Homeಮುಖಪುಟಕಾಂಗ್ರೆಸ್ ಅಧ್ಯಕ್ಷ ಸ್ಥಾನ; ಕುಟುಂಬದ ಹೊರಗಿನವರಿಗೆ ಆದ್ಯತೆ: ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್ ಅಧ್ಯಕ್ಷ ಸ್ಥಾನ; ಕುಟುಂಬದ ಹೊರಗಿನವರಿಗೆ ಆದ್ಯತೆ: ಪ್ರಿಯಾಂಕಾ ಗಾಂಧಿ

ಆಗಸ್ಟ್ 13ರಂದು ಪ್ರಕಟಗೊಂಡಿರುವ 'ಇಂಡಿಯಾ ಟುಮಾರೋ: ಕಾನ್ವರ್ಸೇಷನ್ಸ್ ವಿತ್ ದಿ ನೆಕ್ಸ್ಟ್ ಜನರೇಷನ್ ಆಫ್ ಪೊಲಿಟಿಕಲ್ ಲೀಡರ್ಸ್' ಎಂಬ ಕೃತಿಯಲ್ಲಿ ನೀಡಿರುವ ಸಂದರ್ಶನದಲ್ಲಿ ಪ್ರಿಯಾಂಕಾ ಗಾಂಧಿ ಈ ಮಾತನ್ನು ಹೇಳಿದ್ದಾರೆ.

- Advertisement -
- Advertisement -

ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಲ್ಲಿ ಖಾಲಿಯಿರುವ ಅಧ್ಯಕ್ಷ ಸ್ಥಾನವನ್ನು ಭರ್ತಿ ಮಾಡಬೇಕು ಎಂಬ ಕೂಗು ಪಕ್ಷದ ಒಳಗಡೆಯೇ ಬಲವಾಗಿ ಕೇಳಿಬರುತ್ತಿರುವ ಸಂದರ್ಭದಲ್ಲಿ, ನಮ್ಮ ಕುಟುಂಬದ ಹೊರಗಿನವರಿಗೆ ಆಧ್ಯತೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಬಗೆಗೆ ಕುಟುಂಬ ರಾಜಕಾರಣದ ಟೀಕೆಯು ಹಲವು ವರ್ಷಗಳಿಂದ ಕೇಳಿಬರುತ್ತಿದ್ದು, ಈಗ ಅದಕ್ಕೆ ಅಂತ್ಯ ಹಾಡಬೇಕು ಎನ್ನುವಂತೆ ರಾಹುಲ್ ಗಾಂಧಿಯವರ ಅಭಿಪ್ರಾಯಕ್ಕೆ ತಮ್ಮ ಸಹಮತವನ್ನು ಪ್ರಿಯಾಂಕಾ ವ್ಯಕ್ತಪಡಿಸಿದ್ದಾರೆ.

ಆಗಸ್ಟ್ 13 ರಂದು ಪ್ರಕಟಗೊಂಡಿರುವ ಪ್ರದೀಪ್ ಛಿಬ್ಬರ್ ಮತ್ತು ಹರ್ಷ್ ಶಾ ಬರೆದಿರುವ ‘ಇಂಡಿಯಾ ಟುಮಾರೋ: ಕಾನ್ವರ್ಸೇಷನ್ಸ್ ವಿತ್ ದಿ ನೆಕ್ಸ್ಟ್ ಜನರೇಷನ್ ಆಫ್ ಪೊಲಿಟಿಕಲ್ ಲೀಡರ್ಸ್’ ಎಂಬ ಕೃತಿಯಲ್ಲಿ ನೀಡಿರುವ ಸಂದರ್ಶನದಲ್ಲಿ ಪ್ರಿಯಾಂಕಾ ಗಾಂಧಿ ಅಧ್ಯಕ್ಷ ಸ್ಥಾನದ ಕುರಿತು ಹೇಳಿದ್ದಾರೆ.

ಈ ಪುಸ್ತಕದಲ್ಲಿ ಪ್ರಿಯಾಂಕಾ ಗಾಂಧಿ ಅಲ್ಲದೇ, ರಾಹುಲ್ ಗಾಂಧಿ, ಆದಿತ್ಯ ಠಾಕ್ರೆ, ಆಖಿಲೇಶ್ ಯಾದವ್, ರಾಜ್ಯವರ್ಧನ್ ರಾಥೋಡ್, ಸುಪ್ರಿಯಾ ಸುಳೆ ಮುಂತಾದವರ ಸಂದರ್ಶನವೂ ಇದೆ.

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ಸಂದರ್ಶನವನ್ನು 2019 ರ ಮಧ್ಯಪ್ರದೇಶ ಮತ್ತು ರಾಜಸ್ಥಾನ ಚುನಾವಣೆಗೂ ಮೊದಲು ನಡೆಸಲಾಗಿತ್ತು.

