Homeಮುಖಪುಟಬಹುಸಂಖ್ಯಾತ ಜಾತಿಗಳನ್ನು ಅಸ್ಪೃಶ್ಯ ಜಾತಿಗಳೊಂದಿಗೆ ಸೇರಿಸಿರುವುದು ರಾಜಕೀಯ ಷಡ್ಯಂತ್ರ!

ಬಹುಸಂಖ್ಯಾತ ಜಾತಿಗಳನ್ನು ಅಸ್ಪೃಶ್ಯ ಜಾತಿಗಳೊಂದಿಗೆ ಸೇರಿಸಿರುವುದು ರಾಜಕೀಯ ಷಡ್ಯಂತ್ರ!

ಒಳಮೀಸಲಾತಿ ಚರ್ಚೆಯ ಹಿನ್ನಲೆಯಲ್ಲಿ ಕನ್ನಡದ ಖ್ಯಾತ ಕವಿ ಮೂಡ್ನಾಕೂಡು ಚಿನ್ನಸ್ವಾಮಿಯವರ ಸಂದರ್ಶನ.

- Advertisement -
- Advertisement -

ಒಳಮೀಸಲಾತಿ ಪರ-ವಿರೋಧದ ಚರ್ಚೆಯ ಹಿನ್ನಲೆಯಲ್ಲಿ ಕನ್ನಡದ ಖ್ಯಾತ ಕವಿ ಮೂಡ್ನಾಕೂಡು ಚಿನ್ನಸ್ವಾಮಿಯವರ ಸಂದರ್ಶನ.

1. ಒಳಮೀಸಲಾತಿಯ ಬಗ್ಗೆ ನಿಮ್ಮ ನಿಲುವೇನು?

ಮೀಸಲಾತಿಯ ಮೂಲ ಉದ್ದೇಶವೇ ಶತಮಾನಗಳಿಂದ ತುಳಿತಕ್ಕೊಳಗಾದ ವಂಚಿತರ ಸಬಲೀಕರಣ. ಸಹಸ್ರಾರು ಜಾತಿಗಳಿರುವ ಹಿಂದೂ ಧರ್ಮದಲ್ಲಿ ಪ್ರಬಲ ಮತ್ತು ದುರ್ಬಲ ಜಾತಿಗಳೆಂದು ಎರಡು ಭಾಗ ಮಾಡಿದರೆ ದುರ್ಬಲರೇ ಶೇ. 85 ಕ್ಕೂ ಮಿಗಿಲಾಗಿದ್ದಾರೆ. ಈಗ ನೀಡಲಾಗಿರುವ ಶೇ. 50 ರಷ್ಟು ಮೀಸಲಾತಿಯನ್ನು ಶೇ. 85 ಜನರ ನಡುವೆ ಗುಂಪುಗಳಾಗಿ ವಿಂಗಡನೆಮಾಡಿ ಹಂಚಲಾಗಿದೆ. ಈ ದುರ್ಬಲ ಜಾತಿಗಳ ಒಂದೊಂದು ಗುಂಪಿನಲ್ಲಿಯೂ ಬಹುಸಂಖ್ಯಾತ ಮತ್ತು ಅಲ್ಪಸಂಖ್ಯಾತ ಜಾತಿಗಳಿವೆ. ಸಹಜವಾಗಿಯೆ ಅಲ್ಲಿಯೂ ಅಲ್ಪಸಂಖ್ಯಾತ ಜಾತಿಗಳು ವಂಚನೆಗೊಳಗಾಗುವ ಸಾಧ್ಯತೆಯೆ ಹೆಚ್ಚು. ಕೆಳಜಾತಿಗಳೆಂದ ಮಾತ್ರಕ್ಕೆ ಅವುಗಳೇನೂ ಒಳಗೊಳ್ಳುವ ಏಕರೂಪಿ ಜಾತಿಗಳಲ್ಲ. ಒಬ್ಬರ ಮನೆಯಲ್ಲಿ ಇನ್ನೊಬ್ಬರು ನೀರು ಕುಡಿಯುವುದಿಲ್ಲ ಮತ್ತು ಮುಟ್ಟಿಸಿಕೊಳ್ಳುವುದೂ ಇಲ್ಲ. ಒಡೆದು ಛಿದ್ರಗೊಳಿಸುವುದು ಮತ್ತು ದೂರಮಾಡುವುದು ಜಾತಿಪದ್ಧತಿಯ ಲಕ್ಷಣ. ಇದು ಮಾನವೀಯತೆಗೆ ಎಸಗಿದ ಪೈಶಾಚಿಕ ದೌರ್ಜನ್ಯ. ಆದ್ದರಿಂದ ಎಲ್ಲೆಲ್ಲಿ ಒಳಮೀಸಲಾತಿ ಅಗತ್ಯವೋ ಅಲ್ಲಿ ಕೊಡಬೇಕೆಂಬುದು ನನ್ನ ನಿಲುವು.

