Homeಕರ್ನಾಟಕಪುನೀತ್‌ ರಾಜ್‌ಕುಮಾರ್‌‌ ಸಂಸ್ಥೆಯ ದೇಣಿಗೆಗಾಗಿ ಆಯೋಜಿಸಿದ್ದ ಕಾರ್ಯಕ್ರಮ ರದ್ದುಗೊಳಿಸಿದ ಪೊಲೀಸರು

ಪುನೀತ್‌ ರಾಜ್‌ಕುಮಾರ್‌‌ ಸಂಸ್ಥೆಯ ದೇಣಿಗೆಗಾಗಿ ಆಯೋಜಿಸಿದ್ದ ಕಾರ್ಯಕ್ರಮ ರದ್ದುಗೊಳಿಸಿದ ಪೊಲೀಸರು

‘ಗೆದ್ದ ದ್ವೇಷ, ಸೋತ ಕಲಾವಿದ, ವಿದಾಯ!’ ಎಂದು ಬೆಂಗಳೂರು ಕಾರ್ಯಕ್ರಮ ರದ್ದಾಗಿದ್ದಕ್ಕೆ ಮುನಾವರ್‌ ಪ್ರತಿಕ್ರಿಯಿಸಿದ್ದಾರೆ

- Advertisement -
- Advertisement -

ದೇಶದ ಖ್ಯಾತ ಸ್ಟಾಂಡ್‌ ಅಪ್‌ ಕಾಮೆಡಿಯನ್‌ ಮುನಾವರ್‌ ಫಾರೂಖಿ ಅವರ ಕಾರ್ಯಕ್ರಮವೊಂದು ಭಾನುವಾರ(ಇಂದು) ಬೆಂಗಳೂರಿನಲ್ಲಿ ಆಯೋಜನೆಯಾಗಿತ್ತು. ಆದರೆ ಬೆಂಗಳೂರಿನ ಅಶೋಕನಗರ ಠಾಣೆಯ ಪೊಲೀಸರು ಕಾನೂನು ಸುವ್ಯವಸ್ಥೆಗೆ ಭಂಗ ಆಗುತ್ತದೆ ಎಂದು ಈ ಹೇಳಿ ಆಯೋಜಕರಿಗೆ ಪತ್ರವನ್ನು ಬರೆದದ್ದರಿಂದ, ಆಯೋಜಕರು ಕಾರ್ಯಕ್ರಮವನ್ನು ರದ್ದು ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಮೇಡಿಯನ್ ಮುನಾವರ್‌, ‘‘ದ್ವೇಷ ಗೆದ್ದಿದೆ, ಕಲಾವಿದ ಸೋತುಬಿಟ್ಟ, ನಾನು ಮುಗಿಸುತ್ತಿದ್ದೇನೆ! ವಿದಾಯ! ಅನ್ಯಾಯ” ಎಂದು ಪ್ರತಿಕ್ರಿಯಿಸಿದ್ದಾರೆ.

ಆಯೋಜಕರಿಗೆ ಬೆಂಗಳೂರು ಪೊಲೀಸರು ಬರೆದಿರುವ ಪತ್ರದಲ್ಲಿ, “ಮುನಾವರ್‌ ಫಾರೂಖಿ ಒಬ್ಬರು ವಿವಾದಾತ್ಮಕ ವ್ಯಕ್ತಿಯಾಗಿದ್ದು, ಅವರು ಇತರ ಧರ್ಮಗಳ ದೇವರ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೀಡುವಂತಹ ವ್ಯಕ್ತಿ ಎಂದು ನಮಗೆ ತಿಳಿದು ಬಂದಿದೆ. ಆದ್ದರಿಂದ ಹಲವು ರಾಜ್ಯಗಳಲ್ಲಿ ಅವರ ಕಾರ್ಯಕ್ರಮಗಳು ರದ್ದಾಗಿವೆ. ಮಧ್ಯಪ್ರದೇಶ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಅವರ ವಿರುದ್ದ ಪ್ರಕರಣಗಳು ದಾಖಲಾಗಿದೆ. ಅವರ ಕಾರ್ಯಕ್ರಮಕ್ಕೆ ಹಲವು ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿವೆ ಎಂದು ನಮಗೆ ಮಾಹಿತಿಯಿದೆ. ಅವರ ಕಾರ್ಯಕ್ರಮದಿಂದ ಸಾರ್ವಜನಿಕರಲ್ಲಿ ಶಾಂತಿ ಮತ್ತು ಸೌಹಾರ್ಧತೆ ಹಾಳಾಗುತ್ತದೆ, ಇದರಿಂದಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗುತ್ತದೆ. ಆದ್ದರಿಂದ ಭಾನುವಾರ ನಡೆಯಲಿರುವ ಕಾರ್ಯಕ್ರಮವನ್ನು ರದ್ದುಗೊಳಿಸಬೇಕು” ಎಂದು ಪೊಲೀಸರು ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಹಿಂದೂ ದೇವತೆಗಳ ಅಪಹಾಸ್ಯ: ಹಾಸ್ಯ ನಟನ ವಿರುದ್ದ ಯಾವುದೇ ಪುರಾವೆಯಿಲ್ಲ ಎಂದ ಪೊಲೀಸರು

