Homeಮುಖಪುಟಟ್ರೇಡ್‌ ಯೂನಿಯನ್‌ನಿಂದ ಕೇರಳ ಮುಖ್ಯಮಂತ್ರಿ ಗಾದಿಯವರೆಗೆ; ವಿ.ಎಸ್. ಅಚ್ಯುತಾನಂದನ್ ಅವರ ರಾಜಕೀಯ ಪ್ರಯಾಣ

ಟ್ರೇಡ್‌ ಯೂನಿಯನ್‌ನಿಂದ ಕೇರಳ ಮುಖ್ಯಮಂತ್ರಿ ಗಾದಿಯವರೆಗೆ; ವಿ.ಎಸ್. ಅಚ್ಯುತಾನಂದನ್ ಅವರ ರಾಜಕೀಯ ಪ್ರಯಾಣ

- Advertisement -
- Advertisement -

ಕೇರಳದ ಮಾಜಿ ಮುಖ್ಯಮಂತ್ರಿ ಮತ್ತು ಭಾರತದ ಅತ್ಯಂತ ಗೌರವಾನ್ವಿತ ಕಮ್ಯುನಿಸ್ಟ್ ನಾಯಕರಲ್ಲಿ ಒಬ್ಬರಾದ ವಿ.ಎಸ್. ಅಚ್ಯುತಾನಂದನ್ ಸೋಮವಾರ ತಮ್ಮ 101 ನೇ ವಯಸ್ಸಿನಲ್ಲಿ ನಿಧನರಾದರು. ಸುಮಾರು ಒಂದು ತಿಂಗಳ ಹಿಂದೆ, ತಿರುವನಂತಪುರಂನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದ ಬಳಿಕ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ನಾಯಕ ಇಂದು ಕೊನೆಯುಸಿರೆಳೆದಿದ್ದಾರೆ ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಎಂ.ವಿ. ಗೋವಿಂದನ್ ದೃಢಪಡಿಸಿದರು.

ಕೇರಳದ ರಾಜಕೀಯ ಇತಿಹಾಸದಲ್ಲಿ ಅತ್ಯುನ್ನತ ವ್ಯಕ್ತಿಯಾಗಿದ್ದ ಅಚ್ಯುತಾನಂದನ್, ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ದ ಸ್ಥಾಪಕ ಸದಸ್ಯರಾಗಿದ್ದರು. ತಮ್ಮ ಯೌವ್ವನದ ದಿನಗಳಿಂದಲೂ ಕಾರ್ಮಿಕರ ಹಕ್ಕುಗಳು, ಭೂ ಸುಧಾರಣೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸಿದ್ದರು.

ಕೇರಳದ ಮುಖ್ಯಮಂತ್ರಿ

ಅಚ್ಯುತಾನಂದನ್ ಅವರು 2006 ರಿಂದ 2011 ರವರೆಗೆ ಕೇರಳದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು. ಏಳು ಬಾರಿ ರಾಜ್ಯ ವಿಧಾನಸಭೆಗೆ ಆಯ್ಕೆಯಾದರು, ಮೂರು ಅವಧಿಗೆ ವಿರೋಧ ಪಕ್ಷದ ನಾಯಕ ಹುದ್ದೆಯನ್ನೂ ಅಲಂಕರಿಸಿದರು. ಒಟ್ಟು 15 ವರ್ಷಗಳ ಕಾಲ ಈ ಹುದ್ದೆಯಲ್ಲಿದ್ದು, ಕೇರಳ ವಿಧಾನಸಭೆಯಲ್ಲಿ ಅತಿ ಹೆಚ್ಚು ಕಾಲ ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.

ಮುಖ್ಯಮಂತ್ರಿಯಾಗಿದ್ದ ನಂತರ, ಅಚ್ಯುತಾನಂದನ್ 2016 ರಿಂದ 2021 ರವರೆಗೆ ಕೇರಳದಲ್ಲಿ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ಕ್ಯಾಬಿನೆಟ್ ದರ್ಜೆಯೊಂದಿಗೆ ಸೇವೆ ಸಲ್ಲಿಸಿದರು.

ರಾಜಕೀಯ ಪ್ರಯಾಣದ ಒಂದು ಹಿನ್ನೋಟ

ಅಚ್ಯುತಾನಂದನ್ ಅವರ ರಾಜಕೀಯ ಪ್ರಯಾಣವು ಟ್ರೇಡ್ ಯೂನಿಯನ್ ಚಟುವಟಿಕೆಯ ಮೂಲಕ ಪ್ರಾರಂಭವಾಯಿತು. ಅವರು 1938 ರಲ್ಲಿ ರಾಜ್ಯ ಕಾಂಗ್ರೆಸ್ ಸೇರಿದರು. 1940 ರಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷದ (ಸಿಪಿಐ) ಸದಸ್ಯರಾದರು. 1967 ರಲ್ಲಿ ಇಎಂಎಸ್ ನಂಬೂದಿರಿಪಾಡ್ ನೇತೃತ್ವದ ಸರ್ಕಾರ ಪರಿಚಯಿಸಿದ ಭೂ ಸುಧಾರಣಾ ಕಾಯ್ದೆಯ ಅನುಷ್ಠಾನಕ್ಕೆ ಒತ್ತಾಯಿಸಿದ 1970 ರ ಅಲಪ್ಪುಳ ಘೋಷಣೆಯೊಂದಿಗೆ ಪ್ರಾರಂಭಿಸಿ ಕೇರಳದ ಭೂ ಹೋರಾಟಗಳಲ್ಲಿ ಅವರು ಪ್ರಮುಖ ಪಾತ್ರ ವಹಿಸಿದರು.

