Homeಮುಖಪುಟ'ಕೊಲ್ಲುವಂತೆ ಪೊಲೀಸರೇ ನನ್ನ ಸಹೋದರನಿಗೆ ಪ್ರಚೋದಿಸಿದರು..'; ಪ್ರೇಮಿಯ ಶವವನ್ನು 'ಮದುವೆ'ಯಾದ ಯುವತಿಯ ಗಂಭೀರ ಆರೋಪ

‘ಕೊಲ್ಲುವಂತೆ ಪೊಲೀಸರೇ ನನ್ನ ಸಹೋದರನಿಗೆ ಪ್ರಚೋದಿಸಿದರು..’; ಪ್ರೇಮಿಯ ಶವವನ್ನು ‘ಮದುವೆ’ಯಾದ ಯುವತಿಯ ಗಂಭೀರ ಆರೋಪ

- Advertisement -
- Advertisement -

ಮರ್ಯಾದೆಗೇಡು ಹತ್ಯೆ ಬಳಿಕ ತನ್ನ ಪ್ರೇಮಿಯ ಶವವನ್ನು ‘ಮದುವೆ’ಯಾದ ಮಹಾರಾಷ್ಟ್ರದ ಯುವತಿ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ನನ್ನ ಗೆಳೆಯನನ್ನು ಇಬ್ಬರು ಪೊಲೀಸರು ನಿಂದಿಸಿದ ಬಳಿಕ ನನ್ನ ಸಹೋದರ ಕೊಂದಿದ್ದಾನೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಸೋಮವಾರ ನೀಡಿದ ಹೇಳಿಕೆಯಲ್ಲಿ, “ನನ್ನ ಸಹೋದರ ಹಿಮೇಶ್ ಮಾಮಿದ್ವರ್ ತನ್ನ ಗೆಳೆಯನ ವಿರುದ್ಧ ‘ಸುಳ್ಳು ಪ್ರಕರಣ’ ದಾಖಲಿಸಲು ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾನೆ” ಎಂದು ಅವರು ಹೇಳಿದ್ದಾರೆ.

ಎಲ್ಲವನ್ನೂ ಕೇಳಿದ ನಂತರ, ಧೀರಜ್ ಕೊಮುಲ್ವಾರ್ ಮತ್ತು ಮಹಿ ದಾಸರ್ವರ್ ಎಂಬ ಇಬ್ಬರು ಪೊಲೀಸರು ಹಿಮೇಶ್‌ನನ್ನು ಕೆರಳಿಸಿ ತನ್ನ ಗೆಳೆಯನೊಂದಿಗೆ ‘ಸೆಟಲ್‌’ ಮಾಡಿಕೊಳ್ಳುವಂತೆ ಸೂಚಿಸಿದರು ಎಂದು ಅವರು ಆರೋಪಿಸಿದ್ದಾರೆ. “ಆದ್ದರಿಂದ ಆ ದಿನ, ಸಕ್ಷಮ್ ಕೊಲ್ಲಲ್ಪಡುವ ಮೊದಲು, ಬೆಳಿಗ್ಗೆ 11 ರಿಂದ 12 ರ ಸುಮಾರಿಗೆ ನನ್ನ ಕಿರಿಯ ಸಹೋದರ ಹಿಮೇಶ್ ಮಾಮಿದ್ವರ್ ನನ್ನನ್ನು ಇತ್ವಾರಾ ಪೊಲೀಸ್ ಠಾಣೆಗೆ ಕರೆದೊಯ್ದರು” ಎಂದು 21 ವರ್ಷದ ಆಂಚಲ್ ಮಾಮಿದ್ವರ್ ತಿಳಿಸಿದರು.

