Homeಮುಖಪುಟ'ಕೊಲ್ಲುವಂತೆ ಪೊಲೀಸರೇ ನನ್ನ ಸಹೋದರನಿಗೆ ಪ್ರಚೋದಿಸಿದರು..'; ಪ್ರೇಮಿಯ ಶವವನ್ನು 'ಮದುವೆ'ಯಾದ ಯುವತಿಯ ಗಂಭೀರ ಆರೋಪ

‘ಕೊಲ್ಲುವಂತೆ ಪೊಲೀಸರೇ ನನ್ನ ಸಹೋದರನಿಗೆ ಪ್ರಚೋದಿಸಿದರು..’; ಪ್ರೇಮಿಯ ಶವವನ್ನು ‘ಮದುವೆ’ಯಾದ ಯುವತಿಯ ಗಂಭೀರ ಆರೋಪ

- Advertisement -
- Advertisement -

ಮರ್ಯಾದೆಗೇಡು ಹತ್ಯೆ ಬಳಿಕ ತನ್ನ ಪ್ರೇಮಿಯ ಶವವನ್ನು ‘ಮದುವೆ’ಯಾದ ಮಹಾರಾಷ್ಟ್ರದ ಯುವತಿ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ನನ್ನ ಗೆಳೆಯನನ್ನು ಇಬ್ಬರು ಪೊಲೀಸರು ನಿಂದಿಸಿದ ಬಳಿಕ ನನ್ನ ಸಹೋದರ ಕೊಂದಿದ್ದಾನೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಸೋಮವಾರ ನೀಡಿದ ಹೇಳಿಕೆಯಲ್ಲಿ, “ನನ್ನ ಸಹೋದರ ಹಿಮೇಶ್ ಮಾಮಿದ್ವರ್ ತನ್ನ ಗೆಳೆಯನ ವಿರುದ್ಧ ‘ಸುಳ್ಳು ಪ್ರಕರಣ’ ದಾಖಲಿಸಲು ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾನೆ” ಎಂದು ಅವರು ಹೇಳಿದ್ದಾರೆ.

ಎಲ್ಲವನ್ನೂ ಕೇಳಿದ ನಂತರ, ಧೀರಜ್ ಕೊಮುಲ್ವಾರ್ ಮತ್ತು ಮಹಿ ದಾಸರ್ವರ್ ಎಂಬ ಇಬ್ಬರು ಪೊಲೀಸರು ಹಿಮೇಶ್‌ನನ್ನು ಕೆರಳಿಸಿ ತನ್ನ ಗೆಳೆಯನೊಂದಿಗೆ ‘ಸೆಟಲ್‌’ ಮಾಡಿಕೊಳ್ಳುವಂತೆ ಸೂಚಿಸಿದರು ಎಂದು ಅವರು ಆರೋಪಿಸಿದ್ದಾರೆ. “ಆದ್ದರಿಂದ ಆ ದಿನ, ಸಕ್ಷಮ್ ಕೊಲ್ಲಲ್ಪಡುವ ಮೊದಲು, ಬೆಳಿಗ್ಗೆ 11 ರಿಂದ 12 ರ ಸುಮಾರಿಗೆ ನನ್ನ ಕಿರಿಯ ಸಹೋದರ ಹಿಮೇಶ್ ಮಾಮಿದ್ವರ್ ನನ್ನನ್ನು ಇತ್ವಾರಾ ಪೊಲೀಸ್ ಠಾಣೆಗೆ ಕರೆದೊಯ್ದರು” ಎಂದು 21 ವರ್ಷದ ಆಂಚಲ್ ಮಾಮಿದ್ವರ್ ತಿಳಿಸಿದರು.

“ಅಲ್ಲಿ, ಅವನು ಸಕ್ಷಮ್ ವಿರುದ್ಧ ಪ್ರಕರಣ ದಾಖಲಿಸಲು ಹೇಳಿದನು. ನಾನು ಎಲ್ಲರ ಮುಂದೆ ನಿರಾಕರಿಸಿದೆ. ಆಗ ಅಲ್ಲಿದ್ದ ಇಬ್ಬರು ಪೊಲೀಸರಾದ ಧೀರಜ್ ಕೊಮುಲ್ವಾರ್ ಮತ್ತು ಮಹಿ ದಾಸರ್ವರ್ ಅವರರು ಸಹೋದರನನ್ನು ಕೆರಳಿಸಿದರು. ಅವರು, ‘ನೀನು ಅವನನ್ನು ಹೊಡೆದ ನಂತರ ಇಲ್ಲಿಗೆ ಬಂದಿದ್ದೀಯಾ? ಹೀಗೆ ಮಾಡುವ ಬದಲು, ನಿನ್ನ ಸಹೋದರಿ ಯಾರೊಂದಿಗೆ ಸಂಬಂಧ ಹೊಂದಿದ್ದಾಳೆಯೋ ಅವರೊಂದಿಗೆ ಮಾತನಾಡುವುಸು ಉತ್ತಮ’ ಎಂದು ಹೇಳಿದರು” ಎಂದು ಅವರು ಹೇಳಿದರು.