2. ಒಳಮೀಸಲಾತಿ ಮತ್ತು ಮೀಸಲಾತಿ ಎರಡರ ತಾತ್ವಿಕತೆಯೂ ಭಿನ್ನವೇ ಅಥವಾ ಒಂದೆಯೇ?

ಮೇಲಿನ ವಿವರಣೆಯಿಂದ ತಾತ್ವಿಕವಾಗಿ ಮೀಸಲಾತಿ, ಒಳಮೀಸಲಾತಿ ಎರಡೂ ಒಂದೇ ಆಶಯವುಳ್ಳವು.

3. ಮೀಸಲಾತಿಗೆ ಶೇ.50 ರ ಮಿತಿ ಹೇರಿಕೆ, ಶೇ.3 ರಷ್ಟಿರುವ ಸಮುದಾಯಗಳಿಗೆ ಶೇ. 10 ಮೀಸಲಾತಿ ಕಲ್ಪಿಸಿರುವುದರ ವಿರುದ್ಧ ಹೋರಾಟಗಳಾಗಲಿಲ್ಲವೇಕೆ?

ಇಲ್ಲಿ ಹೋರಾಟ ಮಾಡಬೇಕಾಗಿರುವವರು ಯಾರು? ಇದು ಶ್ರೀಮಂತನು ತನ್ನ ಮನೆಯಲ್ಲಿ ತಾನೆ ಕಳ್ಳತನ ಮಾಡಿದಂತೆ. ರಾಜಕೀಯ ಅಧಿಕಾರ ಮತ್ತು ಆರ್ಥಿಕ ಪ್ರಾಬಲ್ಯ ಮೇಲ್ಜಾತಿಯ ಬಳಿ ಇದೆ. ಸಾಲದ್ದಕ್ಕೆ ಪ್ರಜಾಪ್ರಭುತ್ವದ ಬಾಯಿ ಎನಿಸಿಕೊಂಡಿರುವ ಮಾಧ್ಯಮವೂ ಅವರ ಹಿಡಿತದಲ್ಲಿಯೇ ಇದೆ. ಹೀಗಿರುವಾಗ ಸಂವಿಧಾನಾತ್ಮಕವಾಗಿ ನಿಮ್ಮ ಪಾಲನ್ನು ನಿಮಗೆ ಕೊಟ್ಟಿದ್ದೇವೆ ಎಂದು ಹೇಳಿ ಬಹುಸಂಖ್ಯಾತ ಕೆಳಜಾತಿ ಜನರನ್ನು ಸುಮ್ಮನಿರಿಸುವುದು ಸುಲಭ.

4. ಸ್ಪೃಶ್ಯರನ್ನು ಪರಿಶಿಷ್ಠ ಜಾತಿ ಪಟ್ಟಿಯಿಂದ ಹೊರಗಿಡಬೇಕೆಂಬುದರ ಬಗ್ಗೆ ನಿಮ್ಮ ಅಭಿಪ್ರಾಯವೇನು?

