Homeಮುಖಪುಟದೆಹಲಿ ಗಲಭೆ ಮತ್ತು ರೈತ ಹೋರಾಟವನ್ನು ನಿಭಾಯಿಸುವಲ್ಲಿ ದೆಹಲಿ ಪೊಲೀಸರು ಉತ್ತೀರ್ಣ: ಅಮಿತ್ ಶಾ

ದೆಹಲಿ ಗಲಭೆ ಮತ್ತು ರೈತ ಹೋರಾಟವನ್ನು ನಿಭಾಯಿಸುವಲ್ಲಿ ದೆಹಲಿ ಪೊಲೀಸರು ಉತ್ತೀರ್ಣ: ಅಮಿತ್ ಶಾ

- Advertisement -
- Advertisement -

ಕಳೆದ ವರ್ಷ ಈಶಾನ್ಯ ದೆಹಲಿಯಲ್ಲಿ ಭುಗಿಲೆದ್ದ ಗಲಭೆ ಸೇರಿದಂತೆ, ಪ್ರಸ್ತುತ ರೈತರ ಆಂದೋಲನ ಮತ್ತು ಕೊರೊನಾ ಸಾಂಕ್ರಾಮಿಕವನ್ನು ಉತ್ತಮವಾಗಿ ನಿಭಾಯಿಸಿ ದೆಹಲಿ ಪೊಲೀಸರು ಸಾಧನೆ ಮಾಡಿದ್ದಾರೆ ಮತ್ತು ಈ ಪರೀಕ್ಷೆಗಳಲ್ಲಿ ಅವರು ಉತ್ತೀರ್ಣರಾಗಿದ್ದಾರೆ ಎಂದು ಗೃಹ ಸಚಿವ ಅಮಿತ್ ಶಾ ಮಂಗಳವಾರ ಶ್ಲಾಘಿಸಿದ್ದಾರೆ.

ದೆಹಲಿ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಮಾತನಾಡಿದ ಅಮಿತ್ ಶಾ, “ನಾನು ಫೆಬ್ರವರಿ 2020 ರಲ್ಲಿ ಇಲ್ಲಿಗೆ ಬಂದಿದ್ದೆ. ಆ ಸಮಯದಲ್ಲಿ ಪೊಲೀಸರು ಯಾವಾಗಲೂ ಸಾರ್ವಜನಿಕರೊಂದಿಗೆ ಇದ್ದಾರೆ ಎಂದು ನಾನು ಹೇಳಿದ್ದೆ. ಇಂದು ಒಂದು ವರ್ಷವಾಗಿದೆ. ಹಿಂತಿರುಗಿ ನೋಡಿದರೆ ಸಾಂಕ್ರಾಮಿಕ ಸಮಯದಲ್ಲಿ ಪೊಲೀಸರು ಸಾರ್ವಜನಿಕ ನಂಬಿಕೆಯನ್ನು ಹೇಗೆ ಗೆದ್ದರು ಎಂದು ಕಾಣುತ್ತದೆ” ಎಂದು ಹೇಳಿದ್ದಾರೆ.

ಸಾಂದರ್ಭಿಕ ಚಿತ್ರ

ಇದನ್ನೂ ಓದಿ: ಸಚಿವ ಸ್ಥಾನದ ಆಸೆ ಕೈಬಿಡಿ: ಅತೃಪ್ತರಿಗೆ ಖಡಕ್ ಎಚ್ಚರಿಕೆ ನೀಡಿದ ಅಮಿತ್ ಶಾ!

