Homeಮುಖಪುಟದೆಹಲಿ ಗಲಭೆ ಮತ್ತು ರೈತ ಹೋರಾಟವನ್ನು ನಿಭಾಯಿಸುವಲ್ಲಿ ದೆಹಲಿ ಪೊಲೀಸರು ಉತ್ತೀರ್ಣ: ಅಮಿತ್ ಶಾ

ದೆಹಲಿ ಗಲಭೆ ಮತ್ತು ರೈತ ಹೋರಾಟವನ್ನು ನಿಭಾಯಿಸುವಲ್ಲಿ ದೆಹಲಿ ಪೊಲೀಸರು ಉತ್ತೀರ್ಣ: ಅಮಿತ್ ಶಾ

- Advertisement -
- Advertisement -

ಕಳೆದ ವರ್ಷ ಈಶಾನ್ಯ ದೆಹಲಿಯಲ್ಲಿ ಭುಗಿಲೆದ್ದ ಗಲಭೆ ಸೇರಿದಂತೆ, ಪ್ರಸ್ತುತ ರೈತರ ಆಂದೋಲನ ಮತ್ತು ಕೊರೊನಾ ಸಾಂಕ್ರಾಮಿಕವನ್ನು ಉತ್ತಮವಾಗಿ ನಿಭಾಯಿಸಿ ದೆಹಲಿ ಪೊಲೀಸರು ಸಾಧನೆ ಮಾಡಿದ್ದಾರೆ ಮತ್ತು ಈ ಪರೀಕ್ಷೆಗಳಲ್ಲಿ ಅವರು ಉತ್ತೀರ್ಣರಾಗಿದ್ದಾರೆ ಎಂದು ಗೃಹ ಸಚಿವ ಅಮಿತ್ ಶಾ ಮಂಗಳವಾರ ಶ್ಲಾಘಿಸಿದ್ದಾರೆ.

ದೆಹಲಿ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಮಾತನಾಡಿದ ಅಮಿತ್ ಶಾ, “ನಾನು ಫೆಬ್ರವರಿ 2020 ರಲ್ಲಿ ಇಲ್ಲಿಗೆ ಬಂದಿದ್ದೆ. ಆ ಸಮಯದಲ್ಲಿ ಪೊಲೀಸರು ಯಾವಾಗಲೂ ಸಾರ್ವಜನಿಕರೊಂದಿಗೆ ಇದ್ದಾರೆ ಎಂದು ನಾನು ಹೇಳಿದ್ದೆ. ಇಂದು ಒಂದು ವರ್ಷವಾಗಿದೆ. ಹಿಂತಿರುಗಿ ನೋಡಿದರೆ ಸಾಂಕ್ರಾಮಿಕ ಸಮಯದಲ್ಲಿ ಪೊಲೀಸರು ಸಾರ್ವಜನಿಕ ನಂಬಿಕೆಯನ್ನು ಹೇಗೆ ಗೆದ್ದರು ಎಂದು ಕಾಣುತ್ತದೆ” ಎಂದು ಹೇಳಿದ್ದಾರೆ.

ಸಾಂದರ್ಭಿಕ ಚಿತ್ರ

ಇದನ್ನೂ ಓದಿ: ಸಚಿವ ಸ್ಥಾನದ ಆಸೆ ಕೈಬಿಡಿ: ಅತೃಪ್ತರಿಗೆ ಖಡಕ್ ಎಚ್ಚರಿಕೆ ನೀಡಿದ ಅಮಿತ್ ಶಾ!