ಅವರು ಊಳಿಗಮಾನ್ಯ ಪದ್ಧತಿ ಮತ್ತು ಅಸಮಾನತೆಯ ಕಟ್ಟಾ ವಿರೋಧಿಯಾಗಿದ್ದರು. ವಿರೋಧ ಪಕ್ಷದ ನಾಯಕರಾಗಿ ಅವರ ಅವಧಿಯು ವ್ಯಾಪಕ ಸಾರ್ವಜನಿಕ ಬೆಂಬಲವನ್ನು ಪಡೆಯಿತು. ಅವರ ರಾಜಕೀಯ ಜೀವನದುದ್ದಕ್ಕೂ, ಅವರು ಅನೇಕ ಸವಾಲುಗಳನ್ನು ಎದುರಿಸಿದರು, ಐದು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿ ಮತ್ತು ನಾಲ್ಕು ವರ್ಷಗಳಿಗೂ ಹೆಚ್ಚು ಕಾಲ ಭೂಗತರಾಗಿದ್ದರು. 1957 ರಲ್ಲಿ, ಅವರು ಸಿಪಿಐನ ರಾಜ್ಯ ಕಾರ್ಯದರ್ಶಿಯ ಸದಸ್ಯರಾದರು.

1964 ರಲ್ಲಿ ಸಿಪಿಐ ರಾಷ್ಟ್ರೀಯ ಮಂಡಳಿಯಿಂದ ಹೊರಬಂದು ಸಿಪಿಐ(ಎಂ) ಪಕ್ಷವನ್ನು ರಚಿಸಿದ 32 ನಾಯಕರ ಗುಂಪಿನಲ್ಲಿ ಅವರು ಉಳಿದಿರುವ ಏಕೈಕ ಸದಸ್ಯರಾಗಿದ್ದರು. ಮುಖ್ಯಮಂತ್ರಿಯಾದ ನಂತರ, ಅಚ್ಯುತಾನಂದನ್ 2016 ರಿಂದ 2021 ರವರೆಗೆ ಕೇರಳದಲ್ಲಿ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ಕ್ಯಾಬಿನೆಟ್ ದರ್ಜೆಯೊಂದಿಗೆ ಸೇವೆ ಸಲ್ಲಿಸಿದರು.

ಕಾರ್ಮಿಕ ಸಂಘಟನೆಯಿಂದ ಕಮ್ಯುನಿಸ್ಟ್ ದಿಗ್ಗಜನಾಗುವವರೆಗೆ

ಅಕ್ಟೋಬರ್ 20, 1923 ರಂದು ಅಲಪ್ಪುಳದ (ಆಗ ತಿರುವಾಂಕೂರಿನ ಭಾಗವಾಗಿದ್ದ) ಪುನ್ನಪ್ರಾದಲ್ಲಿ ಜನಿಸಿದ ಅಚ್ಯುತಾನಂದನ್, ಜೀವನದ ಆರಂಭದಲ್ಲಿ ವೈಯಕ್ತಿಕ ಕಷ್ಟಗಳನ್ನು ಎದುರಿಸಿದರು. ಅವರು ತಮ್ಮ ನಾಲ್ಕನೇ ವಯಸ್ಸಿನಲ್ಲಿ ತಾಯಿ ಮತ್ತು ಹನ್ನೊಂದು ವರ್ಷದ ಹೊತ್ತಿಗೆ ತಂದೆಯನ್ನು ಕಳೆದುಕೊಂಡರು.

7 ನೇ ತರಗತಿಯನ್ನು ಪೂರ್ಣಗೊಳಿಸಿದ ನಂತರ ಶಾಲೆಯನ್ನು ತ್ಯಜಿಸಲು ಒತ್ತಾಯಿಸಲ್ಪಟ್ಟ ಅವರು, ತಮ್ಮ ಅಣ್ಣನ ಟೈಲರಿಂಗ್ ಅಂಗಡಿಯಲ್ಲಿ ಕೆಲಸ ಮಾಡಲು ಪ್ರಾರಂಭಿಸಿದರು, ನಂತರ ತೆಂಗಿನಕಾಯಿ ಕಾರ್ಖಾನೆಗೆ ತೆರಳಿದರು. ಅಲ್ಲಿ ಅವರು ಕಾರ್ಮಿಕರನ್ನು ಸಂಘಟಿಸಿದರು.

ವಿ ಎಸ್ ಅಚ್ಯುತಾನಂದನ್ ಅಂಚಿನಲ್ಲಿರುವವರ ಹಕ್ಕುಗಳಿಗೆ ಅಚಲವಾದ ಬದ್ಧತೆಯ ಪರಂಪರೆಯನ್ನು ಮತ್ತು ಕೇರಳದ ರಾಜಕೀಯ ಇತಿಹಾಸದಲ್ಲಿ ಅಳಿಸಲಾಗದ ಗುರುತು ಮೂಡಿಸಿದ್ದಾರೆ.

ಕೇರಳದ ಮಾಜಿ ಮುಖ್ಯಮಂತ್ರಿ, ಸಿಪಿಎಂ ಹಿರಿಯ ನಾಯಕ ವಿ.ಎಸ್. ಅಚ್ಯುತಾನಂದನ್ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...