Homeಕರ್ನಾಟಕಪೊಲೀಸರು ಜನರ ಮೊಬೈಲ್ ಪರಿಶೀಲಿಸುವಂತಿಲ್ಲ : ಬೆಂಗಳೂರು ಪೊಲೀಸ್‌ ಆಯುಕ್ತ ಕಮಲ್ ಪಂತ್‌

ಪೊಲೀಸರು ಜನರ ಮೊಬೈಲ್ ಪರಿಶೀಲಿಸುವಂತಿಲ್ಲ : ಬೆಂಗಳೂರು ಪೊಲೀಸ್‌ ಆಯುಕ್ತ ಕಮಲ್ ಪಂತ್‌

ಸಂತ್ರಸ್ತರೊಬ್ಬರು ಬೆಂಗಳೂರು ಪೊಲೀಸರನ್ನು ಉಲ್ಲೇಖಿಸಿ, ನಾನು ಡಕಾಯಿತರ ಗುಂಪಿನಿಂದ ದರೋಡೆಗೆ ಒಳಗಾಗುತ್ತಿರುವಂತೆ ಅನಿಸಿತು ಎಂದು ಹೇಳಿದ್ದಾರೆ ಎಂದು ನ್ಯೂಸ್‌ ಲಾಂಡ್ರಿ ಇತ್ತೀಚೆಗೆ ವರದಿ ಮಾಡಿತ್ತು

- Advertisement -
- Advertisement -

ಪೊಲೀಸರು ಯಾವುದೇ ನೆಪದಲ್ಲಿ ಯಾವುದೇ ನಾಗರಿಕರ ಮೊಬೈಲ್‌ ಫೋನ್‌ಗಳನ್ನು ಪರಿಶೀಲಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿಲಾಗಿದ್ದು, ಅಂತಹ ಯಾವುದೇ ಘಟನೆಗಳು ಕಂಡು ಬಂದರೆ ದೂರು ನೀಡುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್‌ ಅವರು ಸೋಮವಾರ ಹೇಳಿದ್ದಾರೆ.

ಬೆಂಗಳೂರಿನ ಪೊಲೀಸರು ವಿಚಾರಣೆ ನಡೆಸುವ ನೆಪದಲ್ಲಿ ಜನರ ಮೊಬೈಲ್‌ಗಳನ್ನು ಪರಿಶೀಲಿಸಿ ಖಾಸಗಿತನಕ್ಕೆ ಧಕ್ಕೆ ತರುತ್ತಿದ್ದಾರೆ ಎಂಬ ಗಂಭೀರ ಆರೋಪವನ್ನು ಖ್ಯಾತ ಸುದ್ದಿ ವೈಬ್‌‌ಸೈಟ್ ನ್ಯೂಸ್‌‌ಲಾಂಡ್ರಿ ಇತ್ತೀಚೆಗೆ ವರದಿ ಮಾಡಿತ್ತು. ಈ ವರದಿಯ ನಂತರ ಆಯುಕ್ತರು ತಮ್ಮ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನ್ಯೂಸ್ ಲಾಂಡ್ರಿ ಬೆಂಗಳೂರಿನ ಹಲವಾರು ಪ್ರದೇಶಗಳಲ್ಲಿ ಜನರ ಮೊಬೈಲ್ ಕಿತ್ತುಕೊಂಡು ವಿಚಾರಣೆ ನೆಪದಲ್ಲಿ ಅವರ ಖಾಸಗಿತನಕ್ಕೆ ಧಕ್ಕೆ ಮಾಡುತ್ತಿರುವ ಹಲವಾರು ಘಟನೆಗಳ ಬಗ್ಗೆ ವರದಿ ಮಾಡಿತ್ತು. ಇದರಲ್ಲಿ ಹಲವಾರು ಸಂತ್ರಸ್ತ ಜನರು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದರು.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಭಟ್ಕಳ-ಹೊನ್ನಾವರ: ಧರ್ಮಕಾರಣ ಮತ್ತು ಜಾತಿಕಾರಣದ ಜುಗಲ್‌ಬಂದಿಯ ಆಖಾಡ!

