Homeಕರ್ನಾಟಕಪರಿಹಾರದ ಹಿಂದಿದೆ ರಾಜಕೀಯ ಲಾಭ; ಅಸಂಘಟಿತ ಕಾರ್ಮಿಕರನ್ನು ಕಡೆಗಣಿಸಿದ ಯಡಿಯೂರಪ್ಪ

ಪರಿಹಾರದ ಹಿಂದಿದೆ ರಾಜಕೀಯ ಲಾಭ; ಅಸಂಘಟಿತ ಕಾರ್ಮಿಕರನ್ನು ಕಡೆಗಣಿಸಿದ ಯಡಿಯೂರಪ್ಪ

- Advertisement -
- Advertisement -

ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಬಡ ಕಾರ್ಮಿಕರನ್ನು ರಾಜ್ಯ ಸರ್ಕಾರ ಕಡೆಗಣಿಸಿದೆ ಎಂಬ ಆರೋಪ ಕೇಳಿಬಂದಿದೆ ಬೀದಿಬದಿ ವ್ಯಾಪಾರಿಗಳು, ಹಮಾಲಿ ಕಾರ್ಮಿಕರು, ಬೀಡಿಕಾರ್ಮಿಕರು, ಟೈಲರ್‌ಗಳು ಮತ್ತು ಮನೆಗೆಲಸಗಾರರಿಗೆ ಯಾವುದೇ ಪರಿಹಾರದ ಕ್ರಮಗಳನ್ನು ಕೈಗೊಳ್ಳದಿರುವುದು ಈ ವರ್ಗದ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ವರ್ಗವನ್ನೂ ಪರಿಹಾರ ಕ್ರಮಗಳಡಿ ತರಬೇಕಿತ್ತು ಎಂಬ ಒತ್ತಾಯ ವ್ಯಕ್ತವಾಗಿದೆ.

ಕೋವಿಡ್-19 ಲಾಕ್‌ಡೌನ್‌ನಿಂದ ಅಸಂಘಟಿತ ವಲಯದ ಕಾರ್ಮಿಕ ವರ್ಗ ಜರ್ಝರಿತವಾಗಿತ್ತು. ದಿನದ ದುಡಿಮೆಯೇ ಅವರ ಜೀವನಾಧಾರವಾಗಿತ್ತು. ಅಂಥವರ ಬದುಕು ಸಂಕಷ್ಟಕ್ಕೆ ಸಿಲುಕೊಂಡಿದ್ದು ಅವರ ನೆರವಿಗೂ ಸರ್ಕಾರ ಮುಂದಾಗಬೇಕು. ಕೇವಲ ಆಹಾರ ಕಿಟ್ ಗಳನ್ನು ನೀಡಿದರೆ ಸಾಲದು ದಿನನಿತ್ಯದ ಖರ್ಚುವೆಚ್ಚಕ್ಕೆ ಬೇಕಾದ ಕ್ರಮಗಳನ್ನು ಸರ್ಕಾರದಿಂದ ನೀರಿಕ್ಷಿಸಿದ್ದರು. ಹಲವು ಮನವಿಗಳನ್ನು ನೀಡಿದ್ದರು. ಆದರೂ ಸರ್ಕಾರ ಪರಿಹಾರದ ನಿರೀಕ್ಷೆ ಹುಸಿಯಾಗಿದೆ.

ರಾಜ್ಯದಲ್ಲಿ ಬೀದಿಬದಿ ವ್ಯಾಪಾರಿಗಳ ಸಂಖ್ಯೆ 20 ಲಕ್ಷ ಇದೆ. ಹಮಾಲಿ ಕಾರ್ಮಿಕರು ಮತ್ತು ಮನೆಗೆಲಸಗಾರರು ತಲಾ 5ಲಕ್ಷ ಇದ್ದಾರೆ. ಟೈಲರ್ ಗಳ ಸಂಖ್ಯೆ 4 ಲಕ್ಷ ಮಂದಿ ಇದ್ದು ಬೀಡಿ ಕಾರ್ಮಿಕರು, ಕೃಷಿಕೂಲಿಕಾರರು ಹೀಗೆ ರಾಜ್ಯದಲ್ಲಿ 2.5 ಕೋಟಿ ಅಸಂಘಟಿತ ಕಾರ್ಮಿಕರಿದ್ದರೂ ಅವರ ಅಂಕಿಸಂಖ್ಯೆ ಸರ್ಕಾರದ ಬಳಿ ಇಲ್ಲ. ಇಂಥ
ಸಂಧರ್ಭದಲ್ಲಿ ಸರ್ಕಾರ ಇವರನ್ನು ನಿರ್ಲಕ್ಷಿಸಿರುವುದು ಸರಿಯಾದ ಕ್ರಮವಲ್ಲ ಎಂದು ಕಾರ್ಮಿಕರ ಮುಖಂಡ ಮಹಾಂತೇಶ್ ಹೇಳುತ್ತಾರೆ.

