Homeಕರ್ನಾಟಕಪುನೀತ್‌ ರಾಜ್‌ಕುಮಾರ್‌‌ ಸಂಸ್ಥೆಯ ದೇಣಿಗೆಗಾಗಿ ಆಯೋಜಿಸಿದ್ದ ಕಾರ್ಯಕ್ರಮ ರದ್ದುಗೊಳಿಸಿದ ಪೊಲೀಸರು

ಪುನೀತ್‌ ರಾಜ್‌ಕುಮಾರ್‌‌ ಸಂಸ್ಥೆಯ ದೇಣಿಗೆಗಾಗಿ ಆಯೋಜಿಸಿದ್ದ ಕಾರ್ಯಕ್ರಮ ರದ್ದುಗೊಳಿಸಿದ ಪೊಲೀಸರು

‘ಗೆದ್ದ ದ್ವೇಷ, ಸೋತ ಕಲಾವಿದ, ವಿದಾಯ!’ ಎಂದು ಬೆಂಗಳೂರು ಕಾರ್ಯಕ್ರಮ ರದ್ದಾಗಿದ್ದಕ್ಕೆ ಮುನಾವರ್‌ ಪ್ರತಿಕ್ರಿಯಿಸಿದ್ದಾರೆ

- Advertisement -
- Advertisement -

ದೇಶದ ಖ್ಯಾತ ಸ್ಟಾಂಡ್‌ ಅಪ್‌ ಕಾಮೆಡಿಯನ್‌ ಮುನಾವರ್‌ ಫಾರೂಖಿ ಅವರ ಕಾರ್ಯಕ್ರಮವೊಂದು ಭಾನುವಾರ(ಇಂದು) ಬೆಂಗಳೂರಿನಲ್ಲಿ ಆಯೋಜನೆಯಾಗಿತ್ತು. ಆದರೆ ಬೆಂಗಳೂರಿನ ಅಶೋಕನಗರ ಠಾಣೆಯ ಪೊಲೀಸರು ಕಾನೂನು ಸುವ್ಯವಸ್ಥೆಗೆ ಭಂಗ ಆಗುತ್ತದೆ ಎಂದು ಈ ಹೇಳಿ ಆಯೋಜಕರಿಗೆ ಪತ್ರವನ್ನು ಬರೆದದ್ದರಿಂದ, ಆಯೋಜಕರು ಕಾರ್ಯಕ್ರಮವನ್ನು ರದ್ದು ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಮೇಡಿಯನ್ ಮುನಾವರ್‌, ‘‘ದ್ವೇಷ ಗೆದ್ದಿದೆ, ಕಲಾವಿದ ಸೋತುಬಿಟ್ಟ, ನಾನು ಮುಗಿಸುತ್ತಿದ್ದೇನೆ! ವಿದಾಯ! ಅನ್ಯಾಯ” ಎಂದು ಪ್ರತಿಕ್ರಿಯಿಸಿದ್ದಾರೆ.

ಆಯೋಜಕರಿಗೆ ಬೆಂಗಳೂರು ಪೊಲೀಸರು ಬರೆದಿರುವ ಪತ್ರದಲ್ಲಿ, “ಮುನಾವರ್‌ ಫಾರೂಖಿ ಒಬ್ಬರು ವಿವಾದಾತ್ಮಕ ವ್ಯಕ್ತಿಯಾಗಿದ್ದು, ಅವರು ಇತರ ಧರ್ಮಗಳ ದೇವರ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೀಡುವಂತಹ ವ್ಯಕ್ತಿ ಎಂದು ನಮಗೆ ತಿಳಿದು ಬಂದಿದೆ. ಆದ್ದರಿಂದ ಹಲವು ರಾಜ್ಯಗಳಲ್ಲಿ ಅವರ ಕಾರ್ಯಕ್ರಮಗಳು ರದ್ದಾಗಿವೆ. ಮಧ್ಯಪ್ರದೇಶ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಅವರ ವಿರುದ್ದ ಪ್ರಕರಣಗಳು ದಾಖಲಾಗಿದೆ. ಅವರ ಕಾರ್ಯಕ್ರಮಕ್ಕೆ ಹಲವು ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿವೆ ಎಂದು ನಮಗೆ ಮಾಹಿತಿಯಿದೆ. ಅವರ ಕಾರ್ಯಕ್ರಮದಿಂದ ಸಾರ್ವಜನಿಕರಲ್ಲಿ ಶಾಂತಿ ಮತ್ತು ಸೌಹಾರ್ಧತೆ ಹಾಳಾಗುತ್ತದೆ, ಇದರಿಂದಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗುತ್ತದೆ. ಆದ್ದರಿಂದ ಭಾನುವಾರ ನಡೆಯಲಿರುವ ಕಾರ್ಯಕ್ರಮವನ್ನು ರದ್ದುಗೊಳಿಸಬೇಕು” ಎಂದು ಪೊಲೀಸರು ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಹಿಂದೂ ದೇವತೆಗಳ ಅಪಹಾಸ್ಯ: ಹಾಸ್ಯ ನಟನ ವಿರುದ್ದ ಯಾವುದೇ ಪುರಾವೆಯಿಲ್ಲ ಎಂದ ಪೊಲೀಸರು

