Homeಮುಖಪುಟ'ಕೊಲ್ಲುವಂತೆ ಪೊಲೀಸರೇ ನನ್ನ ಸಹೋದರನಿಗೆ ಪ್ರಚೋದಿಸಿದರು..'; ಪ್ರೇಮಿಯ ಶವವನ್ನು 'ಮದುವೆ'ಯಾದ ಯುವತಿಯ ಗಂಭೀರ ಆರೋಪ

‘ಕೊಲ್ಲುವಂತೆ ಪೊಲೀಸರೇ ನನ್ನ ಸಹೋದರನಿಗೆ ಪ್ರಚೋದಿಸಿದರು..’; ಪ್ರೇಮಿಯ ಶವವನ್ನು ‘ಮದುವೆ’ಯಾದ ಯುವತಿಯ ಗಂಭೀರ ಆರೋಪ

- Advertisement -
- Advertisement -

ಮರ್ಯಾದೆಗೇಡು ಹತ್ಯೆ ಬಳಿಕ ತನ್ನ ಪ್ರೇಮಿಯ ಶವವನ್ನು ‘ಮದುವೆ’ಯಾದ ಮಹಾರಾಷ್ಟ್ರದ ಯುವತಿ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ನನ್ನ ಗೆಳೆಯನನ್ನು ಇಬ್ಬರು ಪೊಲೀಸರು ನಿಂದಿಸಿದ ಬಳಿಕ ನನ್ನ ಸಹೋದರ ಕೊಂದಿದ್ದಾನೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಸೋಮವಾರ ನೀಡಿದ ಹೇಳಿಕೆಯಲ್ಲಿ, “ನನ್ನ ಸಹೋದರ ಹಿಮೇಶ್ ಮಾಮಿದ್ವರ್ ತನ್ನ ಗೆಳೆಯನ ವಿರುದ್ಧ ‘ಸುಳ್ಳು ಪ್ರಕರಣ’ ದಾಖಲಿಸಲು ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾನೆ” ಎಂದು ಅವರು ಹೇಳಿದ್ದಾರೆ.

ಎಲ್ಲವನ್ನೂ ಕೇಳಿದ ನಂತರ, ಧೀರಜ್ ಕೊಮುಲ್ವಾರ್ ಮತ್ತು ಮಹಿ ದಾಸರ್ವರ್ ಎಂಬ ಇಬ್ಬರು ಪೊಲೀಸರು ಹಿಮೇಶ್‌ನನ್ನು ಕೆರಳಿಸಿ ತನ್ನ ಗೆಳೆಯನೊಂದಿಗೆ ‘ಸೆಟಲ್‌’ ಮಾಡಿಕೊಳ್ಳುವಂತೆ ಸೂಚಿಸಿದರು ಎಂದು ಅವರು ಆರೋಪಿಸಿದ್ದಾರೆ. “ಆದ್ದರಿಂದ ಆ ದಿನ, ಸಕ್ಷಮ್ ಕೊಲ್ಲಲ್ಪಡುವ ಮೊದಲು, ಬೆಳಿಗ್ಗೆ 11 ರಿಂದ 12 ರ ಸುಮಾರಿಗೆ ನನ್ನ ಕಿರಿಯ ಸಹೋದರ ಹಿಮೇಶ್ ಮಾಮಿದ್ವರ್ ನನ್ನನ್ನು ಇತ್ವಾರಾ ಪೊಲೀಸ್ ಠಾಣೆಗೆ ಕರೆದೊಯ್ದರು” ಎಂದು 21 ವರ್ಷದ ಆಂಚಲ್ ಮಾಮಿದ್ವರ್ ತಿಳಿಸಿದರು.

“ಅಲ್ಲಿ, ಅವನು ಸಕ್ಷಮ್ ವಿರುದ್ಧ ಪ್ರಕರಣ ದಾಖಲಿಸಲು ಹೇಳಿದನು. ನಾನು ಎಲ್ಲರ ಮುಂದೆ ನಿರಾಕರಿಸಿದೆ. ಆಗ ಅಲ್ಲಿದ್ದ ಇಬ್ಬರು ಪೊಲೀಸರಾದ ಧೀರಜ್ ಕೊಮುಲ್ವಾರ್ ಮತ್ತು ಮಹಿ ದಾಸರ್ವರ್ ಅವರರು ಸಹೋದರನನ್ನು ಕೆರಳಿಸಿದರು. ಅವರು, ‘ನೀನು ಅವನನ್ನು ಹೊಡೆದ ನಂತರ ಇಲ್ಲಿಗೆ ಬಂದಿದ್ದೀಯಾ? ಹೀಗೆ ಮಾಡುವ ಬದಲು, ನಿನ್ನ ಸಹೋದರಿ ಯಾರೊಂದಿಗೆ ಸಂಬಂಧ ಹೊಂದಿದ್ದಾಳೆಯೋ ಅವರೊಂದಿಗೆ ಮಾತನಾಡುವುಸು ಉತ್ತಮ’ ಎಂದು ಹೇಳಿದರು” ಎಂದು ಅವರು ಹೇಳಿದರು.

