Homeಮುಖಪುಟಬಹುಸಂಖ್ಯಾತ ಜಾತಿಗಳನ್ನು ಅಸ್ಪೃಶ್ಯ ಜಾತಿಗಳೊಂದಿಗೆ ಸೇರಿಸಿರುವುದು ರಾಜಕೀಯ ಷಡ್ಯಂತ್ರ!

ಬಹುಸಂಖ್ಯಾತ ಜಾತಿಗಳನ್ನು ಅಸ್ಪೃಶ್ಯ ಜಾತಿಗಳೊಂದಿಗೆ ಸೇರಿಸಿರುವುದು ರಾಜಕೀಯ ಷಡ್ಯಂತ್ರ!

ಒಳಮೀಸಲಾತಿ ಚರ್ಚೆಯ ಹಿನ್ನಲೆಯಲ್ಲಿ ಕನ್ನಡದ ಖ್ಯಾತ ಕವಿ ಮೂಡ್ನಾಕೂಡು ಚಿನ್ನಸ್ವಾಮಿಯವರ ಸಂದರ್ಶನ.

- Advertisement -
- Advertisement -

ಒಳಮೀಸಲಾತಿ ಪರ-ವಿರೋಧದ ಚರ್ಚೆಯ ಹಿನ್ನಲೆಯಲ್ಲಿ ಕನ್ನಡದ ಖ್ಯಾತ ಕವಿ ಮೂಡ್ನಾಕೂಡು ಚಿನ್ನಸ್ವಾಮಿಯವರ ಸಂದರ್ಶನ.

1. ಒಳಮೀಸಲಾತಿಯ ಬಗ್ಗೆ ನಿಮ್ಮ ನಿಲುವೇನು?

ಮೀಸಲಾತಿಯ ಮೂಲ ಉದ್ದೇಶವೇ ಶತಮಾನಗಳಿಂದ ತುಳಿತಕ್ಕೊಳಗಾದ ವಂಚಿತರ ಸಬಲೀಕರಣ. ಸಹಸ್ರಾರು ಜಾತಿಗಳಿರುವ ಹಿಂದೂ ಧರ್ಮದಲ್ಲಿ ಪ್ರಬಲ ಮತ್ತು ದುರ್ಬಲ ಜಾತಿಗಳೆಂದು ಎರಡು ಭಾಗ ಮಾಡಿದರೆ ದುರ್ಬಲರೇ ಶೇ. 85 ಕ್ಕೂ ಮಿಗಿಲಾಗಿದ್ದಾರೆ. ಈಗ ನೀಡಲಾಗಿರುವ ಶೇ. 50 ರಷ್ಟು ಮೀಸಲಾತಿಯನ್ನು ಶೇ. 85 ಜನರ ನಡುವೆ ಗುಂಪುಗಳಾಗಿ ವಿಂಗಡನೆಮಾಡಿ ಹಂಚಲಾಗಿದೆ. ಈ ದುರ್ಬಲ ಜಾತಿಗಳ ಒಂದೊಂದು ಗುಂಪಿನಲ್ಲಿಯೂ ಬಹುಸಂಖ್ಯಾತ ಮತ್ತು ಅಲ್ಪಸಂಖ್ಯಾತ ಜಾತಿಗಳಿವೆ. ಸಹಜವಾಗಿಯೆ ಅಲ್ಲಿಯೂ ಅಲ್ಪಸಂಖ್ಯಾತ ಜಾತಿಗಳು ವಂಚನೆಗೊಳಗಾಗುವ ಸಾಧ್ಯತೆಯೆ ಹೆಚ್ಚು. ಕೆಳಜಾತಿಗಳೆಂದ ಮಾತ್ರಕ್ಕೆ ಅವುಗಳೇನೂ ಒಳಗೊಳ್ಳುವ ಏಕರೂಪಿ ಜಾತಿಗಳಲ್ಲ. ಒಬ್ಬರ ಮನೆಯಲ್ಲಿ ಇನ್ನೊಬ್ಬರು ನೀರು ಕುಡಿಯುವುದಿಲ್ಲ ಮತ್ತು ಮುಟ್ಟಿಸಿಕೊಳ್ಳುವುದೂ ಇಲ್ಲ. ಒಡೆದು ಛಿದ್ರಗೊಳಿಸುವುದು ಮತ್ತು ದೂರಮಾಡುವುದು ಜಾತಿಪದ್ಧತಿಯ ಲಕ್ಷಣ. ಇದು ಮಾನವೀಯತೆಗೆ ಎಸಗಿದ ಪೈಶಾಚಿಕ ದೌರ್ಜನ್ಯ. ಆದ್ದರಿಂದ ಎಲ್ಲೆಲ್ಲಿ ಒಳಮೀಸಲಾತಿ ಅಗತ್ಯವೋ ಅಲ್ಲಿ ಕೊಡಬೇಕೆಂಬುದು ನನ್ನ ನಿಲುವು.

