರ್‍ರಾಕೋಟ ಕಲಾಕೃತಿಗಳ ಕಲಾವಿದರಾಗಿ ಹೊಮ್ಮಿದ್ದರು.

ರಂಗಭೂಮಿ ಮೂಲಕ ಅನೇಕ ಕೈದಿಗಳ ಮನಪರಿವರ್ತನೆ ಮಾಡಿದ ಹೆಗ್ಗಳಿಕೆ ಮೈಸೂರು ರಂಗಾಯಣದ ಹಿರಿಯ ಕಲಾವಿದ ಹುಲುಗಪ್ಪ ಕಟ್ಟೀಮನಿಯವರಿಗೆ ಸಲ್ಲುತ್ತದೆ. 1999ರಿಂದ 2017ರವರೆಗೆ ಸುಮಾರು ಹದಿನೇಳು ವರ್ಷಗಳ ಕಾಲ ಮೈಸೂರು ಕೇಂದ್ರ ಕಾರಾಗೃಹದಲ್ಲಿ ಜೈಲು ಶಿಕ್ಷೆ ಅನುಭವಿಸಿದ್ದ ನಂಜುಂಡಸ್ವಾಮಿ, ಸನ್ನಡತೆಯ ಆಧಾರದಲ್ಲಿ ಹೊರಬಂದಿದ್ದರ ಹಿಂದೆ ರಂಗಭೂಮಿ ಎಂಬ ದಾರಿದೀಪ, ಹುಲುಗಪ್ಪ ಕಟ್ಟೀಮನಿ ಎಂಬ ಮಹಾನ್‌ ಗುರು ಇದ್ದರು. ಹಲವಾರು ನಾಟಕಗಳನ್ನು ಕೈದಿಗಳಿಗೆ ಕಲಿಸಿದ್ದ ಹುಲುಗಪ್ಪ ಅವರು, ಈಗ ವಿವಾದದ ಕೇಂದ್ರ ಬಿಂದುವಾಗಿರುವ ‘ಜೊತೆಗಿರುವನು ಚಂದಿರ’ ನಾಟಕವನ್ನೂ ಕೈದಿಗಳಿಂದ ಪ್ರದರ್ಶನ ಮಾಡಿಸಿ ಯಶಸ್ಸಿಯಾಗಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೂರೂವರೆ ಮರ್ಡರ್‌ ಎಂದೇ ಕುಖ್ಯಾತಿ ಪಡೆದಿದ್ದ ನಂಜುಂಡಸ್ವಾಮಿ ಕೆರೆಹಳ್ಳಿ ಅವರು ರಂಗಭೂಮಿ ಹಾಗೂ ಟೆರ್‍ರಾಕೋಟ ಕಲಾಕೃತಿಯ ಕಲಾವಿದರಾಗಿ ಹೊರಹೊಮ್ಮಿ ಜೈಲಿನಿಂದ ಹೊರಬಂದಿದ್ದಾರೆ.