ಕೊರೊನಾ ಸಂಕಟ ಸಮಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಅಸಂಘಟಿತ ಕಾರ್ಮಿಕರಿಗೆ ಪರಿಹಾರ ಕೊಡಿಸುವ ಕುರಿತು ಸಭೆಗಳು ಬೆಂಗಳೂರಿನಲ್ಲಿ ನಡೆದಿದೆ. ನಾಳೆ (ಮೇ07) ಸಿಎಂ ಯಡಿಯೂರಪ್ಪ ಅವರನ್ನು ಸಿದ್ದರಾಮಯ್ಯ ಭೇಟಿ ಮಾಡಿ ಪರಿಹಾರ ನೀಡುವ ಬಗ್ಗೆ ಗಮನ ಸೆಳೆಯಲಿದ್ದರು. ಸಿದ್ದರಾಮಯ್ಯ ಭೇಟಿಯಾಗುವ ಮುನ್ನಾದಿನವೇ ಟ್ಯಾಕ್ಸಿ, ನೇಕಾರರು, ಆಟೋ, ಕಟ್ಟಡ, ಮಡಿವಾಳ ಮತ್ತು ಕ್ಷೌರಿಕರಿಗೆ ಪರಿಹಾರವನ್ನು ಘೋಷಣೆ ಮಾಡಿದ್ದಾರೆ.

ಸಿದ್ದರಾಮಯ್ಯ ಅವರಿಗೆ ರಾಜಕೀಯ ಲಾಭ ಧಕ್ಕದಿರಲಿ ಎಂಬ ಉದ್ದೇಶ ಇದರಲ್ಲಿ ಅಡಗಿದೆ.

ವಲಸೆ ಕಾರ್ಮಿಕರನ್ನು ಅವರ ಊರಿಗೆ ತಲುಪಿಸುವ ವಿಚಾರದಲ್ಲೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಂದು ಕೋಟಿ ಘೋಷಿಸದಿದ್ದರೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡುತ್ತಿರಲಿಲ್ಲ ಎಂದು ವಿಶ್ಲೇಷಿಸಲಾಗುತ್ತಿದೆ.

ಕಾರ್ಮಿಕ ಮುಖಂಡರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದಾಗ ಮೊದಲು ಆಟೋ ಚಾಲಕರು, ಟ್ಯಾಕ್ಸಿ ಚಾಲಕರು ಸ್ವಉದ್ಯೋಗ ಮಾಡುತ್ತಿದ್ದಾರೆ, ಅವರಿಗೆ ಪರಿಹಾರ ನೀಡಲು ಆಗುವುದಿಲ್ಲವೆಂದು ಯಡಿಯೂರಪ್ಪ ಹೇಳಿದ್ದರು ಎನ್ನಲಾಗಿದೆ. ನಂತರ ಓಲಾ ಮತ್ತು ಊಬರ್ ಮಾಲಿಕರ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಟ್ಯಾಕ್ಸಿ ಚಾಲಕರಿಗೂ ಕೋವಿಡ್ ಸಂಕಷ್ಟದ ಪರಿಹಾರ ಘೋಷಣೆ ಮಾಡಿದೆ.

ಹೂವಿನ ಬೆಳೆಗಾರರು, ಆಟೋ, ಕ್ಷೌರಿಕರು, ಮಡಿವಾಳರಿಗೆ ಸಣ್ಣ ಪ್ರಮಾಣದ ಪರಿಹಾರ ನೀಡುತ್ತಿರುವುದು ಶ್ಲಾಘನೀಯ. ಇವರಂತೆಯೇ ಕಷ್ಟದ ಜೀವನ ನಡೆಸುತ್ತಿರುವ ಬೀಡಿ, ಟೈಲರ್, ಬೀದಿಬದಿ ವ್ಯಾಪಾರಿಗಳು, ಮನೆಗೆಲಸಗಾರರು, ಹಮಾಲಿ ಕಾರ್ಮಿಕರನ್ನು ಒಳಗೊಂಡಂತೆ ಪರಿಹಾರ ಘೋಷಣೆ ಮಾಡಿದ್ದರೆ ಒಳ್ಳೆಯದಿತ್ತು ಎಂದು ಕಾರ್ಮಿಕ ಮುಖಂಡರ ಆಗ್ರಹ.

ಈ ವರ್ಗದಲ್ಲಿ ಒಂಟಿ ಮಹಿಳೆಯರು, ವಿಧವೆಯರು, ಸಂಸಾರದ ನೊಗ ಹೊತ್ತವರು ಹೆಚ್ಚಾಗಿದ್ದು ಸರ್ಕಾರ ಇವರ ನೆರವಿಗೂ ಬರಬೇಕಾಗಿದೆ.


ಇದನ್ನೂ ಓದಿ: 900 ಕಾರ್ಮಿಕರನ್ನು ಒಂದೇ ಗೋಡೌನ್‌ನಲ್ಲಿಟ್ಟು ನೋಂದಣಿ: ತುಮಕೂರಿನಲ್ಲಿ ಅಘಾತಕಾರಿ ಘಟನೆ


ನಮ್ಮ ಯೂಟ್ಯೂಬ್ ಚಾನೆಲ್ Subscribe ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...