Homeಕರ್ನಾಟಕಪುನೀತ್‌ ರಾಜ್‌ಕುಮಾರ್‌‌ ಸಂಸ್ಥೆಯ ದೇಣಿಗೆಗಾಗಿ ಆಯೋಜಿಸಿದ್ದ ಕಾರ್ಯಕ್ರಮ ರದ್ದುಗೊಳಿಸಿದ ಪೊಲೀಸರು

ಪುನೀತ್‌ ರಾಜ್‌ಕುಮಾರ್‌‌ ಸಂಸ್ಥೆಯ ದೇಣಿಗೆಗಾಗಿ ಆಯೋಜಿಸಿದ್ದ ಕಾರ್ಯಕ್ರಮ ರದ್ದುಗೊಳಿಸಿದ ಪೊಲೀಸರು

‘ಗೆದ್ದ ದ್ವೇಷ, ಸೋತ ಕಲಾವಿದ, ವಿದಾಯ!’ ಎಂದು ಬೆಂಗಳೂರು ಕಾರ್ಯಕ್ರಮ ರದ್ದಾಗಿದ್ದಕ್ಕೆ ಮುನಾವರ್‌ ಪ್ರತಿಕ್ರಿಯಿಸಿದ್ದಾರೆ

- Advertisement -
- Advertisement -

ದೇಶದ ಖ್ಯಾತ ಸ್ಟಾಂಡ್‌ ಅಪ್‌ ಕಾಮೆಡಿಯನ್‌ ಮುನಾವರ್‌ ಫಾರೂಖಿ ಅವರ ಕಾರ್ಯಕ್ರಮವೊಂದು ಭಾನುವಾರ(ಇಂದು) ಬೆಂಗಳೂರಿನಲ್ಲಿ ಆಯೋಜನೆಯಾಗಿತ್ತು. ಆದರೆ ಬೆಂಗಳೂರಿನ ಅಶೋಕನಗರ ಠಾಣೆಯ ಪೊಲೀಸರು ಕಾನೂನು ಸುವ್ಯವಸ್ಥೆಗೆ ಭಂಗ ಆಗುತ್ತದೆ ಎಂದು ಈ ಹೇಳಿ ಆಯೋಜಕರಿಗೆ ಪತ್ರವನ್ನು ಬರೆದದ್ದರಿಂದ, ಆಯೋಜಕರು ಕಾರ್ಯಕ್ರಮವನ್ನು ರದ್ದು ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಮೇಡಿಯನ್ ಮುನಾವರ್‌, ‘‘ದ್ವೇಷ ಗೆದ್ದಿದೆ, ಕಲಾವಿದ ಸೋತುಬಿಟ್ಟ, ನಾನು ಮುಗಿಸುತ್ತಿದ್ದೇನೆ! ವಿದಾಯ! ಅನ್ಯಾಯ” ಎಂದು ಪ್ರತಿಕ್ರಿಯಿಸಿದ್ದಾರೆ.

ಆಯೋಜಕರಿಗೆ ಬೆಂಗಳೂರು ಪೊಲೀಸರು ಬರೆದಿರುವ ಪತ್ರದಲ್ಲಿ, “ಮುನಾವರ್‌ ಫಾರೂಖಿ ಒಬ್ಬರು ವಿವಾದಾತ್ಮಕ ವ್ಯಕ್ತಿಯಾಗಿದ್ದು, ಅವರು ಇತರ ಧರ್ಮಗಳ ದೇವರ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೀಡುವಂತಹ ವ್ಯಕ್ತಿ ಎಂದು ನಮಗೆ ತಿಳಿದು ಬಂದಿದೆ. ಆದ್ದರಿಂದ ಹಲವು ರಾಜ್ಯಗಳಲ್ಲಿ ಅವರ ಕಾರ್ಯಕ್ರಮಗಳು ರದ್ದಾಗಿವೆ. ಮಧ್ಯಪ್ರದೇಶ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಅವರ ವಿರುದ್ದ ಪ್ರಕರಣಗಳು ದಾಖಲಾಗಿದೆ. ಅವರ ಕಾರ್ಯಕ್ರಮಕ್ಕೆ ಹಲವು ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿವೆ ಎಂದು ನಮಗೆ ಮಾಹಿತಿಯಿದೆ. ಅವರ ಕಾರ್ಯಕ್ರಮದಿಂದ ಸಾರ್ವಜನಿಕರಲ್ಲಿ ಶಾಂತಿ ಮತ್ತು ಸೌಹಾರ್ಧತೆ ಹಾಳಾಗುತ್ತದೆ, ಇದರಿಂದಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗುತ್ತದೆ. ಆದ್ದರಿಂದ ಭಾನುವಾರ ನಡೆಯಲಿರುವ ಕಾರ್ಯಕ್ರಮವನ್ನು ರದ್ದುಗೊಳಿಸಬೇಕು” ಎಂದು ಪೊಲೀಸರು ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಹಿಂದೂ ದೇವತೆಗಳ ಅಪಹಾಸ್ಯ: ಹಾಸ್ಯ ನಟನ ವಿರುದ್ದ ಯಾವುದೇ ಪುರಾವೆಯಿಲ್ಲ ಎಂದ ಪೊಲೀಸರು