“ಅಲ್ಲಿ, ಅವನು ಸಕ್ಷಮ್ ವಿರುದ್ಧ ಪ್ರಕರಣ ದಾಖಲಿಸಲು ಹೇಳಿದನು. ನಾನು ಎಲ್ಲರ ಮುಂದೆ ನಿರಾಕರಿಸಿದೆ. ಆಗ ಅಲ್ಲಿದ್ದ ಇಬ್ಬರು ಪೊಲೀಸರಾದ ಧೀರಜ್ ಕೊಮುಲ್ವಾರ್ ಮತ್ತು ಮಹಿ ದಾಸರ್ವರ್ ಅವರರು ಸಹೋದರನನ್ನು ಕೆರಳಿಸಿದರು. ಅವರು, ‘ನೀನು ಅವನನ್ನು ಹೊಡೆದ ನಂತರ ಇಲ್ಲಿಗೆ ಬಂದಿದ್ದೀಯಾ? ಹೀಗೆ ಮಾಡುವ ಬದಲು, ನಿನ್ನ ಸಹೋದರಿ ಯಾರೊಂದಿಗೆ ಸಂಬಂಧ ಹೊಂದಿದ್ದಾಳೆಯೋ ಅವರೊಂದಿಗೆ ಮಾತನಾಡುವುಸು ಉತ್ತಮ’ ಎಂದು ಹೇಳಿದರು” ಎಂದು ಅವರು ಹೇಳಿದರು.

ಆಂಚಲ್ ಮತ್ತು ಸಕ್ಷಮ್ (20) ಕಳೆದ ಮೂರು ವರ್ಷಗಳಿಂದ ಸಂಬಂಧದಲ್ಲಿದ್ದರು. ಆದರೆ, ಯುವತಿಯ ಕುಟುಂಬ ಸದಸ್ಯರು ಅವರ ಜಾತಿಗಳು ಬೇರೆ ಬೇರೆಯಾಗಿರುವುದರಿಂದ ಇಬ್ಬರ ಸಂಬಂಧವನ್ನು ವಿರೋಧಿಸಿದ್ದರು. ವರದಿಯ ಪ್ರಕಾರ, ಸಕ್ಷಮ್ ಮತ್ತು ಆಂಚಲ್ ಅವರ ಸಹೋದರರು ಈ ಬಗ್ಗೆ ಪರಸ್ಪರ ತಿಳಿದಿದ್ದರು, ಪ್ರೇಮಿಗಳಿಬ್ಬರೂ ಮೊದಲ ಭಾರಿಗೆ ಸಹೋದರ ಮೂಲಕವೇ ಭೇಟಿಯಾಗಿದ್ದರು.

ನವೆಂಬರ್ 27 ರ ಸಂಜೆ, ಸಕ್ಷಮ್ ಮತ್ತು ಹಿಮೇಶ್ ನಡುವೆ ಜಗಳ ನಡೆದ ನಂತರ, ಮಹಾರಾಷ್ಟ್ರದ ನಾಂದೇಡ್‌ನ ಓಲ್ಡ್ ಗಂಜ್ ಪ್ರದೇಶದಲ್ಲಿ ಸಕ್ಷಮ್ ಮೇಲೆ ಹಿಮೇಶ್ ನಡುವೆ ಗುಂಡು ಹಾರಿಸಿದನು. ನಂತರ, ಹಿಮೇಶ್ ಸಕ್ಷಮ್‌ನ ತಲೆಗೆ ಟೈಲ್‌ನಿಂದ ಹೊಡೆದ ಬಳಿಕ ಅವನು ಸ್ಥಳದಲ್ಲೇ ಸಾವನ್ನಪ್ಪಿದನು.

ಆಂಚಲ್ ಈಗ ತನ್ನ ಸಹೋದರ ಮತ್ತು ಇತರ ಕುಟುಂಬ ಸದಸ್ಯರಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದ್ದಾಳೆ. “ನಾನು ಸಕ್ಷಾಮ್ (ಮೃತ) ಜೊತೆ ಮೂರು ವರ್ಷಗಳಿಂದ ಸಂಬಂಧದಲ್ಲಿದ್ದೆ. ಅವನು ‘ಜೈ ಭೀಮ್’ ಅನುಯಾಯಿಯಾಗಿರುವುದರಿಂದ ನನ್ನ ಕುಟುಂಬ ಅದನ್ನು ಸ್ವೀಕರಿಸಲಿಲ್ಲ, ಅಷ್ಟೇ. ನನ್ನ ಕುಟುಂಬವು ಅವನಿಗೆ ನಮ್ಮ ಮದುವೆ ಮಾಡುವುದಾಗಿ ಭರವಸೆ ನೀಡಿತ್ತು. ಅವರು ನನಗೂ ಅದೇ ಭರವಸೆ ನೀಡಿದ್ದರು” ಎಂದು ಅವರು ತಿಳಿಸಿದರು.