ಜೋಸೆಫ್‌ ಸ್ಟೀನ್‌ ಅವರ ‘ಪಿಡ್ಲರ್‌ ಆನ್‌ ದಿ ರೂಫ್‌’ ನಾಟಕವನ್ನು ಸಾಹಿತಿ, ಕಥೆಗಾರ ಜಯಂತ ಕಾಯ್ಕಿಣಿ ಅವರು ಕನ್ನಡಕ್ಕೆ ‘ಜೊತೆಗಿರುವನು ಚಂದಿರ’ ಎಂಬ ಹೆಸರಲ್ಲಿ ರೂಪಾಂತರ ಮಾಡಿದ್ದಾರೆ. ಆ ನಾಟಕ ಹಲವು ವರ್ಷಗಳಿಂದ ರಂಗಪ್ರದರ್ಶನಗೊಳ್ಳುತ್ತಲೇ ಇದೆ. ಕಳೆದ ಭಾನುವಾರ ಶಿವಮೊಗ್ಗದ ರಂಗಬೆಳಕು ತಂಡವು ಆನವಟ್ಟಿಯಲ್ಲಿ ಈ ನಾಟಕದ ಪ್ರದರ್ಶನ ಹಮ್ಮಿಕೊಂಡಿತ್ತು. ಈ ವೇಳೆ ಆರ್‌ಎಸ್‌ಎಸ್‌ ಮತ್ತು ಬಜರಂಗದಳದ ಮುಖಂಡರು (ಸಂಘ ಪರಿವಾರದ ಫ್ರಿಂಜ್‌ ಎಲಿಮೆಂಟ್‌ಗಳು) ಬಂದು ಗಲಾಟೆ ಮಾಡಿ ನಾಟಕವನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ. “ದೇಶದಲ್ಲಿ ಹಿಂದೂ- ಮುಸ್ಲಿಂ ಗಲಾಟೆ ನಡೆಯುತ್ತಿರುವಾಗ ಮುಸ್ಲಿಮರೇ ಪ್ರಧಾನವಾಗಿರುವ ಕಥಾವಸ್ತು ಇಟ್ಟುಕೊಂಡು ನಾಟಕ ಮಾಡಿರುವುದು ಬೇಸರದ ಸಂಗತಿ” ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯಾವುದನ್ನೂ ಇವರು ಆಕ್ಷೇಪಾರ್ಹ ನಾಟಕ ಎನ್ನುತ್ತಿದ್ದಾರೋ ಅದೇ ನಾಟಕ ಅನೇಕ ಕೈದಿಗಳ ಬದುಕಿನಲ್ಲಿ ಬೆಳಕಾಗಿದೆ. ಹೊಸ ದಿಕ್ಕನ್ನು ತೋರಿದೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಕಲಾವಿದ ನಂಜುಂಡಸ್ವಾಮಿ ಕೆರೆಹಳ್ಳಿ,  “ರಂಗಭೂಮಿ ನನ್ನ ಬದುಕಿನಲ್ಲಿ ತಂದ ಬದಲಾವಣೆಯನ್ನು ನಾನೆಂದೂ ಮರೆಯುವುದಿಲ್ಲ. ಜೊತೆಗಿರುವನು ಚಂದಿರ ನಾಟಕದ- ಕಾಣದಿರದ ಹಾದಿಗಳಲಿ, ದೀಪವಿರದ ರಾತ್ರಿಗಳಲಿ, ಚಂದಿರ ನಮ್ಮ ಕೈಬಿಡದಿರಲಿ- ಹಾಡನ್ನು ಕೇಳುತ್ತಿದ್ದರೆ ನಾವು ಅತ್ತುಬಿಡುತ್ತಿದ್ದೆವು. ಕಿಡಿಗೇಡಿಗಳು ಈ ನಾಟಕದ ಬಗ್ಗೆ ಏನೋ ಹೇಳಿಬಿಡಬಹುದು. ಈ ನಾಟಕದ ಸಾಲುಗಳೇನು? ಆ ಮಾತಿನ ಅರ್ಥಗಳೇನು? ಎಂಬುದನ್ನು ತಿಳಿಯಬೇಕು. ಜಯಂತ ಕಾಯ್ಕಿಣಿಯವರು ಬರೆದಿರುವ ಮಾತುಗಳಂತೂ ಅದ್ಭುತವಾಗಿವೆ. ಹೊರ ಜಿಲ್ಲೆ, ಹೊರ ರಾಜ್ಯಗಳಿಗೆ ಹೋಗಿ ನಾಟಕ ಮಾಡಿದ್ದೆವು. ಕಾಯ್ಕಿಣಿಯವರೂ ಈ ನಾಟಕವನ್ನು ನೋಡಲು ಬಂದು ನಮ್ಮನ್ನು ಪ್ರೋತ್ಸಾಹಿಸಿದ್ದರು” ಎಂದು ನೆನೆದರು.

ಮಾಜಿ ಕೈದಿ ನಂಜುಂಡಸ್ವಾಮಿ

ವೀರಪ್ಪನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು ಇಪ್ಪತ್ತು ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದವರು ಅಂಬುರಾಜ್‌. ‘ಮಾಜಿ ಜೀವಾವಧಿ ಕೈದಿ’ಯಾಗಿರುವ ಅವರು, ‘ರಂಗಭೂಮಿಯ ಸ್ಪರ್ಶ ಸಿಗದಿದ್ದರೆ ನಾನು ಟೆರರಿಸ್ಟ್‌ ಆಗುತ್ತಿದ್ದೆ’ ಎಂದು ಭಾವುಕವಾಗಿ ನುಡಿಯುತ್ತಾರೆ.

“ಯಾವುದೇ ಧರ್ಮದವರಾದರೂ ಈ ದೇಶದ ಮಣ್ಣಿನ ಬಗ್ಗೆ ಇರುವ ವಿಶ್ವಾಸವನ್ನು ತೋರಿಸುವ ನಾಟಕ- ಜೊತೆಗಿರುವನು ಚಂದಿರ. ಕೋಮು ಆಧಾರದಲ್ಲಿ ದೇಶ ವಿಭಜನೆಯಾದಾಗ ಸಾಮಾನ್ಯರ ಭಾವನೆಗಳು ಹೇಗಿದ್ದವು, ಈ ಮಣ್ಣಿನ ಬಗ್ಗೆ ಇರುವ ಪ್ರೀತಿ ಎಂಥದ್ದು ಎಂಬುದನ್ನು ಬಹಳ ಭಾವನಾತ್ಮಕವಾಗಿ ಕಟ್ಟಿಕೊಟ್ಟ ನಾಟಕವಿದು. ಇದು ಧರ್ಮಕ್ಕಿಂತ ಮನಸ್ಸುಗಳ ವಿಚಾರವನ್ನು ತೆರೆದಿಡುವ ನಾಟಕ” ಎನ್ನುತ್ತಾರೆ ಅಂಬುರಾಜ್.

