Homeಕರೋನಾ ತಲ್ಲಣಅನ್‌ಲಾಕ್‌-4 ರಲ್ಲಿ ಕೇಂದ್ರದಿಂದ ಮೆಟ್ರೋ ಸೇವೆಗೆ ಅನುಮತಿ ಸಾಧ್ಯತೆ; ಅಂತಿಮ ನಿರ್ಧಾರ ರಾಜ್ಯ ಸರ್ಕಾರಗಳದ್ದು

ಅನ್‌ಲಾಕ್‌-4 ರಲ್ಲಿ ಕೇಂದ್ರದಿಂದ ಮೆಟ್ರೋ ಸೇವೆಗೆ ಅನುಮತಿ ಸಾಧ್ಯತೆ; ಅಂತಿಮ ನಿರ್ಧಾರ ರಾಜ್ಯ ಸರ್ಕಾರಗಳದ್ದು

ಶಾಲಾ ಕಾಲೇಜುಗಳು ಮತ್ತು ಸಿನೆಮಾ ಹಾಲ್‌ಗಳಂತಹ ಜನದಟ್ಟಣೆಯ ಸ್ಥಳಗಳಲ್ಲಿ ನಿರ್ಬಂಧಗಳು ಇನ್ನೂ ಉಳಿಯಲಿದೆ.

- Advertisement -
- Advertisement -

ಕೊರೊನಾ ವೈರಸ್ ಸಂಬಂಧಿತ ನಿರ್ಬಂಧಗಳಿಂದ ದೇಶವನ್ನು ಅನ್ಲಾಕ್ ಮಾಡುವ ನಾಲ್ಕನೇ ಹಂತ (ಅನ್‌ಲಾಕ್‌-4) ದಲ್ಲಿ ಮೆಟ್ರೊ ರೈಲು ಸೇವೆಗಳನ್ನು ಮುಂದಿನ ತಿಂಗಳು ಜಾರಿಗೆ ತರಲಾಗುವುದು ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಆದರೆ ಇದರ ಅಂತಿಮ ನಿರ್ಧಾರ ರಾಜ್ಯ ಸರ್ಕಾರಗಳ ಮೇಲೆ ಅವಲಂಬಿತವಾಗಿರುತ್ತದೆ ಎಂದು ಮೂಲಗಳು ತಿಳಿಸಿದೆ.

ಆದರೆ ಶಾಲಾ ಕಾಲೇಜುಗಳು ಇನ್ನೂ ಮುಚ್ಚಿರುತ್ತದೆ ಮತ್ತು ಸಿನೆಮಾ ಹಾಲ್‌ಗಳಂತಹ ಜನದಟ್ಟಣೆಯ ಸ್ಥಳಗಳಲ್ಲಿ ನಿರ್ಬಂಧಗಳು ಇನ್ನೂ ಉಳಿಯಲಿದೆ. ವ್ಯಾಪಕವಾದ ನಿರ್ಬಂಧಗಳೊಂದಿಗೆ ದೆಹಲಿ ಮೆಟ್ರೋ ಸೆಪ್ಟೆಂಬರ್ 1 ರಿಂದ ತನ್ನ ಸೇವೆಗಳನ್ನು ಪ್ರಾರಂಭಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: ಲಿಂಗತ್ವ ಕಂದರವನ್ನು ಹೆಚ್ಚಿಸಿದ ಲಾಕ್‌ಡೌನ್‌: ಮಹಿಳೆಯರನ್ನು ಮರೆತುಬಿಟ್ಟ ಸರ್ಕಾರ

ದೆಹಲಿಯಲ್ಲಿ ಕೊರೊನಾ ವೈರಸ್ ಪರಿಸ್ಥಿತಿ ಸುಧಾರಿಸಿದೆ ಎಂದು ಪ್ರತಿಪಾದಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮನವಿಯ ನಂತರ ದೆಹಲಿ ಮೆಟ್ರೋ ಸೇವೆಯನ್ನು ಒದಗಿಸುವ ಬಗೆಗಿನ ತೀರ್ಮಾನಕ್ಕೆ ವೇಗ ಬಂದಿದೆ ಎನ್ನಲಾಗಿದೆ.

“ದೆಹಲಿಯನ್ನು ವಿಭಿನ್ನವಾಗಿ ಪರಿಗಣಿಸಬೇಕು ಎಂದು ನಾನು ಕೇಂದ್ರವನ್ನು ವಿನಂತಿಸಿದ್ದೇನೆ” ಎಂದು ಕೇಜ್ರಿವಾಲ್ ಅವರು ನಿನ್ನೆ ವ್ಯಾಪಾರಿಗಳು ಮತ್ತು ಉದ್ಯಮಿಗಳೊಂದಿಗೆ ನಡೆಸಿದ ಆನ್‌ಲೈನ್ ಸಭೆಯಲ್ಲಿ ಹೇಳಿದರು.