ಕಾರ್ಯಕ್ರಮ ಆಯೋಜಕರು ಪ್ರದರ್ಶನವನ್ನು ರದ್ದುಗೊಳಿಸಿದ್ದಾರೆ ಎಂದು ಮುನಾವರ್‌ ಫಾರೂಖಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಭಾವನಾತ್ಮಕ ಪತ್ರ ಬರೆದಿದ್ದಾರೆ. ಅದರಲ್ಲಿ, “ಬೆದರಿಕೆಗಳು ಬಂದ ಹಿನ್ನಲೆ, ಬೆಂಗಳೂರಿನಲ್ಲಿ ಇಂದು ನಡೆಯಲಿದ್ದ ಶೋ ರದ್ದಾಗಿದೆ. ನಾವು 600+ ಟಿಕೆಟ್‌ಗಳನ್ನು ಮಾರಾಟ ಮಾಡಿದ್ದೇವೆ. ದಿವಂಗತ ಪುನೀತ್ ರಾಜ್‌ಕುಮಾರ್ ಅವರ ಸಂಸ್ಥೆಗೆ ದೇಣಿಗೆ ಸಂಗ್ರಹಕ್ಕಾಗಿ ತಿಂಗಳ ಹಿಂದೆ ನನ್ನ ತಂಡವನ್ನು ಕರೆಯಲಾಗಿತ್ತು. ಈ ಸಂಸ್ಥೆಯು ‘ಚಾರಿಟಿಗಾಗಿ ಇದನ್ನು ಮಾಡುತ್ತಿದ್ದೇವೆ ಎಂದು ಹೇಳದಿರಿ’ ಎಂದು ಹೇಳಿರುವುದನ್ನು ನಾವು ಒಪ್ಪಿಕೊಂಡಿದ್ದೆವು” ಎಂದು ಹೇಳಿದ್ದಾರೆ.

“ಇದು ಅನ್ಯಾಯವಾಗಿದೆ. ನನ್ನ ಪ್ರದರ್ಶನವು ಧರ್ಮಾತೀತವಾಗಿ ಭಾರತದ ಜನರಿಂದ ಪ್ರೀತಿ ಗಳಿಸಿದೆ. ಇದು ಅನ್ಯಾಯವಾಗಿದೆ. ಪ್ರದರ್ಶನದಲ್ಲಿ ಏನೂ ತೊಂದರೆಯಿಲ್ಲ ಎಂದು ನಾವು ಪ್ರದರ್ಶನದ ಸೆನ್ಸಾರ್ ಪ್ರಮಾಣಪತ್ರವನ್ನು ಹೊಂದಿದ್ದೇವೆ. ಬೆದರಿಕೆಗಳ ಕಾರಣ ಕಳೆದ 2 ತಿಂಗಳುಗಳಲ್ಲಿ 12 ಶೋಗಳನ್ನು ಬಿಟ್ಟುಬಿಟ್ಟಿದ್ದೇವೆ” ಎಂದು ಅವರು ಹೇಳಿದ್ದಾರೆ.

“ನನಗನಿಸುತ್ತದೆ ಇದು ಇಲ್ಲಿ ಮುಗಿಯಿತು ಎಂದು. ನನ್ನ ಹೆಸರು ಮುನಾವರ್ ಫಾರೂಖಿ ಮತ್ತು ಇದು ನನ್ನ ಸಮಯ. ಜನರೇ ನೀವುಗಳು ಅದ್ಭುತ ಪ್ರೇಕ್ಷಕರಾಗಿದ್ದೀರಿ. ನಾನು ಇದನ್ನು ಇಲ್ಲಿಗೆ ಮುಗಿಸುತ್ತಿದ್ದೇನೆ, ವಿದಾಯ” ಎಂದು ಅವರು ಬೇಸರ ವ್ಯಕ್ತಪಡಿಸಿ ಬರೆದಿದ್ದಾರೆ.

