Homeಮುಖಪುಟಕಾಂಗ್ರೆಸ್ ಅಧ್ಯಕ್ಷ ಸ್ಥಾನ; ಕುಟುಂಬದ ಹೊರಗಿನವರಿಗೆ ಆದ್ಯತೆ: ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್ ಅಧ್ಯಕ್ಷ ಸ್ಥಾನ; ಕುಟುಂಬದ ಹೊರಗಿನವರಿಗೆ ಆದ್ಯತೆ: ಪ್ರಿಯಾಂಕಾ ಗಾಂಧಿ

ಆಗಸ್ಟ್ 13ರಂದು ಪ್ರಕಟಗೊಂಡಿರುವ 'ಇಂಡಿಯಾ ಟುಮಾರೋ: ಕಾನ್ವರ್ಸೇಷನ್ಸ್ ವಿತ್ ದಿ ನೆಕ್ಸ್ಟ್ ಜನರೇಷನ್ ಆಫ್ ಪೊಲಿಟಿಕಲ್ ಲೀಡರ್ಸ್' ಎಂಬ ಕೃತಿಯಲ್ಲಿ ನೀಡಿರುವ ಸಂದರ್ಶನದಲ್ಲಿ ಪ್ರಿಯಾಂಕಾ ಗಾಂಧಿ ಈ ಮಾತನ್ನು ಹೇಳಿದ್ದಾರೆ.

- Advertisement -
- Advertisement -

ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಲ್ಲಿ ಖಾಲಿಯಿರುವ ಅಧ್ಯಕ್ಷ ಸ್ಥಾನವನ್ನು ಭರ್ತಿ ಮಾಡಬೇಕು ಎಂಬ ಕೂಗು ಪಕ್ಷದ ಒಳಗಡೆಯೇ ಬಲವಾಗಿ ಕೇಳಿಬರುತ್ತಿರುವ ಸಂದರ್ಭದಲ್ಲಿ, ನಮ್ಮ ಕುಟುಂಬದ ಹೊರಗಿನವರಿಗೆ ಆಧ್ಯತೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಬಗೆಗೆ ಕುಟುಂಬ ರಾಜಕಾರಣದ ಟೀಕೆಯು ಹಲವು ವರ್ಷಗಳಿಂದ ಕೇಳಿಬರುತ್ತಿದ್ದು, ಈಗ ಅದಕ್ಕೆ ಅಂತ್ಯ ಹಾಡಬೇಕು ಎನ್ನುವಂತೆ ರಾಹುಲ್ ಗಾಂಧಿಯವರ ಅಭಿಪ್ರಾಯಕ್ಕೆ ತಮ್ಮ ಸಹಮತವನ್ನು ಪ್ರಿಯಾಂಕಾ ವ್ಯಕ್ತಪಡಿಸಿದ್ದಾರೆ.

ಆಗಸ್ಟ್ 13 ರಂದು ಪ್ರಕಟಗೊಂಡಿರುವ ಪ್ರದೀಪ್ ಛಿಬ್ಬರ್ ಮತ್ತು ಹರ್ಷ್ ಶಾ ಬರೆದಿರುವ ‘ಇಂಡಿಯಾ ಟುಮಾರೋ: ಕಾನ್ವರ್ಸೇಷನ್ಸ್ ವಿತ್ ದಿ ನೆಕ್ಸ್ಟ್ ಜನರೇಷನ್ ಆಫ್ ಪೊಲಿಟಿಕಲ್ ಲೀಡರ್ಸ್’ ಎಂಬ ಕೃತಿಯಲ್ಲಿ ನೀಡಿರುವ ಸಂದರ್ಶನದಲ್ಲಿ ಪ್ರಿಯಾಂಕಾ ಗಾಂಧಿ ಅಧ್ಯಕ್ಷ ಸ್ಥಾನದ ಕುರಿತು ಹೇಳಿದ್ದಾರೆ.

ಈ ಪುಸ್ತಕದಲ್ಲಿ ಪ್ರಿಯಾಂಕಾ ಗಾಂಧಿ ಅಲ್ಲದೇ, ರಾಹುಲ್ ಗಾಂಧಿ, ಆದಿತ್ಯ ಠಾಕ್ರೆ, ಆಖಿಲೇಶ್ ಯಾದವ್, ರಾಜ್ಯವರ್ಧನ್ ರಾಥೋಡ್, ಸುಪ್ರಿಯಾ ಸುಳೆ ಮುಂತಾದವರ ಸಂದರ್ಶನವೂ ಇದೆ.

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ಸಂದರ್ಶನವನ್ನು 2019 ರ ಮಧ್ಯಪ್ರದೇಶ ಮತ್ತು ರಾಜಸ್ಥಾನ ಚುನಾವಣೆಗೂ ಮೊದಲು ನಡೆಸಲಾಗಿತ್ತು.

