Homeಮುಖಪುಟಬಹುಸಂಖ್ಯಾತ ಜಾತಿಗಳನ್ನು ಅಸ್ಪೃಶ್ಯ ಜಾತಿಗಳೊಂದಿಗೆ ಸೇರಿಸಿರುವುದು ರಾಜಕೀಯ ಷಡ್ಯಂತ್ರ!

ಬಹುಸಂಖ್ಯಾತ ಜಾತಿಗಳನ್ನು ಅಸ್ಪೃಶ್ಯ ಜಾತಿಗಳೊಂದಿಗೆ ಸೇರಿಸಿರುವುದು ರಾಜಕೀಯ ಷಡ್ಯಂತ್ರ!

ಒಳಮೀಸಲಾತಿ ಚರ್ಚೆಯ ಹಿನ್ನಲೆಯಲ್ಲಿ ಕನ್ನಡದ ಖ್ಯಾತ ಕವಿ ಮೂಡ್ನಾಕೂಡು ಚಿನ್ನಸ್ವಾಮಿಯವರ ಸಂದರ್ಶನ.

- Advertisement -
- Advertisement -

ಒಳಮೀಸಲಾತಿ ಪರ-ವಿರೋಧದ ಚರ್ಚೆಯ ಹಿನ್ನಲೆಯಲ್ಲಿ ಕನ್ನಡದ ಖ್ಯಾತ ಕವಿ ಮೂಡ್ನಾಕೂಡು ಚಿನ್ನಸ್ವಾಮಿಯವರ ಸಂದರ್ಶನ.

1. ಒಳಮೀಸಲಾತಿಯ ಬಗ್ಗೆ ನಿಮ್ಮ ನಿಲುವೇನು?

ಮೀಸಲಾತಿಯ ಮೂಲ ಉದ್ದೇಶವೇ ಶತಮಾನಗಳಿಂದ ತುಳಿತಕ್ಕೊಳಗಾದ ವಂಚಿತರ ಸಬಲೀಕರಣ. ಸಹಸ್ರಾರು ಜಾತಿಗಳಿರುವ ಹಿಂದೂ ಧರ್ಮದಲ್ಲಿ ಪ್ರಬಲ ಮತ್ತು ದುರ್ಬಲ ಜಾತಿಗಳೆಂದು ಎರಡು ಭಾಗ ಮಾಡಿದರೆ ದುರ್ಬಲರೇ ಶೇ. 85 ಕ್ಕೂ ಮಿಗಿಲಾಗಿದ್ದಾರೆ. ಈಗ ನೀಡಲಾಗಿರುವ ಶೇ. 50 ರಷ್ಟು ಮೀಸಲಾತಿಯನ್ನು ಶೇ. 85 ಜನರ ನಡುವೆ ಗುಂಪುಗಳಾಗಿ ವಿಂಗಡನೆಮಾಡಿ ಹಂಚಲಾಗಿದೆ. ಈ ದುರ್ಬಲ ಜಾತಿಗಳ ಒಂದೊಂದು ಗುಂಪಿನಲ್ಲಿಯೂ ಬಹುಸಂಖ್ಯಾತ ಮತ್ತು ಅಲ್ಪಸಂಖ್ಯಾತ ಜಾತಿಗಳಿವೆ. ಸಹಜವಾಗಿಯೆ ಅಲ್ಲಿಯೂ ಅಲ್ಪಸಂಖ್ಯಾತ ಜಾತಿಗಳು ವಂಚನೆಗೊಳಗಾಗುವ ಸಾಧ್ಯತೆಯೆ ಹೆಚ್ಚು. ಕೆಳಜಾತಿಗಳೆಂದ ಮಾತ್ರಕ್ಕೆ ಅವುಗಳೇನೂ ಒಳಗೊಳ್ಳುವ ಏಕರೂಪಿ ಜಾತಿಗಳಲ್ಲ. ಒಬ್ಬರ ಮನೆಯಲ್ಲಿ ಇನ್ನೊಬ್ಬರು ನೀರು ಕುಡಿಯುವುದಿಲ್ಲ ಮತ್ತು ಮುಟ್ಟಿಸಿಕೊಳ್ಳುವುದೂ ಇಲ್ಲ. ಒಡೆದು ಛಿದ್ರಗೊಳಿಸುವುದು ಮತ್ತು ದೂರಮಾಡುವುದು ಜಾತಿಪದ್ಧತಿಯ ಲಕ್ಷಣ. ಇದು ಮಾನವೀಯತೆಗೆ ಎಸಗಿದ ಪೈಶಾಚಿಕ ದೌರ್ಜನ್ಯ. ಆದ್ದರಿಂದ ಎಲ್ಲೆಲ್ಲಿ ಒಳಮೀಸಲಾತಿ ಅಗತ್ಯವೋ ಅಲ್ಲಿ ಕೊಡಬೇಕೆಂಬುದು ನನ್ನ ನಿಲುವು.