ಕಾರ್ಯಕ್ರಮ ಆಯೋಜಕರು ಪ್ರದರ್ಶನವನ್ನು ರದ್ದುಗೊಳಿಸಿದ್ದಾರೆ ಎಂದು ಮುನಾವರ್‌ ಫಾರೂಖಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಭಾವನಾತ್ಮಕ ಪತ್ರ ಬರೆದಿದ್ದಾರೆ. ಅದರಲ್ಲಿ, “ಬೆದರಿಕೆಗಳು ಬಂದ ಹಿನ್ನಲೆ, ಬೆಂಗಳೂರಿನಲ್ಲಿ ಇಂದು ನಡೆಯಲಿದ್ದ ಶೋ ರದ್ದಾಗಿದೆ. ನಾವು 600+ ಟಿಕೆಟ್‌ಗಳನ್ನು ಮಾರಾಟ ಮಾಡಿದ್ದೇವೆ. ದಿವಂಗತ ಪುನೀತ್ ರಾಜ್‌ಕುಮಾರ್ ಅವರ ಸಂಸ್ಥೆಗೆ ದೇಣಿಗೆ ಸಂಗ್ರಹಕ್ಕಾಗಿ ತಿಂಗಳ ಹಿಂದೆ ನನ್ನ ತಂಡವನ್ನು ಕರೆಯಲಾಗಿತ್ತು. ಈ ಸಂಸ್ಥೆಯು ‘ಚಾರಿಟಿಗಾಗಿ ಇದನ್ನು ಮಾಡುತ್ತಿದ್ದೇವೆ ಎಂದು ಹೇಳದಿರಿ’ ಎಂದು ಹೇಳಿರುವುದನ್ನು ನಾವು ಒಪ್ಪಿಕೊಂಡಿದ್ದೆವು” ಎಂದು ಹೇಳಿದ್ದಾರೆ.

“ಇದು ಅನ್ಯಾಯವಾಗಿದೆ. ನನ್ನ ಪ್ರದರ್ಶನವು ಧರ್ಮಾತೀತವಾಗಿ ಭಾರತದ ಜನರಿಂದ ಪ್ರೀತಿ ಗಳಿಸಿದೆ. ಇದು ಅನ್ಯಾಯವಾಗಿದೆ. ಪ್ರದರ್ಶನದಲ್ಲಿ ಏನೂ ತೊಂದರೆಯಿಲ್ಲ ಎಂದು ನಾವು ಪ್ರದರ್ಶನದ ಸೆನ್ಸಾರ್ ಪ್ರಮಾಣಪತ್ರವನ್ನು ಹೊಂದಿದ್ದೇವೆ. ಬೆದರಿಕೆಗಳ ಕಾರಣ ಕಳೆದ 2 ತಿಂಗಳುಗಳಲ್ಲಿ 12 ಶೋಗಳನ್ನು ಬಿಟ್ಟುಬಿಟ್ಟಿದ್ದೇವೆ” ಎಂದು ಅವರು ಹೇಳಿದ್ದಾರೆ.

“ನನಗನಿಸುತ್ತದೆ ಇದು ಇಲ್ಲಿ ಮುಗಿಯಿತು ಎಂದು. ನನ್ನ ಹೆಸರು ಮುನಾವರ್ ಫಾರೂಖಿ ಮತ್ತು ಇದು ನನ್ನ ಸಮಯ. ಜನರೇ ನೀವುಗಳು ಅದ್ಭುತ ಪ್ರೇಕ್ಷಕರಾಗಿದ್ದೀರಿ. ನಾನು ಇದನ್ನು ಇಲ್ಲಿಗೆ ಮುಗಿಸುತ್ತಿದ್ದೇನೆ, ವಿದಾಯ” ಎಂದು ಅವರು ಬೇಸರ ವ್ಯಕ್ತಪಡಿಸಿ ಬರೆದಿದ್ದಾರೆ.

