Homeಕರ್ನಾಟಕಪರಿಹಾರದ ಹಿಂದಿದೆ ರಾಜಕೀಯ ಲಾಭ; ಅಸಂಘಟಿತ ಕಾರ್ಮಿಕರನ್ನು ಕಡೆಗಣಿಸಿದ ಯಡಿಯೂರಪ್ಪ

ಪರಿಹಾರದ ಹಿಂದಿದೆ ರಾಜಕೀಯ ಲಾಭ; ಅಸಂಘಟಿತ ಕಾರ್ಮಿಕರನ್ನು ಕಡೆಗಣಿಸಿದ ಯಡಿಯೂರಪ್ಪ

- Advertisement -
- Advertisement -

ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಬಡ ಕಾರ್ಮಿಕರನ್ನು ರಾಜ್ಯ ಸರ್ಕಾರ ಕಡೆಗಣಿಸಿದೆ ಎಂಬ ಆರೋಪ ಕೇಳಿಬಂದಿದೆ ಬೀದಿಬದಿ ವ್ಯಾಪಾರಿಗಳು, ಹಮಾಲಿ ಕಾರ್ಮಿಕರು, ಬೀಡಿಕಾರ್ಮಿಕರು, ಟೈಲರ್‌ಗಳು ಮತ್ತು ಮನೆಗೆಲಸಗಾರರಿಗೆ ಯಾವುದೇ ಪರಿಹಾರದ ಕ್ರಮಗಳನ್ನು ಕೈಗೊಳ್ಳದಿರುವುದು ಈ ವರ್ಗದ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ವರ್ಗವನ್ನೂ ಪರಿಹಾರ ಕ್ರಮಗಳಡಿ ತರಬೇಕಿತ್ತು ಎಂಬ ಒತ್ತಾಯ ವ್ಯಕ್ತವಾಗಿದೆ.

ಕೋವಿಡ್-19 ಲಾಕ್‌ಡೌನ್‌ನಿಂದ ಅಸಂಘಟಿತ ವಲಯದ ಕಾರ್ಮಿಕ ವರ್ಗ ಜರ್ಝರಿತವಾಗಿತ್ತು. ದಿನದ ದುಡಿಮೆಯೇ ಅವರ ಜೀವನಾಧಾರವಾಗಿತ್ತು. ಅಂಥವರ ಬದುಕು ಸಂಕಷ್ಟಕ್ಕೆ ಸಿಲುಕೊಂಡಿದ್ದು ಅವರ ನೆರವಿಗೂ ಸರ್ಕಾರ ಮುಂದಾಗಬೇಕು. ಕೇವಲ ಆಹಾರ ಕಿಟ್ ಗಳನ್ನು ನೀಡಿದರೆ ಸಾಲದು ದಿನನಿತ್ಯದ ಖರ್ಚುವೆಚ್ಚಕ್ಕೆ ಬೇಕಾದ ಕ್ರಮಗಳನ್ನು ಸರ್ಕಾರದಿಂದ ನೀರಿಕ್ಷಿಸಿದ್ದರು. ಹಲವು ಮನವಿಗಳನ್ನು ನೀಡಿದ್ದರು. ಆದರೂ ಸರ್ಕಾರ ಪರಿಹಾರದ ನಿರೀಕ್ಷೆ ಹುಸಿಯಾಗಿದೆ.

ರಾಜ್ಯದಲ್ಲಿ ಬೀದಿಬದಿ ವ್ಯಾಪಾರಿಗಳ ಸಂಖ್ಯೆ 20 ಲಕ್ಷ ಇದೆ. ಹಮಾಲಿ ಕಾರ್ಮಿಕರು ಮತ್ತು ಮನೆಗೆಲಸಗಾರರು ತಲಾ 5ಲಕ್ಷ ಇದ್ದಾರೆ. ಟೈಲರ್ ಗಳ ಸಂಖ್ಯೆ 4 ಲಕ್ಷ ಮಂದಿ ಇದ್ದು ಬೀಡಿ ಕಾರ್ಮಿಕರು, ಕೃಷಿಕೂಲಿಕಾರರು ಹೀಗೆ ರಾಜ್ಯದಲ್ಲಿ 2.5 ಕೋಟಿ ಅಸಂಘಟಿತ ಕಾರ್ಮಿಕರಿದ್ದರೂ ಅವರ ಅಂಕಿಸಂಖ್ಯೆ ಸರ್ಕಾರದ ಬಳಿ ಇಲ್ಲ. ಇಂಥ
ಸಂಧರ್ಭದಲ್ಲಿ ಸರ್ಕಾರ ಇವರನ್ನು ನಿರ್ಲಕ್ಷಿಸಿರುವುದು ಸರಿಯಾದ ಕ್ರಮವಲ್ಲ ಎಂದು ಕಾರ್ಮಿಕರ ಮುಖಂಡ ಮಹಾಂತೇಶ್ ಹೇಳುತ್ತಾರೆ.