2. ಒಳಮೀಸಲಾತಿ ಮತ್ತು ಮೀಸಲಾತಿ ಎರಡರ ತಾತ್ವಿಕತೆಯೂ ಭಿನ್ನವೇ ಅಥವಾ ಒಂದೆಯೇ?

ಮೇಲಿನ ವಿವರಣೆಯಿಂದ ತಾತ್ವಿಕವಾಗಿ ಮೀಸಲಾತಿ, ಒಳಮೀಸಲಾತಿ ಎರಡೂ ಒಂದೇ ಆಶಯವುಳ್ಳವು.

3. ಮೀಸಲಾತಿಗೆ ಶೇ.50 ರ ಮಿತಿ ಹೇರಿಕೆ, ಶೇ.3 ರಷ್ಟಿರುವ ಸಮುದಾಯಗಳಿಗೆ ಶೇ. 10 ಮೀಸಲಾತಿ ಕಲ್ಪಿಸಿರುವುದರ ವಿರುದ್ಧ ಹೋರಾಟಗಳಾಗಲಿಲ್ಲವೇಕೆ?

ಇಲ್ಲಿ ಹೋರಾಟ ಮಾಡಬೇಕಾಗಿರುವವರು ಯಾರು? ಇದು ಶ್ರೀಮಂತನು ತನ್ನ ಮನೆಯಲ್ಲಿ ತಾನೆ ಕಳ್ಳತನ ಮಾಡಿದಂತೆ. ರಾಜಕೀಯ ಅಧಿಕಾರ ಮತ್ತು ಆರ್ಥಿಕ ಪ್ರಾಬಲ್ಯ ಮೇಲ್ಜಾತಿಯ ಬಳಿ ಇದೆ. ಸಾಲದ್ದಕ್ಕೆ ಪ್ರಜಾಪ್ರಭುತ್ವದ ಬಾಯಿ ಎನಿಸಿಕೊಂಡಿರುವ ಮಾಧ್ಯಮವೂ ಅವರ ಹಿಡಿತದಲ್ಲಿಯೇ ಇದೆ. ಹೀಗಿರುವಾಗ ಸಂವಿಧಾನಾತ್ಮಕವಾಗಿ ನಿಮ್ಮ ಪಾಲನ್ನು ನಿಮಗೆ ಕೊಟ್ಟಿದ್ದೇವೆ ಎಂದು ಹೇಳಿ ಬಹುಸಂಖ್ಯಾತ ಕೆಳಜಾತಿ ಜನರನ್ನು ಸುಮ್ಮನಿರಿಸುವುದು ಸುಲಭ.

4. ಸ್ಪೃಶ್ಯರನ್ನು ಪರಿಶಿಷ್ಠ ಜಾತಿ ಪಟ್ಟಿಯಿಂದ ಹೊರಗಿಡಬೇಕೆಂಬುದರ ಬಗ್ಗೆ ನಿಮ್ಮ ಅಭಿಪ್ರಾಯವೇನು?

