Homeಕರ್ನಾಟಕಸಂಘಪರಿವಾರ ಅಡ್ಡಿಪಡಿಸಿದ ‘ಜೊತೆಗಿರುವನು ಚಂದಿರ’ ನಾಟಕ ಕೈದಿಗಳ ಬಾಳಿಗೆ ಬೆಳಕಾಗಿದ್ದು ಹೀಗೆ...

ಸಂಘಪರಿವಾರ ಅಡ್ಡಿಪಡಿಸಿದ ‘ಜೊತೆಗಿರುವನು ಚಂದಿರ’ ನಾಟಕ ಕೈದಿಗಳ ಬಾಳಿಗೆ ಬೆಳಕಾಗಿದ್ದು ಹೀಗೆ…

ಜಯಂತ್ ಕಾಯ್ಕಿಣಿಯವರ ‘ಜೊತೆಗಿರುವನು ಚಂದಿರ’ ನಾಟಕ ಪ್ರದರ್ಶನಕ್ಕೆ ಸಂಘಪರಿವಾರದವರು ಅಡ್ಡಿಪಡಿಸಿ ವಿವಾದ ಎಬ್ಬಿಸಿದ್ದಾರೆ. ಆದರೆ ಈ ನಾಟಕ ಅನೇಕ ಕೈದಿಗಳ ಮನ ಪರಿವರ್ತನೆಗೆ ಕಾರಣವಾಗಿತ್ತು... (ಮುಂದೆ ಓದಿರಿ)

- Advertisement -
- Advertisement -

ಚಾಮರಾಜನಗರ ಜಿಲ್ಲೆಯ ನಂಜುಂಡಸ್ವಾಮಿ ಕೆರೆಹಳ್ಳಿಯವರು ಒಂದು ಕಾಲಕ್ಕೆ ‘ಮೂರೂವರೆ’ ಮರ್ಡರ್‌ ಎಂದೇ ಕುಖ್ಯಾತಿ ಪಡೆದವರು. ಅತ್ತೆ, ಭಾವ, ಭಾಮೈದ, ಹೆಂಡತಿ ವಿಚಾರವಾಗಿ ಗಲಾಟೆ ನಡೆದು, ತನಗೆ ಹೊಡೆಯಲು ಬಂದವನಿಂದ ಮಚ್ಚು ಕಿತ್ತುಕೊಂಡು ನಂಜುಂಡಸ್ವಾಮಿ ಪ್ರತಿದಾಳಿ ನಡೆಸಿದಾಗ ಅತಾಚುರ್ಯ ನಡೆದೇ ಬಿಟ್ಟಿತ್ತು. ‘ಮೂರೂವರೆ ಮರ್ಡರ್‌’ ಎಂಬ ಅಪಖ್ಯಾತಿ ಅವರ ತಲೆಗೆ ಕಟ್ಟಿತು. ಹೀಗೆ ಜೈಲು ಸೇರಿದ ನಂಜುಂಡಸ್ವಾಮಿ ಸನ್ನಡತೆಯ ಆಧಾರದಲ್ಲಿ ಹೊರಗಡೆ ಬಂದಾಗ ಮಾತ್ರ ಸಂಪೂರ್ಣ ಬದಲಾಗಿದ್ದರು. ರಂಗಭೂಮಿ ಹಾಗೂ ಟೆರ್‍ರಾಕೋಟ ಕಲಾಕೃತಿಗಳ ಕಲಾವಿದರಾಗಿ ಹೊಮ್ಮಿದ್ದರು.