ಪೊಲೀಸರು ಈಗ ಹಿಮೇಶ್ ಮತ್ತು ಆಂಚಲ್ ಅವರ ಇನ್ನೊಬ್ಬ ಸಹೋದರ ಸಾಹಿಲ್ (25) ಮತ್ತು ಅವರ ತಂದೆ ಗಜಾನನ್ ಮಾಮಿದ್ವಾರ್ (45) ಅವರನ್ನು ಬಂಧಿಸಿದ್ದಾರೆ. ಅವರೆಲ್ಲರನ್ನೂ ಮೂರು ದಿನಗಳ ಕಸ್ಟಡಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಕ್ರಮ ಗಣಿಗಾರಿಕೆ ಸರಿಪಡಿಸಲಾಗದ ಹಾನಿಗೆ ಕಾರಣವಾಗಬಹುದು’: ಅರಾವಳಿ ಸಮಗ್ರ ಪರೀಕ್ಷೆಗೆ ತಜ್ಞರ ಸಮಿತಿ ರಚಿಸಲು ಸುಪ್ರೀಂ ಸೂಚನೆ

ನವದೆಹಲಿ: ಅಕ್ರಮ ಗಣಿಗಾರಿಕೆಯಿಂದ ಸರಿಪಡಿಸಲಾಗದ ಹಾನಿ ಉಂಟಾಗಬಹುದು ಎಂದು ಗಮನಿಸಿದ ಸುಪ್ರೀಂ ಕೋರ್ಟ್, ಅರಾವಳಿಯಲ್ಲಿ ಗಣಿಗಾರಿಕೆ ಮತ್ತು ಸಂಬಂಧಿತ ಸಮಸ್ಯೆಗಳ ಸಮಗ್ರ ಪರೀಕ್ಷೆಯನ್ನು ಕೈಗೊಳ್ಳಲು ಡೊಮೇನ್ ತಜ್ಞರನ್ನು ಒಳಗೊಂಡ ತಜ್ಞರ ಸಮಿತಿಯನ್ನು ರಚಿಸುವುದಾಗಿ...

ಮೋದಿ ಕಾರ್ಯಕ್ರಮದಲ್ಲಿ ಸಮೋಸ ವಿತರಣೆಗೆ 2 ಕೋಟಿ ರೂ. ಖರ್ಚು : ಬಿಜೆಪಿ ವಿರುದ್ಧ ಕೇಜ್ರಿವಾಲ್ ಆರೋಪ

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ಗುಜರಾತ್‌ನ ಬುಡಕಟ್ಟು ಪ್ರದೇಶಕ್ಕೆ ಭೇಟಿ ನೀಡಿದ ಕಾರ್ಯಕ್ರಮಕ್ಕೆ 50 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್...

ಸಂಭಾಲ್ ಹಿಂಸಾಚಾರ ಸಂಬಂಧ ಪೊಲೀಸರ ಮೇಲೆ ಎಫ್‌ಐಆರ್‌ಗೆ ಆದೇಶಿಸಿದ್ದ ನ್ಯಾಯಾಧೀಶ ವರ್ಗಾವಣೆ

ಸಂಭಾಲ್ ಹಿಂಸಾಚಾರ ಸಂಬಂಧ ಪೊಲೀಸರ ಮೇಲೆ ಎಫ್‌ಐಆರ್‌ ದಾಖಲಿಸಲು ಆದೇಶಿಸಿದ್ದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಸಿಜೆಎಂ) ವಿಭಾಂಶು ಸುಧೀರ್ ಸೇರಿದಂತೆ 14 ನ್ಯಾಯಾಧೀಶರನ್ನು ವರ್ಗಾವಣೆ ಮಾಡಿ ಅಲಹಾಬಾದ್ ಹೈಕೋರ್ಟ್ ಆಡಳಿತಾತ್ಮಕ ಆದೇಶ ಹೊರಡಿಸಿದೆ....