ಸ್ಪೃಶ್ಯ ದಲಿತರ ಬಗ್ಗೆ ನನಗೆ ಅನುಕಂಪವಿದೆ. ಅವರಲ್ಲೂ ಕಡುಬಡವರಿದ್ದಾರೆ. ಆದರೆ ಅವರಲ್ಲಿ ಬಹುಸಂಖ್ಯಾತ ಜಾತಿಗಳನ್ನು ಅಸ್ಪೃಶ್ಯ ಜಾತಿಗಳೊಂದಿಗೆ ಸೇರಿಸಿರುವುದು ರಾಜಕೀಯ ಷಡ್ಯಂತ್ರ ಎಂದು ಈಗ ಅನಿಸುತ್ತಿದೆ. ಭಾರತದ ಯಾವ ರಾಜ್ಯದಲ್ಲೂ ಸ್ಪೃಶ್ಯರು ಅನುಸೂಚಿತ ಜಾತಿ ಪಟ್ಟಿಯಲ್ಲಿಲ್ಲ. ಯಾಕೆಂದರೆ ಅಸ್ಪೃಶ್ಯನ ಪಾರಂಪರಿಕ ಯಾತನೆ ಇತರ ಶೋಷಿತರಿಗಿಂತ ಭಿನ್ನ. ಮನುಷ್ಯಮಾತ್ರನಾದವನು ಅನುಭವಿಸಲಾರದ ಕ್ರೌರ್ಯ, ಹಿಂಸೆ ಮತ್ತು ಅವಮಾನಗಳಿಗೆ ಒಳಗಾದವನು ಅವನು. ಬಹುಪಕ್ಷೀಯ ಪ್ರಜಾಪ್ರಭುತ್ವದಲ್ಲಿ ಒಬ್ಬ ವ್ಯಕ್ತಿ, ಒಂದು ಮತ, ಒಂದು ಮೌಲ್ಯ ಎಂಬ ಅಂಬೇಡ್ಕರರ ನಿರ್ವಚನವೇನೋ ಸರಿ. ಆದರೆ ಜಾತಿವ್ಯವಸ್ಥೆಯಲ್ಲಿ ಬಲಾಢ್ಯ ಜಾತಿಗಳೇ ಚುನಾವಣೆಯಲ್ಲಿ ಮೇಲುಗೈ ಪಡೆಯುವುದರಿಂದ ಮತ್ತೆ ಶೋಷಿತರು ಅವಕಾಶವಂಚಿತರಾಗುವುದನ್ನು ತಪ್ಪಿಸಲು ಅಸ್ಪೃಶ್ಯರಿಗೆ ಪ್ರತ್ಯೇಕ ಮತಕ್ಷೇತ್ರಗಳನ್ನು ಕಲ್ಪಿಸಿದ್ದರು. ಅದನ್ನು ಗಾಂಧಿ ಇಲ್ಲವಾಗಿಸಿದರು. ಆದ್ದರಿಂದ ಇಂದು ದಲಿತನ ಓಟಿಗೆ ಒಂದು ಮೌಲ್ಯ ಇದೆ ಮತ್ತು ಇಲ್ಲ. ದಲಿತನ ಮತಕ್ಕಿರುವುದು ಅವಲಂಬಿತ ಮೌಲ್ಯ [Dependent value]. ಇದಕ್ಕೆ ಬಹಳ ದೊಡ್ಡ ಉದಾಹರಣೆ ಎಂದರೆ ಕಳೆದ ಚುನಾವಣೆಯಲ್ಲಿ ಶ್ರೀ ಮಲ್ಲಿಕಾರ್ಜುನ ಖರ್ಗೆಯವರ ಸೋಲು. ಮೇಲ್ಜಾತಿಯವರು ಜಿದ್ದಿನಿಂದ ಅವರೆದುರು ಒಬ್ಬ ಅನಾಮಿಕ ಸ್ಪೃಶ್ಯ ವ್ಯಕ್ತಿಯನ್ನು ಕಣಕ್ಕಿಳಿಸಿ ಸೋಲಿಸಿದರು. ಹಿಂದೂ ಮನಸ್ಥಿತಿ ಹೇಗಿದೆಯೆಂದರೆ ಸ್ಪೃಶ್ಯ ಮತ್ತು ಅಸ್ಪೃಶ್ಯರ ನಡುವೆ ಆಯ್ಕೆಯ ವಿಷಯ ಬಂದಾಗ ಅವನು ಸ್ಪೃಶ್ಯನನ್ನೆ ಆಯ್ಕೆ ಮಾಡುತ್ತಾನೆ. ಆದ್ದರಿಂದ ಮೇಲ್ಜಾತಿ ಜನರ ಕರುಣೆಯಿಲ್ಲದೆ ಯಾವ ಘಟಾನುಘಟಿ ಅಸ್ಪೃಶ್ಯ ರಾಜಕಾರಣಿಯೂ ಗೆಲ್ಲಲು ಸಾಧ್ಯವಿಲ್ಲ ಎಂಬುದು ಸಾಬೀತಾಯಿತು.

