Homeಮುಖಪುಟಕಾಂಗ್ರೆಸ್ ಅಧ್ಯಕ್ಷ ಸ್ಥಾನ; ಕುಟುಂಬದ ಹೊರಗಿನವರಿಗೆ ಆದ್ಯತೆ: ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್ ಅಧ್ಯಕ್ಷ ಸ್ಥಾನ; ಕುಟುಂಬದ ಹೊರಗಿನವರಿಗೆ ಆದ್ಯತೆ: ಪ್ರಿಯಾಂಕಾ ಗಾಂಧಿ

ಆಗಸ್ಟ್ 13ರಂದು ಪ್ರಕಟಗೊಂಡಿರುವ 'ಇಂಡಿಯಾ ಟುಮಾರೋ: ಕಾನ್ವರ್ಸೇಷನ್ಸ್ ವಿತ್ ದಿ ನೆಕ್ಸ್ಟ್ ಜನರೇಷನ್ ಆಫ್ ಪೊಲಿಟಿಕಲ್ ಲೀಡರ್ಸ್' ಎಂಬ ಕೃತಿಯಲ್ಲಿ ನೀಡಿರುವ ಸಂದರ್ಶನದಲ್ಲಿ ಪ್ರಿಯಾಂಕಾ ಗಾಂಧಿ ಈ ಮಾತನ್ನು ಹೇಳಿದ್ದಾರೆ.

- Advertisement -
- Advertisement -

ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಲ್ಲಿ ಖಾಲಿಯಿರುವ ಅಧ್ಯಕ್ಷ ಸ್ಥಾನವನ್ನು ಭರ್ತಿ ಮಾಡಬೇಕು ಎಂಬ ಕೂಗು ಪಕ್ಷದ ಒಳಗಡೆಯೇ ಬಲವಾಗಿ ಕೇಳಿಬರುತ್ತಿರುವ ಸಂದರ್ಭದಲ್ಲಿ, ನಮ್ಮ ಕುಟುಂಬದ ಹೊರಗಿನವರಿಗೆ ಆಧ್ಯತೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಬಗೆಗೆ ಕುಟುಂಬ ರಾಜಕಾರಣದ ಟೀಕೆಯು ಹಲವು ವರ್ಷಗಳಿಂದ ಕೇಳಿಬರುತ್ತಿದ್ದು, ಈಗ ಅದಕ್ಕೆ ಅಂತ್ಯ ಹಾಡಬೇಕು ಎನ್ನುವಂತೆ ರಾಹುಲ್ ಗಾಂಧಿಯವರ ಅಭಿಪ್ರಾಯಕ್ಕೆ ತಮ್ಮ ಸಹಮತವನ್ನು ಪ್ರಿಯಾಂಕಾ ವ್ಯಕ್ತಪಡಿಸಿದ್ದಾರೆ.

ಆಗಸ್ಟ್ 13 ರಂದು ಪ್ರಕಟಗೊಂಡಿರುವ ಪ್ರದೀಪ್ ಛಿಬ್ಬರ್ ಮತ್ತು ಹರ್ಷ್ ಶಾ ಬರೆದಿರುವ ‘ಇಂಡಿಯಾ ಟುಮಾರೋ: ಕಾನ್ವರ್ಸೇಷನ್ಸ್ ವಿತ್ ದಿ ನೆಕ್ಸ್ಟ್ ಜನರೇಷನ್ ಆಫ್ ಪೊಲಿಟಿಕಲ್ ಲೀಡರ್ಸ್’ ಎಂಬ ಕೃತಿಯಲ್ಲಿ ನೀಡಿರುವ ಸಂದರ್ಶನದಲ್ಲಿ ಪ್ರಿಯಾಂಕಾ ಗಾಂಧಿ ಅಧ್ಯಕ್ಷ ಸ್ಥಾನದ ಕುರಿತು ಹೇಳಿದ್ದಾರೆ.

ಈ ಪುಸ್ತಕದಲ್ಲಿ ಪ್ರಿಯಾಂಕಾ ಗಾಂಧಿ ಅಲ್ಲದೇ, ರಾಹುಲ್ ಗಾಂಧಿ, ಆದಿತ್ಯ ಠಾಕ್ರೆ, ಆಖಿಲೇಶ್ ಯಾದವ್, ರಾಜ್ಯವರ್ಧನ್ ರಾಥೋಡ್, ಸುಪ್ರಿಯಾ ಸುಳೆ ಮುಂತಾದವರ ಸಂದರ್ಶನವೂ ಇದೆ.

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ಸಂದರ್ಶನವನ್ನು 2019 ರ ಮಧ್ಯಪ್ರದೇಶ ಮತ್ತು ರಾಜಸ್ಥಾನ ಚುನಾವಣೆಗೂ ಮೊದಲು ನಡೆಸಲಾಗಿತ್ತು.

