Homeಕರ್ನಾಟಕಪೊಲೀಸರು ಜನರ ಮೊಬೈಲ್ ಪರಿಶೀಲಿಸುವಂತಿಲ್ಲ : ಬೆಂಗಳೂರು ಪೊಲೀಸ್‌ ಆಯುಕ್ತ ಕಮಲ್ ಪಂತ್‌

ಪೊಲೀಸರು ಜನರ ಮೊಬೈಲ್ ಪರಿಶೀಲಿಸುವಂತಿಲ್ಲ : ಬೆಂಗಳೂರು ಪೊಲೀಸ್‌ ಆಯುಕ್ತ ಕಮಲ್ ಪಂತ್‌

ಸಂತ್ರಸ್ತರೊಬ್ಬರು ಬೆಂಗಳೂರು ಪೊಲೀಸರನ್ನು ಉಲ್ಲೇಖಿಸಿ, ನಾನು ಡಕಾಯಿತರ ಗುಂಪಿನಿಂದ ದರೋಡೆಗೆ ಒಳಗಾಗುತ್ತಿರುವಂತೆ ಅನಿಸಿತು ಎಂದು ಹೇಳಿದ್ದಾರೆ ಎಂದು ನ್ಯೂಸ್‌ ಲಾಂಡ್ರಿ ಇತ್ತೀಚೆಗೆ ವರದಿ ಮಾಡಿತ್ತು

- Advertisement -
- Advertisement -

ಪೊಲೀಸರು ಯಾವುದೇ ನೆಪದಲ್ಲಿ ಯಾವುದೇ ನಾಗರಿಕರ ಮೊಬೈಲ್‌ ಫೋನ್‌ಗಳನ್ನು ಪರಿಶೀಲಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿಲಾಗಿದ್ದು, ಅಂತಹ ಯಾವುದೇ ಘಟನೆಗಳು ಕಂಡು ಬಂದರೆ ದೂರು ನೀಡುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್‌ ಅವರು ಸೋಮವಾರ ಹೇಳಿದ್ದಾರೆ.

ಬೆಂಗಳೂರಿನ ಪೊಲೀಸರು ವಿಚಾರಣೆ ನಡೆಸುವ ನೆಪದಲ್ಲಿ ಜನರ ಮೊಬೈಲ್‌ಗಳನ್ನು ಪರಿಶೀಲಿಸಿ ಖಾಸಗಿತನಕ್ಕೆ ಧಕ್ಕೆ ತರುತ್ತಿದ್ದಾರೆ ಎಂಬ ಗಂಭೀರ ಆರೋಪವನ್ನು ಖ್ಯಾತ ಸುದ್ದಿ ವೈಬ್‌‌ಸೈಟ್ ನ್ಯೂಸ್‌‌ಲಾಂಡ್ರಿ ಇತ್ತೀಚೆಗೆ ವರದಿ ಮಾಡಿತ್ತು. ಈ ವರದಿಯ ನಂತರ ಆಯುಕ್ತರು ತಮ್ಮ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನ್ಯೂಸ್ ಲಾಂಡ್ರಿ ಬೆಂಗಳೂರಿನ ಹಲವಾರು ಪ್ರದೇಶಗಳಲ್ಲಿ ಜನರ ಮೊಬೈಲ್ ಕಿತ್ತುಕೊಂಡು ವಿಚಾರಣೆ ನೆಪದಲ್ಲಿ ಅವರ ಖಾಸಗಿತನಕ್ಕೆ ಧಕ್ಕೆ ಮಾಡುತ್ತಿರುವ ಹಲವಾರು ಘಟನೆಗಳ ಬಗ್ಗೆ ವರದಿ ಮಾಡಿತ್ತು. ಇದರಲ್ಲಿ ಹಲವಾರು ಸಂತ್ರಸ್ತ ಜನರು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದರು.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಭಟ್ಕಳ-ಹೊನ್ನಾವರ: ಧರ್ಮಕಾರಣ ಮತ್ತು ಜಾತಿಕಾರಣದ ಜುಗಲ್‌ಬಂದಿಯ ಆಖಾಡ!

