Homeಮುಖಪುಟಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದ ವಿಡಿಯೋ, ಫೋಟೊ, ವಾಟ್ಸ್​ಆ್ಯಪ್ ಚಾಟ್ ಒದಗಿಸುವಂತೆ ಕುಸ್ತಿಪಟುಗಳಿಗೆ ಸಾಕ್ಷ್ಯ ಕೇಳಿದ ಪೊಲೀಸರು

ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದ ವಿಡಿಯೋ, ಫೋಟೊ, ವಾಟ್ಸ್​ಆ್ಯಪ್ ಚಾಟ್ ಒದಗಿಸುವಂತೆ ಕುಸ್ತಿಪಟುಗಳಿಗೆ ಸಾಕ್ಷ್ಯ ಕೇಳಿದ ಪೊಲೀಸರು

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಷನ್ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ಲೈಂಗಿಕ ಕಿರುಕುಳ ಆರೋಪ ಮಾಡಿದ್ದರು. ಈ ಆರೋಪಕ್ಕೆ ಸಂಬಂಧಿಸಿದ ವಿಡಿಯೋ, ಫೋಟೊಗಳು, ವಾಟ್ಸ್​ಆ್ಯಪ್ ಚಾಟ್​ಗಳನ್ನು ಒದಗಿಸುವಂತೆ ಪೊಲೀಸರು ಕೇಳಿದ್ದಾರೆ.

ಪ್ರತಿಭಟನಾಕಾರರು ಪೊಲೀಸ್​ ತನಿಖೆಯನ್ನು ನಂಬುವುದಿಲ್ಲ, ಬಿಜೆಪಿ ಸಂಸದರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದ್ದು, ಅವರು ಇನ್ನೂ ಜೈಲಿಗೆ ಹೋಗದೆ ಹೊರಗಿರುವುದು ತನಿಖೆಗೆ ಅಡ್ಡಿಯಾಗುತ್ತಿದೆ ಎಂದು ಹೇಳಿದ್ದರು.

ತಮ್ಮ ಉಸಿರಾಟವನ್ನು ಪರೀಕ್ಷಿಸುವ ನೆಪದಲ್ಲಿ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್‌ಭೂಷಣ್ ಸಿಂಗ್ ಅವರು ತಮ್ಮ ಕೈಯನ್ನು ಹಿಡಿದು ಹೊಟ್ಟೆ ಭಾಗವನ್ನು ಮುಟ್ಟುತ್ತಿದ್ದರು ಎಂದು ಉನ್ನತ ಮಹಿಳಾ ಕುಸ್ತಿಪಟುಗಳು ಆರೋಪಿಸಿದ್ದಾರೆ. ಇದೀಗ ಕುಸ್ತಿಪಟುಗಳಿಗೆ ಸಾಕ್ಷಿಯಾಗಿ ಆಡಿಯೋ, ವಿಡಿಯೋ ಅಥವಾ ಫೋಟೋಗಳನ್ನು ಹಂಚಿಕೊಳ್ಳಲು ದೆಹಲಿ ಪೊಲೀಸರು ಕೇಳಿದ್ದಾರೆ ಎಂದು ವರದಿಯಾಗಿದೆ.

ಈ ಕುರಿತು ಪೊಲೀಸರು ಪ್ರತಿಕ್ರಿಯೆ ನೀಡಿದ್ದು, ನಾವು ಪ್ರಕರಣವನ್ನು ಮುನ್ನಡೆಸಲು ಸಿದ್ಧರಿದ್ದೇವೆ ಆದರೆ ನಿಮ್ಮ ಆರೋಪವನ್ನು ಪುಷ್ಠಿಗೊಳಿಸಲು ಬೇಕಾದ ಸಾಕ್ಷ್ಯಗಳನ್ನು ಒದಗಿಸಿ, ನಿಮ್ಮ ಬಳಿ ಫೋಟೊ, ವಾಟ್ಸಾಪ್​ ಚಾಟ್ ಅಥವಾ ಇನ್ಯಾವುದೇ ವಿಡಿಯೋಗಳು ಇದ್ದರೂ ಅದನ್ನು ನಮಗೆ ನೀಡಿ ನಾವು ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಬಂಧನವಿಲ್ಲದೆ ನಿಷ್ಪಕ್ಷಪಾತ ತನಿಖೆ ನಡೆಸಲಾಗುವುದಿಲ್ಲ ಎಂದು ಕುಸ್ತಿಪಟುಗಳು ಹೇಳಿದ್ದಾರೆ. ಬ್ರಿಜ್ ಭೂಷಣ್ ಶರಣ್ ಸಿಂಗ್ ಈ ಹಿಂದೆ ಲೈಂಗಿಕ ದುರ್ವರ್ತನೆಯ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದರು.