ರಂಗಭೂಮಿ ಮೂಲಕ ಅನೇಕ ಕೈದಿಗಳ ಮನಪರಿವರ್ತನೆ ಮಾಡಿದ ಹೆಗ್ಗಳಿಕೆ ಮೈಸೂರು ರಂಗಾಯಣದ ಹಿರಿಯ ಕಲಾವಿದ ಹುಲುಗಪ್ಪ ಕಟ್ಟೀಮನಿಯವರಿಗೆ ಸಲ್ಲುತ್ತದೆ. 1999ರಿಂದ 2017ರವರೆಗೆ ಸುಮಾರು ಹದಿನೇಳು ವರ್ಷಗಳ ಕಾಲ ಮೈಸೂರು ಕೇಂದ್ರ ಕಾರಾಗೃಹದಲ್ಲಿ ಜೈಲು ಶಿಕ್ಷೆ ಅನುಭವಿಸಿದ್ದ ನಂಜುಂಡಸ್ವಾಮಿ, ಸನ್ನಡತೆಯ ಆಧಾರದಲ್ಲಿ ಹೊರಬಂದಿದ್ದರ ಹಿಂದೆ ರಂಗಭೂಮಿ ಎಂಬ ದಾರಿದೀಪ, ಹುಲುಗಪ್ಪ ಕಟ್ಟೀಮನಿ ಎಂಬ ಮಹಾನ್‌ ಗುರು ಇದ್ದರು. ಹಲವಾರು ನಾಟಕಗಳನ್ನು ಕೈದಿಗಳಿಗೆ ಕಲಿಸಿದ್ದ ಹುಲುಗಪ್ಪ ಅವರು, ಈಗ ವಿವಾದದ ಕೇಂದ್ರ ಬಿಂದುವಾಗಿರುವ ‘ಜೊತೆಗಿರುವನು ಚಂದಿರ’ ನಾಟಕವನ್ನೂ ಕೈದಿಗಳಿಂದ ಪ್ರದರ್ಶನ ಮಾಡಿಸಿ ಯಶಸ್ಸಿಯಾಗಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೂರೂವರೆ ಮರ್ಡರ್‌ ಎಂದೇ ಕುಖ್ಯಾತಿ ಪಡೆದಿದ್ದ ನಂಜುಂಡಸ್ವಾಮಿ ಕೆರೆಹಳ್ಳಿ ಅವರು ರಂಗಭೂಮಿ ಹಾಗೂ ಟೆರ್‍ರಾಕೋಟ ಕಲಾಕೃತಿಯ ಕಲಾವಿದರಾಗಿ ಹೊರಹೊಮ್ಮಿ ಜೈಲಿನಿಂದ ಹೊರಬಂದಿದ್ದಾರೆ.

ಜೋಸೆಫ್‌ ಸ್ಟೀನ್‌ ಅವರ ‘ಪಿಡ್ಲರ್‌ ಆನ್‌ ದಿ ರೂಫ್‌’ ನಾಟಕವನ್ನು ಸಾಹಿತಿ, ಕಥೆಗಾರ ಜಯಂತ ಕಾಯ್ಕಿಣಿ ಅವರು ಕನ್ನಡಕ್ಕೆ ‘ಜೊತೆಗಿರುವನು ಚಂದಿರ’ ಎಂಬ ಹೆಸರಲ್ಲಿ ರೂಪಾಂತರ ಮಾಡಿದ್ದಾರೆ. ಆ ನಾಟಕ ಹಲವು ವರ್ಷಗಳಿಂದ ರಂಗಪ್ರದರ್ಶನಗೊಳ್ಳುತ್ತಲೇ ಇದೆ. ಕಳೆದ ಭಾನುವಾರ ಶಿವಮೊಗ್ಗದ ರಂಗಬೆಳಕು ತಂಡವು ಆನವಟ್ಟಿಯಲ್ಲಿ ಈ ನಾಟಕದ ಪ್ರದರ್ಶನ ಹಮ್ಮಿಕೊಂಡಿತ್ತು. ಈ ವೇಳೆ ಆರ್‌ಎಸ್‌ಎಸ್‌ ಮತ್ತು ಬಜರಂಗದಳದ ಮುಖಂಡರು (ಸಂಘ ಪರಿವಾರದ ಫ್ರಿಂಜ್‌ ಎಲಿಮೆಂಟ್‌ಗಳು) ಬಂದು ಗಲಾಟೆ ಮಾಡಿ ನಾಟಕವನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ. “ದೇಶದಲ್ಲಿ ಹಿಂದೂ- ಮುಸ್ಲಿಂ ಗಲಾಟೆ ನಡೆಯುತ್ತಿರುವಾಗ ಮುಸ್ಲಿಮರೇ ಪ್ರಧಾನವಾಗಿರುವ ಕಥಾವಸ್ತು ಇಟ್ಟುಕೊಂಡು ನಾಟಕ ಮಾಡಿರುವುದು ಬೇಸರದ ಸಂಗತಿ” ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯಾವುದನ್ನೂ ಇವರು ಆಕ್ಷೇಪಾರ್ಹ ನಾಟಕ ಎನ್ನುತ್ತಿದ್ದಾರೋ ಅದೇ ನಾಟಕ ಅನೇಕ ಕೈದಿಗಳ ಬದುಕಿನಲ್ಲಿ ಬೆಳಕಾಗಿದೆ. ಹೊಸ ದಿಕ್ಕನ್ನು ತೋರಿದೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಕಲಾವಿದ ನಂಜುಂಡಸ್ವಾಮಿ ಕೆರೆಹಳ್ಳಿ,  “ರಂಗಭೂಮಿ ನನ್ನ ಬದುಕಿನಲ್ಲಿ ತಂದ ಬದಲಾವಣೆಯನ್ನು ನಾನೆಂದೂ ಮರೆಯುವುದಿಲ್ಲ. ಜೊತೆಗಿರುವನು ಚಂದಿರ ನಾಟಕದ- ಕಾಣದಿರದ ಹಾದಿಗಳಲಿ, ದೀಪವಿರದ ರಾತ್ರಿಗಳಲಿ, ಚಂದಿರ ನಮ್ಮ ಕೈಬಿಡದಿರಲಿ- ಹಾಡನ್ನು ಕೇಳುತ್ತಿದ್ದರೆ ನಾವು ಅತ್ತುಬಿಡುತ್ತಿದ್ದೆವು. ಕಿಡಿಗೇಡಿಗಳು ಈ ನಾಟಕದ ಬಗ್ಗೆ ಏನೋ ಹೇಳಿಬಿಡಬಹುದು. ಈ ನಾಟಕದ ಸಾಲುಗಳೇನು? ಆ ಮಾತಿನ ಅರ್ಥಗಳೇನು? ಎಂಬುದನ್ನು ತಿಳಿಯಬೇಕು. ಜಯಂತ ಕಾಯ್ಕಿಣಿಯವರು ಬರೆದಿರುವ ಮಾತುಗಳಂತೂ ಅದ್ಭುತವಾಗಿವೆ. ಹೊರ ಜಿಲ್ಲೆ, ಹೊರ ರಾಜ್ಯಗಳಿಗೆ ಹೋಗಿ ನಾಟಕ ಮಾಡಿದ್ದೆವು. ಕಾಯ್ಕಿಣಿಯವರೂ ಈ ನಾಟಕವನ್ನು ನೋಡಲು ಬಂದು ನಮ್ಮನ್ನು ಪ್ರೋತ್ಸಾಹಿಸಿದ್ದರು” ಎಂದು ನೆನೆದರು.