ಕಾರ್ಯಕ್ರಮ ಆಯೋಜಕರು ಪ್ರದರ್ಶನವನ್ನು ರದ್ದುಗೊಳಿಸಿದ್ದಾರೆ ಎಂದು ಮುನಾವರ್‌ ಫಾರೂಖಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಭಾವನಾತ್ಮಕ ಪತ್ರ ಬರೆದಿದ್ದಾರೆ. ಅದರಲ್ಲಿ, “ಬೆದರಿಕೆಗಳು ಬಂದ ಹಿನ್ನಲೆ, ಬೆಂಗಳೂರಿನಲ್ಲಿ ಇಂದು ನಡೆಯಲಿದ್ದ ಶೋ ರದ್ದಾಗಿದೆ. ನಾವು 600+ ಟಿಕೆಟ್‌ಗಳನ್ನು ಮಾರಾಟ ಮಾಡಿದ್ದೇವೆ. ದಿವಂಗತ ಪುನೀತ್ ರಾಜ್‌ಕುಮಾರ್ ಅವರ ಸಂಸ್ಥೆಗೆ ದೇಣಿಗೆ ಸಂಗ್ರಹಕ್ಕಾಗಿ ತಿಂಗಳ ಹಿಂದೆ ನನ್ನ ತಂಡವನ್ನು ಕರೆಯಲಾಗಿತ್ತು. ಈ ಸಂಸ್ಥೆಯು ‘ಚಾರಿಟಿಗಾಗಿ ಇದನ್ನು ಮಾಡುತ್ತಿದ್ದೇವೆ ಎಂದು ಹೇಳದಿರಿ’ ಎಂದು ಹೇಳಿರುವುದನ್ನು ನಾವು ಒಪ್ಪಿಕೊಂಡಿದ್ದೆವು” ಎಂದು ಹೇಳಿದ್ದಾರೆ.

“ಇದು ಅನ್ಯಾಯವಾಗಿದೆ. ನನ್ನ ಪ್ರದರ್ಶನವು ಧರ್ಮಾತೀತವಾಗಿ ಭಾರತದ ಜನರಿಂದ ಪ್ರೀತಿ ಗಳಿಸಿದೆ. ಇದು ಅನ್ಯಾಯವಾಗಿದೆ. ಪ್ರದರ್ಶನದಲ್ಲಿ ಏನೂ ತೊಂದರೆಯಿಲ್ಲ ಎಂದು ನಾವು ಪ್ರದರ್ಶನದ ಸೆನ್ಸಾರ್ ಪ್ರಮಾಣಪತ್ರವನ್ನು ಹೊಂದಿದ್ದೇವೆ. ಬೆದರಿಕೆಗಳ ಕಾರಣ ಕಳೆದ 2 ತಿಂಗಳುಗಳಲ್ಲಿ 12 ಶೋಗಳನ್ನು ಬಿಟ್ಟುಬಿಟ್ಟಿದ್ದೇವೆ” ಎಂದು ಅವರು ಹೇಳಿದ್ದಾರೆ.

“ನನಗನಿಸುತ್ತದೆ ಇದು ಇಲ್ಲಿ ಮುಗಿಯಿತು ಎಂದು. ನನ್ನ ಹೆಸರು ಮುನಾವರ್ ಫಾರೂಖಿ ಮತ್ತು ಇದು ನನ್ನ ಸಮಯ. ಜನರೇ ನೀವುಗಳು ಅದ್ಭುತ ಪ್ರೇಕ್ಷಕರಾಗಿದ್ದೀರಿ. ನಾನು ಇದನ್ನು ಇಲ್ಲಿಗೆ ಮುಗಿಸುತ್ತಿದ್ದೇನೆ, ವಿದಾಯ” ಎಂದು ಅವರು ಬೇಸರ ವ್ಯಕ್ತಪಡಿಸಿ ಬರೆದಿದ್ದಾರೆ.