2. ಒಳಮೀಸಲಾತಿ ಮತ್ತು ಮೀಸಲಾತಿ ಎರಡರ ತಾತ್ವಿಕತೆಯೂ ಭಿನ್ನವೇ ಅಥವಾ ಒಂದೆಯೇ?

ಮೇಲಿನ ವಿವರಣೆಯಿಂದ ತಾತ್ವಿಕವಾಗಿ ಮೀಸಲಾತಿ, ಒಳಮೀಸಲಾತಿ ಎರಡೂ ಒಂದೇ ಆಶಯವುಳ್ಳವು.

3. ಮೀಸಲಾತಿಗೆ ಶೇ.50 ರ ಮಿತಿ ಹೇರಿಕೆ, ಶೇ.3 ರಷ್ಟಿರುವ ಸಮುದಾಯಗಳಿಗೆ ಶೇ. 10 ಮೀಸಲಾತಿ ಕಲ್ಪಿಸಿರುವುದರ ವಿರುದ್ಧ ಹೋರಾಟಗಳಾಗಲಿಲ್ಲವೇಕೆ?

ಇಲ್ಲಿ ಹೋರಾಟ ಮಾಡಬೇಕಾಗಿರುವವರು ಯಾರು? ಇದು ಶ್ರೀಮಂತನು ತನ್ನ ಮನೆಯಲ್ಲಿ ತಾನೆ ಕಳ್ಳತನ ಮಾಡಿದಂತೆ. ರಾಜಕೀಯ ಅಧಿಕಾರ ಮತ್ತು ಆರ್ಥಿಕ ಪ್ರಾಬಲ್ಯ ಮೇಲ್ಜಾತಿಯ ಬಳಿ ಇದೆ. ಸಾಲದ್ದಕ್ಕೆ ಪ್ರಜಾಪ್ರಭುತ್ವದ ಬಾಯಿ ಎನಿಸಿಕೊಂಡಿರುವ ಮಾಧ್ಯಮವೂ ಅವರ ಹಿಡಿತದಲ್ಲಿಯೇ ಇದೆ. ಹೀಗಿರುವಾಗ ಸಂವಿಧಾನಾತ್ಮಕವಾಗಿ ನಿಮ್ಮ ಪಾಲನ್ನು ನಿಮಗೆ ಕೊಟ್ಟಿದ್ದೇವೆ ಎಂದು ಹೇಳಿ ಬಹುಸಂಖ್ಯಾತ ಕೆಳಜಾತಿ ಜನರನ್ನು ಸುಮ್ಮನಿರಿಸುವುದು ಸುಲಭ.

4. ಸ್ಪೃಶ್ಯರನ್ನು ಪರಿಶಿಷ್ಠ ಜಾತಿ ಪಟ್ಟಿಯಿಂದ ಹೊರಗಿಡಬೇಕೆಂಬುದರ ಬಗ್ಗೆ ನಿಮ್ಮ ಅಭಿಪ್ರಾಯವೇನು?