ನನ್ನ ವಿರುದ್ಧದ ಒಂದೇ ಒಂದು ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ, ನಿಮ್ಮ ಬಳಿ (ಕುಸ್ತಿಪಟುಗಳು) ಏನಾದರೂ ಸಾಕ್ಷ್ಯಾಧಾರಗಳಿದ್ದರೆ ಅದನ್ನು ಕೋರ್ಟ್‌ಗೆ ಹಾಜರುಪಡಿಸಿ ಮತ್ತು ಯಾವುದೇ ಶಿಕ್ಷೆಯನ್ನು ಸ್ವೀಕರಿಸಲು ನಾನು ಸಿದ್ಧನಿದ್ದೇನೆ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಜೂ.15ರೊಳಗೆ ನ್ಯಾಯ ಸಿಗದಿದ್ದರೆ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸುತ್ತೇವೆ: ಸರ್ಕಾರಕ್ಕೆ ಕುಸ್ತಿಪಟುಗಳ ಎಚ್ಚರಿಕೆ

ಎಫ್‌ಐಆರ್‌ಗಳ ಪ್ರಕಾರ, 2016 ಮತ್ತು 2019 ರ ನಡುವೆ 21 ಅಶೋಕ್ ರಸ್ತೆಯಲ್ಲಿರುವ ಡಬ್ಲ್ಯುಎಫ್‌ಐ ಕಚೇರಿಯಲ್ಲಿ, ಸಿಂಗ್ ಅವರ ಬಂಗಲೆಯಲ್ಲಿ ಮತ್ತು ವಿದೇಶದಲ್ಲಿ ಪಂದ್ಯಾವಳಿಗಳ ಸಮಯದಲ್ಲಿ ಲೈಂಗಿಕ ಕಿರುಕುಳದ ಘಟನೆಗಳು ನಡೆದಿವೆ.

WFI ಕಚೇರಿಯಲ್ಲಿ ಕಳೆದ ಸಮಯ, ವಿದೇಶದಲ್ಲಿ ನಿಮ್ಮ ರೂಮ್‌ಮೇಟ್‌ಗಳ ಹೆಸರುಗಳು, ಹೋಟೆಲ್‌ಗಳ ವಿವರಗಳು ಮತ್ತು ಸಂಭಾವ್ಯ ಸಾಕ್ಷಿಗಳ ವಿವರಗಳನ್ನು ನೀಡಬೇಕು ಎಂದು ಪೊಲೀಸರು ಕುಸ್ತಿಪಟುಗಳಿಗೆ ಕೇಳಿದ್ದಾರೆ.

ಕುಸ್ತಿಪಟುಗಳಿಗೆ ಬ್ರಿಜ್‌ಭೂ‍ಷಣ್ ಅವರಿಂದ ಬಂದಿರುವ ಬೆದರಿಕೆ ಕರೆಗಳ ವಿವರಗಳನ್ನು ಪೊಲೀಸರು ಕೇಳಿದ್ದಾರೆ.

ಪೊಲೀಸರು ಎಫ್‌ಐಆರ್‌ಗಳನ್ನು ದಾಖಲಿಸುತ್ತಿಲ್ಲ ಎಂದು ಕುಸ್ತಿಪಟುಗಳು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದರು. ಆ ಬಳಿಕ ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ದೆಹಲಿ ಪೊಲೀಸರು ಸಿಂಗ್ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

ಡಬ್ಲ್ಯುಎಫ್‌ಐ ಮುಖ್ಯಸ್ಥರ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸಲು ಕೋರಿ ದೂರು ನೀಡಿದ ಕುಸ್ತಿಪಟುಗಳ ಹೆಸರನ್ನು ನ್ಯಾಯಾಂಗ ದಾಖಲೆಗಳಿಂದ ತೆಗೆದುಹಾಕುವಂತೆ ಸುಪ್ರೀಂ ಕೋರ್ಟ್ ಏಪ್ರಿಲ್ 25ರಂದು ಆದೇಶಿಸಿತ್ತು.