ಇದನ್ನೂ ಓದಿ: ಕೊನೆಗೂ ಜೈಲಿನಿಂದ ಬಿಡುಗಡೆಗೊಂಡ ಹಾಸ್ಯ ಕಲಾವಿದ ಮುನಾವರ್‌ ಫಾರೂಕಿ

ಮಧ್ಯಪ್ರದೇಶದ ಇಂಧೋರ್‌ನಲ್ಲಿ ಜನವರಿ 2 ರಂದು ಬಂಧನಕ್ಕೊಳಗಾಗಿದ್ದ ಹಾಸ್ಯ ಕಲಾವಿದ ಮುನಾವರ್‌ ಫಾರೂಖಿ ಅವರು ಹಿಂದೂ ಧಾರ್ಮಿಕ ನಂಬಿಕೆಗೆ ಧಕ್ಕೆಯುಂಟು ಮಾಡಿದ್ದಾರೆ ಎಂಬ ಆರೋಪಕ್ಕೆ ಯಾವುದೇ ಪುರಾವೆಯಿಲ್ಲ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದರು.

“ಮುನಾವರ್‌ ಫಾರೂಖಿ ಅವರು ಹಿಂದೂ ದೇವತೆಗಳನ್ನಾಲಿ ಅಥವಾ ಗೃಹ ಸಚಿವ ಅಮಿತ್ ಶಾ ಅವರನ್ನಾಲಿ ಅವಮಾನಿಸಿದ ಯಾವುದೇ ಪುರಾವೆಗಳಿಲ್ಲ” ಎಂದು ತುಕಾಗಂಜ್ ಠಾಣೆಯ ಇನ್ಸ್‌ಪೆಕ್ಟರ್‌ ಕಮಲೇಶ ಶರ್ಮಾ ಅವರು ಹೇಳಿದ್ದಾಗಿ ದಿ ಕ್ವಿಂಟ್ ವರದಿ ಮಾಡಿತ್ತು. ಇದರ ನಂತರ ಬಂಧನದ ಸುಮಾರು ಒಂದು ತಿಂಗಳ ನಂತರ ಜೈಲಿನಿಂದ ಬಿಡುಗಡೆ ಹೊಂದಿದ್ದರು. ಅದಾಗಿಯೂ ಹಲವು ಹಿಂದುತ್ವವಾದಿ ಸಂಘಟನೆಗಳ ಬೆದರಿಕೆಯಿಂದಾಗಿ ತನಗೆ ಕೆಲಸ ಮಾಡಲು ಆಗುತ್ತಿಲ್ಲ ಎಂದು ಸ್ಟ್ಯಾಂಡ್‌‌ಅಪ್‌ ಕಾಮೇಡಿಯನ್‌ ಮುನಾವರ್ ಫಾರೂಖಿ ಅಕ್ಟೋಬರ್‌ ಕೊನೆಯಲ್ಲಿ ಹೇಳಿದ್ದರು.

ಇದನ್ನೂ ಓದಿ: ಕಾಮೇಡಿಯನ್‌‌ ಮುನಾವರ್‌ ಫಾರೂಖಿಗೆ ಪ್ರತಿದಿನ 50 ಬೆದರಿಕೆ ಕರೆ; ಹಲವು ಶೋ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಈ ದೇಶದಲ್ಲಿ ಇಲ್ಲಿನ ಮೂಲನಿವಾಸಿಗಳ ಮೇಲಿನ ದೌರ್ಜನ್ಯ ಇಂದು ನಿನ್ನೆಯದಲ್ಲ ಇದು ಹರಪ್ಪದ ಶ್ರೀಮಂತ ಸಂಸ್ಕೃತಿಯ ಮೇಲಿನ ದಾಳಿಯೋಂದಿಗೆ ಆದಿಯಾಗಿ ಬೌದ್ಧ ಧರ್ಮ , ಬಸವ ಧರ್ಮ ಹಾಗೂ ಇಂದಿಗೂ ಬಹುಜನರ ಮೇಲೆ ನಿರಂತರವಾಗಿ ನಡೆಯುತ್ತಲೇ ಇದೆ. ಅದಕ್ಕಾಗಿಯೇ ಬಹುಜನರನ್ನು ಸಾವಿರಾರು ವರ್ಷಗಳ ಕಾಲ ಶಿಕ್ಷಣ ಆದಿಯಾಗಿ ಎಲ್ಲಾ ಹಕ್ಕು ಅವಕಾಶಗಳಿಂದ ವಮಚಿಸಿದ್ದು, ಈಗಲೂ ಅದೆ ಪ್ರಯತ್ನಗಳು ನಡೆಯುತ್ತಲೇ ಇವೆ. ಆದರೆ ನಮ್ಮ ಈ ಮುಗ್ಧ ಜನರಿಗೆ ಅರ್ಥ ವಾಗದಿರುವುದೆ ದುರಂತ.

  2. Is it really for puneeth sir charity or… Doubt it… Puneeth sir never defamed this coutry reputation… Instead he silently did society reforms….. Not like this on stage

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...