ಮಾಜಿ ಕೈದಿ ನಂಜುಂಡಸ್ವಾಮಿ

ವೀರಪ್ಪನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು ಇಪ್ಪತ್ತು ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದವರು ಅಂಬುರಾಜ್‌. ‘ಮಾಜಿ ಜೀವಾವಧಿ ಕೈದಿ’ಯಾಗಿರುವ ಅವರು, ‘ರಂಗಭೂಮಿಯ ಸ್ಪರ್ಶ ಸಿಗದಿದ್ದರೆ ನಾನು ಟೆರರಿಸ್ಟ್‌ ಆಗುತ್ತಿದ್ದೆ’ ಎಂದು ಭಾವುಕವಾಗಿ ನುಡಿಯುತ್ತಾರೆ.

“ಯಾವುದೇ ಧರ್ಮದವರಾದರೂ ಈ ದೇಶದ ಮಣ್ಣಿನ ಬಗ್ಗೆ ಇರುವ ವಿಶ್ವಾಸವನ್ನು ತೋರಿಸುವ ನಾಟಕ- ಜೊತೆಗಿರುವನು ಚಂದಿರ. ಕೋಮು ಆಧಾರದಲ್ಲಿ ದೇಶ ವಿಭಜನೆಯಾದಾಗ ಸಾಮಾನ್ಯರ ಭಾವನೆಗಳು ಹೇಗಿದ್ದವು, ಈ ಮಣ್ಣಿನ ಬಗ್ಗೆ ಇರುವ ಪ್ರೀತಿ ಎಂಥದ್ದು ಎಂಬುದನ್ನು ಬಹಳ ಭಾವನಾತ್ಮಕವಾಗಿ ಕಟ್ಟಿಕೊಟ್ಟ ನಾಟಕವಿದು. ಇದು ಧರ್ಮಕ್ಕಿಂತ ಮನಸ್ಸುಗಳ ವಿಚಾರವನ್ನು ತೆರೆದಿಡುವ ನಾಟಕ” ಎನ್ನುತ್ತಾರೆ ಅಂಬುರಾಜ್.