“2020 ರಲ್ಲಿ ದೆಹಲಿ ಮತ್ತು ದೇಶ ಅನೇಕ ಸವಾಲುಗಳು ಎದುರಿಸಿದ್ದವು. ಈಶಾನ್ಯ ದೆಹಲಿ ಗಲಭೆಗಳು, ಲಾಕ್‌ಡೌನ್ ಮತ್ತು ಅನ್-ಲಾಕ್‌ ಪ್ರಕ್ರಿಯೆ, ವಲಸಿಗರು ಮನೆಗೆ ತಲುಪಲು ಸಹಾಯ ಮಾಡುವುದು ಮತ್ತು ರೈತರ ಆಂದೋಲನವನ್ನು ಶಾಂತಿಯುತವಾಗಿ ನಿರ್ವಹಿಸುವುದು ಸೇರಿದಂತೆ. ಈ ವರ್ಷದ ಎಲ್ಲಾ ಪರೀಕ್ಷೆಗಳಲ್ಲಿ ಪೊಲೀಸರು ಉತ್ತಮ ಸಾಧನೆ ಮಾಡಿದ್ದಾರೆ ಹಾಗೂ ಉತ್ತೀರ್ಣರಾಗಿದ್ದಾರೆ” ಎಂದು ಅವರು ಶ್ಲಾಘಿಸಿದ್ದಾರೆ.

ದೆಹಲಿ ಗಲಭೆ: ಪೊಲೀಸ್ ಮತ್ತು ವಿಶೇಶ ಅಪರಾದ ದಳದ ತನಿಖೆ ಅನ್ಯಾಯದಿಂದ ಕೂಡಿದೆ; ಕೇಜ್ರಿವಾಲ್‌ಗೆ ಭಾರತದಾದ್ಯಂತ ಗಣ್ಯರ ಪತ್ರ
ದೆಹಲಿ ಗಲಭೆಯ ನಂತರ (PC: AFP)

ಅಮಿತ್‌ ಶಾ, ಕೆಲವು ಪೊಲೀಸ್ ಸಿಬ್ಬಂದಿಯನ್ನು ಅವರ ಕಾರ್ಯಕ್ಷಮತೆಗಾಗಿ ಗೌರವಿಸಿದರು ಮತ್ತು ಕೊರೊನಾದಿಂದಾಗಿ ಪ್ರಾಣ ಕಳೆದುಕೊಂಡವರಿಗೆ ಗೌರವ ಸಲ್ಲಿಸಿದರು. ಗಣರಾಜ್ಯೋತ್ಸವದ ಮುನ್ನ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಲು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆಯನ್ನೂ ಅವರು ವಹಿಸಿದ್ದರು.

“ಸವಾಲುಗಳನ್ನು ನಿಭಾಯಿಸುವ ಮೊದಲು ಅವುಗಳನ್ನು ಅರ್ಥಮಾಡಿಕೊಳ್ಳಬೇಕು. ಅದಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸುವ ರೀತಿಯಲ್ಲಿ ಬದಲಾವಣೆಗಳನ್ನು ತರಬೇಕಾಗುತ್ತದೆ. ಆಗ ಮಾತ್ರ ಸವಾಲುಗಳನ್ನು ಎದುರಿಸಲು ಸಾಧ್ಯವಾಗುತ್ತದೆ” ಎಂದು ಅಮಿತ್‌ ಶಾ ಹೇಳಿದ್ದಾರೆ.

2022 ರ ವೇಳೆಗೆ ದೇಶವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸಲಿದ್ದು, ಸುಧಾರಣೆ ಮತ್ತು ಉತ್ತಮ ಕಾರ್ಯಕ್ಷಮತೆಗಾಗಿ ಐದು ಗುರಿಗಳನ್ನು ನಿಗದಿಪಡಿಸುವಂತೆ ಪ್ರತಿ ಪೊಲೀಸ್ ಠಾಣೆಯನ್ನು ಕೇಳಿದ್ದಾರೆ.

ಇದನ್ನೂ ಓದಿ: ’ಅಮಿತ್ ಶಾ ಮನೆ ಮುಂದೆ ಈ ಇಬ್ಬರು ಪ್ರತಿಭಟಿಸುವಂತಿಲ್ಲ’: ದೆಹಲಿ ಪೊಲೀಸರ ’ವಿಚಿತ್ರ’ ನಿರ್ಧಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...