ವೈಯಕ್ತಿಕ ಸಹಾಯಕ್ಕೆ ಬದಲಾಗಿ ”ಲೈಂಗಿಕ ಬೇಡಿಕೆ”ಯಿಟ್ಟಿದ್ದ ಕನಿಷ್ಠ ಎರಡು ನಿದರ್ಶನಗಳನ್ನು ಹೊಂದಿರುವ ಎರಡು ಎಫ್‌ಐಆರ್‌ಗಳನ್ನು ಮಾತ್ರ ಏಪ್ರಿಲ್ 28ರಂದು, ದೆಹಲಿ ಪೊಲೀಸರು ದಾಖಲಿಸಿದ್ದಾರೆ.

ಆಪಾದಿತ ಅಪರಾಧಕ್ಕೆ ಕಾರಣವಾದ ಘಟನೆಗಳ ಅನುಕ್ರಮವನ್ನು ಮರುಸೃಷ್ಟಿಸಲು ನಿನ್ನೆ ದೆಹಲಿ ಪೊಲೀಸರು ಮಹಿಳಾ ಕುಸ್ತಿಪಟುವನ್ನು ಇಲ್ಲಿನ ಬ್ರಿಜ್ ಭೂಷಣ್ ಅವರ ಕಚೇರಿಗೆ ಕರೆದೊಯ್ದಿದ್ದರು. ಮಹಿಳಾ ಪೊಲೀಸ್ ಸಿಬ್ಬಂದಿಯೊಂದಿಗೆ ಕುಸ್ತಿಪಟುವನ್ನು ಮಧ್ಯಾಹ್ನ 1.30 ಕ್ಕೆ WFI ಕಚೇರಿಗೆ ಕರೆದೊಯ್ಯಲಾಯಿತು ಎಂದು ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಅವರು ಅರ್ಧ ಗಂಟೆ ಅಲ್ಲಿದ್ದರು. ದೃಶ್ಯವನ್ನು ಮರುಸೃಷ್ಟಿಸಲು ಮತ್ತು ಕಿರುಕುಳವನ್ನು ಎದುರಿಸಿದ ಸ್ಥಳಗಳನ್ನು ನೆನಪಿಸಿಕೊಳ್ಳುವಂತೆ ಅವರನ್ನು ಕೇಳಲಾಯಿತು” ಎಂದು ಪೊಲೀಸ್ ಅಧಿಕಾರಿ ಹೇಳಿದರು.

ಕೇಂದ್ರ ಕ್ರೀಡಾ ಸಚಿವಾಲಯವು ಜೂನ್ 15ರೊಳಗೆ ಲೈಂಗಿಕ ಕಿರುಕುಳದ ಪ್ರಕರಣವನ್ನುತ್ವರಿತವಾಗಿ ತನಿಖೆ ಮಾಡುವಂತೆ ದೆಹಲಿ ಪೋಯ್ಸ್‌ಗೆ ಕೇಳಿದೆ. ಆದರೆ ಒಲಿಂಪಿಕ್ ಕುಸ್ತಿ ಚಾಂಪಿಯನ್‌ಗಳಾದ ಬಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್, ತಮಗೆ ನ್ಯಾಯ ಸಿಗದಿದ್ದರೆ ರಾಜಧಾನಿ ದೆಹಲಿಯಲ್ಲಿ ದೊಡ್ಡ ಮಟ್ಟದ ಪ್ರತಿಭಟನೆಯನ್ನು ಪುನರಾರಂಭಿಸುವುದಾಗಿ ಕೇಂದ್ರಕ್ಕೆ ಕುಸ್ತಿಪಟುಗಳು ಎಚ್ಚರಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...