ಮಾಜಿ ಜೀವಾವಧಿ ಕೈದಿ ಅಂಬುರಾಜ್‌

“ನಾಟಕದ ಮುಖ್ಯ ಪಾತ್ರವಾದ ಬಡೇಮಿಯನ ಮಗಳು ಹಿಂದೂ ಹುಡುಗನನ್ನು ಕರೆದುಕೊಂಡು ಹೋಗಿಬಿಡುತ್ತಾಳೆ. ಹಿಂದೂ ಮುಸ್ಲಿಂ ಮದುವೆಯಾಗುತ್ತಾರೆ. ಇದೇ ಭಾರತದ ಸಂಸ್ಕೃತಿ ಎಂದು ಹೇಳುವ ನಾಟಕವಿದು. ಕೋಮು ದೃಷ್ಟಿಕೋನ ಇಟ್ಟುಕೊಂಡು ಸಮಾಜವನ್ನು ನೋಡಿದರೆ, ಎಲ್ಲವೂ ಕೇಸರಿಯಾಗಿಯೇ ಕಾಣುತ್ತದೆ” ಎಂದು ವಿಷಾದಿಸಿದರು.

“ನನಗೆ ರಂಗಭೂಮಿಯ ನಂಟು ಸಿಗದೇ ಹೋಗಿದ್ದರೆ, ಕಟ್ಟೀಮನಿ ಥರದ ವ್ಯಕ್ತಿಗಳು ಪರಿಚಯವಾಗದೇ ಹೋಗಿದ್ದರೆ ನಾನು ಜೈಲಲ್ಲಿ ದೊಡ್ಡ ಟೆರರಿಸ್ಟ್‌ ಆಗ್ತಾ ಇದ್ದೆ. ನನ್ನ ಬದುಕನ್ನು ಸುಧಾರಿಸಿದ್ದು ರಂಗಭೂಮಿ. ವೀರಪ್ಪನ್‌ ಕೇಸ್‌ ಕಾರಣಕ್ಕೆ ನನಗೆ ಚಿತ್ರಹಿಂಸೆಯನ್ನೂ ನೀಡಿದರು. ಹೀಗಾಗಿ ಅಧಿಕಾರಿಗಳ ಮೇಲೆ, ಸಮಾಜದ ಮೇಲೆ ನನಗೆ ಸಿಟ್ಟಿತ್ತು. ಅದೆಲ್ಲವೂ ಕರಗಿಹೋಗಿ, ನನ್ನನ್ನು ಮನುಷ್ಯನನ್ನಾಗಿ ಮಾಡಿದ್ದು ರಂಗಭೂಮಿ” ಎಂದರು.

ರಂಗಕರ್ಮಿ, ಕೈದಿಗಳಿಗೆ ನಾಟಕಗಳನ್ನು ಕಲಿಸಿದ ಗುರು ಹುಲುಗಪ್ಪ ಕಟ್ಟೀಮನಿ

“ಜೊತೆಗಿರುವನು ಚಂದಿರ – ಮಾನವ ಮೌಲ್ಯಗಳನ್ನು ಬೆಳೆಸುವಂತಹ ನಾಟಕ. ಜೈಲಿನಲ್ಲಿ ಹಿಂದೂ ಮುಸ್ಲಿಂ ಹಬ್ಬಗಳನ್ನು ಒಟ್ಟಾಗಿ ಕೈದಿಗಳು ಆಚರಿಸುತ್ತಾರೆ. ಈ ನಾಟಕ ಹಿಂದೂ- ಮುಸ್ಲಿಂ ನಡುವೆ ಭೇದ ತರುವಂತಿದ್ದರೆ ಕೈದಿಗಳು ಈ ನಾಟಕವನ್ನು ಮಾಡಲು ಸಾಧ್ಯವಾಗುತ್ತಿತ್ತೇ?” ಎಂದು ಪ್ರಶ್ನಿಸಿದರು.