ಇದನ್ನೂ ಓದಿ: ಕೊನೆಗೂ ಜೈಲಿನಿಂದ ಬಿಡುಗಡೆಗೊಂಡ ಹಾಸ್ಯ ಕಲಾವಿದ ಮುನಾವರ್‌ ಫಾರೂಕಿ

ಮಧ್ಯಪ್ರದೇಶದ ಇಂಧೋರ್‌ನಲ್ಲಿ ಜನವರಿ 2 ರಂದು ಬಂಧನಕ್ಕೊಳಗಾಗಿದ್ದ ಹಾಸ್ಯ ಕಲಾವಿದ ಮುನಾವರ್‌ ಫಾರೂಖಿ ಅವರು ಹಿಂದೂ ಧಾರ್ಮಿಕ ನಂಬಿಕೆಗೆ ಧಕ್ಕೆಯುಂಟು ಮಾಡಿದ್ದಾರೆ ಎಂಬ ಆರೋಪಕ್ಕೆ ಯಾವುದೇ ಪುರಾವೆಯಿಲ್ಲ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದರು.

“ಮುನಾವರ್‌ ಫಾರೂಖಿ ಅವರು ಹಿಂದೂ ದೇವತೆಗಳನ್ನಾಲಿ ಅಥವಾ ಗೃಹ ಸಚಿವ ಅಮಿತ್ ಶಾ ಅವರನ್ನಾಲಿ ಅವಮಾನಿಸಿದ ಯಾವುದೇ ಪುರಾವೆಗಳಿಲ್ಲ” ಎಂದು ತುಕಾಗಂಜ್ ಠಾಣೆಯ ಇನ್ಸ್‌ಪೆಕ್ಟರ್‌ ಕಮಲೇಶ ಶರ್ಮಾ ಅವರು ಹೇಳಿದ್ದಾಗಿ ದಿ ಕ್ವಿಂಟ್ ವರದಿ ಮಾಡಿತ್ತು. ಇದರ ನಂತರ ಬಂಧನದ ಸುಮಾರು ಒಂದು ತಿಂಗಳ ನಂತರ ಜೈಲಿನಿಂದ ಬಿಡುಗಡೆ ಹೊಂದಿದ್ದರು. ಅದಾಗಿಯೂ ಹಲವು ಹಿಂದುತ್ವವಾದಿ ಸಂಘಟನೆಗಳ ಬೆದರಿಕೆಯಿಂದಾಗಿ ತನಗೆ ಕೆಲಸ ಮಾಡಲು ಆಗುತ್ತಿಲ್ಲ ಎಂದು ಸ್ಟ್ಯಾಂಡ್‌‌ಅಪ್‌ ಕಾಮೇಡಿಯನ್‌ ಮುನಾವರ್ ಫಾರೂಖಿ ಅಕ್ಟೋಬರ್‌ ಕೊನೆಯಲ್ಲಿ ಹೇಳಿದ್ದರು.

ಇದನ್ನೂ ಓದಿ: ಕಾಮೇಡಿಯನ್‌‌ ಮುನಾವರ್‌ ಫಾರೂಖಿಗೆ ಪ್ರತಿದಿನ 50 ಬೆದರಿಕೆ ಕರೆ; ಹಲವು ಶೋ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಈ ದೇಶದಲ್ಲಿ ಇಲ್ಲಿನ ಮೂಲನಿವಾಸಿಗಳ ಮೇಲಿನ ದೌರ್ಜನ್ಯ ಇಂದು ನಿನ್ನೆಯದಲ್ಲ ಇದು ಹರಪ್ಪದ ಶ್ರೀಮಂತ ಸಂಸ್ಕೃತಿಯ ಮೇಲಿನ ದಾಳಿಯೋಂದಿಗೆ ಆದಿಯಾಗಿ ಬೌದ್ಧ ಧರ್ಮ , ಬಸವ ಧರ್ಮ ಹಾಗೂ ಇಂದಿಗೂ ಬಹುಜನರ ಮೇಲೆ ನಿರಂತರವಾಗಿ ನಡೆಯುತ್ತಲೇ ಇದೆ. ಅದಕ್ಕಾಗಿಯೇ ಬಹುಜನರನ್ನು ಸಾವಿರಾರು ವರ್ಷಗಳ ಕಾಲ ಶಿಕ್ಷಣ ಆದಿಯಾಗಿ ಎಲ್ಲಾ ಹಕ್ಕು ಅವಕಾಶಗಳಿಂದ ವಮಚಿಸಿದ್ದು, ಈಗಲೂ ಅದೆ ಪ್ರಯತ್ನಗಳು ನಡೆಯುತ್ತಲೇ ಇವೆ. ಆದರೆ ನಮ್ಮ ಈ ಮುಗ್ಧ ಜನರಿಗೆ ಅರ್ಥ ವಾಗದಿರುವುದೆ ದುರಂತ.

  2. Is it really for puneeth sir charity or… Doubt it… Puneeth sir never defamed this coutry reputation… Instead he silently did society reforms….. Not like this on stage

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...