“ದೆಹಲಿಯಲ್ಲಿ ಕೊರೊನಾ ವೈರಸ್ ಪರಿಸ್ಥಿತಿ ಸುಧಾರಿಸುತ್ತಿದೆ. ಅವರು ಇತರ ನಗರಗಳಲ್ಲಿ ಮೆಟ್ರೋ ರೈಲುಗಳನ್ನು ಓಡಿಸಲು ಬಯಸದಿದ್ದರೆ, ಅದು ಹಾಗೇ ಇರಲಿ. ಆದರೆ, ದೆಹಲಿಯಲ್ಲಿ, ಮೆಟ್ರೊ ರೈಲು ಸೇವೆಗಳನ್ನು ಹಂತಹಂತವಾಗಿ, ಪ್ರಾಯೋಗಿಕ ಆಧಾರದ ಮೇಲೆ ಪ್ರಾರಂಭಿಸಬೇಕು” ಎಂದು ಹೇಳಿದ್ದಾಗಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಲಾಕ್‌ಡೌನ್‌ನಿಂದ ಆರ್ಥಿಕ ಸಮಸ್ಯೆ: ಹೈಕೋರ್ಟ್ ಮುಂದೆ ತರಕಾರಿ ಮಾರಿದ ವಕೀಲ!

ಜುಲೈ 30 ರಂದು ಬಂದ ಅನ್ಲಾಕ್ 3 ಮಾರ್ಗಸೂಚಿಗಳು ರಾತ್ರಿ ಕರ್ಫ್ಯೂ ಕೊನೆಗೊಳಿಸಿ, ಕೊರೊನಾ ಕಂಟೈನ್‌ಮೆಂಟ್ ವಲಯಗಳಲ್ಲಿಲ್ಲದ ಯೋಗ ಮತ್ತು ಜಿಮ್ ಸಂಸ್ಥೆಗಳನ್ನು ತೆರೆಯಲು ಅವಕಾಶ ಮಾಡಿಕೊಟ್ಟವು. ಶಿಕ್ಷಣ ಸಂಸ್ಥೆಗಳು, ಸಾರ್ವಜನಿಕ ಉದ್ಯಾನವನಗಳು ಅಥವಾ ಸಿನೆಮಾ ಸಭಾಂಗಣಗಳು ಸೇರಿದಂತೆ ಎಲ್ಲಾ ರೀತಿಯ ದೊಡ್ಡ ಕೂಟಗಳ ಮೇಲೆ ಇನ್ನೂ ನಿರ್ಬಂಧಗಳು ಜಾರಿಯಲ್ಲಿವೆ.

ಆಗಸ್ಟ್ 8 ರಿಂದ ಭಾರತವು ಕೊರೊನಾ ವೈರಸ್ ಅಂಕಿಅಂಶಗಳಲ್ಲಿ ವಿಶ್ವದ ಅತಿ ಹೆಚ್ಚು ದೈನಂದಿನ ಏರಿಕೆಯನ್ನು ದಾಖಲಿಸುತ್ತಿದೆ. ಕಳೆದ ಮೂರು ದಿನಗಳಲ್ಲಿ ಸತತವಾಗಿ ಈ ಸಂಖ್ಯೆ 70,000 ಕ್ಕೆ ಹತ್ತಿರದಲ್ಲಿದೆ.

ಇಂದು ಆರೋಗ್ಯ ಸಚಿವಾಲಯ ನೀಡಿದ ಮಾಹಿತಿಯಂತೆ 61,408 ಪ್ರಕರಣಗಳು ವರದಿಯಾಗಿರುವುದರಿಂದ ಇಂದು ಪ್ರಕರಣವು ತುಸು ಇಳಿಮುಕವಾಗಿದೆ. ದೇಶವು ಈಗಾಗಲೇ 31 ಲಕ್ಷಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದೆ. ಸಾವಿನ ಸಂಖ್ಯೆ 57,542 ಕ್ಕೆ ಏರಿದೆ.


ಓದಿ: ಲಾಕ್‌ಡೌನ್‌ನಿಂದಾಗಿ ಮಕ್ಕಳಿಗೆ ಸಿಗುತ್ತಿಲ್ಲ ಪೌಷ್ಠಿಕ ಆಹಾರ: ಅಂಗನವಾಡಿ, ಬಿಸಿಯೂಟ ನೌಕರರ ಗೋಳು ಕೇಳುವವರಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...