ಮಾಜಿ ಜೀವಾವಧಿ ಕೈದಿ ಅಂಬುರಾಜ್‌

“ನಾಟಕದ ಮುಖ್ಯ ಪಾತ್ರವಾದ ಬಡೇಮಿಯನ ಮಗಳು ಹಿಂದೂ ಹುಡುಗನನ್ನು ಕರೆದುಕೊಂಡು ಹೋಗಿಬಿಡುತ್ತಾಳೆ. ಹಿಂದೂ ಮುಸ್ಲಿಂ ಮದುವೆಯಾಗುತ್ತಾರೆ. ಇದೇ ಭಾರತದ ಸಂಸ್ಕೃತಿ ಎಂದು ಹೇಳುವ ನಾಟಕವಿದು. ಕೋಮು ದೃಷ್ಟಿಕೋನ ಇಟ್ಟುಕೊಂಡು ಸಮಾಜವನ್ನು ನೋಡಿದರೆ, ಎಲ್ಲವೂ ಕೇಸರಿಯಾಗಿಯೇ ಕಾಣುತ್ತದೆ” ಎಂದು ವಿಷಾದಿಸಿದರು.

“ನನಗೆ ರಂಗಭೂಮಿಯ ನಂಟು ಸಿಗದೇ ಹೋಗಿದ್ದರೆ, ಕಟ್ಟೀಮನಿ ಥರದ ವ್ಯಕ್ತಿಗಳು ಪರಿಚಯವಾಗದೇ ಹೋಗಿದ್ದರೆ ನಾನು ಜೈಲಲ್ಲಿ ದೊಡ್ಡ ಟೆರರಿಸ್ಟ್‌ ಆಗ್ತಾ ಇದ್ದೆ. ನನ್ನ ಬದುಕನ್ನು ಸುಧಾರಿಸಿದ್ದು ರಂಗಭೂಮಿ. ವೀರಪ್ಪನ್‌ ಕೇಸ್‌ ಕಾರಣಕ್ಕೆ ನನಗೆ ಚಿತ್ರಹಿಂಸೆಯನ್ನೂ ನೀಡಿದರು. ಹೀಗಾಗಿ ಅಧಿಕಾರಿಗಳ ಮೇಲೆ, ಸಮಾಜದ ಮೇಲೆ ನನಗೆ ಸಿಟ್ಟಿತ್ತು. ಅದೆಲ್ಲವೂ ಕರಗಿಹೋಗಿ, ನನ್ನನ್ನು ಮನುಷ್ಯನನ್ನಾಗಿ ಮಾಡಿದ್ದು ರಂಗಭೂಮಿ” ಎಂದರು.

ರಂಗಕರ್ಮಿ, ಕೈದಿಗಳಿಗೆ ನಾಟಕಗಳನ್ನು ಕಲಿಸಿದ ಗುರು ಹುಲುಗಪ್ಪ ಕಟ್ಟೀಮನಿ

“ಜೊತೆಗಿರುವನು ಚಂದಿರ – ಮಾನವ ಮೌಲ್ಯಗಳನ್ನು ಬೆಳೆಸುವಂತಹ ನಾಟಕ. ಜೈಲಿನಲ್ಲಿ ಹಿಂದೂ ಮುಸ್ಲಿಂ ಹಬ್ಬಗಳನ್ನು ಒಟ್ಟಾಗಿ ಕೈದಿಗಳು ಆಚರಿಸುತ್ತಾರೆ. ಈ ನಾಟಕ ಹಿಂದೂ- ಮುಸ್ಲಿಂ ನಡುವೆ ಭೇದ ತರುವಂತಿದ್ದರೆ ಕೈದಿಗಳು ಈ ನಾಟಕವನ್ನು ಮಾಡಲು ಸಾಧ್ಯವಾಗುತ್ತಿತ್ತೇ?” ಎಂದು ಪ್ರಶ್ನಿಸಿದರು.