ನಮ್ಮ ಕುಟುಂಬದ ಹೊರಗಿನವರು ಅಧ್ಯಕ್ಷರಾಗಬೇಕು ಎಂಬ ಮಾತನ್ನು ರಾಹುಲ್ ಗಾಂಧಿ ರಾಜಿನಾಮೆ ಪತ್ರದಲ್ಲಿ ಹೇಳದಿದ್ದರೂ, ಹಲವು ಸಂದರ್ಭದಲ್ಲಿ ಈ ಮಾತನ್ನು ನಿರ್ದಿಷ್ಟವಾಗಿ ಹೇಳಿದ್ದಾರೆ. ಈ ಅಭಿಪ್ರಾಯಕ್ಕೆ ನನ್ನ ಸಂಪೂರ್ಣ ಸಹಮತವಿದೆ ಎಂದು ಪ್ರಿಯಾಂಕಾ ಹೇಳಿದ್ದಾರೆ.

ನಮ್ಮ ಕುಟುಂಬದ ಹೊರತಾಗಿ ಯಾರೇ ಅಧ್ಯಕ್ಷರಾದರೂ ಅವರೇ ನಮಗೆ ಬಾಸ್. ಅಧ್ಯಕ್ಷರು ನಾಳೆ ದಿನ ನನ್ನನ್ನು ಉತ್ತರಪ್ರದೇಶಕ್ಕೆ ಹೋಗುವುದು ಬೇಡ, ಅಂಡಾಮಾನ್ ನಿಕೋಬಾರ್‌ಗೆ ಹೋಗು ಎಂದೂ ಹೇಳಿದರೆ ನಾನು ಅವರ ಮಾತನ್ನು ಕೇಳಲೇಬೇಕು ಎಂದು ತಮ್ಮ ಸಂದರ್ಶನದಲ್ಲಿ ಹೇಳಿದ್ದಾರೆ.

ಈ ವಿಷಯಗಳೊಟ್ಟಿಗೆ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಹತ್ಯೆಗಳು ತಮ್ಮ ಬಾಲ್ಯದ ಮೇಲೆ ತುಂಬಾ ಪರಿಣಾಮ ಬೀರಿದೆ ಎಂದೂ ಹೇಳಿದ್ದಾರೆ. ಇದರೊಂದಿಗೆ ಕಾಂಗ್ರೆಸ್ ಪಕ್ಷದ ಇಂದಿನ ಸ್ಥಿತಿಯ ಬಗ್ಗೆ ಸ್ಪಷ್ವವಾಗಿ ಮಾತನಾಡಿದ್ದಾರೆ.

‘ಒಬ್ಬ ರಾಜಕಾರಣಿಯಾಗಿ ನಾನು ಜನರ ತೀರ್ಪನ್ನು ಗೌರವಿಸುತ್ತೇನೆ. ಮೋದಿ ನೇತೃತ್ವದ ಸರ್ಕಾರಕ್ಕೆ ಇನ್ನೊಂದು ಅವಕಾಶ ಕೊಡಬೇಕೆಂದು ಜನರು ಬಯಸಿದರು. ನಮಗೂ ಇನ್ನೊಂದು ಅವಕಾಶ ಕೊಡಿ. ಕಾಂಗ್ರೆಸ್ ಪಕ್ಷವು ಒಮ್ಮತದಿಂದ ದೇಶವನ್ನು ಮುನ್ನಡೆಸಲು ಬಯಸುತ್ತದೆ’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

‘ಆರ್‌ಎಸ್‌ಎಸ್ ಮತ್ತು ಬಿಜೆಪಿ ಕಠೋರ ಮನಸ್ಥಿತಿ ಹೊಂದಿದೆ. ಇದನ್ನು ದೇಶದ ಜನರ ಮೇಲೆ ಹೇರುತ್ತಿದೆ. ತನ್ನ ಸಿದ್ಧಾಂತದ ಹೇರಿಕೆಯಿಂದಾಗಿ ಬಿಜೆಪಿ ವಿರುದ್ಧ ಜನರ ಆಕ್ರೋಷ ಹೆಚ್ಚಾಗುತ್ತಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿಯ ಸೋಲಿಗೆ ಇದೇ ಕಾರಣವಾಗಲಿದೆ’ ಎಂದೂ ಹೇಳಿದ್ದಾರೆ.


ಇದನ್ನೂ ಓದೆ: ಹೊಸ ಅಧ್ಯಕ್ಷರು ಆಯ್ಕೆಯಾಗುವವರೆಗೂ ಸೋನಿಯಾ ಗಾಂಧಿ ಮುಂದುವರೆಯಲಿದ್ದಾರೆ: ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...