ಇದನ್ನೂ ಓದಿ: ಕೊನೆಗೂ ಜೈಲಿನಿಂದ ಬಿಡುಗಡೆಗೊಂಡ ಹಾಸ್ಯ ಕಲಾವಿದ ಮುನಾವರ್‌ ಫಾರೂಕಿ

ಮಧ್ಯಪ್ರದೇಶದ ಇಂಧೋರ್‌ನಲ್ಲಿ ಜನವರಿ 2 ರಂದು ಬಂಧನಕ್ಕೊಳಗಾಗಿದ್ದ ಹಾಸ್ಯ ಕಲಾವಿದ ಮುನಾವರ್‌ ಫಾರೂಖಿ ಅವರು ಹಿಂದೂ ಧಾರ್ಮಿಕ ನಂಬಿಕೆಗೆ ಧಕ್ಕೆಯುಂಟು ಮಾಡಿದ್ದಾರೆ ಎಂಬ ಆರೋಪಕ್ಕೆ ಯಾವುದೇ ಪುರಾವೆಯಿಲ್ಲ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದರು.

“ಮುನಾವರ್‌ ಫಾರೂಖಿ ಅವರು ಹಿಂದೂ ದೇವತೆಗಳನ್ನಾಲಿ ಅಥವಾ ಗೃಹ ಸಚಿವ ಅಮಿತ್ ಶಾ ಅವರನ್ನಾಲಿ ಅವಮಾನಿಸಿದ ಯಾವುದೇ ಪುರಾವೆಗಳಿಲ್ಲ” ಎಂದು ತುಕಾಗಂಜ್ ಠಾಣೆಯ ಇನ್ಸ್‌ಪೆಕ್ಟರ್‌ ಕಮಲೇಶ ಶರ್ಮಾ ಅವರು ಹೇಳಿದ್ದಾಗಿ ದಿ ಕ್ವಿಂಟ್ ವರದಿ ಮಾಡಿತ್ತು. ಇದರ ನಂತರ ಬಂಧನದ ಸುಮಾರು ಒಂದು ತಿಂಗಳ ನಂತರ ಜೈಲಿನಿಂದ ಬಿಡುಗಡೆ ಹೊಂದಿದ್ದರು. ಅದಾಗಿಯೂ ಹಲವು ಹಿಂದುತ್ವವಾದಿ ಸಂಘಟನೆಗಳ ಬೆದರಿಕೆಯಿಂದಾಗಿ ತನಗೆ ಕೆಲಸ ಮಾಡಲು ಆಗುತ್ತಿಲ್ಲ ಎಂದು ಸ್ಟ್ಯಾಂಡ್‌‌ಅಪ್‌ ಕಾಮೇಡಿಯನ್‌ ಮುನಾವರ್ ಫಾರೂಖಿ ಅಕ್ಟೋಬರ್‌ ಕೊನೆಯಲ್ಲಿ ಹೇಳಿದ್ದರು.

ಇದನ್ನೂ ಓದಿ: ಕಾಮೇಡಿಯನ್‌‌ ಮುನಾವರ್‌ ಫಾರೂಖಿಗೆ ಪ್ರತಿದಿನ 50 ಬೆದರಿಕೆ ಕರೆ; ಹಲವು ಶೋ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಈ ದೇಶದಲ್ಲಿ ಇಲ್ಲಿನ ಮೂಲನಿವಾಸಿಗಳ ಮೇಲಿನ ದೌರ್ಜನ್ಯ ಇಂದು ನಿನ್ನೆಯದಲ್ಲ ಇದು ಹರಪ್ಪದ ಶ್ರೀಮಂತ ಸಂಸ್ಕೃತಿಯ ಮೇಲಿನ ದಾಳಿಯೋಂದಿಗೆ ಆದಿಯಾಗಿ ಬೌದ್ಧ ಧರ್ಮ , ಬಸವ ಧರ್ಮ ಹಾಗೂ ಇಂದಿಗೂ ಬಹುಜನರ ಮೇಲೆ ನಿರಂತರವಾಗಿ ನಡೆಯುತ್ತಲೇ ಇದೆ. ಅದಕ್ಕಾಗಿಯೇ ಬಹುಜನರನ್ನು ಸಾವಿರಾರು ವರ್ಷಗಳ ಕಾಲ ಶಿಕ್ಷಣ ಆದಿಯಾಗಿ ಎಲ್ಲಾ ಹಕ್ಕು ಅವಕಾಶಗಳಿಂದ ವಮಚಿಸಿದ್ದು, ಈಗಲೂ ಅದೆ ಪ್ರಯತ್ನಗಳು ನಡೆಯುತ್ತಲೇ ಇವೆ. ಆದರೆ ನಮ್ಮ ಈ ಮುಗ್ಧ ಜನರಿಗೆ ಅರ್ಥ ವಾಗದಿರುವುದೆ ದುರಂತ.

  2. Is it really for puneeth sir charity or… Doubt it… Puneeth sir never defamed this coutry reputation… Instead he silently did society reforms….. Not like this on stage

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....