ಸ್ಪೃಶ್ಯ ದಲಿತರ ಬಗ್ಗೆ ನನಗೆ ಅನುಕಂಪವಿದೆ. ಅವರಲ್ಲೂ ಕಡುಬಡವರಿದ್ದಾರೆ. ಆದರೆ ಅವರಲ್ಲಿ ಬಹುಸಂಖ್ಯಾತ ಜಾತಿಗಳನ್ನು ಅಸ್ಪೃಶ್ಯ ಜಾತಿಗಳೊಂದಿಗೆ ಸೇರಿಸಿರುವುದು ರಾಜಕೀಯ ಷಡ್ಯಂತ್ರ ಎಂದು ಈಗ ಅನಿಸುತ್ತಿದೆ. ಭಾರತದ ಯಾವ ರಾಜ್ಯದಲ್ಲೂ ಸ್ಪೃಶ್ಯರು ಅನುಸೂಚಿತ ಜಾತಿ ಪಟ್ಟಿಯಲ್ಲಿಲ್ಲ. ಯಾಕೆಂದರೆ ಅಸ್ಪೃಶ್ಯನ ಪಾರಂಪರಿಕ ಯಾತನೆ ಇತರ ಶೋಷಿತರಿಗಿಂತ ಭಿನ್ನ. ಮನುಷ್ಯಮಾತ್ರನಾದವನು ಅನುಭವಿಸಲಾರದ ಕ್ರೌರ್ಯ, ಹಿಂಸೆ ಮತ್ತು ಅವಮಾನಗಳಿಗೆ ಒಳಗಾದವನು ಅವನು. ಬಹುಪಕ್ಷೀಯ ಪ್ರಜಾಪ್ರಭುತ್ವದಲ್ಲಿ ಒಬ್ಬ ವ್ಯಕ್ತಿ, ಒಂದು ಮತ, ಒಂದು ಮೌಲ್ಯ ಎಂಬ ಅಂಬೇಡ್ಕರರ ನಿರ್ವಚನವೇನೋ ಸರಿ. ಆದರೆ ಜಾತಿವ್ಯವಸ್ಥೆಯಲ್ಲಿ ಬಲಾಢ್ಯ ಜಾತಿಗಳೇ ಚುನಾವಣೆಯಲ್ಲಿ ಮೇಲುಗೈ ಪಡೆಯುವುದರಿಂದ ಮತ್ತೆ ಶೋಷಿತರು ಅವಕಾಶವಂಚಿತರಾಗುವುದನ್ನು ತಪ್ಪಿಸಲು ಅಸ್ಪೃಶ್ಯರಿಗೆ ಪ್ರತ್ಯೇಕ ಮತಕ್ಷೇತ್ರಗಳನ್ನು ಕಲ್ಪಿಸಿದ್ದರು. ಅದನ್ನು ಗಾಂಧಿ ಇಲ್ಲವಾಗಿಸಿದರು. ಆದ್ದರಿಂದ ಇಂದು ದಲಿತನ ಓಟಿಗೆ ಒಂದು ಮೌಲ್ಯ ಇದೆ ಮತ್ತು ಇಲ್ಲ. ದಲಿತನ ಮತಕ್ಕಿರುವುದು ಅವಲಂಬಿತ ಮೌಲ್ಯ [Dependent value]. ಇದಕ್ಕೆ ಬಹಳ ದೊಡ್ಡ ಉದಾಹರಣೆ ಎಂದರೆ ಕಳೆದ ಚುನಾವಣೆಯಲ್ಲಿ ಶ್ರೀ ಮಲ್ಲಿಕಾರ್ಜುನ ಖರ್ಗೆಯವರ ಸೋಲು. ಮೇಲ್ಜಾತಿಯವರು ಜಿದ್ದಿನಿಂದ ಅವರೆದುರು ಒಬ್ಬ ಅನಾಮಿಕ ಸ್ಪೃಶ್ಯ ವ್ಯಕ್ತಿಯನ್ನು ಕಣಕ್ಕಿಳಿಸಿ ಸೋಲಿಸಿದರು. ಹಿಂದೂ ಮನಸ್ಥಿತಿ ಹೇಗಿದೆಯೆಂದರೆ ಸ್ಪೃಶ್ಯ ಮತ್ತು ಅಸ್ಪೃಶ್ಯರ ನಡುವೆ ಆಯ್ಕೆಯ ವಿಷಯ ಬಂದಾಗ ಅವನು ಸ್ಪೃಶ್ಯನನ್ನೆ ಆಯ್ಕೆ ಮಾಡುತ್ತಾನೆ. ಆದ್ದರಿಂದ ಮೇಲ್ಜಾತಿ ಜನರ ಕರುಣೆಯಿಲ್ಲದೆ ಯಾವ ಘಟಾನುಘಟಿ ಅಸ್ಪೃಶ್ಯ ರಾಜಕಾರಣಿಯೂ ಗೆಲ್ಲಲು ಸಾಧ್ಯವಿಲ್ಲ ಎಂಬುದು ಸಾಬೀತಾಯಿತು.