‘ಅಮೆರಿಕಾ ಅಧ್ಯಕ್ಷನ ಹತ್ಯೆಯ ಸಂಚು ರೂಪಿಸಿದರೆ ಇರಾನ್ ‘ಭೂಮಿಯಿಂದ ನಾಶವಾಗುತ್ತದೆ’: ಡೊನಾಲ್ಡ್ ಟ್ರಂಪ್ 

ವಾಷಿಂಗ್ಟನ್: ಟೆಹ್ರಾನ್ ಅಮೆರಿಕದ ನಾಯಕನನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾದರೆ, ಇರಾನ್ ಅನ್ನು "ಈ ಭೂಮಿಯಿಂದಲೇ ಅಳಿಸಿಹಾಕಲಾಗುವುದು’ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಇರಾನ್ ಗೆ ಎಚ್ಚರಿಕೆ ನೀಡಿದ್ದಾರೆ. ಬೆದರಿಕೆಗಳ ಬಿಸಿ ವಿನಿಮಯದಲ್ಲಿ,...

ಆಲ್ಗಾರಿದಂ ಪಕ್ಷಪಾತ, ಎಐನಲ್ಲೂ ಜಾತಿವಾದ-ತಾರತಮ್ಯ : ಹೊಸ ಚರ್ಚೆ ಹುಟ್ಟು ಹಾಕಿದ ಡಾ. ವಿಜೇಂದರ್ ಹೇಳಿಕೆ

ಆಲ್ಗಾರಿದಂ ಪಕ್ಷಪಾತ (Algorithm bias) ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಹೊಸ ಚರ್ಚೆ ನಡೆಯುತ್ತಿದೆ. ಪ್ರಮುಖ ಸಾಮಾಜಿಕ ನ್ಯಾಯ ಹೋರಾಟಗಾರ ಮತ್ತು ವಿದ್ವಾಂಸ ಡಾ. ವಿಜೇಂದರ್ ಸಿಂಗ್ ಚೌಹಾಣ್ ಅವರು, ಚಾಟ್‌ಜಿಪಿಟಿ (ChatGPT)ಯಂತಹ ಎಐ...

‘ಸನಾತನ ಧರ್ಮ ವಿವಾದ’: ಉದಯನಿಧಿ ಹೇಳಿಕೆ ‘ದ್ವೇಷ ಭಾಷಣ’ಕ್ಕೆ ಸಮ ಎಂದು ಬಿಜೆಪಿ ನಾಯಕನ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಮಧುರೈ: ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರ ‘ಸನಾತನ ಧರ್ಮ ನಿರ್ಮೂಲನೆ’ ಕುರಿತ ಹೇಳಿಕೆಗಳನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಾಗಿ ಬಿಜೆಪಿ ಐಟಿ ವಿಭಾಗದ ನಾಯಕ ಅಮಿತ್ ಮಾಳವೀಯ ಅವರ ವಿರುದ್ಧ ದಾಖಲಾಗಿದ್ದ...