ನಮ್ಮ ಕುಟುಂಬದ ಹೊರಗಿನವರು ಅಧ್ಯಕ್ಷರಾಗಬೇಕು ಎಂಬ ಮಾತನ್ನು ರಾಹುಲ್ ಗಾಂಧಿ ರಾಜಿನಾಮೆ ಪತ್ರದಲ್ಲಿ ಹೇಳದಿದ್ದರೂ, ಹಲವು ಸಂದರ್ಭದಲ್ಲಿ ಈ ಮಾತನ್ನು ನಿರ್ದಿಷ್ಟವಾಗಿ ಹೇಳಿದ್ದಾರೆ. ಈ ಅಭಿಪ್ರಾಯಕ್ಕೆ ನನ್ನ ಸಂಪೂರ್ಣ ಸಹಮತವಿದೆ ಎಂದು ಪ್ರಿಯಾಂಕಾ ಹೇಳಿದ್ದಾರೆ.

ನಮ್ಮ ಕುಟುಂಬದ ಹೊರತಾಗಿ ಯಾರೇ ಅಧ್ಯಕ್ಷರಾದರೂ ಅವರೇ ನಮಗೆ ಬಾಸ್. ಅಧ್ಯಕ್ಷರು ನಾಳೆ ದಿನ ನನ್ನನ್ನು ಉತ್ತರಪ್ರದೇಶಕ್ಕೆ ಹೋಗುವುದು ಬೇಡ, ಅಂಡಾಮಾನ್ ನಿಕೋಬಾರ್‌ಗೆ ಹೋಗು ಎಂದೂ ಹೇಳಿದರೆ ನಾನು ಅವರ ಮಾತನ್ನು ಕೇಳಲೇಬೇಕು ಎಂದು ತಮ್ಮ ಸಂದರ್ಶನದಲ್ಲಿ ಹೇಳಿದ್ದಾರೆ.

ಈ ವಿಷಯಗಳೊಟ್ಟಿಗೆ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಹತ್ಯೆಗಳು ತಮ್ಮ ಬಾಲ್ಯದ ಮೇಲೆ ತುಂಬಾ ಪರಿಣಾಮ ಬೀರಿದೆ ಎಂದೂ ಹೇಳಿದ್ದಾರೆ. ಇದರೊಂದಿಗೆ ಕಾಂಗ್ರೆಸ್ ಪಕ್ಷದ ಇಂದಿನ ಸ್ಥಿತಿಯ ಬಗ್ಗೆ ಸ್ಪಷ್ವವಾಗಿ ಮಾತನಾಡಿದ್ದಾರೆ.

‘ಒಬ್ಬ ರಾಜಕಾರಣಿಯಾಗಿ ನಾನು ಜನರ ತೀರ್ಪನ್ನು ಗೌರವಿಸುತ್ತೇನೆ. ಮೋದಿ ನೇತೃತ್ವದ ಸರ್ಕಾರಕ್ಕೆ ಇನ್ನೊಂದು ಅವಕಾಶ ಕೊಡಬೇಕೆಂದು ಜನರು ಬಯಸಿದರು. ನಮಗೂ ಇನ್ನೊಂದು ಅವಕಾಶ ಕೊಡಿ. ಕಾಂಗ್ರೆಸ್ ಪಕ್ಷವು ಒಮ್ಮತದಿಂದ ದೇಶವನ್ನು ಮುನ್ನಡೆಸಲು ಬಯಸುತ್ತದೆ’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

‘ಆರ್‌ಎಸ್‌ಎಸ್ ಮತ್ತು ಬಿಜೆಪಿ ಕಠೋರ ಮನಸ್ಥಿತಿ ಹೊಂದಿದೆ. ಇದನ್ನು ದೇಶದ ಜನರ ಮೇಲೆ ಹೇರುತ್ತಿದೆ. ತನ್ನ ಸಿದ್ಧಾಂತದ ಹೇರಿಕೆಯಿಂದಾಗಿ ಬಿಜೆಪಿ ವಿರುದ್ಧ ಜನರ ಆಕ್ರೋಷ ಹೆಚ್ಚಾಗುತ್ತಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿಯ ಸೋಲಿಗೆ ಇದೇ ಕಾರಣವಾಗಲಿದೆ’ ಎಂದೂ ಹೇಳಿದ್ದಾರೆ.


ಇದನ್ನೂ ಓದೆ: ಹೊಸ ಅಧ್ಯಕ್ಷರು ಆಯ್ಕೆಯಾಗುವವರೆಗೂ ಸೋನಿಯಾ ಗಾಂಧಿ ಮುಂದುವರೆಯಲಿದ್ದಾರೆ: ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...