Homeಕರ್ನಾಟಕಪೊಲೀಸರು ಜನರ ಮೊಬೈಲ್ ಪರಿಶೀಲಿಸುವಂತಿಲ್ಲ : ಬೆಂಗಳೂರು ಪೊಲೀಸ್‌ ಆಯುಕ್ತ ಕಮಲ್ ಪಂತ್‌

ಪೊಲೀಸರು ಜನರ ಮೊಬೈಲ್ ಪರಿಶೀಲಿಸುವಂತಿಲ್ಲ : ಬೆಂಗಳೂರು ಪೊಲೀಸ್‌ ಆಯುಕ್ತ ಕಮಲ್ ಪಂತ್‌

ಸಂತ್ರಸ್ತರೊಬ್ಬರು ಬೆಂಗಳೂರು ಪೊಲೀಸರನ್ನು ಉಲ್ಲೇಖಿಸಿ, ನಾನು ಡಕಾಯಿತರ ಗುಂಪಿನಿಂದ ದರೋಡೆಗೆ ಒಳಗಾಗುತ್ತಿರುವಂತೆ ಅನಿಸಿತು ಎಂದು ಹೇಳಿದ್ದಾರೆ ಎಂದು ನ್ಯೂಸ್‌ ಲಾಂಡ್ರಿ ಇತ್ತೀಚೆಗೆ ವರದಿ ಮಾಡಿತ್ತು

- Advertisement -
- Advertisement -

ಪೊಲೀಸರು ಯಾವುದೇ ನೆಪದಲ್ಲಿ ಯಾವುದೇ ನಾಗರಿಕರ ಮೊಬೈಲ್‌ ಫೋನ್‌ಗಳನ್ನು ಪರಿಶೀಲಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿಲಾಗಿದ್ದು, ಅಂತಹ ಯಾವುದೇ ಘಟನೆಗಳು ಕಂಡು ಬಂದರೆ ದೂರು ನೀಡುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್‌ ಅವರು ಸೋಮವಾರ ಹೇಳಿದ್ದಾರೆ.

ಬೆಂಗಳೂರಿನ ಪೊಲೀಸರು ವಿಚಾರಣೆ ನಡೆಸುವ ನೆಪದಲ್ಲಿ ಜನರ ಮೊಬೈಲ್‌ಗಳನ್ನು ಪರಿಶೀಲಿಸಿ ಖಾಸಗಿತನಕ್ಕೆ ಧಕ್ಕೆ ತರುತ್ತಿದ್ದಾರೆ ಎಂಬ ಗಂಭೀರ ಆರೋಪವನ್ನು ಖ್ಯಾತ ಸುದ್ದಿ ವೈಬ್‌‌ಸೈಟ್ ನ್ಯೂಸ್‌‌ಲಾಂಡ್ರಿ ಇತ್ತೀಚೆಗೆ ವರದಿ ಮಾಡಿತ್ತು. ಈ ವರದಿಯ ನಂತರ ಆಯುಕ್ತರು ತಮ್ಮ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನ್ಯೂಸ್ ಲಾಂಡ್ರಿ ಬೆಂಗಳೂರಿನ ಹಲವಾರು ಪ್ರದೇಶಗಳಲ್ಲಿ ಜನರ ಮೊಬೈಲ್ ಕಿತ್ತುಕೊಂಡು ವಿಚಾರಣೆ ನೆಪದಲ್ಲಿ ಅವರ ಖಾಸಗಿತನಕ್ಕೆ ಧಕ್ಕೆ ಮಾಡುತ್ತಿರುವ ಹಲವಾರು ಘಟನೆಗಳ ಬಗ್ಗೆ ವರದಿ ಮಾಡಿತ್ತು. ಇದರಲ್ಲಿ ಹಲವಾರು ಸಂತ್ರಸ್ತ ಜನರು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದರು.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಭಟ್ಕಳ-ಹೊನ್ನಾವರ: ಧರ್ಮಕಾರಣ ಮತ್ತು ಜಾತಿಕಾರಣದ ಜುಗಲ್‌ಬಂದಿಯ ಆಖಾಡ!