ಈ ವರದಿಯ ನಂತರ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್‌ ಅವರು, “ಯಾವುದೇ ಪೊಲೀಸರು ಯಾವುದೇ ನೆಪದಲ್ಲಿ ಯಾವುದೇ ನಾಗರಿಕರ ಮೊಬೈಲ್ ಫೋನ್ ಅನ್ನು ಪರಿಶೀಲಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಂತಹ ಯಾವುದೇ ಘಟನೆ ಕಂಡುಬಂದಲ್ಲಿ, ದಯವಿಟ್ಟು 112 ಗೆ ಅಥವಾ 080-22942215 ಗೆ ಕರೆ ಮಾಡಿ ಪೊಲೀಸ್ ಆಯುಕ್ತರಿಗೆ ತಿಳಿಸಿ” ಎಂದು ಹೇಳಿದ್ದಾರೆ.

ದೂರು ನೀಡಿದ ವ್ಯಕ್ತಿಗಳ ಗುರುತನ್ನು ಗೌಪ್ಯವಾಗಿ ಇಡಲಾಗುತ್ತದೆ ಎಂದು ಹೇಳಿರುವ ಕಮಲ್ ಪಂತ್‌, ಕೃತ್ಯ ನಡೆಯುವ ಸ್ಥಳ ಮತ್ತು ಸಮಯವನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಮೆಸೇಜ್ ಮಾಡಬಹುದು ಎಂದು ಹೇಳಿದ್ದಾರೆ.

ನ್ಯೂಸ್ ಲಾಂಡ್ರಿ ತನ್ನ ವರದಿಯಲ್ಲಿ, ಪೊಲೀಸರು ಡ್ರಗ್ಸ್‌ ಹೆಸರಿನಲ್ಲಿ ಬೆದರಿಸಿ ಲಂಚಕ್ಕಾಗಿ ಬೇಡಿಕೆ ಇಡುವುದು, ಜನರ ಮೊಬೈಲ್ ಕಿತ್ತುಕೊಂಡು ಅವರ ಫೋಟೊಗಳನ್ನು ಚೆಕ್‌ ಮಾಡುವುದು, ವಾಟ್ಸಪ್‌ ಅನ್ನು ಪರಿಶೀಲಿಸಿ ತನ್ನ ಗೆಳತಿಯೊಂದಿಗೆ ಜಾ‌ಸ್ತಿ ಹೊತ್ತು ಚಾಟ್‌ ಮಾಡದಿರು ಎಂದು ಪುಕ್ಕಟೆ ಸಲಹೆ ನೀಡುವುದು, ರಾತ್ರಿ ಹೊತ್ತು ಸುಖಾ ಸುಮ್ಮನೆ ಬೆದರಿಸಿ ಹಣ ಕಿತ್ತುಕೊಳ್ಳುವುದು ಸೇರಿದಂತೆ ಹಲವು ಕುಕೃತ್ಯಗಳನ್ನು ಮಾಡುತ್ತಿದ್ದಾರೆ ಎಂದು ಜನರು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ ಎಂದು ಉಲ್ಲೇಖಿಸಿತ್ತು.

ಸಂತ್ರಸ್ತರೊಬ್ಬರು ಬೆಂಗಳೂರು ಪೊಲೀಸರನ್ನು ಉಲ್ಲೇಖಿಸಿ, “ನಾನು ಡಕಾಯಿತರ ಗುಂಪಿನಿಂದ ದರೋಡೆಗೆ ಒಳಗಾಗುತ್ತಿರುವಂತೆ ನನಗೆ ಅನಿಸಿತು” ಎಂದು ಆತಂಕ ವ್ಯಕ್ತಪಡಿಸಿದ್ದಾಗಿ ನ್ಯೂಸ್ ಲಾಂಡ್ರಿ ತನ್ನ ವರದಿಯಲ್ಲಿ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಮತ್ತೆ ಇಂಧನ ಬೆಲೆ ಏರಿಕೆ; ಎರಡು ವಾರಗಳಲ್ಲಿ ಪೆಟ್ರೋಲ್‌ ಬೆಲೆ 10 ರೂ. ಹೆಚ್ಚಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...