5. ಕೆಲವು ಬಲಗೈ ರಾಜಕಾರಣಿಗಳು ಒಳಮೀಸಲಾತಿ ವಿರುದ್ಧವಾಗಿ ದನಿ ಎತ್ತಿದ ಕಾರಣಕ್ಕೆ ಹೊಲೆಮಾದಿಗರ ನಡುವೆ ಭಿನ್ನತೆ ಉಂಟಾಯಿತು ಎನ್ನಲಾಗುತ್ತದೆ. ನಿಜಕ್ಕೂ ಆಯಾ ದಲಿತ ಜಾತಿಗಳನ್ನು ಪ್ರತಿನಿಧಿಸುವ ಪ್ರಾಮಾಣಿಕ ರಾಜಕಾರಣಿಗಳು ಇಂದಿಗೂ ಇದ್ದಾರೆಯೇ?

ಪ್ರಾಮಾಣಿಕ ರಾಜಕಾರಣಿಗಳು ಎರಡೂ ಬಣಗಳಲ್ಲೂ ಇದ್ದಾರೆ. ಈಗ ಇಬ್ಬರೂ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡಿದ್ದಾರೆ ಎನಿಸುತ್ತದೆ.

6. ಒಳಮೀಸಲಾತಿ ದಲಿತರನ್ನು ಒಡೆದು ಆಳುತ್ತದೆ ಎಂದು ಆರಂಭದಲ್ಲಿ ಭಯ ಬೀಳಿಸಿದ್ದಿದೆ. ಆದರೆ ಈಗ ಒಳಮೀಸಲಾತಿ ಜಾರಿಯಾಗದಿದ್ದರೆ ದಲಿತರ ಒಗ್ಗಟ್ಟು ಸಂಪೂರ್ಣ ಮುರಿದು ಬೀಳುತ್ತದೆ ಎಂಬ ಪರಿಸ್ಥಿತಿ ಉಂಟಾಗಿದೆ. ಇದಕ್ಕೆ ನಿಮ್ಮ ಅಭಿಪ್ರಾಯವೇನು?

ಇದಕ್ಕೆ ನನ್ನ ಸಹಮತವಿದೆ.

7. ಸದಾಶಿವ ಆಯೋಗದ ವರದಿ ಜಾರಿ ಮಾಡುವುದರ ಕುರಿತು ನಿಮ್ಮ ಅನಿಸಿಕೆ ಏನು?

ಸದಾಶಿವ ಆಯೋಗದ ವರದಿಯನ್ನು ಸಂಪೂರ್ಣವಾಗಿ ಬಹಿರಂಗಪಡಿಸಿಲ್ಲ. ಮೇಲೆ ಹೇಳಿದ ಕಾರಣಗಳಿಂದ ಒಳಮೀಸಲಾತಿ ಜಾರಿಯಾಗುವುದು ಒಳಿತು.

  • ಡಾ. ಮೂಡ್ನಾಕೂಡು ಚಿನ್ನಸ್ವಾಮಿ

(ಕನ್ನಡದ ಖ್ಯಾತ ಕವಿ. ದಲಿತ, ಬಂಡಾಯ ಮತ್ತು ಬೌದ್ಧ ಚಿಂತನೆಗಳನ್ನು ಸಾಹಿತ್ಯದ ಮೂಲಕ ಪ್ರಚುರಪಡಿಸಿದ ಪ್ರಮುಖರಲ್ಲಿ ಒಬ್ಬರು. ‘ಕೊಂಡಿಗಳು ಮತ್ತು ಮುಳ್ಳುಬೇಲಿಗಳು’, ‘ಚಪ್ಪಲಿ ಮತ್ತು ನಾನು’ ಮೂಡ್ನಾಕೂಡು ಅವರ ಕೆಲವು ಕವನಸಂಕಲನಗಳು. ‘ನೆನಪಿನ ಹಕ್ಕಿಯ ಹಾರಲು ಬಿಟ್ಟು’ ಅವರ ಆತ್ಮಕತೆ.)


ಇದನ್ನೂ ಓದಿ: ಅಡೆತಡೆ ದಾಟಿ ಹತ್ರಾಸ್ ತಲುಪಿದ ಭೀಮ್‌ ಆರ್ಮಿ ಆಜಾದ್‌ಗೆ ಠಾಕೂರ್ ಯುವಕರಿಂದ ಬಹಿರಂಗ ಬೆದರಿಕೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...