ಆಂಚಲ್ ಮತ್ತು ಸಕ್ಷಮ್ (20) ಕಳೆದ ಮೂರು ವರ್ಷಗಳಿಂದ ಸಂಬಂಧದಲ್ಲಿದ್ದರು. ಆದರೆ, ಯುವತಿಯ ಕುಟುಂಬ ಸದಸ್ಯರು ಅವರ ಜಾತಿಗಳು ಬೇರೆ ಬೇರೆಯಾಗಿರುವುದರಿಂದ ಇಬ್ಬರ ಸಂಬಂಧವನ್ನು ವಿರೋಧಿಸಿದ್ದರು. ವರದಿಯ ಪ್ರಕಾರ, ಸಕ್ಷಮ್ ಮತ್ತು ಆಂಚಲ್ ಅವರ ಸಹೋದರರು ಈ ಬಗ್ಗೆ ಪರಸ್ಪರ ತಿಳಿದಿದ್ದರು, ಪ್ರೇಮಿಗಳಿಬ್ಬರೂ ಮೊದಲ ಭಾರಿಗೆ ಸಹೋದರ ಮೂಲಕವೇ ಭೇಟಿಯಾಗಿದ್ದರು.

ನವೆಂಬರ್ 27 ರ ಸಂಜೆ, ಸಕ್ಷಮ್ ಮತ್ತು ಹಿಮೇಶ್ ನಡುವೆ ಜಗಳ ನಡೆದ ನಂತರ, ಮಹಾರಾಷ್ಟ್ರದ ನಾಂದೇಡ್‌ನ ಓಲ್ಡ್ ಗಂಜ್ ಪ್ರದೇಶದಲ್ಲಿ ಸಕ್ಷಮ್ ಮೇಲೆ ಹಿಮೇಶ್ ನಡುವೆ ಗುಂಡು ಹಾರಿಸಿದನು. ನಂತರ, ಹಿಮೇಶ್ ಸಕ್ಷಮ್‌ನ ತಲೆಗೆ ಟೈಲ್‌ನಿಂದ ಹೊಡೆದ ಬಳಿಕ ಅವನು ಸ್ಥಳದಲ್ಲೇ ಸಾವನ್ನಪ್ಪಿದನು.

ಆಂಚಲ್ ಈಗ ತನ್ನ ಸಹೋದರ ಮತ್ತು ಇತರ ಕುಟುಂಬ ಸದಸ್ಯರಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದ್ದಾಳೆ. “ನಾನು ಸಕ್ಷಾಮ್ (ಮೃತ) ಜೊತೆ ಮೂರು ವರ್ಷಗಳಿಂದ ಸಂಬಂಧದಲ್ಲಿದ್ದೆ. ಅವನು ‘ಜೈ ಭೀಮ್’ ಅನುಯಾಯಿಯಾಗಿರುವುದರಿಂದ ನನ್ನ ಕುಟುಂಬ ಅದನ್ನು ಸ್ವೀಕರಿಸಲಿಲ್ಲ, ಅಷ್ಟೇ. ನನ್ನ ಕುಟುಂಬವು ಅವನಿಗೆ ನಮ್ಮ ಮದುವೆ ಮಾಡುವುದಾಗಿ ಭರವಸೆ ನೀಡಿತ್ತು. ಅವರು ನನಗೂ ಅದೇ ಭರವಸೆ ನೀಡಿದ್ದರು” ಎಂದು ಅವರು ತಿಳಿಸಿದರು.

ಪೊಲೀಸರು ಈಗ ಹಿಮೇಶ್ ಮತ್ತು ಆಂಚಲ್ ಅವರ ಇನ್ನೊಬ್ಬ ಸಹೋದರ ಸಾಹಿಲ್ (25) ಮತ್ತು ಅವರ ತಂದೆ ಗಜಾನನ್ ಮಾಮಿದ್ವಾರ್ (45) ಅವರನ್ನು ಬಂಧಿಸಿದ್ದಾರೆ. ಅವರೆಲ್ಲರನ್ನೂ ಮೂರು ದಿನಗಳ ಕಸ್ಟಡಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....

‘ಖಮೇನಿ ಹತ್ಯೆ ಬಗ್ಗೆ ಮೋದಿ ಸರ್ಕಾರದ ಮೌನ ತಟಸ್ಥವಲ್ಲ, ಬದಲಿಗೆ ಪದತ್ಯಾಗ’: ಸೋನಿಯಾ ಗಾಂಧಿ

ಮಂಗಳವಾರ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಬಗ್ಗೆ ಮೋದಿಯವರ ಮೌನವು ತಟಸ್ಥವಲ್ಲ, ಬದಲಾಗಿ ತ್ಯಾಗವಾಗಿದೆ...

ಟೆಕ್ಸಾಸ್‌ನಲ್ಲಿ ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿ ನಾಲ್ವರು ಸಾವು

ಟೆಕ್ಸಾಸ್‌ನ ಆಸ್ಟಿನ್ ನಗರದ ಬಾರ್ ಒಂದರ ಹೊರಗಡೆ ನಡೆದ ಗುಂಡಿನ ದಾಳಿಯಲ್ಲಿ ಭಾರತ ಮೂಲದ ಅಮೆರಿಕನ್ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಈ ಘಟನೆಯನ್ನು ಭಯೋತ್ಪಾದನಾ ಕೃತ್ಯವಾಗಿರಬಹುದು ಎಂಬ ಶಂಕೆಯ ಮೇಲೆ ತನಿಖೆ...