ಈ ವರದಿಯ ನಂತರ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್‌ ಅವರು, “ಯಾವುದೇ ಪೊಲೀಸರು ಯಾವುದೇ ನೆಪದಲ್ಲಿ ಯಾವುದೇ ನಾಗರಿಕರ ಮೊಬೈಲ್ ಫೋನ್ ಅನ್ನು ಪರಿಶೀಲಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಂತಹ ಯಾವುದೇ ಘಟನೆ ಕಂಡುಬಂದಲ್ಲಿ, ದಯವಿಟ್ಟು 112 ಗೆ ಅಥವಾ 080-22942215 ಗೆ ಕರೆ ಮಾಡಿ ಪೊಲೀಸ್ ಆಯುಕ್ತರಿಗೆ ತಿಳಿಸಿ” ಎಂದು ಹೇಳಿದ್ದಾರೆ.

ದೂರು ನೀಡಿದ ವ್ಯಕ್ತಿಗಳ ಗುರುತನ್ನು ಗೌಪ್ಯವಾಗಿ ಇಡಲಾಗುತ್ತದೆ ಎಂದು ಹೇಳಿರುವ ಕಮಲ್ ಪಂತ್‌, ಕೃತ್ಯ ನಡೆಯುವ ಸ್ಥಳ ಮತ್ತು ಸಮಯವನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಮೆಸೇಜ್ ಮಾಡಬಹುದು ಎಂದು ಹೇಳಿದ್ದಾರೆ.

ನ್ಯೂಸ್ ಲಾಂಡ್ರಿ ತನ್ನ ವರದಿಯಲ್ಲಿ, ಪೊಲೀಸರು ಡ್ರಗ್ಸ್‌ ಹೆಸರಿನಲ್ಲಿ ಬೆದರಿಸಿ ಲಂಚಕ್ಕಾಗಿ ಬೇಡಿಕೆ ಇಡುವುದು, ಜನರ ಮೊಬೈಲ್ ಕಿತ್ತುಕೊಂಡು ಅವರ ಫೋಟೊಗಳನ್ನು ಚೆಕ್‌ ಮಾಡುವುದು, ವಾಟ್ಸಪ್‌ ಅನ್ನು ಪರಿಶೀಲಿಸಿ ತನ್ನ ಗೆಳತಿಯೊಂದಿಗೆ ಜಾ‌ಸ್ತಿ ಹೊತ್ತು ಚಾಟ್‌ ಮಾಡದಿರು ಎಂದು ಪುಕ್ಕಟೆ ಸಲಹೆ ನೀಡುವುದು, ರಾತ್ರಿ ಹೊತ್ತು ಸುಖಾ ಸುಮ್ಮನೆ ಬೆದರಿಸಿ ಹಣ ಕಿತ್ತುಕೊಳ್ಳುವುದು ಸೇರಿದಂತೆ ಹಲವು ಕುಕೃತ್ಯಗಳನ್ನು ಮಾಡುತ್ತಿದ್ದಾರೆ ಎಂದು ಜನರು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ ಎಂದು ಉಲ್ಲೇಖಿಸಿತ್ತು.

ಸಂತ್ರಸ್ತರೊಬ್ಬರು ಬೆಂಗಳೂರು ಪೊಲೀಸರನ್ನು ಉಲ್ಲೇಖಿಸಿ, “ನಾನು ಡಕಾಯಿತರ ಗುಂಪಿನಿಂದ ದರೋಡೆಗೆ ಒಳಗಾಗುತ್ತಿರುವಂತೆ ನನಗೆ ಅನಿಸಿತು” ಎಂದು ಆತಂಕ ವ್ಯಕ್ತಪಡಿಸಿದ್ದಾಗಿ ನ್ಯೂಸ್ ಲಾಂಡ್ರಿ ತನ್ನ ವರದಿಯಲ್ಲಿ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಮತ್ತೆ ಇಂಧನ ಬೆಲೆ ಏರಿಕೆ; ಎರಡು ವಾರಗಳಲ್ಲಿ ಪೆಟ್ರೋಲ್‌ ಬೆಲೆ 10 ರೂ. ಹೆಚ್ಚಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....