ಸ್ಪೃಶ್ಯ ದಲಿತರ ಬಗ್ಗೆ ನನಗೆ ಅನುಕಂಪವಿದೆ. ಅವರಲ್ಲೂ ಕಡುಬಡವರಿದ್ದಾರೆ. ಆದರೆ ಅವರಲ್ಲಿ ಬಹುಸಂಖ್ಯಾತ ಜಾತಿಗಳನ್ನು ಅಸ್ಪೃಶ್ಯ ಜಾತಿಗಳೊಂದಿಗೆ ಸೇರಿಸಿರುವುದು ರಾಜಕೀಯ ಷಡ್ಯಂತ್ರ ಎಂದು ಈಗ ಅನಿಸುತ್ತಿದೆ. ಭಾರತದ ಯಾವ ರಾಜ್ಯದಲ್ಲೂ ಸ್ಪೃಶ್ಯರು ಅನುಸೂಚಿತ ಜಾತಿ ಪಟ್ಟಿಯಲ್ಲಿಲ್ಲ. ಯಾಕೆಂದರೆ ಅಸ್ಪೃಶ್ಯನ ಪಾರಂಪರಿಕ ಯಾತನೆ ಇತರ ಶೋಷಿತರಿಗಿಂತ ಭಿನ್ನ. ಮನುಷ್ಯಮಾತ್ರನಾದವನು ಅನುಭವಿಸಲಾರದ ಕ್ರೌರ್ಯ, ಹಿಂಸೆ ಮತ್ತು ಅವಮಾನಗಳಿಗೆ ಒಳಗಾದವನು ಅವನು. ಬಹುಪಕ್ಷೀಯ ಪ್ರಜಾಪ್ರಭುತ್ವದಲ್ಲಿ ಒಬ್ಬ ವ್ಯಕ್ತಿ, ಒಂದು ಮತ, ಒಂದು ಮೌಲ್ಯ ಎಂಬ ಅಂಬೇಡ್ಕರರ ನಿರ್ವಚನವೇನೋ ಸರಿ. ಆದರೆ ಜಾತಿವ್ಯವಸ್ಥೆಯಲ್ಲಿ ಬಲಾಢ್ಯ ಜಾತಿಗಳೇ ಚುನಾವಣೆಯಲ್ಲಿ ಮೇಲುಗೈ ಪಡೆಯುವುದರಿಂದ ಮತ್ತೆ ಶೋಷಿತರು ಅವಕಾಶವಂಚಿತರಾಗುವುದನ್ನು ತಪ್ಪಿಸಲು ಅಸ್ಪೃಶ್ಯರಿಗೆ ಪ್ರತ್ಯೇಕ ಮತಕ್ಷೇತ್ರಗಳನ್ನು ಕಲ್ಪಿಸಿದ್ದರು. ಅದನ್ನು ಗಾಂಧಿ ಇಲ್ಲವಾಗಿಸಿದರು. ಆದ್ದರಿಂದ ಇಂದು ದಲಿತನ ಓಟಿಗೆ ಒಂದು ಮೌಲ್ಯ ಇದೆ ಮತ್ತು ಇಲ್ಲ. ದಲಿತನ ಮತಕ್ಕಿರುವುದು ಅವಲಂಬಿತ ಮೌಲ್ಯ [Dependent value]. ಇದಕ್ಕೆ ಬಹಳ ದೊಡ್ಡ ಉದಾಹರಣೆ ಎಂದರೆ ಕಳೆದ ಚುನಾವಣೆಯಲ್ಲಿ ಶ್ರೀ ಮಲ್ಲಿಕಾರ್ಜುನ ಖರ್ಗೆಯವರ ಸೋಲು. ಮೇಲ್ಜಾತಿಯವರು ಜಿದ್ದಿನಿಂದ ಅವರೆದುರು ಒಬ್ಬ ಅನಾಮಿಕ ಸ್ಪೃಶ್ಯ ವ್ಯಕ್ತಿಯನ್ನು ಕಣಕ್ಕಿಳಿಸಿ ಸೋಲಿಸಿದರು. ಹಿಂದೂ ಮನಸ್ಥಿತಿ ಹೇಗಿದೆಯೆಂದರೆ ಸ್ಪೃಶ್ಯ ಮತ್ತು ಅಸ್ಪೃಶ್ಯರ ನಡುವೆ ಆಯ್ಕೆಯ ವಿಷಯ ಬಂದಾಗ ಅವನು ಸ್ಪೃಶ್ಯನನ್ನೆ ಆಯ್ಕೆ ಮಾಡುತ್ತಾನೆ. ಆದ್ದರಿಂದ ಮೇಲ್ಜಾತಿ ಜನರ ಕರುಣೆಯಿಲ್ಲದೆ ಯಾವ ಘಟಾನುಘಟಿ ಅಸ್ಪೃಶ್ಯ ರಾಜಕಾರಣಿಯೂ ಗೆಲ್ಲಲು ಸಾಧ್ಯವಿಲ್ಲ ಎಂಬುದು ಸಾಬೀತಾಯಿತು.