‘ಜೊತೆಗಿರುವನು ಚಂದಿರ’ ನಾಟಕದಲ್ಲಿ ಬಡೇಮಿಯ ಪಾತ್ರದಲ್ಲಿ ಅಭಿನಯಿಸಿದ್ದ ರಮೇಶ್‌ ಆಡುವಳ್ಳಿ ಅವರು ಸುಮಾರು ಹದಿನೈದು ವರ್ಷಗಳ ಕಾಲ ಜೈಲಿನಲ್ಲಿದ್ದವರು. ರಾಜಕೀಯ ಪ್ರಕರಣವೊಂದರಲ್ಲಿ ನನ್ನ ಹೆಸರು ಸಿಕ್ಕಿಕೊಂಡಿತು. ತಪ್ಪು ಮಾಡದೆಯೇ ಶಿಕ್ಷೆ ಅನುಭವಿಸಿದೆ ಎನ್ನುವ ರಮೇಶ್ ಅವರು, ಕಟ್ಟೀಮನಿಯವರ ತಂಡದೊಂದಿಗೆ ಕೆಲಸ ಮಾಡಿದವರು. “‘ತಲೆದಂಡ’ ನಾಟಕದಲ್ಲಿ ಬಸವಣ್ಣ ಪಾತ್ರದಲ್ಲಿ, ‘ಕಸ್ತೂರಬಾ ಗಾಂಧಿ’ ನಾಟಕದಲ್ಲಿ ಗಾಂಧಿಯಾಗಿ ಅಭಿನಯಿಸಿದ್ದಾರೆ. ‘ಮಾಧವಿ’ ನಾಟಕದಲ್ಲಿ ‘ಗಾಲವ’ನಾಗಿ ಅಭಿನಯಿಸಿದ್ದೇನೆ. ನನಗೆ ತುಂಬಾ ಇಷ್ಟವಾದ ನಾಟಕವೆಂದರೆ ಜಯಂತ್‌ ಕಾಯ್ಕಿಣಿಯವರು ಬರೆದ- ಜೊತೆಗಿರುವನು ಚಂದಿರ ನಾಟಕ. ಅದ್ಭುತವಾದ ಕಥೆ ಇದು. ಇದನ್ನು ನೋಡಿದವರು ಹಿಂದೂ- ಮುಸ್ಲಿಂ ವಿವಾದವನ್ನು ಮಾಡಲೇಬಾರದು” ಎಂದು ಅಭಿಪ್ರಾಯಪಟ್ಟರು.

‘ಕಸ್ತೂರ ಬಾ ಗಾಂಧಿ ನಾಟಕ’ದಲ್ಲಿ ಗಾಂಧಿ ಪಾತ್ರದಲ್ಲಿ ರಮೇಶ್‌ ಆಡುವಳ್ಳಿ ಅಭಿನಯಿಸಿದ್ದರು.

“ಕೈದಿಗಳ ಮೇಲೆ ತಪ್ಪು ಅಭಿಪ್ರಾಯ ಹೊಂದಿದ್ದ ಕಾರಾಗೃಹ ಇಲಾಖೆಯ ಮೇಲಧಿಕಾರಿಗಳೇ ನಮ್ಮ ನಾಟಕ ನೋಡಿ ಅಚ್ಚರಿ ಪಟ್ಟರು. ನಮ್ಮ ನಾಟಕ ನೋಡಿ ಅಧಿಕಾರಿಗಳ ಮನಸ್ಸೇ ಪರಿವರ್ತನೆಯಾಗಿತ್ತು” ಎಂದು ತಿಳಿಸಿದರು.

ಇದನ್ನೂ ಓದಿರಿ: ಮುಸ್ಲಿಂ ಪ್ರಧಾನ ಕಥೆ ಹೊಂದಿದೆ ಎಂದು ನಾಟಕಕ್ಕೆ ಅಡ್ಡಿಪಡಿಸಿದ RSS-ಬಜರಂಗದಳದ ದುಷ್ಕರ್ಮಿಗಳು

ರಂಗಕರ್ಮಿ ಹುಲುಗಪ್ಪ ಕಟ್ಟೀಮನಿಯವರನ್ನು ಈ ಕುರಿತು ಮಾತನಾಡಿಸಲು ‘ನಾನುಗೌರಿ.ಕಾಂ’ ತಂಡ ಪ್ರಯತ್ನಿಸಿತು. ನಾಟಕದ ಹೆಸರು ಹಾಗೂ ವಿವಾದದ ಕುರಿತು ಕೇಳಿದ ತಕ್ಷಣ ಕಟ್ಟೀಮನಿಯವರು ಭಾವುಕರಾದರು. “ನನ್ನದೇ ಭಾವನೆಗಳನ್ನು ಹಂಚಿಕೊಳ್ಳುತ್ತೇನೆ, ಈ ಕುರಿತು ಬರೆಯುತ್ತೇನೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...