Homeಮುಖಪುಟಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದ ವಿಡಿಯೋ, ಫೋಟೊ, ವಾಟ್ಸ್​ಆ್ಯಪ್ ಚಾಟ್ ಒದಗಿಸುವಂತೆ ಕುಸ್ತಿಪಟುಗಳಿಗೆ ಸಾಕ್ಷ್ಯ ಕೇಳಿದ ಪೊಲೀಸರು

ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದ ವಿಡಿಯೋ, ಫೋಟೊ, ವಾಟ್ಸ್​ಆ್ಯಪ್ ಚಾಟ್ ಒದಗಿಸುವಂತೆ ಕುಸ್ತಿಪಟುಗಳಿಗೆ ಸಾಕ್ಷ್ಯ ಕೇಳಿದ ಪೊಲೀಸರು

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಷನ್ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ಲೈಂಗಿಕ ಕಿರುಕುಳ ಆರೋಪ ಮಾಡಿದ್ದರು. ಈ ಆರೋಪಕ್ಕೆ ಸಂಬಂಧಿಸಿದ ವಿಡಿಯೋ, ಫೋಟೊಗಳು, ವಾಟ್ಸ್​ಆ್ಯಪ್ ಚಾಟ್​ಗಳನ್ನು ಒದಗಿಸುವಂತೆ ಪೊಲೀಸರು ಕೇಳಿದ್ದಾರೆ.

ಪ್ರತಿಭಟನಾಕಾರರು ಪೊಲೀಸ್​ ತನಿಖೆಯನ್ನು ನಂಬುವುದಿಲ್ಲ, ಬಿಜೆಪಿ ಸಂಸದರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದ್ದು, ಅವರು ಇನ್ನೂ ಜೈಲಿಗೆ ಹೋಗದೆ ಹೊರಗಿರುವುದು ತನಿಖೆಗೆ ಅಡ್ಡಿಯಾಗುತ್ತಿದೆ ಎಂದು ಹೇಳಿದ್ದರು.

ತಮ್ಮ ಉಸಿರಾಟವನ್ನು ಪರೀಕ್ಷಿಸುವ ನೆಪದಲ್ಲಿ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್‌ಭೂಷಣ್ ಸಿಂಗ್ ಅವರು ತಮ್ಮ ಕೈಯನ್ನು ಹಿಡಿದು ಹೊಟ್ಟೆ ಭಾಗವನ್ನು ಮುಟ್ಟುತ್ತಿದ್ದರು ಎಂದು ಉನ್ನತ ಮಹಿಳಾ ಕುಸ್ತಿಪಟುಗಳು ಆರೋಪಿಸಿದ್ದಾರೆ. ಇದೀಗ ಕುಸ್ತಿಪಟುಗಳಿಗೆ ಸಾಕ್ಷಿಯಾಗಿ ಆಡಿಯೋ, ವಿಡಿಯೋ ಅಥವಾ ಫೋಟೋಗಳನ್ನು ಹಂಚಿಕೊಳ್ಳಲು ದೆಹಲಿ ಪೊಲೀಸರು ಕೇಳಿದ್ದಾರೆ ಎಂದು ವರದಿಯಾಗಿದೆ.

ಈ ಕುರಿತು ಪೊಲೀಸರು ಪ್ರತಿಕ್ರಿಯೆ ನೀಡಿದ್ದು, ನಾವು ಪ್ರಕರಣವನ್ನು ಮುನ್ನಡೆಸಲು ಸಿದ್ಧರಿದ್ದೇವೆ ಆದರೆ ನಿಮ್ಮ ಆರೋಪವನ್ನು ಪುಷ್ಠಿಗೊಳಿಸಲು ಬೇಕಾದ ಸಾಕ್ಷ್ಯಗಳನ್ನು ಒದಗಿಸಿ, ನಿಮ್ಮ ಬಳಿ ಫೋಟೊ, ವಾಟ್ಸಾಪ್​ ಚಾಟ್ ಅಥವಾ ಇನ್ಯಾವುದೇ ವಿಡಿಯೋಗಳು ಇದ್ದರೂ ಅದನ್ನು ನಮಗೆ ನೀಡಿ ನಾವು ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಬಂಧನವಿಲ್ಲದೆ ನಿಷ್ಪಕ್ಷಪಾತ ತನಿಖೆ ನಡೆಸಲಾಗುವುದಿಲ್ಲ ಎಂದು ಕುಸ್ತಿಪಟುಗಳು ಹೇಳಿದ್ದಾರೆ. ಬ್ರಿಜ್ ಭೂಷಣ್ ಶರಣ್ ಸಿಂಗ್ ಈ ಹಿಂದೆ ಲೈಂಗಿಕ ದುರ್ವರ್ತನೆಯ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದರು.