ನಮ್ಮ ಕುಟುಂಬದ ಹೊರಗಿನವರು ಅಧ್ಯಕ್ಷರಾಗಬೇಕು ಎಂಬ ಮಾತನ್ನು ರಾಹುಲ್ ಗಾಂಧಿ ರಾಜಿನಾಮೆ ಪತ್ರದಲ್ಲಿ ಹೇಳದಿದ್ದರೂ, ಹಲವು ಸಂದರ್ಭದಲ್ಲಿ ಈ ಮಾತನ್ನು ನಿರ್ದಿಷ್ಟವಾಗಿ ಹೇಳಿದ್ದಾರೆ. ಈ ಅಭಿಪ್ರಾಯಕ್ಕೆ ನನ್ನ ಸಂಪೂರ್ಣ ಸಹಮತವಿದೆ ಎಂದು ಪ್ರಿಯಾಂಕಾ ಹೇಳಿದ್ದಾರೆ.

ನಮ್ಮ ಕುಟುಂಬದ ಹೊರತಾಗಿ ಯಾರೇ ಅಧ್ಯಕ್ಷರಾದರೂ ಅವರೇ ನಮಗೆ ಬಾಸ್. ಅಧ್ಯಕ್ಷರು ನಾಳೆ ದಿನ ನನ್ನನ್ನು ಉತ್ತರಪ್ರದೇಶಕ್ಕೆ ಹೋಗುವುದು ಬೇಡ, ಅಂಡಾಮಾನ್ ನಿಕೋಬಾರ್‌ಗೆ ಹೋಗು ಎಂದೂ ಹೇಳಿದರೆ ನಾನು ಅವರ ಮಾತನ್ನು ಕೇಳಲೇಬೇಕು ಎಂದು ತಮ್ಮ ಸಂದರ್ಶನದಲ್ಲಿ ಹೇಳಿದ್ದಾರೆ.

ಈ ವಿಷಯಗಳೊಟ್ಟಿಗೆ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಹತ್ಯೆಗಳು ತಮ್ಮ ಬಾಲ್ಯದ ಮೇಲೆ ತುಂಬಾ ಪರಿಣಾಮ ಬೀರಿದೆ ಎಂದೂ ಹೇಳಿದ್ದಾರೆ. ಇದರೊಂದಿಗೆ ಕಾಂಗ್ರೆಸ್ ಪಕ್ಷದ ಇಂದಿನ ಸ್ಥಿತಿಯ ಬಗ್ಗೆ ಸ್ಪಷ್ವವಾಗಿ ಮಾತನಾಡಿದ್ದಾರೆ.

‘ಒಬ್ಬ ರಾಜಕಾರಣಿಯಾಗಿ ನಾನು ಜನರ ತೀರ್ಪನ್ನು ಗೌರವಿಸುತ್ತೇನೆ. ಮೋದಿ ನೇತೃತ್ವದ ಸರ್ಕಾರಕ್ಕೆ ಇನ್ನೊಂದು ಅವಕಾಶ ಕೊಡಬೇಕೆಂದು ಜನರು ಬಯಸಿದರು. ನಮಗೂ ಇನ್ನೊಂದು ಅವಕಾಶ ಕೊಡಿ. ಕಾಂಗ್ರೆಸ್ ಪಕ್ಷವು ಒಮ್ಮತದಿಂದ ದೇಶವನ್ನು ಮುನ್ನಡೆಸಲು ಬಯಸುತ್ತದೆ’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

‘ಆರ್‌ಎಸ್‌ಎಸ್ ಮತ್ತು ಬಿಜೆಪಿ ಕಠೋರ ಮನಸ್ಥಿತಿ ಹೊಂದಿದೆ. ಇದನ್ನು ದೇಶದ ಜನರ ಮೇಲೆ ಹೇರುತ್ತಿದೆ. ತನ್ನ ಸಿದ್ಧಾಂತದ ಹೇರಿಕೆಯಿಂದಾಗಿ ಬಿಜೆಪಿ ವಿರುದ್ಧ ಜನರ ಆಕ್ರೋಷ ಹೆಚ್ಚಾಗುತ್ತಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿಯ ಸೋಲಿಗೆ ಇದೇ ಕಾರಣವಾಗಲಿದೆ’ ಎಂದೂ ಹೇಳಿದ್ದಾರೆ.


ಇದನ್ನೂ ಓದೆ: ಹೊಸ ಅಧ್ಯಕ್ಷರು ಆಯ್ಕೆಯಾಗುವವರೆಗೂ ಸೋನಿಯಾ ಗಾಂಧಿ ಮುಂದುವರೆಯಲಿದ್ದಾರೆ: ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...