ಈ ವರದಿಯ ನಂತರ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್‌ ಅವರು, “ಯಾವುದೇ ಪೊಲೀಸರು ಯಾವುದೇ ನೆಪದಲ್ಲಿ ಯಾವುದೇ ನಾಗರಿಕರ ಮೊಬೈಲ್ ಫೋನ್ ಅನ್ನು ಪರಿಶೀಲಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಂತಹ ಯಾವುದೇ ಘಟನೆ ಕಂಡುಬಂದಲ್ಲಿ, ದಯವಿಟ್ಟು 112 ಗೆ ಅಥವಾ 080-22942215 ಗೆ ಕರೆ ಮಾಡಿ ಪೊಲೀಸ್ ಆಯುಕ್ತರಿಗೆ ತಿಳಿಸಿ” ಎಂದು ಹೇಳಿದ್ದಾರೆ.

ದೂರು ನೀಡಿದ ವ್ಯಕ್ತಿಗಳ ಗುರುತನ್ನು ಗೌಪ್ಯವಾಗಿ ಇಡಲಾಗುತ್ತದೆ ಎಂದು ಹೇಳಿರುವ ಕಮಲ್ ಪಂತ್‌, ಕೃತ್ಯ ನಡೆಯುವ ಸ್ಥಳ ಮತ್ತು ಸಮಯವನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಮೆಸೇಜ್ ಮಾಡಬಹುದು ಎಂದು ಹೇಳಿದ್ದಾರೆ.

ನ್ಯೂಸ್ ಲಾಂಡ್ರಿ ತನ್ನ ವರದಿಯಲ್ಲಿ, ಪೊಲೀಸರು ಡ್ರಗ್ಸ್‌ ಹೆಸರಿನಲ್ಲಿ ಬೆದರಿಸಿ ಲಂಚಕ್ಕಾಗಿ ಬೇಡಿಕೆ ಇಡುವುದು, ಜನರ ಮೊಬೈಲ್ ಕಿತ್ತುಕೊಂಡು ಅವರ ಫೋಟೊಗಳನ್ನು ಚೆಕ್‌ ಮಾಡುವುದು, ವಾಟ್ಸಪ್‌ ಅನ್ನು ಪರಿಶೀಲಿಸಿ ತನ್ನ ಗೆಳತಿಯೊಂದಿಗೆ ಜಾ‌ಸ್ತಿ ಹೊತ್ತು ಚಾಟ್‌ ಮಾಡದಿರು ಎಂದು ಪುಕ್ಕಟೆ ಸಲಹೆ ನೀಡುವುದು, ರಾತ್ರಿ ಹೊತ್ತು ಸುಖಾ ಸುಮ್ಮನೆ ಬೆದರಿಸಿ ಹಣ ಕಿತ್ತುಕೊಳ್ಳುವುದು ಸೇರಿದಂತೆ ಹಲವು ಕುಕೃತ್ಯಗಳನ್ನು ಮಾಡುತ್ತಿದ್ದಾರೆ ಎಂದು ಜನರು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ ಎಂದು ಉಲ್ಲೇಖಿಸಿತ್ತು.

ಸಂತ್ರಸ್ತರೊಬ್ಬರು ಬೆಂಗಳೂರು ಪೊಲೀಸರನ್ನು ಉಲ್ಲೇಖಿಸಿ, “ನಾನು ಡಕಾಯಿತರ ಗುಂಪಿನಿಂದ ದರೋಡೆಗೆ ಒಳಗಾಗುತ್ತಿರುವಂತೆ ನನಗೆ ಅನಿಸಿತು” ಎಂದು ಆತಂಕ ವ್ಯಕ್ತಪಡಿಸಿದ್ದಾಗಿ ನ್ಯೂಸ್ ಲಾಂಡ್ರಿ ತನ್ನ ವರದಿಯಲ್ಲಿ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಮತ್ತೆ ಇಂಧನ ಬೆಲೆ ಏರಿಕೆ; ಎರಡು ವಾರಗಳಲ್ಲಿ ಪೆಟ್ರೋಲ್‌ ಬೆಲೆ 10 ರೂ. ಹೆಚ್ಚಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...