ಆಂಚಲ್ ಮತ್ತು ಸಕ್ಷಮ್ (20) ಕಳೆದ ಮೂರು ವರ್ಷಗಳಿಂದ ಸಂಬಂಧದಲ್ಲಿದ್ದರು. ಆದರೆ, ಯುವತಿಯ ಕುಟುಂಬ ಸದಸ್ಯರು ಅವರ ಜಾತಿಗಳು ಬೇರೆ ಬೇರೆಯಾಗಿರುವುದರಿಂದ ಇಬ್ಬರ ಸಂಬಂಧವನ್ನು ವಿರೋಧಿಸಿದ್ದರು. ವರದಿಯ ಪ್ರಕಾರ, ಸಕ್ಷಮ್ ಮತ್ತು ಆಂಚಲ್ ಅವರ ಸಹೋದರರು ಈ ಬಗ್ಗೆ ಪರಸ್ಪರ ತಿಳಿದಿದ್ದರು, ಪ್ರೇಮಿಗಳಿಬ್ಬರೂ ಮೊದಲ ಭಾರಿಗೆ ಸಹೋದರ ಮೂಲಕವೇ ಭೇಟಿಯಾಗಿದ್ದರು.

ನವೆಂಬರ್ 27 ರ ಸಂಜೆ, ಸಕ್ಷಮ್ ಮತ್ತು ಹಿಮೇಶ್ ನಡುವೆ ಜಗಳ ನಡೆದ ನಂತರ, ಮಹಾರಾಷ್ಟ್ರದ ನಾಂದೇಡ್‌ನ ಓಲ್ಡ್ ಗಂಜ್ ಪ್ರದೇಶದಲ್ಲಿ ಸಕ್ಷಮ್ ಮೇಲೆ ಹಿಮೇಶ್ ನಡುವೆ ಗುಂಡು ಹಾರಿಸಿದನು. ನಂತರ, ಹಿಮೇಶ್ ಸಕ್ಷಮ್‌ನ ತಲೆಗೆ ಟೈಲ್‌ನಿಂದ ಹೊಡೆದ ಬಳಿಕ ಅವನು ಸ್ಥಳದಲ್ಲೇ ಸಾವನ್ನಪ್ಪಿದನು.

ಆಂಚಲ್ ಈಗ ತನ್ನ ಸಹೋದರ ಮತ್ತು ಇತರ ಕುಟುಂಬ ಸದಸ್ಯರಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದ್ದಾಳೆ. “ನಾನು ಸಕ್ಷಾಮ್ (ಮೃತ) ಜೊತೆ ಮೂರು ವರ್ಷಗಳಿಂದ ಸಂಬಂಧದಲ್ಲಿದ್ದೆ. ಅವನು ‘ಜೈ ಭೀಮ್’ ಅನುಯಾಯಿಯಾಗಿರುವುದರಿಂದ ನನ್ನ ಕುಟುಂಬ ಅದನ್ನು ಸ್ವೀಕರಿಸಲಿಲ್ಲ, ಅಷ್ಟೇ. ನನ್ನ ಕುಟುಂಬವು ಅವನಿಗೆ ನಮ್ಮ ಮದುವೆ ಮಾಡುವುದಾಗಿ ಭರವಸೆ ನೀಡಿತ್ತು. ಅವರು ನನಗೂ ಅದೇ ಭರವಸೆ ನೀಡಿದ್ದರು” ಎಂದು ಅವರು ತಿಳಿಸಿದರು.

ಪೊಲೀಸರು ಈಗ ಹಿಮೇಶ್ ಮತ್ತು ಆಂಚಲ್ ಅವರ ಇನ್ನೊಬ್ಬ ಸಹೋದರ ಸಾಹಿಲ್ (25) ಮತ್ತು ಅವರ ತಂದೆ ಗಜಾನನ್ ಮಾಮಿದ್ವಾರ್ (45) ಅವರನ್ನು ಬಂಧಿಸಿದ್ದಾರೆ. ಅವರೆಲ್ಲರನ್ನೂ ಮೂರು ದಿನಗಳ ಕಸ್ಟಡಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...