5. ಕೆಲವು ಬಲಗೈ ರಾಜಕಾರಣಿಗಳು ಒಳಮೀಸಲಾತಿ ವಿರುದ್ಧವಾಗಿ ದನಿ ಎತ್ತಿದ ಕಾರಣಕ್ಕೆ ಹೊಲೆಮಾದಿಗರ ನಡುವೆ ಭಿನ್ನತೆ ಉಂಟಾಯಿತು ಎನ್ನಲಾಗುತ್ತದೆ. ನಿಜಕ್ಕೂ ಆಯಾ ದಲಿತ ಜಾತಿಗಳನ್ನು ಪ್ರತಿನಿಧಿಸುವ ಪ್ರಾಮಾಣಿಕ ರಾಜಕಾರಣಿಗಳು ಇಂದಿಗೂ ಇದ್ದಾರೆಯೇ?

ಪ್ರಾಮಾಣಿಕ ರಾಜಕಾರಣಿಗಳು ಎರಡೂ ಬಣಗಳಲ್ಲೂ ಇದ್ದಾರೆ. ಈಗ ಇಬ್ಬರೂ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡಿದ್ದಾರೆ ಎನಿಸುತ್ತದೆ.

6. ಒಳಮೀಸಲಾತಿ ದಲಿತರನ್ನು ಒಡೆದು ಆಳುತ್ತದೆ ಎಂದು ಆರಂಭದಲ್ಲಿ ಭಯ ಬೀಳಿಸಿದ್ದಿದೆ. ಆದರೆ ಈಗ ಒಳಮೀಸಲಾತಿ ಜಾರಿಯಾಗದಿದ್ದರೆ ದಲಿತರ ಒಗ್ಗಟ್ಟು ಸಂಪೂರ್ಣ ಮುರಿದು ಬೀಳುತ್ತದೆ ಎಂಬ ಪರಿಸ್ಥಿತಿ ಉಂಟಾಗಿದೆ. ಇದಕ್ಕೆ ನಿಮ್ಮ ಅಭಿಪ್ರಾಯವೇನು?

ಇದಕ್ಕೆ ನನ್ನ ಸಹಮತವಿದೆ.

7. ಸದಾಶಿವ ಆಯೋಗದ ವರದಿ ಜಾರಿ ಮಾಡುವುದರ ಕುರಿತು ನಿಮ್ಮ ಅನಿಸಿಕೆ ಏನು?

ಸದಾಶಿವ ಆಯೋಗದ ವರದಿಯನ್ನು ಸಂಪೂರ್ಣವಾಗಿ ಬಹಿರಂಗಪಡಿಸಿಲ್ಲ. ಮೇಲೆ ಹೇಳಿದ ಕಾರಣಗಳಿಂದ ಒಳಮೀಸಲಾತಿ ಜಾರಿಯಾಗುವುದು ಒಳಿತು.

  • ಡಾ. ಮೂಡ್ನಾಕೂಡು ಚಿನ್ನಸ್ವಾಮಿ

(ಕನ್ನಡದ ಖ್ಯಾತ ಕವಿ. ದಲಿತ, ಬಂಡಾಯ ಮತ್ತು ಬೌದ್ಧ ಚಿಂತನೆಗಳನ್ನು ಸಾಹಿತ್ಯದ ಮೂಲಕ ಪ್ರಚುರಪಡಿಸಿದ ಪ್ರಮುಖರಲ್ಲಿ ಒಬ್ಬರು. ‘ಕೊಂಡಿಗಳು ಮತ್ತು ಮುಳ್ಳುಬೇಲಿಗಳು’, ‘ಚಪ್ಪಲಿ ಮತ್ತು ನಾನು’ ಮೂಡ್ನಾಕೂಡು ಅವರ ಕೆಲವು ಕವನಸಂಕಲನಗಳು. ‘ನೆನಪಿನ ಹಕ್ಕಿಯ ಹಾರಲು ಬಿಟ್ಟು’ ಅವರ ಆತ್ಮಕತೆ.)


ಇದನ್ನೂ ಓದಿ: ಅಡೆತಡೆ ದಾಟಿ ಹತ್ರಾಸ್ ತಲುಪಿದ ಭೀಮ್‌ ಆರ್ಮಿ ಆಜಾದ್‌ಗೆ ಠಾಕೂರ್ ಯುವಕರಿಂದ ಬಹಿರಂಗ ಬೆದರಿಕೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...