“2020 ರಲ್ಲಿ ದೆಹಲಿ ಮತ್ತು ದೇಶ ಅನೇಕ ಸವಾಲುಗಳು ಎದುರಿಸಿದ್ದವು. ಈಶಾನ್ಯ ದೆಹಲಿ ಗಲಭೆಗಳು, ಲಾಕ್‌ಡೌನ್ ಮತ್ತು ಅನ್-ಲಾಕ್‌ ಪ್ರಕ್ರಿಯೆ, ವಲಸಿಗರು ಮನೆಗೆ ತಲುಪಲು ಸಹಾಯ ಮಾಡುವುದು ಮತ್ತು ರೈತರ ಆಂದೋಲನವನ್ನು ಶಾಂತಿಯುತವಾಗಿ ನಿರ್ವಹಿಸುವುದು ಸೇರಿದಂತೆ. ಈ ವರ್ಷದ ಎಲ್ಲಾ ಪರೀಕ್ಷೆಗಳಲ್ಲಿ ಪೊಲೀಸರು ಉತ್ತಮ ಸಾಧನೆ ಮಾಡಿದ್ದಾರೆ ಹಾಗೂ ಉತ್ತೀರ್ಣರಾಗಿದ್ದಾರೆ” ಎಂದು ಅವರು ಶ್ಲಾಘಿಸಿದ್ದಾರೆ.

ದೆಹಲಿ ಗಲಭೆ: ಪೊಲೀಸ್ ಮತ್ತು ವಿಶೇಶ ಅಪರಾದ ದಳದ ತನಿಖೆ ಅನ್ಯಾಯದಿಂದ ಕೂಡಿದೆ; ಕೇಜ್ರಿವಾಲ್‌ಗೆ ಭಾರತದಾದ್ಯಂತ ಗಣ್ಯರ ಪತ್ರ
ದೆಹಲಿ ಗಲಭೆಯ ನಂತರ (PC: AFP)

ಅಮಿತ್‌ ಶಾ, ಕೆಲವು ಪೊಲೀಸ್ ಸಿಬ್ಬಂದಿಯನ್ನು ಅವರ ಕಾರ್ಯಕ್ಷಮತೆಗಾಗಿ ಗೌರವಿಸಿದರು ಮತ್ತು ಕೊರೊನಾದಿಂದಾಗಿ ಪ್ರಾಣ ಕಳೆದುಕೊಂಡವರಿಗೆ ಗೌರವ ಸಲ್ಲಿಸಿದರು. ಗಣರಾಜ್ಯೋತ್ಸವದ ಮುನ್ನ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಲು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆಯನ್ನೂ ಅವರು ವಹಿಸಿದ್ದರು.

“ಸವಾಲುಗಳನ್ನು ನಿಭಾಯಿಸುವ ಮೊದಲು ಅವುಗಳನ್ನು ಅರ್ಥಮಾಡಿಕೊಳ್ಳಬೇಕು. ಅದಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸುವ ರೀತಿಯಲ್ಲಿ ಬದಲಾವಣೆಗಳನ್ನು ತರಬೇಕಾಗುತ್ತದೆ. ಆಗ ಮಾತ್ರ ಸವಾಲುಗಳನ್ನು ಎದುರಿಸಲು ಸಾಧ್ಯವಾಗುತ್ತದೆ” ಎಂದು ಅಮಿತ್‌ ಶಾ ಹೇಳಿದ್ದಾರೆ.

2022 ರ ವೇಳೆಗೆ ದೇಶವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸಲಿದ್ದು, ಸುಧಾರಣೆ ಮತ್ತು ಉತ್ತಮ ಕಾರ್ಯಕ್ಷಮತೆಗಾಗಿ ಐದು ಗುರಿಗಳನ್ನು ನಿಗದಿಪಡಿಸುವಂತೆ ಪ್ರತಿ ಪೊಲೀಸ್ ಠಾಣೆಯನ್ನು ಕೇಳಿದ್ದಾರೆ.

ಇದನ್ನೂ ಓದಿ: ’ಅಮಿತ್ ಶಾ ಮನೆ ಮುಂದೆ ಈ ಇಬ್ಬರು ಪ್ರತಿಭಟಿಸುವಂತಿಲ್ಲ’: ದೆಹಲಿ ಪೊಲೀಸರ ’ವಿಚಿತ್ರ’ ನಿರ್ಧಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...