5. ಕೆಲವು ಬಲಗೈ ರಾಜಕಾರಣಿಗಳು ಒಳಮೀಸಲಾತಿ ವಿರುದ್ಧವಾಗಿ ದನಿ ಎತ್ತಿದ ಕಾರಣಕ್ಕೆ ಹೊಲೆಮಾದಿಗರ ನಡುವೆ ಭಿನ್ನತೆ ಉಂಟಾಯಿತು ಎನ್ನಲಾಗುತ್ತದೆ. ನಿಜಕ್ಕೂ ಆಯಾ ದಲಿತ ಜಾತಿಗಳನ್ನು ಪ್ರತಿನಿಧಿಸುವ ಪ್ರಾಮಾಣಿಕ ರಾಜಕಾರಣಿಗಳು ಇಂದಿಗೂ ಇದ್ದಾರೆಯೇ?

ಪ್ರಾಮಾಣಿಕ ರಾಜಕಾರಣಿಗಳು ಎರಡೂ ಬಣಗಳಲ್ಲೂ ಇದ್ದಾರೆ. ಈಗ ಇಬ್ಬರೂ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡಿದ್ದಾರೆ ಎನಿಸುತ್ತದೆ.

6. ಒಳಮೀಸಲಾತಿ ದಲಿತರನ್ನು ಒಡೆದು ಆಳುತ್ತದೆ ಎಂದು ಆರಂಭದಲ್ಲಿ ಭಯ ಬೀಳಿಸಿದ್ದಿದೆ. ಆದರೆ ಈಗ ಒಳಮೀಸಲಾತಿ ಜಾರಿಯಾಗದಿದ್ದರೆ ದಲಿತರ ಒಗ್ಗಟ್ಟು ಸಂಪೂರ್ಣ ಮುರಿದು ಬೀಳುತ್ತದೆ ಎಂಬ ಪರಿಸ್ಥಿತಿ ಉಂಟಾಗಿದೆ. ಇದಕ್ಕೆ ನಿಮ್ಮ ಅಭಿಪ್ರಾಯವೇನು?

ಇದಕ್ಕೆ ನನ್ನ ಸಹಮತವಿದೆ.

7. ಸದಾಶಿವ ಆಯೋಗದ ವರದಿ ಜಾರಿ ಮಾಡುವುದರ ಕುರಿತು ನಿಮ್ಮ ಅನಿಸಿಕೆ ಏನು?

ಸದಾಶಿವ ಆಯೋಗದ ವರದಿಯನ್ನು ಸಂಪೂರ್ಣವಾಗಿ ಬಹಿರಂಗಪಡಿಸಿಲ್ಲ. ಮೇಲೆ ಹೇಳಿದ ಕಾರಣಗಳಿಂದ ಒಳಮೀಸಲಾತಿ ಜಾರಿಯಾಗುವುದು ಒಳಿತು.

  • ಡಾ. ಮೂಡ್ನಾಕೂಡು ಚಿನ್ನಸ್ವಾಮಿ

(ಕನ್ನಡದ ಖ್ಯಾತ ಕವಿ. ದಲಿತ, ಬಂಡಾಯ ಮತ್ತು ಬೌದ್ಧ ಚಿಂತನೆಗಳನ್ನು ಸಾಹಿತ್ಯದ ಮೂಲಕ ಪ್ರಚುರಪಡಿಸಿದ ಪ್ರಮುಖರಲ್ಲಿ ಒಬ್ಬರು. ‘ಕೊಂಡಿಗಳು ಮತ್ತು ಮುಳ್ಳುಬೇಲಿಗಳು’, ‘ಚಪ್ಪಲಿ ಮತ್ತು ನಾನು’ ಮೂಡ್ನಾಕೂಡು ಅವರ ಕೆಲವು ಕವನಸಂಕಲನಗಳು. ‘ನೆನಪಿನ ಹಕ್ಕಿಯ ಹಾರಲು ಬಿಟ್ಟು’ ಅವರ ಆತ್ಮಕತೆ.)


ಇದನ್ನೂ ಓದಿ: ಅಡೆತಡೆ ದಾಟಿ ಹತ್ರಾಸ್ ತಲುಪಿದ ಭೀಮ್‌ ಆರ್ಮಿ ಆಜಾದ್‌ಗೆ ಠಾಕೂರ್ ಯುವಕರಿಂದ ಬಹಿರಂಗ ಬೆದರಿಕೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...