ನನ್ನ ವಿರುದ್ಧದ ಒಂದೇ ಒಂದು ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ, ನಿಮ್ಮ ಬಳಿ (ಕುಸ್ತಿಪಟುಗಳು) ಏನಾದರೂ ಸಾಕ್ಷ್ಯಾಧಾರಗಳಿದ್ದರೆ ಅದನ್ನು ಕೋರ್ಟ್‌ಗೆ ಹಾಜರುಪಡಿಸಿ ಮತ್ತು ಯಾವುದೇ ಶಿಕ್ಷೆಯನ್ನು ಸ್ವೀಕರಿಸಲು ನಾನು ಸಿದ್ಧನಿದ್ದೇನೆ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಜೂ.15ರೊಳಗೆ ನ್ಯಾಯ ಸಿಗದಿದ್ದರೆ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸುತ್ತೇವೆ: ಸರ್ಕಾರಕ್ಕೆ ಕುಸ್ತಿಪಟುಗಳ ಎಚ್ಚರಿಕೆ

ಎಫ್‌ಐಆರ್‌ಗಳ ಪ್ರಕಾರ, 2016 ಮತ್ತು 2019 ರ ನಡುವೆ 21 ಅಶೋಕ್ ರಸ್ತೆಯಲ್ಲಿರುವ ಡಬ್ಲ್ಯುಎಫ್‌ಐ ಕಚೇರಿಯಲ್ಲಿ, ಸಿಂಗ್ ಅವರ ಬಂಗಲೆಯಲ್ಲಿ ಮತ್ತು ವಿದೇಶದಲ್ಲಿ ಪಂದ್ಯಾವಳಿಗಳ ಸಮಯದಲ್ಲಿ ಲೈಂಗಿಕ ಕಿರುಕುಳದ ಘಟನೆಗಳು ನಡೆದಿವೆ.

WFI ಕಚೇರಿಯಲ್ಲಿ ಕಳೆದ ಸಮಯ, ವಿದೇಶದಲ್ಲಿ ನಿಮ್ಮ ರೂಮ್‌ಮೇಟ್‌ಗಳ ಹೆಸರುಗಳು, ಹೋಟೆಲ್‌ಗಳ ವಿವರಗಳು ಮತ್ತು ಸಂಭಾವ್ಯ ಸಾಕ್ಷಿಗಳ ವಿವರಗಳನ್ನು ನೀಡಬೇಕು ಎಂದು ಪೊಲೀಸರು ಕುಸ್ತಿಪಟುಗಳಿಗೆ ಕೇಳಿದ್ದಾರೆ.

ಕುಸ್ತಿಪಟುಗಳಿಗೆ ಬ್ರಿಜ್‌ಭೂ‍ಷಣ್ ಅವರಿಂದ ಬಂದಿರುವ ಬೆದರಿಕೆ ಕರೆಗಳ ವಿವರಗಳನ್ನು ಪೊಲೀಸರು ಕೇಳಿದ್ದಾರೆ.

ಪೊಲೀಸರು ಎಫ್‌ಐಆರ್‌ಗಳನ್ನು ದಾಖಲಿಸುತ್ತಿಲ್ಲ ಎಂದು ಕುಸ್ತಿಪಟುಗಳು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದರು. ಆ ಬಳಿಕ ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ದೆಹಲಿ ಪೊಲೀಸರು ಸಿಂಗ್ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

ಡಬ್ಲ್ಯುಎಫ್‌ಐ ಮುಖ್ಯಸ್ಥರ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸಲು ಕೋರಿ ದೂರು ನೀಡಿದ ಕುಸ್ತಿಪಟುಗಳ ಹೆಸರನ್ನು ನ್ಯಾಯಾಂಗ ದಾಖಲೆಗಳಿಂದ ತೆಗೆದುಹಾಕುವಂತೆ ಸುಪ್ರೀಂ ಕೋರ್ಟ್ ಏಪ್ರಿಲ್ 25ರಂದು ಆದೇಶಿಸಿತ್ತು.

