Homeಮುಖಪುಟಮಾಂಸದ ವ್ಯಾಪಾರಿಗಳ ಮುಖದ ಮೇಲೆ ಮೂತ್ರ ಮಾಡಿ, ಹಲ್ಲೆ ನಡೆಸಿದ ಪೊಲೀಸರು!

ಮಾಂಸದ ವ್ಯಾಪಾರಿಗಳ ಮುಖದ ಮೇಲೆ ಮೂತ್ರ ಮಾಡಿ, ಹಲ್ಲೆ ನಡೆಸಿದ ಪೊಲೀಸರು!

- Advertisement -
- Advertisement -

ಮಾಂಸದ ವ್ಯಾಪಾರಿಗಳ ಮೇಲೆ ಮೂವರು ಪೊಲೀಸರು ಸೇರಿದಂತೆ 7 ಜನರು ಹಲ್ಲೆ ನಡೆಸಿ, ಲೂಟಿ ಮಾಡಿರುವ ಘಟನೆ ಪೂರ್ವ ದೆಹಲಿಯ ಆನಂದ್ ವಿಹಾರ್‌ನಲ್ಲಿ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ. ಈ ಘಟನೆ ಮಾರ್ಚ್ 7ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮಾಂಸದ ವ್ಯಾಪಾರಿಗಳು ಕಾರ್‌ನಲ್ಲಿ ಸಂಚರಿಸುತ್ತಿದ್ದಾಗ, ಕಾರು ಸ್ಕೂಟರ್‌ವೊಂದಕ್ಕೆ ಡಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಆರೋಪಿಗಳಲ್ಲಿ ಒಬ್ಬ ‘ಗೋ ರಕ್ಷಕ’ನಾಗಿದ್ದು, ಮಾಂಸ ಮಾರಾಟಗಾರರ ಮುಖದ ಮೇಲೆ ಮೂತ್ರ ಮಾಡಿದ್ದಾನೆ. ಅಲ್ಲದೆ, ಅವರನ್ನು ಕೊಲ್ಲುವುದಾಗಿ ಬೆದರಿಕೆ ಒಡ್ಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆ ಕೂಡಲೇ ಸಂತ್ರಸ್ತರು ಪೊಲೀಸರಿಗೆ ದೂರು ನೀಡಿದರೂ ಸಹ 4 ದಿನಗಳ ಬಳಿಕ ಪ್ರಕರಣ ದಾಖಲಾಗಿದೆ. ಮೂವರು ಪೊಲೀಸರು ಸೇರಿ 7 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳಲ್ಲಿ ಒಬ್ಬ ಎಎಸ್ಐ ಆಗಿದ್ದು, ಆತನನ್ನು ಅಮಾನತು ಮಾಡಲಾಗಿದೆ.

ಮುಸ್ತಾಫಾಬಾದ್‌ನ ನಿವಾಸಿ ನವಾಬ್ ಎನ್ನುವವರು ಗಾಜಿಪುರಕ್ಕೆ ಮಾಂಸ ಸರಬರಾಜು ಮಾಡುತ್ತಿದ್ದರು. ಸೋದರ ಸಂಬಂಧಿ ಶೋಯಬ್ ಜೊತೆ ಕಾರಿನಲ್ಲಿ ಮಾಂಸ ಇಟ್ಟುಕೊಂಡು ಮನೆಯತ್ತ ತೆರಳುತ್ತಿದ್ದರು. ಈ ವೇಳೆ ಕಾರು, ಬೈಕ್‌ಗೆ ಡಿಕ್ಕಿ ಹೊಡೆದಿದೆ. ಸ್ಕೂಟರ್ ಚಾಲಕ ಮಾಂಸದ ವ್ಯಾಪಾರಿಗಳಿಗೆ 4,000 ರೂ. ಡ್ಯಾಮೇಜ್ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾನೆ.

ಇದನ್ನೂ ಓದಿ: ಮಹಾರಾಷ್ಟ್ರ: ಮುಸ್ಲಿಂ ಎನ್ನುವ ಕಾರಣಕ್ಕೆ ಝೊಮಾಟೊ ಸಿಬ್ಬಂದಿ ಮೇಲೆ ಹಲ್ಲೆ; ಕೋಮುವಾದಿ ಅಂಶ ಇಲ್ಲ ಎಂದ ಪೊಲೀಸ್

ಈ ವೇಳೆ, ಸ್ಥಳಕ್ಕಾಗಮಿಸಿದ ಪೊಲೀಸರು ಮಾಂಸ ಮಾರಾಟಗಾರರಿಂದ  2,500 ರೂ. ಪಡೆದು ಸ್ಕೂಟರ್ ಚಾಲಕನಿಗೆ ನೀಡಿದ್ದಾರೆ. ಬಳಿಕ, ಪೊಲೀಸರು ಮಾಂಸದ ವ್ಯಾಪಾರಿಗಳಿಂದ 15 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಹಣ ನೀಡದಿದ್ದರೆ ಪೊಲೀಸ್ ಠಾಣೆಗೆ ಕೊಂಡೊಯ್ಯುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ವರದಿ ತಿಳಿಸಿದೆ.

ಇದಕ್ಕೆ ಮಾಂಸದ ವ್ಯಾಪಾರಿಗಳು ನಿರಾಕರಿಸಿದಾಗ, ಇನ್ನೂ ನಾಲ್ವರನ್ನು ಕರೆಸಿಕೊಂಡ ಪೊಲೀಸರು, ಮಾಂಸದ ವ್ಯಾಪಾರಿಗಳನ್ನು ಪೊಲೀಸ್ ವಾಹನದಲ್ಲಿ ಕೂರಿಸಿಕೊಂಡು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಈ ವೇಳೆ ನವಾಬ್ ಮತ್ತು ಶೋಯಬ್ ಅವರಿಗೆ ಪೊಲೀಸರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಅಲ್ಲದೆ, ಆರೋಪಿಯೊಬ್ಬ ಅವರ ಮೇಲೆ ಮೂತ್ರ ಮಾಡಿ, ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಹೇಳಲಾಗಿದೆ.

ಆ ವ್ಯಾಪಾರಿಗಳನ್ನು ಗೋಹತ್ಯೆ ಮಾಡುವವರು ಎಂದು ಆರೋಪಿಸಿ ಪೊಲೀಸರು 25,000 ರೂ. ಸುಲಿಗೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸಂತ್ರಸ್ತರಿಗೆ ಪ್ರಜ್ಞೆ ತಪ್ಪುವ ಚುಚ್ಚುಮದ್ದನ್ನು ಚುಚ್ಚಿ, ಖಾಲಿ ಪತ್ರಗಳಿಗೆ ಸಹಿ ಮಾಡಿಸಿಕೊಳ್ಳಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಸಂತ್ರಸ್ತ ವ್ಯಾಪಾರಿಗಳು ಆ ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ದೂರು ದಾಖಲಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...