Homeಕರ್ನಾಟಕಪುನೀತ್‌ ರಾಜ್‌ಕುಮಾರ್‌‌ ಸಂಸ್ಥೆಯ ದೇಣಿಗೆಗಾಗಿ ಆಯೋಜಿಸಿದ್ದ ಕಾರ್ಯಕ್ರಮ ರದ್ದುಗೊಳಿಸಿದ ಪೊಲೀಸರು

ಪುನೀತ್‌ ರಾಜ್‌ಕುಮಾರ್‌‌ ಸಂಸ್ಥೆಯ ದೇಣಿಗೆಗಾಗಿ ಆಯೋಜಿಸಿದ್ದ ಕಾರ್ಯಕ್ರಮ ರದ್ದುಗೊಳಿಸಿದ ಪೊಲೀಸರು

‘ಗೆದ್ದ ದ್ವೇಷ, ಸೋತ ಕಲಾವಿದ, ವಿದಾಯ!’ ಎಂದು ಬೆಂಗಳೂರು ಕಾರ್ಯಕ್ರಮ ರದ್ದಾಗಿದ್ದಕ್ಕೆ ಮುನಾವರ್‌ ಪ್ರತಿಕ್ರಿಯಿಸಿದ್ದಾರೆ

- Advertisement -
- Advertisement -

ದೇಶದ ಖ್ಯಾತ ಸ್ಟಾಂಡ್‌ ಅಪ್‌ ಕಾಮೆಡಿಯನ್‌ ಮುನಾವರ್‌ ಫಾರೂಖಿ ಅವರ ಕಾರ್ಯಕ್ರಮವೊಂದು ಭಾನುವಾರ(ಇಂದು) ಬೆಂಗಳೂರಿನಲ್ಲಿ ಆಯೋಜನೆಯಾಗಿತ್ತು. ಆದರೆ ಬೆಂಗಳೂರಿನ ಅಶೋಕನಗರ ಠಾಣೆಯ ಪೊಲೀಸರು ಕಾನೂನು ಸುವ್ಯವಸ್ಥೆಗೆ ಭಂಗ ಆಗುತ್ತದೆ ಎಂದು ಈ ಹೇಳಿ ಆಯೋಜಕರಿಗೆ ಪತ್ರವನ್ನು ಬರೆದದ್ದರಿಂದ, ಆಯೋಜಕರು ಕಾರ್ಯಕ್ರಮವನ್ನು ರದ್ದು ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಮೇಡಿಯನ್ ಮುನಾವರ್‌, ‘‘ದ್ವೇಷ ಗೆದ್ದಿದೆ, ಕಲಾವಿದ ಸೋತುಬಿಟ್ಟ, ನಾನು ಮುಗಿಸುತ್ತಿದ್ದೇನೆ! ವಿದಾಯ! ಅನ್ಯಾಯ” ಎಂದು ಪ್ರತಿಕ್ರಿಯಿಸಿದ್ದಾರೆ.

ಆಯೋಜಕರಿಗೆ ಬೆಂಗಳೂರು ಪೊಲೀಸರು ಬರೆದಿರುವ ಪತ್ರದಲ್ಲಿ, “ಮುನಾವರ್‌ ಫಾರೂಖಿ ಒಬ್ಬರು ವಿವಾದಾತ್ಮಕ ವ್ಯಕ್ತಿಯಾಗಿದ್ದು, ಅವರು ಇತರ ಧರ್ಮಗಳ ದೇವರ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೀಡುವಂತಹ ವ್ಯಕ್ತಿ ಎಂದು ನಮಗೆ ತಿಳಿದು ಬಂದಿದೆ. ಆದ್ದರಿಂದ ಹಲವು ರಾಜ್ಯಗಳಲ್ಲಿ ಅವರ ಕಾರ್ಯಕ್ರಮಗಳು ರದ್ದಾಗಿವೆ. ಮಧ್ಯಪ್ರದೇಶ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಅವರ ವಿರುದ್ದ ಪ್ರಕರಣಗಳು ದಾಖಲಾಗಿದೆ. ಅವರ ಕಾರ್ಯಕ್ರಮಕ್ಕೆ ಹಲವು ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿವೆ ಎಂದು ನಮಗೆ ಮಾಹಿತಿಯಿದೆ. ಅವರ ಕಾರ್ಯಕ್ರಮದಿಂದ ಸಾರ್ವಜನಿಕರಲ್ಲಿ ಶಾಂತಿ ಮತ್ತು ಸೌಹಾರ್ಧತೆ ಹಾಳಾಗುತ್ತದೆ, ಇದರಿಂದಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗುತ್ತದೆ. ಆದ್ದರಿಂದ ಭಾನುವಾರ ನಡೆಯಲಿರುವ ಕಾರ್ಯಕ್ರಮವನ್ನು ರದ್ದುಗೊಳಿಸಬೇಕು” ಎಂದು ಪೊಲೀಸರು ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಹಿಂದೂ ದೇವತೆಗಳ ಅಪಹಾಸ್ಯ: ಹಾಸ್ಯ ನಟನ ವಿರುದ್ದ ಯಾವುದೇ ಪುರಾವೆಯಿಲ್ಲ ಎಂದ ಪೊಲೀಸರು

