Homeಮುಖಪುಟ'ಕೊಲ್ಲುವಂತೆ ಪೊಲೀಸರೇ ನನ್ನ ಸಹೋದರನಿಗೆ ಪ್ರಚೋದಿಸಿದರು..'; ಪ್ರೇಮಿಯ ಶವವನ್ನು 'ಮದುವೆ'ಯಾದ ಯುವತಿಯ ಗಂಭೀರ ಆರೋಪ

‘ಕೊಲ್ಲುವಂತೆ ಪೊಲೀಸರೇ ನನ್ನ ಸಹೋದರನಿಗೆ ಪ್ರಚೋದಿಸಿದರು..’; ಪ್ರೇಮಿಯ ಶವವನ್ನು ‘ಮದುವೆ’ಯಾದ ಯುವತಿಯ ಗಂಭೀರ ಆರೋಪ

- Advertisement -
- Advertisement -

ಮರ್ಯಾದೆಗೇಡು ಹತ್ಯೆ ಬಳಿಕ ತನ್ನ ಪ್ರೇಮಿಯ ಶವವನ್ನು ‘ಮದುವೆ’ಯಾದ ಮಹಾರಾಷ್ಟ್ರದ ಯುವತಿ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ನನ್ನ ಗೆಳೆಯನನ್ನು ಇಬ್ಬರು ಪೊಲೀಸರು ನಿಂದಿಸಿದ ಬಳಿಕ ನನ್ನ ಸಹೋದರ ಕೊಂದಿದ್ದಾನೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಸೋಮವಾರ ನೀಡಿದ ಹೇಳಿಕೆಯಲ್ಲಿ, “ನನ್ನ ಸಹೋದರ ಹಿಮೇಶ್ ಮಾಮಿದ್ವರ್ ತನ್ನ ಗೆಳೆಯನ ವಿರುದ್ಧ ‘ಸುಳ್ಳು ಪ್ರಕರಣ’ ದಾಖಲಿಸಲು ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾನೆ” ಎಂದು ಅವರು ಹೇಳಿದ್ದಾರೆ.

ಎಲ್ಲವನ್ನೂ ಕೇಳಿದ ನಂತರ, ಧೀರಜ್ ಕೊಮುಲ್ವಾರ್ ಮತ್ತು ಮಹಿ ದಾಸರ್ವರ್ ಎಂಬ ಇಬ್ಬರು ಪೊಲೀಸರು ಹಿಮೇಶ್‌ನನ್ನು ಕೆರಳಿಸಿ ತನ್ನ ಗೆಳೆಯನೊಂದಿಗೆ ‘ಸೆಟಲ್‌’ ಮಾಡಿಕೊಳ್ಳುವಂತೆ ಸೂಚಿಸಿದರು ಎಂದು ಅವರು ಆರೋಪಿಸಿದ್ದಾರೆ. “ಆದ್ದರಿಂದ ಆ ದಿನ, ಸಕ್ಷಮ್ ಕೊಲ್ಲಲ್ಪಡುವ ಮೊದಲು, ಬೆಳಿಗ್ಗೆ 11 ರಿಂದ 12 ರ ಸುಮಾರಿಗೆ ನನ್ನ ಕಿರಿಯ ಸಹೋದರ ಹಿಮೇಶ್ ಮಾಮಿದ್ವರ್ ನನ್ನನ್ನು ಇತ್ವಾರಾ ಪೊಲೀಸ್ ಠಾಣೆಗೆ ಕರೆದೊಯ್ದರು” ಎಂದು 21 ವರ್ಷದ ಆಂಚಲ್ ಮಾಮಿದ್ವರ್ ತಿಳಿಸಿದರು.

“ಅಲ್ಲಿ, ಅವನು ಸಕ್ಷಮ್ ವಿರುದ್ಧ ಪ್ರಕರಣ ದಾಖಲಿಸಲು ಹೇಳಿದನು. ನಾನು ಎಲ್ಲರ ಮುಂದೆ ನಿರಾಕರಿಸಿದೆ. ಆಗ ಅಲ್ಲಿದ್ದ ಇಬ್ಬರು ಪೊಲೀಸರಾದ ಧೀರಜ್ ಕೊಮುಲ್ವಾರ್ ಮತ್ತು ಮಹಿ ದಾಸರ್ವರ್ ಅವರರು ಸಹೋದರನನ್ನು ಕೆರಳಿಸಿದರು. ಅವರು, ‘ನೀನು ಅವನನ್ನು ಹೊಡೆದ ನಂತರ ಇಲ್ಲಿಗೆ ಬಂದಿದ್ದೀಯಾ? ಹೀಗೆ ಮಾಡುವ ಬದಲು, ನಿನ್ನ ಸಹೋದರಿ ಯಾರೊಂದಿಗೆ ಸಂಬಂಧ ಹೊಂದಿದ್ದಾಳೆಯೋ ಅವರೊಂದಿಗೆ ಮಾತನಾಡುವುಸು ಉತ್ತಮ’ ಎಂದು ಹೇಳಿದರು” ಎಂದು ಅವರು ಹೇಳಿದರು.

