Homeಕರ್ನಾಟಕರಾಜ್ಯದ ರಾಜಕೀಯ ಪರಿಸ್ಥಿತಿ ಯಾವಾಗ ಬೇಕಾದರೂ ಬದಲಾಗಬಹುದು - ಗೃಹ ಸಚಿವ ಡಾ ಜಿ ಪರಮೇಶ್ವರ

ರಾಜ್ಯದ ರಾಜಕೀಯ ಪರಿಸ್ಥಿತಿ ಯಾವಾಗ ಬೇಕಾದರೂ ಬದಲಾಗಬಹುದು – ಗೃಹ ಸಚಿವ ಡಾ ಜಿ ಪರಮೇಶ್ವರ

- Advertisement -
- Advertisement -

ರಾಜ್ಯದ ರಾಜಕೀಯ ಪರಿಸ್ಥಿತಿ ಯಾವಾಗ ಬೇಕಾದರೂ ಬದಲಾಗಬಹುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಗುರುವಾರ ಹೇಳಿದ್ದಾರೆ. ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದ ಅವರು, ಕಾಂಗ್ರೆಸ್ ಕಚೇರಿಗೆ ಸರಿಯಾದ ಕಟ್ಟಡವಿಲ್ಲ, ತಡವಾಗಿಯಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಇದನ್ನು ಅರ್ಥಮಾಡಿಕೊಂಡು 15 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಿಸಲು ಮುಂದಾಗಿದ್ದಾರೆ ಎಂದು ಹೇಳಿದ್ದಾರೆ. ರಾಜ್ಯದ ರಾಜಕೀಯ ಪರಿಸ್ಥಿತಿ

ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಕಚೇರಿ ನಿರ್ಮಿಸಲು ನಿರ್ಧರಿಸಿರುವುದು ಸಂತಸ ತಂದಿದೆ. ರಾಜಕೀಯ ಪರಿಸ್ಥಿತಿ ಏನಾಗಲಿದೆ ಎಂಬುದು ಯಾರಿಗೂ ತಿಳಿಯದ ಕಾರಣ ಕಾಂಗ್ರೆಸ್ ಆಡಳಿತದಲ್ಲಿ ಶೀಘ್ರವೇ ಅಡಿಪಾಯ ಹಾಕಿ ಕಟ್ಟಡ ನಿರ್ಮಾಣ ಮಾಡುವುದು ಉತ್ತಮ ಎಂದು ಅವರು ಹೇಳಿದ್ದಾರೆ. ರಾಜ್ಯದ ರಾಜಕೀಯ ಪರಿಸ್ಥಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅದಾಗ್ಯೂ, ಕಾಂಗ್ರೆಸ್ ಸರ್ಕಾರ ಸ್ಥಿರವಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. 50 ಕೋಟಿ ಅಥವಾ 100 ಕೋಟಿ ನೀಡಿದರೂ ಅಸ್ಥಿರಗೊಳಿಸಲು ಸಾಧ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಏನೇ ಆರೋಪಗಳಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗಟ್ಟಿಯಾಗುತ್ತಾ ಹೋಗುತ್ತಾರೆ. ಪ್ರತಿಪಕ್ಷಗಳು ಸರ್ಕಾರ ಬೀಳಿಸುವ ಕೆಲಸಲ್ಲಿ ಯಶಸ್ವಿಯಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ಗ್ಯಾರೆಂಟಿ ಮುಂದುವರಿಸುವುದರಿಂದ ನಾವು ಹಿಂದೆ ಸರಿಯುವುದಿಲ್ಲ ಎಂದು ಹೇಳಿದ ಅವರು, ಜಾತಿ ಮತ್ತು ಸಾಮಾಜಿಕ-ಆರ್ಥಿಕ ಗಣತಿ ಕುರಿತು ಕಾಂತರಾಜ್ ಆಯೋಗದ ವರದಿಯನ್ನು ಶೀಘ್ರದಲ್ಲೇ ಜನರ ಮುಂದಿಡಲಾಗುವುದು ಎಂದು ತಿಳಿಸಿದ್ದಾರೆ.

160 ಕೋಟಿ ವೆಚ್ಚದಲ್ಲಿ ಸರ್ಕಾರ ಸಮೀಕ್ಷೆ ನಡೆಸಿದ್ದು, ನೀತಿಗಳನ್ನು ರೂಪಿಸಲು ಜಾತಿವಾರು ಜನಸಂಖ್ಯೆಯನ್ನು ತಿಳಿಯುವ ಅವಶ್ಯಕತೆಯಿದ್ದು, ಅದಕ್ಕಾಗಿ ಸಮೀಕ್ಷೆಯ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ. ಗ್ಯಾರೆಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಪಕ್ಷದ ಕಾರ್ಯಕರ್ತರು ಜನರಿಗೆ ತಿಳಿಸಬೇಕು ಎಂದು ಅವರು ಹೇಳಿದ್ದು, ಹಣಕಾಸಿನ ನಿರ್ವಹಣೆಗಾಗಿ ಸಿಎಂ ಸಿದ್ದರಾಮಯ್ಯ ಅವರನ್ನು ಶ್ಲಾಘಿಸಿದ್ದಾರೆ.

ಪಾಲಿಕೆ, ನಿಗಮ-ಮಂಡಳಿಗಳಿಗೆ ಪಕ್ಷದ ಕಾರ್ಯಕರ್ತರ ಪಟ್ಟಿ ಸಿದ್ಧವಾಗಿದ್ದು, ಉಪಚುನಾವಣೆ ನಂತರ ಘೋಷಣೆ ಮಾಡಲಾಗುವುದು ಎಂದು ಪರಮೇಶ್ವರ್ ಅವರು ಭರವಸೆ ನೀಡಿದ್ದಾರೆ. ಅರ್ಧ ಡಜನ್‌ಗೂ ಹೆಚ್ಚು ಸಭೆ ನಡೆಸಿ ಮಹಿಳೆಯರಿಗೆ ಆದ್ಯತೆ ನೀಡಿ ನಿರ್ದೇಶಕರ ಹೆಸರನ್ನು ಅಂತಿಮಗೊಳಿಸಿದ್ದು, ಎರಡು ಹಂತಗಳಲ್ಲಿ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಪ್ರಾಪ್ತ ದಲಿತ ಬಾಲಕಿ ಅತ್ಯಾಚಾರವೆಸಗಿದ ಪೊಲೀಸ್ ಅಧಿಕಾರಿ; ಜಾಮೀನು ನಿರಾಕರಿಸಿದ ಕೇರಳ ಹೈಕೋರ್ಟ್ 

ಅಪ್ರಾಪ್ತ ದಲಿತ ಬಾಲಕಿ ಅತ್ಯಾಚಾರವೆಸಗಿದ ಪೊಲೀಸ್ ಅಧಿಕಾರಿ; ಜಾಮೀನು ನಿರಾಕರಿಸಿದ ಕೇರಳ ಹೈಕೋರ್ಟ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...