ಕಾರ್ಯಕ್ರಮ ಆಯೋಜಕರು ಪ್ರದರ್ಶನವನ್ನು ರದ್ದುಗೊಳಿಸಿದ್ದಾರೆ ಎಂದು ಮುನಾವರ್‌ ಫಾರೂಖಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಭಾವನಾತ್ಮಕ ಪತ್ರ ಬರೆದಿದ್ದಾರೆ. ಅದರಲ್ಲಿ, “ಬೆದರಿಕೆಗಳು ಬಂದ ಹಿನ್ನಲೆ, ಬೆಂಗಳೂರಿನಲ್ಲಿ ಇಂದು ನಡೆಯಲಿದ್ದ ಶೋ ರದ್ದಾಗಿದೆ. ನಾವು 600+ ಟಿಕೆಟ್‌ಗಳನ್ನು ಮಾರಾಟ ಮಾಡಿದ್ದೇವೆ. ದಿವಂಗತ ಪುನೀತ್ ರಾಜ್‌ಕುಮಾರ್ ಅವರ ಸಂಸ್ಥೆಗೆ ದೇಣಿಗೆ ಸಂಗ್ರಹಕ್ಕಾಗಿ ತಿಂಗಳ ಹಿಂದೆ ನನ್ನ ತಂಡವನ್ನು ಕರೆಯಲಾಗಿತ್ತು. ಈ ಸಂಸ್ಥೆಯು ‘ಚಾರಿಟಿಗಾಗಿ ಇದನ್ನು ಮಾಡುತ್ತಿದ್ದೇವೆ ಎಂದು ಹೇಳದಿರಿ’ ಎಂದು ಹೇಳಿರುವುದನ್ನು ನಾವು ಒಪ್ಪಿಕೊಂಡಿದ್ದೆವು” ಎಂದು ಹೇಳಿದ್ದಾರೆ.

“ಇದು ಅನ್ಯಾಯವಾಗಿದೆ. ನನ್ನ ಪ್ರದರ್ಶನವು ಧರ್ಮಾತೀತವಾಗಿ ಭಾರತದ ಜನರಿಂದ ಪ್ರೀತಿ ಗಳಿಸಿದೆ. ಇದು ಅನ್ಯಾಯವಾಗಿದೆ. ಪ್ರದರ್ಶನದಲ್ಲಿ ಏನೂ ತೊಂದರೆಯಿಲ್ಲ ಎಂದು ನಾವು ಪ್ರದರ್ಶನದ ಸೆನ್ಸಾರ್ ಪ್ರಮಾಣಪತ್ರವನ್ನು ಹೊಂದಿದ್ದೇವೆ. ಬೆದರಿಕೆಗಳ ಕಾರಣ ಕಳೆದ 2 ತಿಂಗಳುಗಳಲ್ಲಿ 12 ಶೋಗಳನ್ನು ಬಿಟ್ಟುಬಿಟ್ಟಿದ್ದೇವೆ” ಎಂದು ಅವರು ಹೇಳಿದ್ದಾರೆ.

“ನನಗನಿಸುತ್ತದೆ ಇದು ಇಲ್ಲಿ ಮುಗಿಯಿತು ಎಂದು. ನನ್ನ ಹೆಸರು ಮುನಾವರ್ ಫಾರೂಖಿ ಮತ್ತು ಇದು ನನ್ನ ಸಮಯ. ಜನರೇ ನೀವುಗಳು ಅದ್ಭುತ ಪ್ರೇಕ್ಷಕರಾಗಿದ್ದೀರಿ. ನಾನು ಇದನ್ನು ಇಲ್ಲಿಗೆ ಮುಗಿಸುತ್ತಿದ್ದೇನೆ, ವಿದಾಯ” ಎಂದು ಅವರು ಬೇಸರ ವ್ಯಕ್ತಪಡಿಸಿ ಬರೆದಿದ್ದಾರೆ.