‘ಜೊತೆಗಿರುವನು ಚಂದಿರ’ ನಾಟಕದಲ್ಲಿ ಬಡೇಮಿಯ ಪಾತ್ರದಲ್ಲಿ ಅಭಿನಯಿಸಿದ್ದ ರಮೇಶ್‌ ಆಡುವಳ್ಳಿ ಅವರು ಸುಮಾರು ಹದಿನೈದು ವರ್ಷಗಳ ಕಾಲ ಜೈಲಿನಲ್ಲಿದ್ದವರು. ರಾಜಕೀಯ ಪ್ರಕರಣವೊಂದರಲ್ಲಿ ನನ್ನ ಹೆಸರು ಸಿಕ್ಕಿಕೊಂಡಿತು. ತಪ್ಪು ಮಾಡದೆಯೇ ಶಿಕ್ಷೆ ಅನುಭವಿಸಿದೆ ಎನ್ನುವ ರಮೇಶ್ ಅವರು, ಕಟ್ಟೀಮನಿಯವರ ತಂಡದೊಂದಿಗೆ ಕೆಲಸ ಮಾಡಿದವರು. “‘ತಲೆದಂಡ’ ನಾಟಕದಲ್ಲಿ ಬಸವಣ್ಣ ಪಾತ್ರದಲ್ಲಿ, ‘ಕಸ್ತೂರಬಾ ಗಾಂಧಿ’ ನಾಟಕದಲ್ಲಿ ಗಾಂಧಿಯಾಗಿ ಅಭಿನಯಿಸಿದ್ದಾರೆ. ‘ಮಾಧವಿ’ ನಾಟಕದಲ್ಲಿ ‘ಗಾಲವ’ನಾಗಿ ಅಭಿನಯಿಸಿದ್ದೇನೆ. ನನಗೆ ತುಂಬಾ ಇಷ್ಟವಾದ ನಾಟಕವೆಂದರೆ ಜಯಂತ್‌ ಕಾಯ್ಕಿಣಿಯವರು ಬರೆದ- ಜೊತೆಗಿರುವನು ಚಂದಿರ ನಾಟಕ. ಅದ್ಭುತವಾದ ಕಥೆ ಇದು. ಇದನ್ನು ನೋಡಿದವರು ಹಿಂದೂ- ಮುಸ್ಲಿಂ ವಿವಾದವನ್ನು ಮಾಡಲೇಬಾರದು” ಎಂದು ಅಭಿಪ್ರಾಯಪಟ್ಟರು.

‘ಕಸ್ತೂರ ಬಾ ಗಾಂಧಿ ನಾಟಕ’ದಲ್ಲಿ ಗಾಂಧಿ ಪಾತ್ರದಲ್ಲಿ ರಮೇಶ್‌ ಆಡುವಳ್ಳಿ ಅಭಿನಯಿಸಿದ್ದರು.

“ಕೈದಿಗಳ ಮೇಲೆ ತಪ್ಪು ಅಭಿಪ್ರಾಯ ಹೊಂದಿದ್ದ ಕಾರಾಗೃಹ ಇಲಾಖೆಯ ಮೇಲಧಿಕಾರಿಗಳೇ ನಮ್ಮ ನಾಟಕ ನೋಡಿ ಅಚ್ಚರಿ ಪಟ್ಟರು. ನಮ್ಮ ನಾಟಕ ನೋಡಿ ಅಧಿಕಾರಿಗಳ ಮನಸ್ಸೇ ಪರಿವರ್ತನೆಯಾಗಿತ್ತು” ಎಂದು ತಿಳಿಸಿದರು.

ಇದನ್ನೂ ಓದಿರಿ: ಮುಸ್ಲಿಂ ಪ್ರಧಾನ ಕಥೆ ಹೊಂದಿದೆ ಎಂದು ನಾಟಕಕ್ಕೆ ಅಡ್ಡಿಪಡಿಸಿದ RSS-ಬಜರಂಗದಳದ ದುಷ್ಕರ್ಮಿಗಳು

ರಂಗಕರ್ಮಿ ಹುಲುಗಪ್ಪ ಕಟ್ಟೀಮನಿಯವರನ್ನು ಈ ಕುರಿತು ಮಾತನಾಡಿಸಲು ‘ನಾನುಗೌರಿ.ಕಾಂ’ ತಂಡ ಪ್ರಯತ್ನಿಸಿತು. ನಾಟಕದ ಹೆಸರು ಹಾಗೂ ವಿವಾದದ ಕುರಿತು ಕೇಳಿದ ತಕ್ಷಣ ಕಟ್ಟೀಮನಿಯವರು ಭಾವುಕರಾದರು. “ನನ್ನದೇ ಭಾವನೆಗಳನ್ನು ಹಂಚಿಕೊಳ್ಳುತ್ತೇನೆ, ಈ ಕುರಿತು ಬರೆಯುತ್ತೇನೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...