ಶಿಕ್ಷೆ ಮುಗಿದ 3 ವರ್ಷಗಳ ನಂತರ ಪಾಕಿಸ್ತಾನ ಜೈಲಿನಲ್ಲಿ ಗುಜರಾತ್ ಮೀನುಗಾರ ಸಾವು

2022 ರಲ್ಲಿ ಅಜಾಗರೂಕತೆಯಿಂದ ಅಂತರರಾಷ್ಟ್ರೀಯ ಗಡಿ ರೇಖೆಯನ್ನು ದಾಟಿದ ನಂತರ ಪಾಕಿಸ್ತಾನ ಏಜೆನ್ಸಿಗಳಿಂದ ಬಂಧಿಸಲ್ಪಟ್ಟ ಗುಜರಾತ್‌ನ ಮೀನುಗಾರನೊಬ್ಬ ಜನವರಿ 16 ರಂದು ಕರಾಚಿ ಜೈಲಿನಲ್ಲಿ ಸಾವನ್ನಪ್ಪಿದ್ದಾನೆ. ಮೂರು ವರ್ಷಗಳ ಹಿಂದೆ ಆತನ ಶಿಕ್ಷೆಯನ್ನು...

ಸ್ಥಳದಲ್ಲೇ ದಂಡ ಪಾವತಿಸುವಂತೆ ಸಂಚಾರ ಪೊಲೀಸರು ಒತ್ತಾಯಿಸುವಂತಿಲ್ಲ: ತೆಲಂಗಾಣ ಹೈಕೋರ್ಟ್

ಸಂಚಾರ ನಿಯಮ ಉಲ್ಲಂಘಿಸುವವರ ಬ್ಯಾಂಕ್ ಖಾತೆಗಳಿಂದ ಸ್ವಯಂಚಾಲಿತವಾಗಿ ದಂಡ ಕಡಿತಗೊಳಿಸಬೇಕೆಂದು ಮುಖ್ಯಮಂತ್ರಿ ರೇವಂತ್ ರೆಡ್ಡಿ ಸೂಚಿಸಿದ ಕೆಲವು ದಿನಗಳ ನಂತರ ಮಹತ್ವದ ತೀರ್ಪು ನೀಡಿರುವ ತೆಲಂಗಾಣ ಹೈಕೋರ್ಟ್, ಪೊಲೀಸರು ನಾಗರಿಕರನ್ನು ರಸ್ತೆಯಲ್ಲಿ ನಿಲ್ಲಿಸಿ...

ಎಸ್‌ಸಿ/ಎಸ್‌ಟಿ ಶಾಲೆಗಳ ನವೀಕರಣಕ್ಕೆ ಹಣ ಮಂಜೂರು ಮಾಡದಂತೆ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಮದ್ರಾಸ್ ಹೈಕೋರ್ಟ್ 

ಮಧುರೈ: ತಮಿಳುನಾಡಿನ ಸುಮಾರು 170 ಎಸ್‌ಸಿ/ಎಸ್‌ಟಿ ಶಾಲೆ ಮತ್ತು ಹಾಸ್ಟೆಲ್ ಕಟ್ಟಡಗಳ ದುರಸ್ತಿ ಮತ್ತು ನಿರ್ಮಾಣ ಕಾರ್ಯಗಳಿಗೆ ತಮಿಳುನಾಡು ಆದಿ ದ್ರಾವಿಡರ್ ವಸತಿ ಅಭಿವೃದ್ಧಿ ನಿಗಮ (ಟಿಎಎಚ್‌ಡಿಸಿಒ) 50 ಕೋಟಿ ರೂ.ಗಳನ್ನು ಖರ್ಚು...

ಕೇಂದ್ರ ಸರ್ಕಾರಿ ಅಧಿಕಾರಿಗಳ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳನ್ನು ರಾಜ್ಯ ಸಂಸ್ಥೆ ತನಿಖೆ ಮಾಡಬಹುದು : ಸುಪ್ರೀಂ ಕೋರ್ಟ್

ಕೇಂದ್ರ ಸರ್ಕಾರಿ ನೌಕರರು ಮಾಡುವ ಭ್ರಷ್ಟಾಚಾರ ತಡೆ ಕಾಯ್ದೆಯಡಿಯ ಶಿಕ್ಷಾರ್ಹ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ರಾಜ್ಯ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಲು ಮತ್ತು ಆರೋಪಪಟ್ಟಿ ಸಲ್ಲಿಸಲು ಸಮರ್ಥರು ಎಂದು ಸುಪ್ರೀಂ ಕೋರ್ಟ್ ಸೋಮವಾರ...