ಇದನ್ನೂ ಓದಿ: ಕೊನೆಗೂ ಜೈಲಿನಿಂದ ಬಿಡುಗಡೆಗೊಂಡ ಹಾಸ್ಯ ಕಲಾವಿದ ಮುನಾವರ್‌ ಫಾರೂಕಿ

ಮಧ್ಯಪ್ರದೇಶದ ಇಂಧೋರ್‌ನಲ್ಲಿ ಜನವರಿ 2 ರಂದು ಬಂಧನಕ್ಕೊಳಗಾಗಿದ್ದ ಹಾಸ್ಯ ಕಲಾವಿದ ಮುನಾವರ್‌ ಫಾರೂಖಿ ಅವರು ಹಿಂದೂ ಧಾರ್ಮಿಕ ನಂಬಿಕೆಗೆ ಧಕ್ಕೆಯುಂಟು ಮಾಡಿದ್ದಾರೆ ಎಂಬ ಆರೋಪಕ್ಕೆ ಯಾವುದೇ ಪುರಾವೆಯಿಲ್ಲ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದರು.

“ಮುನಾವರ್‌ ಫಾರೂಖಿ ಅವರು ಹಿಂದೂ ದೇವತೆಗಳನ್ನಾಲಿ ಅಥವಾ ಗೃಹ ಸಚಿವ ಅಮಿತ್ ಶಾ ಅವರನ್ನಾಲಿ ಅವಮಾನಿಸಿದ ಯಾವುದೇ ಪುರಾವೆಗಳಿಲ್ಲ” ಎಂದು ತುಕಾಗಂಜ್ ಠಾಣೆಯ ಇನ್ಸ್‌ಪೆಕ್ಟರ್‌ ಕಮಲೇಶ ಶರ್ಮಾ ಅವರು ಹೇಳಿದ್ದಾಗಿ ದಿ ಕ್ವಿಂಟ್ ವರದಿ ಮಾಡಿತ್ತು. ಇದರ ನಂತರ ಬಂಧನದ ಸುಮಾರು ಒಂದು ತಿಂಗಳ ನಂತರ ಜೈಲಿನಿಂದ ಬಿಡುಗಡೆ ಹೊಂದಿದ್ದರು. ಅದಾಗಿಯೂ ಹಲವು ಹಿಂದುತ್ವವಾದಿ ಸಂಘಟನೆಗಳ ಬೆದರಿಕೆಯಿಂದಾಗಿ ತನಗೆ ಕೆಲಸ ಮಾಡಲು ಆಗುತ್ತಿಲ್ಲ ಎಂದು ಸ್ಟ್ಯಾಂಡ್‌‌ಅಪ್‌ ಕಾಮೇಡಿಯನ್‌ ಮುನಾವರ್ ಫಾರೂಖಿ ಅಕ್ಟೋಬರ್‌ ಕೊನೆಯಲ್ಲಿ ಹೇಳಿದ್ದರು.

ಇದನ್ನೂ ಓದಿ: ಕಾಮೇಡಿಯನ್‌‌ ಮುನಾವರ್‌ ಫಾರೂಖಿಗೆ ಪ್ರತಿದಿನ 50 ಬೆದರಿಕೆ ಕರೆ; ಹಲವು ಶೋ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಈ ದೇಶದಲ್ಲಿ ಇಲ್ಲಿನ ಮೂಲನಿವಾಸಿಗಳ ಮೇಲಿನ ದೌರ್ಜನ್ಯ ಇಂದು ನಿನ್ನೆಯದಲ್ಲ ಇದು ಹರಪ್ಪದ ಶ್ರೀಮಂತ ಸಂಸ್ಕೃತಿಯ ಮೇಲಿನ ದಾಳಿಯೋಂದಿಗೆ ಆದಿಯಾಗಿ ಬೌದ್ಧ ಧರ್ಮ , ಬಸವ ಧರ್ಮ ಹಾಗೂ ಇಂದಿಗೂ ಬಹುಜನರ ಮೇಲೆ ನಿರಂತರವಾಗಿ ನಡೆಯುತ್ತಲೇ ಇದೆ. ಅದಕ್ಕಾಗಿಯೇ ಬಹುಜನರನ್ನು ಸಾವಿರಾರು ವರ್ಷಗಳ ಕಾಲ ಶಿಕ್ಷಣ ಆದಿಯಾಗಿ ಎಲ್ಲಾ ಹಕ್ಕು ಅವಕಾಶಗಳಿಂದ ವಮಚಿಸಿದ್ದು, ಈಗಲೂ ಅದೆ ಪ್ರಯತ್ನಗಳು ನಡೆಯುತ್ತಲೇ ಇವೆ. ಆದರೆ ನಮ್ಮ ಈ ಮುಗ್ಧ ಜನರಿಗೆ ಅರ್ಥ ವಾಗದಿರುವುದೆ ದುರಂತ.

  2. Is it really for puneeth sir charity or… Doubt it… Puneeth sir never defamed this coutry reputation… Instead he silently did society reforms….. Not like this on stage

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...