ಕೊರೊನಾ ಸಂಕಟ ಸಮಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಅಸಂಘಟಿತ ಕಾರ್ಮಿಕರಿಗೆ ಪರಿಹಾರ ಕೊಡಿಸುವ ಕುರಿತು ಸಭೆಗಳು ಬೆಂಗಳೂರಿನಲ್ಲಿ ನಡೆದಿದೆ. ನಾಳೆ (ಮೇ07) ಸಿಎಂ ಯಡಿಯೂರಪ್ಪ ಅವರನ್ನು ಸಿದ್ದರಾಮಯ್ಯ ಭೇಟಿ ಮಾಡಿ ಪರಿಹಾರ ನೀಡುವ ಬಗ್ಗೆ ಗಮನ ಸೆಳೆಯಲಿದ್ದರು. ಸಿದ್ದರಾಮಯ್ಯ ಭೇಟಿಯಾಗುವ ಮುನ್ನಾದಿನವೇ ಟ್ಯಾಕ್ಸಿ, ನೇಕಾರರು, ಆಟೋ, ಕಟ್ಟಡ, ಮಡಿವಾಳ ಮತ್ತು ಕ್ಷೌರಿಕರಿಗೆ ಪರಿಹಾರವನ್ನು ಘೋಷಣೆ ಮಾಡಿದ್ದಾರೆ.

ಸಿದ್ದರಾಮಯ್ಯ ಅವರಿಗೆ ರಾಜಕೀಯ ಲಾಭ ಧಕ್ಕದಿರಲಿ ಎಂಬ ಉದ್ದೇಶ ಇದರಲ್ಲಿ ಅಡಗಿದೆ.

ವಲಸೆ ಕಾರ್ಮಿಕರನ್ನು ಅವರ ಊರಿಗೆ ತಲುಪಿಸುವ ವಿಚಾರದಲ್ಲೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಂದು ಕೋಟಿ ಘೋಷಿಸದಿದ್ದರೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡುತ್ತಿರಲಿಲ್ಲ ಎಂದು ವಿಶ್ಲೇಷಿಸಲಾಗುತ್ತಿದೆ.

ಕಾರ್ಮಿಕ ಮುಖಂಡರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದಾಗ ಮೊದಲು ಆಟೋ ಚಾಲಕರು, ಟ್ಯಾಕ್ಸಿ ಚಾಲಕರು ಸ್ವಉದ್ಯೋಗ ಮಾಡುತ್ತಿದ್ದಾರೆ, ಅವರಿಗೆ ಪರಿಹಾರ ನೀಡಲು ಆಗುವುದಿಲ್ಲವೆಂದು ಯಡಿಯೂರಪ್ಪ ಹೇಳಿದ್ದರು ಎನ್ನಲಾಗಿದೆ. ನಂತರ ಓಲಾ ಮತ್ತು ಊಬರ್ ಮಾಲಿಕರ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಟ್ಯಾಕ್ಸಿ ಚಾಲಕರಿಗೂ ಕೋವಿಡ್ ಸಂಕಷ್ಟದ ಪರಿಹಾರ ಘೋಷಣೆ ಮಾಡಿದೆ.

ಹೂವಿನ ಬೆಳೆಗಾರರು, ಆಟೋ, ಕ್ಷೌರಿಕರು, ಮಡಿವಾಳರಿಗೆ ಸಣ್ಣ ಪ್ರಮಾಣದ ಪರಿಹಾರ ನೀಡುತ್ತಿರುವುದು ಶ್ಲಾಘನೀಯ. ಇವರಂತೆಯೇ ಕಷ್ಟದ ಜೀವನ ನಡೆಸುತ್ತಿರುವ ಬೀಡಿ, ಟೈಲರ್, ಬೀದಿಬದಿ ವ್ಯಾಪಾರಿಗಳು, ಮನೆಗೆಲಸಗಾರರು, ಹಮಾಲಿ ಕಾರ್ಮಿಕರನ್ನು ಒಳಗೊಂಡಂತೆ ಪರಿಹಾರ ಘೋಷಣೆ ಮಾಡಿದ್ದರೆ ಒಳ್ಳೆಯದಿತ್ತು ಎಂದು ಕಾರ್ಮಿಕ ಮುಖಂಡರ ಆಗ್ರಹ.

ಈ ವರ್ಗದಲ್ಲಿ ಒಂಟಿ ಮಹಿಳೆಯರು, ವಿಧವೆಯರು, ಸಂಸಾರದ ನೊಗ ಹೊತ್ತವರು ಹೆಚ್ಚಾಗಿದ್ದು ಸರ್ಕಾರ ಇವರ ನೆರವಿಗೂ ಬರಬೇಕಾಗಿದೆ.


ಇದನ್ನೂ ಓದಿ: 900 ಕಾರ್ಮಿಕರನ್ನು ಒಂದೇ ಗೋಡೌನ್‌ನಲ್ಲಿಟ್ಟು ನೋಂದಣಿ: ತುಮಕೂರಿನಲ್ಲಿ ಅಘಾತಕಾರಿ ಘಟನೆ


ನಮ್ಮ ಯೂಟ್ಯೂಬ್ ಚಾನೆಲ್ Subscribe ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...