ವೈಯಕ್ತಿಕ ಸಹಾಯಕ್ಕೆ ಬದಲಾಗಿ ”ಲೈಂಗಿಕ ಬೇಡಿಕೆ”ಯಿಟ್ಟಿದ್ದ ಕನಿಷ್ಠ ಎರಡು ನಿದರ್ಶನಗಳನ್ನು ಹೊಂದಿರುವ ಎರಡು ಎಫ್‌ಐಆರ್‌ಗಳನ್ನು ಮಾತ್ರ ಏಪ್ರಿಲ್ 28ರಂದು, ದೆಹಲಿ ಪೊಲೀಸರು ದಾಖಲಿಸಿದ್ದಾರೆ.

ಆಪಾದಿತ ಅಪರಾಧಕ್ಕೆ ಕಾರಣವಾದ ಘಟನೆಗಳ ಅನುಕ್ರಮವನ್ನು ಮರುಸೃಷ್ಟಿಸಲು ನಿನ್ನೆ ದೆಹಲಿ ಪೊಲೀಸರು ಮಹಿಳಾ ಕುಸ್ತಿಪಟುವನ್ನು ಇಲ್ಲಿನ ಬ್ರಿಜ್ ಭೂಷಣ್ ಅವರ ಕಚೇರಿಗೆ ಕರೆದೊಯ್ದಿದ್ದರು. ಮಹಿಳಾ ಪೊಲೀಸ್ ಸಿಬ್ಬಂದಿಯೊಂದಿಗೆ ಕುಸ್ತಿಪಟುವನ್ನು ಮಧ್ಯಾಹ್ನ 1.30 ಕ್ಕೆ WFI ಕಚೇರಿಗೆ ಕರೆದೊಯ್ಯಲಾಯಿತು ಎಂದು ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಅವರು ಅರ್ಧ ಗಂಟೆ ಅಲ್ಲಿದ್ದರು. ದೃಶ್ಯವನ್ನು ಮರುಸೃಷ್ಟಿಸಲು ಮತ್ತು ಕಿರುಕುಳವನ್ನು ಎದುರಿಸಿದ ಸ್ಥಳಗಳನ್ನು ನೆನಪಿಸಿಕೊಳ್ಳುವಂತೆ ಅವರನ್ನು ಕೇಳಲಾಯಿತು” ಎಂದು ಪೊಲೀಸ್ ಅಧಿಕಾರಿ ಹೇಳಿದರು.

ಕೇಂದ್ರ ಕ್ರೀಡಾ ಸಚಿವಾಲಯವು ಜೂನ್ 15ರೊಳಗೆ ಲೈಂಗಿಕ ಕಿರುಕುಳದ ಪ್ರಕರಣವನ್ನುತ್ವರಿತವಾಗಿ ತನಿಖೆ ಮಾಡುವಂತೆ ದೆಹಲಿ ಪೋಯ್ಸ್‌ಗೆ ಕೇಳಿದೆ. ಆದರೆ ಒಲಿಂಪಿಕ್ ಕುಸ್ತಿ ಚಾಂಪಿಯನ್‌ಗಳಾದ ಬಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್, ತಮಗೆ ನ್ಯಾಯ ಸಿಗದಿದ್ದರೆ ರಾಜಧಾನಿ ದೆಹಲಿಯಲ್ಲಿ ದೊಡ್ಡ ಮಟ್ಟದ ಪ್ರತಿಭಟನೆಯನ್ನು ಪುನರಾರಂಭಿಸುವುದಾಗಿ ಕೇಂದ್ರಕ್ಕೆ ಕುಸ್ತಿಪಟುಗಳು ಎಚ್ಚರಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...