ಆಂಚಲ್ ಮತ್ತು ಸಕ್ಷಮ್ (20) ಕಳೆದ ಮೂರು ವರ್ಷಗಳಿಂದ ಸಂಬಂಧದಲ್ಲಿದ್ದರು. ಆದರೆ, ಯುವತಿಯ ಕುಟುಂಬ ಸದಸ್ಯರು ಅವರ ಜಾತಿಗಳು ಬೇರೆ ಬೇರೆಯಾಗಿರುವುದರಿಂದ ಇಬ್ಬರ ಸಂಬಂಧವನ್ನು ವಿರೋಧಿಸಿದ್ದರು. ವರದಿಯ ಪ್ರಕಾರ, ಸಕ್ಷಮ್ ಮತ್ತು ಆಂಚಲ್ ಅವರ ಸಹೋದರರು ಈ ಬಗ್ಗೆ ಪರಸ್ಪರ ತಿಳಿದಿದ್ದರು, ಪ್ರೇಮಿಗಳಿಬ್ಬರೂ ಮೊದಲ ಭಾರಿಗೆ ಸಹೋದರ ಮೂಲಕವೇ ಭೇಟಿಯಾಗಿದ್ದರು.

ನವೆಂಬರ್ 27 ರ ಸಂಜೆ, ಸಕ್ಷಮ್ ಮತ್ತು ಹಿಮೇಶ್ ನಡುವೆ ಜಗಳ ನಡೆದ ನಂತರ, ಮಹಾರಾಷ್ಟ್ರದ ನಾಂದೇಡ್‌ನ ಓಲ್ಡ್ ಗಂಜ್ ಪ್ರದೇಶದಲ್ಲಿ ಸಕ್ಷಮ್ ಮೇಲೆ ಹಿಮೇಶ್ ನಡುವೆ ಗುಂಡು ಹಾರಿಸಿದನು. ನಂತರ, ಹಿಮೇಶ್ ಸಕ್ಷಮ್‌ನ ತಲೆಗೆ ಟೈಲ್‌ನಿಂದ ಹೊಡೆದ ಬಳಿಕ ಅವನು ಸ್ಥಳದಲ್ಲೇ ಸಾವನ್ನಪ್ಪಿದನು.

ಆಂಚಲ್ ಈಗ ತನ್ನ ಸಹೋದರ ಮತ್ತು ಇತರ ಕುಟುಂಬ ಸದಸ್ಯರಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದ್ದಾಳೆ. “ನಾನು ಸಕ್ಷಾಮ್ (ಮೃತ) ಜೊತೆ ಮೂರು ವರ್ಷಗಳಿಂದ ಸಂಬಂಧದಲ್ಲಿದ್ದೆ. ಅವನು ‘ಜೈ ಭೀಮ್’ ಅನುಯಾಯಿಯಾಗಿರುವುದರಿಂದ ನನ್ನ ಕುಟುಂಬ ಅದನ್ನು ಸ್ವೀಕರಿಸಲಿಲ್ಲ, ಅಷ್ಟೇ. ನನ್ನ ಕುಟುಂಬವು ಅವನಿಗೆ ನಮ್ಮ ಮದುವೆ ಮಾಡುವುದಾಗಿ ಭರವಸೆ ನೀಡಿತ್ತು. ಅವರು ನನಗೂ ಅದೇ ಭರವಸೆ ನೀಡಿದ್ದರು” ಎಂದು ಅವರು ತಿಳಿಸಿದರು.

ಪೊಲೀಸರು ಈಗ ಹಿಮೇಶ್ ಮತ್ತು ಆಂಚಲ್ ಅವರ ಇನ್ನೊಬ್ಬ ಸಹೋದರ ಸಾಹಿಲ್ (25) ಮತ್ತು ಅವರ ತಂದೆ ಗಜಾನನ್ ಮಾಮಿದ್ವಾರ್ (45) ಅವರನ್ನು ಬಂಧಿಸಿದ್ದಾರೆ. ಅವರೆಲ್ಲರನ್ನೂ ಮೂರು ದಿನಗಳ ಕಸ್ಟಡಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...